ವಿಳಂಬಿತ ಪಾವತಿ ವಿವಾದಕ್ಕೆ ಕಡಿವಾಣ; MSMEಗಳಿಗೆ ಆನ್‌ಲೈನ್ ಪರಿಹಾರ ವ್ಯವಸ್ಥೆ

ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಕಾನೂನು ಚೌಕಟ್ಟನ್ನು ಬಲಪಡಿಸುವ ಹಾಗೂ ಸಣ್ಣ ಉದ್ಯಮಗಳಿಗೆ ವಿಳಂಬವಾಗುತ್ತಿರುವ ಪಾವತಿಗಳ ಸಮಸ್ಯೆ ಪರಿಹರಿಸುವ ಉದ್ದೇಶದ MSMED (ತಿದ್ದುಪಡಿ) ಮಸೂದೆ-2026 ಅನ್ನು ಸಂಸತ್ತು ಅಂಗೀಕರಿಸಿದೆ. ಆಗಸ್ಟ್ 3ರಂದು ರಾಜ್ಯಸಭೆ ಮಸೂದೆಗೆ ಅನುಮೋದನೆ ನೀಡಿದ ಬಳಿಕ, ಆಗಸ್ಟ್ 7ರಂದು ಲೋಕಸಭೆಯೂ ಅಂಗೀಕರಿಸಿದೆ. 2006ರಲ್ಲಿ ಜಾರಿಗೆ ಬಂದ MSMED ಕಾಯ್ದೆಗೆ ಎರಡು ದಶಕಗಳ ಬಳಿಕ ತಂತ್ರಜ್ಞಾನ, ಡಿಜಿಟಲ್ ವ್ಯವಸ್ಥೆ ಹಾಗೂ ಬದಲಾಗುತ್ತಿರುವ ವ್ಯವಹಾರ ಪರಿಸ್ಥಿತಿಗೆ ಅನುಗುಣವಾಗಿ ಹಲವು ಪ್ರಮುಖ ಬದಲಾವಣೆಗಳನ್ನು ತರಲಾಗಿದೆ. ಸರ್ಕಾರದ ಪ್ರಕಾರ, ಉದ್ಯಮ ಪೋರ್ಟಲ್‌ನಲ್ಲಿ ನೋಂದಾಯಿತ MSMEಗಳ ಸಂಖ್ಯೆ 2023ರ ಏಪ್ರಿಲ್‌ನಲ್ಲಿದ್ದ 1.65 ಕೋಟಿಯಿಂದ 9.16 ಕೋಟಿಗೆ ಏರಿಕೆಯಾಗಿದ್ದು, ಈ ವಲಯವು 40 ಕೋಟಿಗೂ ಹೆಚ್ಚು ಜನರಿಗೆ ಉದ್ಯೋಗ ಒದಗಿಸುತ್ತಿದೆ. ತಿದ್ದುಪಡಿಯ ಪ್ರಮುಖ ಅಂಶಗಳಲ್ಲಿ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ಸಂಬಂಧಿಸಿದ ಪಾವತಿ ವಿವಾದಗಳನ್ನು ತ್ವರಿತವಾಗಿ ಬಗೆಹರಿಸುವ ವ್ಯವಸ್ಥೆ…

‘ಬಲಿಪಶುಗಳ ಘನತೆ, ಗೌಪ್ಯತೆ ಅಗತ್ಯ’; ಲೈಂಗಿಕ ಅಪರಾಧ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬಲಿಪಶುಗಳು ಹಾಗೂ ಇತರ ದುರ್ಬಲ ವ್ಯಕ್ತಿಗಳೊಂದಿಗೆ ವ್ಯವಹರಿಸುವಾಗ ನ್ಯಾಯಾಲಯಗಳು ಸಹಾನುಭೂತಿ, ಸಂವೇದನಾಶೀಲತೆ ಮತ್ತು ಮಾನವೀಯತೆಯನ್ನು ಕಾಪಾಡಬೇಕು ಎಂದು ಸುಪ್ರೀಂ ಕೋರ್ಟ್ ಒತ್ತಿಹೇಳಿದೆ. 2025ರ ಸುವೋ ಮೋಟು ರಿಟ್ ಅರ್ಜಿ (ಕ್ರಿಮಿನಲ್) ಸಂಖ್ಯೆ 1ರಲ್ಲಿ ಜುಲೈ 14, 2026ರಂದು ನೀಡಿದ ತೀರ್ಪಿನಲ್ಲಿ ನ್ಯಾಯಾಲಯ ಈ ಮಾರ್ಗಸೂಚಿಗಳನ್ನು ಗುರುತಿಸಿದೆ. ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯ ಮೂಲಕ ರಚಿಸಲಾದ ತಜ್ಞರ ಸಮಿತಿ ಸಿದ್ಧಪಡಿಸಿದ ವರದಿಯನ್ನೂ ನ್ಯಾಯಾಲಯ ಅಂಗೀಕರಿಸಿದೆ. ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಮಾಹಿತಿ ನೀಡಿದ್ದಾರೆ. ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸೂಕ್ಷ್ಮವಲ್ಲದ ಅಡ್ಡಪರೀಕ್ಷೆ ಅಥವಾ ನ್ಯಾಯಾಲಯದ ಕ್ರಮಗಳಿಂದ ಬಲಿಪಶುಗಳು ಮತ್ತೊಮ್ಮೆ ಮಾನಸಿಕ ಆಘಾತಕ್ಕೆ ಒಳಗಾಗದಂತೆ ತಡೆಯುವುದು ಮಾರ್ಗಸೂಚಿಗಳ ಪ್ರಮುಖ ಉದ್ದೇಶವಾಗಿದೆ. ಬಲಿಪಶುಗಳ ಘನತೆ, ಗೌಪ್ಯತೆ ಹಾಗೂ ನ್ಯಾಯದ ಹಕ್ಕುಗಳನ್ನು…

‘ಬಾಸ್ ಸ್ಕ್ಯಾಮ್’ಗೆ I4C ಎಚ್ಚರಿಕೆ; ವಾಟ್ಸಾಪ್ ಮೂಲಕ ಹಣಕಾಸು ತಂಡಗಳೇ ವಂಚಕರ ಟಾರ್ಗೆಟ್

ನವದೆಹಲಿ: ಖಾತೆ ವಿವರಗಳು ಹಾಗೂ ನಿಯಂತ್ರಕ ಸಂಸ್ಥೆಗಳ ಸಂವಹನಗಳಂತೆ ಬಿಂಬಿಸುವ ದುರುದ್ದೇಶಪೂರಿತ ಫೈಲ್‌ಗಳನ್ನು ಕಳುಹಿಸಿ ವಾಟ್ಸಾಪ್ ಖಾತೆಗಳನ್ನು ಹೈಜಾಕ್ ಮಾಡುವ ‘ಬಾಸ್ ಸ್ಕ್ಯಾಮ್’ ವಂಚನೆ ಬಗ್ಗೆ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಕಾರ್ಪೊರೇಟ್ ಸಂಸ್ಥೆಗಳು ಹಾಗೂ ಹಣಕಾಸು ವೃತ್ತಿಪರರಿಗೆ ಎಚ್ಚರಿಕೆ ನೀಡಿದೆ. ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ರೀತಿಯ ವಂಚನೆ ಪ್ರಕರಣಗಳು ವರದಿಯಾಗಿವೆ. ಚಾರ್ಟರ್ಡ್ ಅಕೌಂಟೆಂಟ್‌ಗಳು, ಕಂಪನಿ ನಿರ್ದೇಶಕರು, CFOಗಳು ಹಾಗೂ ಕಾರ್ಪೊರೇಟ್ ಹಣಕಾಸು ವಿಭಾಗಗಳು ಪ್ರಮುಖ ಗುರಿಗಳಾಗಿವೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ವಂಚಕರು ‘Statement of Account.zip’, ‘RBI.zip’, ‘MCA.zip’ ಮುಂತಾದ ಹೆಸರಿನ ZIP ಫೈಲ್‌ಗಳನ್ನು ವಾಟ್ಸಾಪ್, SMS ಅಥವಾ ಇ-ಮೇಲ್ ಮೂಲಕ ಕಳುಹಿಸುತ್ತಾರೆ. ಈ ಫೈಲ್‌ಗಳಲ್ಲಿ ದುರುದ್ದೇಶಪೂರಿತ Windows executable ಹಾಗೂ DLL ಫೈಲ್‌ಗಳು ಅಡಗಿರುತ್ತವೆ. ಅವುಗಳನ್ನು ತೆರೆದಾಗ ಕಂಪ್ಯೂಟರ್‌ಗೆ ಮಾಲ್‌ವೇರ್…

ಅರುಣಾಚಲದ 27 ಸ್ಥಳಗಳಿಗೆ ಪ್ರಮಾಣಿತ ಹೆಸರು; ಅಧಿಕೃತ ನಕ್ಷೆಗಳಲ್ಲಿ ಗುರುತಿಸಿದ ಕೇಂದ್ರ

ನವದೆಹಲಿ: ಅರುಣಾಚಲ ಪ್ರದೇಶ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಕೇಂದ್ರ ಸರ್ಕಾರ ರಾಜ್ಯದ 27 ಸ್ಥಳಗಳು ಹಾಗೂ ಭೌಗೋಳಿಕ ವೈಶಿಷ್ಟ್ಯಗಳನ್ನು ಸರ್ವೇ ಆಫ್ ಇಂಡಿಯಾದ ಅಧಿಕೃತ ನಕ್ಷೆಗಳಲ್ಲಿ ಪ್ರಮಾಣಿತ ಹೆಸರುಗಳೊಂದಿಗೆ ಗುರುತಿಸಿದೆ. ಸ್ಥಳಗಳ ನಿಖರ ಗುರುತಿಸುವಿಕೆ, ಅಧಿಕೃತ ನಕ್ಷೆಗಳಲ್ಲಿ ಏಕರೂಪದ ಪ್ರಾತಿನಿಧ್ಯ ಹಾಗೂ ಸಾರ್ವಜನಿಕರಲ್ಲಿ ಅವುಗಳ ಬಗ್ಗೆ ಅರಿವು ಹೆಚ್ಚಿಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಸರ್ಕಾರ ತಿಳಿಸಿದೆ. ಅಧಿಕೃತವಾಗಿ ಗುರುತಿಸಲಾದ 27 ಸ್ಥಳಗಳ ಪಟ್ಟಿಯಲ್ಲಿ ಲಾಂಗ್ಜು, ಮಜಾ, ಬಿಸಾ, ಬಾರಾ ಕುಂಡುನ್, ಛೋಟಾ ಕುಂಡುನ್, ಧನ್ ಬಾರಿ, ಪ್ರಿತ್ನಗರ, ಬುದ್ಧಮಂದಿರ್, ಜೈರಾಂಪುರ್, ರಾಮನಗರ, ಜಸ್ವಂತ್ ಘರ್, ಸಾಗರ್, ಪದ್ಮಾ, ಜ್ಯೋತಿನಗರ, ಬೈಸಾಖಿ, ಶಿವಾಜಿ ನಗರ, ಸನ್ಪುರ ಹಾಗೂ ಕಮ್ಲಾಂಗ್ ನಗರ ಸೇರಿವೆ. ಇದರ ಜೊತೆಗೆ ಡ್ಜೋ ಲಾ, ರಿಜಾ ಲಾ, ಪುಕುರ್ ಲಾ ಮತ್ತು ಥಾಗ್ ಲಾ ಸೇರಿದಂತೆ ಹಲವು ಪರ್ವತ ಮಾರ್ಗಗಳನ್ನೂ ಪಟ್ಟಿಗೆ ಸೇರಿಸಲಾಗಿದೆ.…

ಕಲಬೆರಕೆ ವಿರುದ್ಧ ಕೇಂದ್ರದ ಸಮರ; ಮನೆಬಾಗಿಲಲ್ಲೇ ಆಹಾರ ಪರೀಕ್ಷೆಗೆ 305 ಮೊಬೈಲ್ ಲ್ಯಾಬ್‌

ನವದೆಹಲಿ: ದೇಶಾದ್ಯಂತ ಆಹಾರ ಸುರಕ್ಷತಾ ಜಾರಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮತ್ತಷ್ಟು ಬಲಪಡಿಸಿದ್ದು, ಪರೀಕ್ಷಾ ಮೂಲಸೌಕರ್ಯ ವಿಸ್ತರಣೆ, ನಿಯಂತ್ರಕ ಮೇಲ್ವಿಚಾರಣೆ, ಅಧಿಕಾರಿಗಳ ಸಾಮರ್ಥ್ಯ ವೃದ್ಧಿ ಹಾಗೂ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕ್ರಮಗಳಿಗೆ ಒತ್ತು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಲೋಕಸಭೆಗೆ ತಿಳಿಸಿದ್ದಾರೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಆಹಾರ ಮಾದರಿಗಳ ಪರೀಕ್ಷೆಗಾಗಿ 259 NABL ಮಾನ್ಯತೆ ಪಡೆದ ಆಹಾರ ಪರೀಕ್ಷಾ ಪ್ರಯೋಗಾಲಯಗಳನ್ನು ಸೂಚಿಸಿದೆ. ಮೇಲ್ಮನವಿ ಮಾದರಿಗಳ ಪರೀಕ್ಷೆಗಾಗಿ 24 ಉಲ್ಲೇಖಿತ ಪ್ರಯೋಗಾಲಯಗಳನ್ನೂ ಗುರುತಿಸಲಾಗಿದೆ. ಇದರ ಜೊತೆಗೆ, 305 ಮೊಬೈಲ್ ಆಹಾರ ಪರೀಕ್ಷಾ ಪ್ರಯೋಗಾಲಯಗಳನ್ನು ದೇಶಾದ್ಯಂತ ನಿಯೋಜಿಸಲಾಗಿದೆ. ಈ ‘ಚಕ್ರಗಳ ಮೇಲೆ ಆಹಾರ ಸುರಕ್ಷತೆ’ ಘಟಕಗಳು ಸ್ಥಳದಲ್ಲೇ ಆಹಾರ ಪರೀಕ್ಷೆ, ತ್ವರಿತ ಪರೀಕ್ಷಾ ಕಿಟ್‌ಗಳ ಬಳಕೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿವೆ. ವಿಶೇಷವಾಗಿ ದೂರದ…

ಮತದಾರರ ಪಟ್ಟಿಯ ಪರಿಷ್ಕರಣೆಗೆ ಮತ್ತಷ್ಟು ಕಾಲಾವಕಾಶ; ಆ.24ರಂದು ಕರಡು ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಗಡುವನ್ನು ಚುನಾವಣಾ ಆಯೋಗ ಮತ್ತೆ ವಿಸ್ತರಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ಮನವಿ ಹಿನ್ನೆಲೆಯಲ್ಲಿ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ, ಬೂತ್ ಮಟ್ಟದ ಅಧಿಕಾರಿಗಳ (BLO) ಮನೆ-ಮನೆ ಪರಿಶೀಲನೆ ಪ್ರಕ್ರಿಯೆ ಆಗಸ್ಟ್ 17ರವರೆಗೆ ಮುಂದುವರಿಯಲಿದೆ. ಇದೇ ಅವಧಿಯಲ್ಲಿ ಮತಗಟ್ಟೆಗಳ ತರ್ಕಬದ್ಧೀಕರಣ ಮತ್ತು ಮರುಹೊಂದಿಕೆ ಕಾರ್ಯವೂ ನಡೆಯಲಿದೆ. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಅದೇ ದಿನದಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಪ್ರಕ್ರಿಯೆ ಸೆಪ್ಟೆಂಬರ್ 23ರವರೆಗೆ ಮುಂದುವರಿಯಲಿದೆ. ಹಕ್ಕು ಮತ್ತು ಆಕ್ಷೇಪಣೆಗಳ ವಿಚಾರಣೆ ಹಾಗೂ ವಿಲೇವಾರಿ ಪ್ರಕ್ರಿಯೆ ಅಕ್ಟೋಬರ್ 22ರವರೆಗೆ ನಡೆಯಲಿದೆ. ಬಳಿಕ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ. ಈ ನಡುವೆ, SIR ಪ್ರಕ್ರಿಯೆಯಲ್ಲಿ…

‘ಓಬಿಸಿ, ಜಾತಿ ಜನಗಣತಿ ವರದಿ ಜಾರಿಗೆ ಹೋರಾಟ ಅಗತ್ಯ’; ರಾಷ್ಟ್ರೀಯ ಸಮಾವೇಶದಲ್ಲಿ ಹರಿಪ್ರಸಾದ್ ಕರೆ

ಬೆಂಗಳೂರು: ಮೀಸಲಾತಿ ಬಡತನ ನಿರ್ಮೂಲನಾ ಕಾರ್ಯಕ್ರಮವಲ್ಲ, ಉದ್ಯೋಗ ನೀಡುವ ದಯಾಧರ್ಮವೂ ಅಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತಂದು, ಅಧಿಕಾರದಲ್ಲಿ ಪಾಲು ನೀಡುವ ಸಾಂವಿಧಾನಿಕ ಸಾಧನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ರಾಷ್ಟ್ರೀಯ ಓಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿರುವ ಪ್ರತಿನಿಧಿಗಳನ್ನು ಸ್ವಾಗತಿಸಿದರು. ಮೀಸಲಾತಿ ಪರಂಪರೆಗೆ ಐತಿಹಾಸಿಕ ಹಿನ್ನೆಲೆಯಿರುವ ಕರ್ನಾಟಕದಲ್ಲಿ ಓಬಿಸಿ ರಾಷ್ಟ್ರೀಯ ಸಮಾವೇಶ ನಡೆಯುತ್ತಿರುವುದು ಹೆಮ್ಮೆಯ ವಿಚಾರ ಎಂದರು. 12ನೇ ಶತಮಾನದಲ್ಲೇ ಬಸವಣ್ಣ ಅವರು ಕಾಯಕಕ್ಕೆ ಘನತೆ ನೀಡಿ, ಜಾತಿ-ಲಿಂಗ-ವೃತ್ತಿಯ ಭೇದಗಳನ್ನು ಮೀರಿ ಸಮಾನತೆಯ ಸಂದೇಶ ಸಾರಿದ್ದರು. ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ 1918ರಲ್ಲಿ ಮಿಲ್ಲರ್ ಆಯೋಗ ರಚಿಸಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಬುನಾದಿ ಹಾಕಿದರು. ಕೊಲ್ಹಾಪುರದಲ್ಲಿ ಛತ್ರಪತಿ ಶಾಹು ಮಹಾರಾಜರೂ ಹಿಂದುಳಿದ ಬಹುಜನರಿಗೆ ಪ್ರಾತಿನಿಧ್ಯ ಕಲ್ಪಿಸಿದ್ದರು ಎಂದು…

ಖಾಲಿ ಹುದ್ದೆ ಭರ್ತಿ, ಡಿಜಿಟಲ್ ಮೂಲಸೌಕರ್ಯಕ್ಕೆ ಒತ್ತು; ನ್ಯಾಯಮಂಡಳಿಗಳ ಸುಧಾರಣೆಗೆ ಸಂಸದೀಯ ಸಮಿತಿ ಶಿಫಾರಸು

ನವದೆಹಲಿ: ದೇಶಾದ್ಯಂತ ನ್ಯಾಯಮಂಡಳಿಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಸಿಬ್ಬಂದಿ ಕೊರತೆ ನೀಗಿಸುವುದು, ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡುವುದು, ಡಿಜಿಟಲ್ ಮೂಲಸೌಕರ್ಯ ಬಲಪಡಿಸುವುದು ಹಾಗೂ ಪ್ರಕರಣಗಳ ಬಾಕಿ ಇರುವಿಕೆಯನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡುವಂತೆ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸು ಮಾಡಿದೆ. ರಾಜ್ಯಸಭಾ ಸಂಸದ ಬ್ರಿಜ್ ಲಾಲ್ ನೇತೃತ್ವದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ, ‘ದೇಶದಲ್ಲಿ ನ್ಯಾಯಮಂಡಳಿ ವ್ಯವಸ್ಥೆಯ ಕಾರ್ಯನಿರ್ವಹಣೆಯ ವಿಮರ್ಶೆ’ ಕುರಿತ 166ನೇ ವರದಿಯನ್ನು ಆಗಸ್ಟ್ 7ರಂದು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿದೆ. ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ITAT)ಯಲ್ಲಿ ಸದಸ್ಯರು ಹಾಗೂ ಪ್ರಮುಖ ನೋಂದಣಿ ಅಧಿಕಾರಿಗಳ ಖಾಲಿ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡುವಂತೆ ಸಮಿತಿ ಸೂಚಿಸಿದೆ. ಬಾಕಿ ಪ್ರಕರಣಗಳ ಹೆಚ್ಚಳ ತಡೆಯಲು ನಿಯಮಿತ ಮಾನವ ಸಂಪನ್ಮೂಲ ಮೌಲ್ಯಮಾಪನ ಹಾಗೂ ವಿಲೇವಾರಿ ಅವಧಿಯ ಮೇಲ್ವಿಚಾರಣೆಗೆ ಒತ್ತು ನೀಡಿದೆ.…

ಎಸ್‌ಐಆರ್‌ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ

ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಹೆಸರಿನಲ್ಲಿ ಕರ್ನಾಟಕದಲ್ಲಿ ಶೇ.20ರಷ್ಟು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದ್ದು, ಇದರ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಹಾಗೂ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 5.40 ಕೋಟಿ ಮತದಾರರಲ್ಲಿ 20 ಪ್ರತಿಶತದಷ್ಟು ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಬೆಂಬಲಿತ ಮತದಾರರನ್ನು ಗುರಿಯಾಗಿಸಿಕೊಂಡು ಈ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಗೈರು, ಮೃತಪಟ್ಟವರು, ವಿಳಾಸ ಬದಲಾವಣೆ ಹಾಗೂ ನಕಲಿ ದಾಖಲೆಗಳ ಹೆಸರಿನಲ್ಲಿ ಅರ್ಹ ಮತದಾರರ ಹೆಸರನ್ನೂ ಕೈಬಿಡಲಾಗುತ್ತಿದೆ. ಹಲವು ಕಡೆ ಮನೆ-ಮನೆಗೆ ತೆರಳಿ ಗಣತಿ ನಮೂನೆ ವಿತರಿಸದೇ ಮತದಾರರನ್ನು ಗೈರು ಎಂದು ಗುರುತಿಸಲಾಗಿದೆ ಎಂದು ದೂರಿದರು. ಅರ್ಹ ಮತದಾರರ ಮತದಾನದ ಹಕ್ಕು ರಕ್ಷಿಸುವುದು…

ಆಗಸ್ಟ್‌ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗಸ್ಟ್‌ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭಾಪತಿ ಹುದ್ದೆಗೆ ಸಲೀಂ ಅಹ್ಮದ್ ಅವರ ಹೆಸರನ್ನು ಸೂಚಿಸಿದ ಬೆನ್ನಲ್ಲೇ ಈ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮನವಿ ಮಾಡಿದ್ದರು. ರಾಜೀನಾಮೆ ನೀಡದಿದ್ದರೆ ಅವಿಶ್ವಾಸ ನಿರ್ಣಯ ತರಲಾಗುವುದು ಎಂದು ತಿಳಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೊರಟ್ಟಿ, ಗೌರವ ಕಳೆದುಕೊಳ್ಳಲು ಇಷ್ಟವಿಲ್ಲದ ಕಾರಣ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಹೊರಟ್ಟಿ ತಿಳಿಸಿದ್ದಾರೆ. ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊರಟ್ಟಿಯನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿದ್ದರು. ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ಹೊರಟ್ಟಿ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದರು. ಈ ಬೆಳವಣಿಗೆ…