ಸತಾರಾ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಮಾದಕ ಔಷಧ ತಯಾರಿಕಾ ಘಟಕವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಭೇದಿಸಿದ್ದು, ಭಾರಿ ಪ್ರಮಾಣದ ಸೈಕೋಟ್ರೋಪಿಕ್ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದೆ. ಗುಪ್ತಚರ ಮಾಹಿತಿಯ ಆಧಾರದಲ್ಲಿ ಆಗಸ್ಟ್ 1ರಂದು ದಾಳಿ ನಡೆಸಿದ ಡಿಆರ್ಐ ಅಧಿಕಾರಿಗಳು, ಎನ್ಡಿಪಿಎಸ್ ಕಾಯ್ದೆ-1985 ಅಡಿಯಲ್ಲಿ ನಿಯಂತ್ರಿಸಲ್ಪಡುವ ಆಲ್ಪ್ರಜೋಲಮ್ ಮತ್ತು ಡಯಾಜೆಪಮ್ ಔಷಧಗಳನ್ನು ಅಕ್ರಮವಾಗಿ ತಯಾರಿಸಲಾಗುತ್ತಿದೆ ಎಂಬುದನ್ನು ಪತ್ತೆಹಚ್ಚಿದ್ದಾರೆ. ದಾಳಿಯ ವೇಳೆ ಸುಮಾರು 1 ಕೆಜಿ ಸಿದ್ಧಪಡಿಸಿದ ಆಲ್ಪ್ರಜೋಲಮ್, 15 ಕೆಜಿಗೂ ಅಧಿಕ ಮಧ್ಯಂತರ ಹಂತದ ಆಲ್ಪ್ರಜೋಲಮ್, 3.75 ಕೆಜಿ ಡಯಾಜೆಪಮ್ ಹಾಗೂ ಉತ್ಪಾದನೆಗೆ ಬಳಸುತ್ತಿದ್ದ ಸುಮಾರು 400 ಲೀಟರ್ ಕಚ್ಚಾ ವಸ್ತುಗಳು ಮತ್ತು ರಾಸಾಯನಿಕ ಮಿಶ್ರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಎಲ್ಲಾ ವಸ್ತುಗಳನ್ನು ಎನ್ಡಿಪಿಎಸ್ ಕಾಯ್ದೆಯಡಿ ಜಪ್ತಿ ಮಾಡಲಾಗಿದೆ. ಈ ಪ್ರಕರಣದ ತನಿಖೆ ಮುಂದುವರಿಸಿದ ಡಿಆರ್ಐ, ಪುಣೆಯಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ವಶಪಡಿಸಿಕೊಂಡ ಮಾದಕ…
Month: August 2026
ದೇಶದಲ್ಲಿ 32 ನಕಲಿ ವಿಶ್ವವಿದ್ಯಾಲಯಗಗಳು ಪತ್ತೆ; ಕಾನೂನು ಕ್ರಮಕ್ಕೆ ಕೇಂದ್ರದ ನಿರ್ದೇಶನ
ನವದೆಹಲಿ: ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ 32 ನಕಲಿ ವಿಶ್ವವಿದ್ಯಾಲಯಗಳನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಗುರುತಿಸಿದ್ದು, ಅವುಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್, ನಕಲಿ ವಿಶ್ವವಿದ್ಯಾಲಯಗಳ ಇತ್ತೀಚಿನ ಪಟ್ಟಿಯನ್ನು ಯುಜಿಸಿ ಫೆಬ್ರವರಿ 2026ರಲ್ಲಿ ಪ್ರಕಟಿಸಿದ್ದು, ಅದು ಯುಜಿಸಿಯ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಇಂತಹ ಸ್ವಯಂ ಘೋಷಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆಯದಂತೆ ಯುಜಿಸಿ ಈಗಾಗಲೇ ಶೋಕಾಸ್ ನೋಟಿಸ್, ಎಚ್ಚರಿಕೆ ಪತ್ರ ಹಾಗೂ ಸಾರ್ವಜನಿಕ ಸಲಹೆಗಳನ್ನು ಹೊರಡಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಶಿಕ್ಷಣ ಕಾರ್ಯದರ್ಶಿಗಳಿಗೆ ಪತ್ರ ಬರೆದು, ನಕಲಿ ವಿಶ್ವವಿದ್ಯಾಲಯಗಳ ವಿರುದ್ಧ ಕಾನೂನು ಕ್ರಮ ಆರಂಭಿಸಲು,…
ಯುಜಿಸಿ ಮಾನ್ಯತೆಗೆ ಏಕೀಕೃತ ಆನ್ಲೈನ್ ಪೋರ್ಟಲ್; ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಸುಧಾರಣೆ
ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ (NEP)-2020ಕ್ಕೆ ಅನುಗುಣವಾಗಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ವೇಗದ ನಿಯಂತ್ರಕ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಮಾನ್ಯತೆ ಪ್ರಕ್ರಿಯೆಗಾಗಿ ಏಕೀಕೃತ ಆನ್ಲೈನ್ ಪೋರ್ಟಲ್ ಆರಂಭಿಸಲಾಗಿದೆ. ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್, ಉನ್ನತ ಶಿಕ್ಷಣ ಸಂಸ್ಥೆಗಳಿಗೆ 2(f) ಮತ್ತು 12B ಮಾನ್ಯತೆ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಲು ಈ ಡಿಜಿಟಲ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಹೊಸ ಪೋರ್ಟಲ್ ಮೂಲಕ ಸಂಸ್ಥೆಗಳು ಒಂದೇ ವೇದಿಕೆಯಲ್ಲಿ ಮಾನ್ಯತೆಗೆ ಅರ್ಜಿ ಸಲ್ಲಿಸಲು ಅವಕಾಶ ದೊರೆಯಲಿದ್ದು, ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಹಾಗೂ ಸಮಯದ ಉಳಿತಾಯ ಸಾಧ್ಯವಾಗಲಿದೆ. ಇದರ ಜೊತೆಗೆ, ಕಾಲೇಜುಗಳಿಗೆ ಸ್ವಾಯತ್ತ ಸ್ಥಾನಮಾನ, ಡೀಮ್ಡ್-ಟು-ಬಿ ವಿಶ್ವವಿದ್ಯಾಲಯ ಮಾನ್ಯತೆ ಹಾಗೂ ಮುಕ್ತ ಮತ್ತು ದೂರಶಿಕ್ಷಣ (ODL) ಮತ್ತು ಆನ್ಲೈನ್ ಶಿಕ್ಷಣ ಕಾರ್ಯಕ್ರಮಗಳಿಗೆ…
5,894 ಪಿಎಸಿಎಸ್ಗಳ ಡಿಜಿಟಲೀಕರಣಕ್ಕೆ ವೇಗ; ಕರ್ನಾಟಕಕ್ಕೆ ₹30 ಕೋಟಿ ಅನುದಾನ ಬಿಡುಗಡೆ
ನವದೆಹಲಿ: ಸಹಕಾರಿ ಸಂಸ್ಥೆಗಳ ಡಿಜಿಟಲೀಕರಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾಮರ್ಥ್ಯ ವೃದ್ಧಿಗೆ ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕಕ್ಕೆ ₹30 ಕೋಟಿಗೂ ಅಧಿಕ ಆರ್ಥಿಕ ನೆರವು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸಂಸತ್ತಿಗೆ ನೀಡಿದ ಲಿಖಿತ ಉತ್ತರದಲ್ಲಿ ಸಹಕಾರ ಸಚಿವಾಲಯ, ರಾಜ್ಯದ 5,894 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು (PACS) ಕೇಂದ್ರದ ಗಣಕೀಕರಣ ಯೋಜನೆಯಡಿ ತರಲಾಗಿದೆ ಎಂದು ತಿಳಿಸಿದೆ. ಯೋಜನೆಯಡಿ ಹಾರ್ಡ್ವೇರ್, ಸಾಫ್ಟ್ವೇರ್ ಏಕೀಕರಣ ಹಾಗೂ ಡಿಜಿಟಲೀಕರಣಕ್ಕಾಗಿ ₹27.58 ಕೋಟಿ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ, ಸಹಕಾರ ಸಂಘಗಳ ನೋಂದಣಿದಾರರ ಕಚೇರಿಯ ಗಣಕೀಕರಣಕ್ಕೆ ₹1.30 ಕೋಟಿ ಹಾಗೂ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳ (ARDBs) ಡಿಜಿಟಲೀಕರಣಕ್ಕೆ ₹1.28 ಕೋಟಿ ಮಂಜೂರು ಮಾಡಲಾಗಿದೆ. ವಿಕೇಂದ್ರೀಕೃತ ಧಾನ್ಯ ಸಂಗ್ರಹ ಯೋಜನೆಯಡಿ ಬೀದರ್ ಜಿಲ್ಲೆಯ ಏಕಾಂಬ PACS ಅನ್ನು ಪೈಲಟ್ ಯೋಜನೆಗೆ ಆಯ್ಕೆ ಮಾಡಲಾಗಿದೆ. ಇಲ್ಲಿ 1,000 ಮೆಟ್ರಿಕ್ ಟನ್…
ರಕ್ಷಾ ಬಂಧನಕ್ಕೆ ಅಂಚೆ ಇಲಾಖೆಯ ವಿಶೇಷ ವ್ಯವಸ್ಥೆ; ರಾಖಿ ಕಳುಹಿಸಲು ವಿಶೇಷ ಕೌಂಟರ್ಗಳು ಆರಂಭ
ನವದೆಹಲಿ: ಆಗಸ್ಟ್ 28ರಂದು ಆಚರಿಸಲಿರುವ ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ರಾಖಿಗಳು ಸಕಾಲಕ್ಕೆ ತಲುಪುವಂತೆ ಭಾರತ ಅಂಚೆ ಇಲಾಖೆ ವಿಶೇಷ ವ್ಯವಸ್ಥೆ ಮಾಡಿದೆ. ದೆಹಲಿಯಾದ್ಯಂತ ವಿಶೇಷ ರಾಖಿ ಮೇಲ್ ಬುಕ್ಕಿಂಗ್ ಕೌಂಟರ್ಗಳನ್ನು ಆರಂಭಿಸಲಾಗಿದ್ದು, ಗ್ರಾಹಕರು ಆಗಸ್ಟ್ 22ರವರೆಗೆ ಈ ಸೇವೆಯನ್ನು ಬಳಸಿಕೊಳ್ಳಬಹುದು. ದೆಹಲಿ ರೈಲ್ವೆ ನಿಲ್ದಾಣ ಮತ್ತು ನವದೆಹಲಿ ರೈಲ್ವೆ ನಿಲ್ದಾಣದ ಸಾರಿಗೆ ಮೇಲ್ ಕಚೇರಿಗಳ ಜೊತೆಗೆ ದೆಹಲಿಯ 34 ಪ್ರಮುಖ ಅಂಚೆ ಕಚೇರಿಗಳಲ್ಲಿ ಈ ವಿಶೇಷ ಕೌಂಟರ್ಗಳು ಕಾರ್ಯನಿರ್ವಹಿಸಲಿವೆ. ಹಬ್ಬದ ವೇಳೆಯ ಕೊನೆಯ ಕ್ಷಣದ ದಟ್ಟಣೆಯನ್ನು ತಪ್ಪಿಸಲು ಹಾಗೂ ರಾಖಿ ಸಮಯಕ್ಕೆ ತಲುಪಲು ಗ್ರಾಹಕರು ಮುಂಚಿತವಾಗಿಯೇ ಅಂಚೆ ಮೂಲಕ ಕಳುಹಿಸುವಂತೆ ಇಲಾಖೆ ಮನವಿ ಮಾಡಿದೆ. ವೇಗದ ವಿತರಣೆಗಾಗಿ ಇಂಡಿಯಾ ಪೋಸ್ಟ್ನ 24 ಸ್ಪೀಡ್ ಪೋಸ್ಟ್ ಮತ್ತು 48 ಸ್ಪೀಡ್ ಪೋಸ್ಟ್ ಸೇವೆಗಳನ್ನು ಬಳಸುವಂತೆ ಗ್ರಾಹಕರಿಗೆ ಸಲಹೆ ನೀಡಲಾಗಿದೆ. ಈ ಸೇವೆಗಳಲ್ಲಿ ನಿಗದಿತ ಸಮಯದೊಳಗೆ ವಿತರಣೆ ಖಾತರಿಯಿದ್ದು,…
ಮೊಬೈಲ್, ಬ್ರಾಡ್ಬ್ಯಾಂಡ್ ಸೇವೆಗಳ ಗುಣಮಟ್ಟಕ್ಕೆ ಹೊಸ ಮಾನದಂಡ; ಸಾರ್ವಜನಿಕರಿಂದ ಸಲಹೆ ಕೋರಿದ TRAI
ನವದೆಹಲಿ: ಟೆಲಿಕಾಂ ಮತ್ತು ಬ್ರಾಡ್ಬ್ಯಾಂಡ್ ಸೇವೆಗಳ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಸೇವಾ ಗುಣಮಟ್ಟ (QoS) ನಿಯಮಗಳಿಗೆ ತಿದ್ದುಪಡಿ ಪ್ರಸ್ತಾಪಿಸಿ ಸಮಾಲೋಚನಾ ಪತ್ರ ಬಿಡುಗಡೆ ಮಾಡಿದೆ. ಪ್ರಸ್ತಾವಿತ ತಿದ್ದುಪಡಿಗಳು ಸೇವೆ ಒದಗಿಸುವ ಅನುಭವ, ಪಾಲುದಾರರ ಸಲಹೆಗಳು, ತಾಂತ್ರಿಕ ಪ್ರಗತಿ ಹಾಗೂ ಉತ್ತಮ ಗುಣಮಟ್ಟದ ಡಿಜಿಟಲ್ ಸಂಪರ್ಕಕ್ಕಾಗಿ ಹೆಚ್ಚುತ್ತಿರುವ ಗ್ರಾಹಕರ ನಿರೀಕ್ಷೆಗಳನ್ನು ಆಧರಿಸಿವೆ ಎಂದು TRAI ತಿಳಿಸಿದೆ. 2024ರ ಅಕ್ಟೋಬರ್ 1ರಿಂದ ಜಾರಿಗೆ ಬಂದಿರುವ ಪ್ರಸ್ತುತ ಸೇವಾ ಗುಣಮಟ್ಟದ ನಿಯಮಗಳು, ತಂತ್ರಜ್ಞಾನ-ತಟಸ್ಥ ಚೌಕಟ್ಟು, ಪಾರದರ್ಶಕ ವರದಿ ವ್ಯವಸ್ಥೆ ಹಾಗೂ ಸೇವಾ ಗುಣಮಟ್ಟದ ಮೇಲ್ವಿಚಾರಣೆಗೆ ಹೊಸ ಮಾನದಂಡಗಳನ್ನು ಪರಿಚಯಿಸಿದ್ದವು. ಈಗ ‘ಪ್ರವೇಶ ಸೇವೆ (ವೈರ್ಲೈನ್ ಮತ್ತು ವೈರ್ಲೆಸ್) ಹಾಗೂ ಬ್ರಾಡ್ಬ್ಯಾಂಡ್ (ವೈರ್ಲೆಸ್) ಸೇವೆಗಳ ಗುಣಮಟ್ಟ (ಮೊದಲ ತಿದ್ದುಪಡಿ) ನಿಯಮಗಳು-2026’ ಕರಡನ್ನು ಸಾರ್ವಜನಿಕ ಸಮಾಲೋಚನೆಗಾಗಿ TRAI ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಕರಡು ತಿದ್ದುಪಡಿಗಳ ಕುರಿತು…
2027ರಲ್ಲಿ ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನ; ವೇಗ ಪಡೆದುಕೊಂಡ ಗಗನಯಾನ ಯೋಜನೆ
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆ ವೇಗ ಪಡೆದುಕೊಂಡಿದ್ದು, ಮೊದಲ ಸಿಬ್ಬಂದಿರಹಿತ ಪರೀಕ್ಷಾ ಮಿಷನ್ 2026ರ ನಾಲ್ಕನೇ ತ್ರೈಮಾಸಿಕದಲ್ಲಿ ಉಡಾವಣೆಯಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ದೇಶದ ಮೊದಲ ಮಾನವ ಬಾಹ್ಯಾಕಾಶ ಯಾನವನ್ನು 2027ರಲ್ಲಿ ನಡೆಸುವ ಗುರಿ ಹೊಂದಲಾಗಿದೆ. ಲೋಕಸಭೆಗೆ ಲಿಖಿತ ಉತ್ತರ ನೀಡಿದ ಬಾಹ್ಯಾಕಾಶ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಮಾನವ-ರೇಟೆಡ್ ಎಲ್ವಿಎಂ3 ಉಡಾವಣಾ ವಾಹಕ, ಕಕ್ಷಾ ಮಾಡ್ಯೂಲ್, ಸಿಬ್ಬಂದಿ ಪಾರು ವ್ಯವಸ್ಥೆ ಸೇರಿದಂತೆ ಪ್ರಮುಖ ತಾಂತ್ರಿಕ ವ್ಯವಸ್ಥೆಗಳ ಅಭಿವೃದ್ಧಿ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ. ಟಿವಿ-ಡಿ1 ಅಬಾರ್ಟ್ ಪರೀಕ್ಷೆ ಹಾಗೂ ಏರ್-ಡ್ರಾಪ್ ಪರೀಕ್ಷೆಗಳು ಯಶಸ್ವಿಯಾಗಿದ್ದು, ಇದೀಗ ಟಿವಿ-ಡಿ2 ಪರೀಕ್ಷಾ ಮಿಷನ್ಗೆ ಸಿದ್ಧತೆಗಳು ನಡೆಯುತ್ತಿವೆ ಎಂದರು. ಮೊದಲ ಸಿಬ್ಬಂದಿರಹಿತ ಪರೀಕ್ಷಾ ಹಾರಾಟದಲ್ಲಿ ಇಸ್ರೋ ಅಭಿವೃದ್ಧಿಪಡಿಸಿರುವ ಅರ್ಧ-ಮಾನವಾಕೃತಿ ರೋಬೋಟ್ ವ್ಯೋಮಮಿತ್ರ ಸೇರಿದಂತೆ ಹಲವು ಸ್ವದೇಶಿ ತಂತ್ರಜ್ಞಾನಗಳನ್ನು ಪರೀಕ್ಷಿಸಲಾಗುತ್ತದೆ. ಮಾನವ ಬಾಹ್ಯಾಕಾಶ ಯಾನಕ್ಕೂ ಮುನ್ನ ಇನ್ನೆರಡು ಸಿಬ್ಬಂದಿರಹಿತ ಮಿಷನ್ಗಳನ್ನು…
ಅಸಮಾಧಾನಿತ ‘ಕೈ’ ಶಾಸಕರ ಮನವೊಲಿಕೆಗೆ ‘ಹೈ’ ಕಸರತ್ತು; ಉತ್ತರಕ್ಕೆ ಅನ್ಯಾಯವಾಗಿದೆ ಎಂದ ನಾಯಕ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಮನವೊಲಿಸುವ ಪ್ರಯತ್ನವನ್ನು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಸರಣಿ ಸಭೆಗಳನ್ನು ನಡೆಸಿ ಅಸಮಾಧಾನ ಶಮನಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಎಂ. ಕೃಷ್ಣಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸುರ್ಜೆವಾಲ, ಅವರೊಂದಿಗೆ ಮಾತುಕತೆ ನಡೆಸಿದರು. ಆದರೆ, ಸಚಿವ ಸ್ಥಾನ ಹೊರತುಪಡಿಸಿ ಬೇರೆ ಯಾವುದೇ ಹುದ್ದೆ ಅಥವಾ ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಕೃಷ್ಣಪ್ಪ ಹೇಳಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ಸಚಿವ ಸ್ಥಾನ ವಂಚಿತರಾದ ಹಿರಿಯ ಶಾಸಕ ಹೆಚ್.ಕೆ. ಪಾಟೀಲ್ ಅವರ ನಿವಾಸಕ್ಕೂ ಭೇಟಿ ನೀಡಿ ಚರ್ಚೆ ನಡೆಸಿದರು. ಉತ್ತರ ಕರ್ನಾಟಕಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ. ಪ್ರಾದೇಶಿಕ ಅಸಮಾನತೆ ಇನ್ನೂ ಮುಂದುವರಿದಿದೆ ಎಂದು ಹೆಚ್.ಕೆ. ಪಾಟೀಲ್ ಅಸಮಾಧಾನ…
MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ
ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (MSME) ಸಾಲ ಸೌಲಭ್ಯವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) 71 ಹೊಸ ಶಾಖೆಗಳನ್ನು ಆರಂಭಿಸಿರುವುದಾಗಿ ತಿಳಿಸಿದೆ. ಜೊತೆಗೆ, ₹2.55 ಲಕ್ಷ ಕೋಟಿ ಹೆಚ್ಚುವರಿ ಸಾಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆ (ECLGS) 5.0 ಜಾರಿಗೊಳಿಸಲಾಗಿದೆ. ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಏಪ್ರಿಲ್ 2024ರಿಂದ ಜುಲೈ 2026ರವರೆಗೆ ಪ್ರಮುಖ MSME ಕ್ಲಸ್ಟರ್ಗಳಲ್ಲಿ SIDBI 71 ಹೊಸ ಶಾಖೆಗಳನ್ನು ಆರಂಭಿಸಿದೆ ಎಂದು ತಿಳಿಸಿದ್ದಾರೆ. ಮಾರ್ಚ್ 31, 2026ರ ವೇಳೆಗೆ SIDBIಯ ನೇರ ಸಾಲ ಪೋರ್ಟ್ಫೋಲಿಯೊ ಶೇ.36.8ರಷ್ಟು ಏರಿಕೆ ಕಂಡು ₹51,687 ಕೋಟಿಗೆ ತಲುಪಿದ್ದು, ಮರುಹಣಕಾಸು (Refinance) ಪೋರ್ಟ್ಫೋಲಿಯೊ ಶೇ.16.9ರಷ್ಟು ಹೆಚ್ಚಳಿ ₹4.5 ಲಕ್ಷ ಕೋಟಿಗೆ…
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ
ಬೆಂಗಳೂರು/ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ ನಾಯಕರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ರಾಜೀನಾಮೆಗಳ ಸರಣಿಯೂ ಆರಂಭವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಬುಧವಾರ ಬಂದ್ಗೆ ಕರೆ ನೀಡಲಾಗಿದೆ. ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬಾಗೇಪಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಟೈರ್ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಬಂದ್ಗೆ ಸುಬ್ಬಾರೆಡ್ಡಿ ಅವರ ನೇರ ಬೆಂಬಲವಿಲ್ಲ, ಸಾರ್ವಜನಿಕರ ಅಸಮಾಧಾನದಿಂದಲೇ ಪ್ರತಿಭಟನೆ ನಡೆಯುತ್ತಿದೆ ಎಂದು ಬೆಂಬಲಿಗರು ತಿಳಿಸಿದ್ದಾರೆ. ಇತ್ತ…
