ಮಂಗಳೂರು: ಅವಿಕಾ ಪ್ರೊಡಕ್ಷನ್ ಹಾಗೂ ಬಿಆರ್ಬಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ‘ಟಾಸ್’ ತುಳು ಸಿನಿಮಾ ಸೆಪ್ಟೆಂಬರ್ 18ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಅರ್ಜುನ್ ದೇವ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ಚಿತ್ರದ ಕುರಿತು ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಗೀತೆಗಳನ್ನು ರಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಎರಡು ಹಂತಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಡಾ. ದೇವದಾಸ್ ಕಾಪಿಕಾಡ್, ಅರ್ಜುನ್ ದೇವ್, ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಪ್ರಕಾಶ್ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್, ಸುತೇಜ್ ಶೆಟ್ಟಿ, ಸಂಗೀತಾ ಶೆಟ್ಟಿ, ಶೋಭರಾಜ್ ಪಾವೂರ್, ಚೈತ್ರಾ ಶೆಟ್ಟಿ ಹಾಗೂ ಕೃತಿ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ‘ಟಾಸ್’ ಚಿತ್ರವನ್ನು ತುಳು ಮತ್ತು ಕನ್ನಡ…
Day: September 13, 2026
ವಿಶ್ವಸಂಸ್ಥೆ ಸುಧಾರಣೆ, ಬಲವಾದ ಆರ್ಥಿಕ ಸಹಕಾರಕ್ಕೆ ಬ್ರಿಕ್ಸ್ ಒತ್ತು; ತಂತ್ರಜ್ಞಾನ, ಆರೋಗ್ಯ, ಹವಾಮಾನಕ್ಕೂ ಆದ್ಯತೆ
ನವದೆಹಲಿ: ಹೆಚ್ಚು ಪ್ರಾತಿನಿಧಿಕ ಜಾಗತಿಕ ವ್ಯವಸ್ಥೆ, ಅಭಿವೃದ್ಧಿಶೀಲ ರಾಷ್ಟ್ರಗಳ ಹೆಚ್ಚಿನ ಭಾಗವಹಿಸುವಿಕೆ ಹಾಗೂ ಬಲವಾದ ಆರ್ಥಿಕ ಸಹಕಾರಕ್ಕೆ ಬ್ರಿಕ್ಸ್ ನಾಯಕರು ಕರೆ ನೀಡಿದ್ದಾರೆ. ನವದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಅಂಗೀಕರಿಸಿದ ನವದೆಹಲಿ ಘೋಷಣೆಯಲ್ಲಿ ಬಹುಪಕ್ಷೀಯತೆ, ಸಾರ್ವಭೌಮ ಸಮಾನತೆ, ಪರಸ್ಪರ ಗೌರವ ಮತ್ತು ಸಹಕಾರದ ಬದ್ಧತೆಯನ್ನು ನಾಯಕರು ಪುನರುಚ್ಚರಿಸಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸೇರಿದಂತೆ ಸಂಸ್ಥೆಯ ಸಮಗ್ರ ಸುಧಾರಣೆಗೆ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಜಾಗತಿಕ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ. ಭದ್ರತಾ ಮಂಡಳಿಯಲ್ಲಿ ಹೆಚ್ಚಿನ ಪಾತ್ರಕ್ಕಾಗಿ ಭಾರತ ಮತ್ತು ಬ್ರೆಜಿಲ್ ಹೊಂದಿರುವ ಆಕಾಂಕ್ಷೆಗಳಿಗೂ ಬೆಂಬಲ ಸೂಚಿಸಲಾಗಿದೆ. ಐಎಂಎಫ್, ವಿಶ್ವಬ್ಯಾಂಕ್ ಸೇರಿದಂತೆ ಬ್ರೆಟನ್ ವುಡ್ಸ್ ಸಂಸ್ಥೆಗಳ ಆಡಳಿತ ವ್ಯವಸ್ಥೆಯಲ್ಲೂ ಸುಧಾರಣೆ ಅಗತ್ಯ ಎಂದು ಬ್ರಿಕ್ಸ್ ಹೇಳಿದೆ. ಬದಲಾಗುತ್ತಿರುವ ಜಾಗತಿಕ ಆರ್ಥಿಕ ಪರಿಸ್ಥಿತಿ ಮತ್ತು ಉದಯೋನ್ಮುಖ ಮಾರುಕಟ್ಟೆಗಳ ಹೆಚ್ಚುತ್ತಿರುವ ಪ್ರಭಾವವನ್ನು ಈ…
ಭಾರತ-ಚೀನಾ ಗಡಿಯಲ್ಲಿ ಶಾಂತಿ, ಪರಸ್ಪರ ಗೌರವಕ್ಕೆ ಮೋದಿ-ಕ್ಸಿ ಒಲವು
ನವದೆಹಲಿ: ಭಾರತ-ಚೀನಾ ಸಂಬಂಧಗಳನ್ನು ದೀರ್ಘಕಾಲೀನ ಹಾಗೂ ಕಾರ್ಯತಂತ್ರದ ದೃಷ್ಟಿಕೋನದೊಂದಿಗೆ ಮುನ್ನಡೆಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆ 2026ರ ಸಂದರ್ಭದಲ್ಲಿ ಶನಿವಾರ ಉಭಯ ನಾಯಕರು ಭೇಟಿಯಾಗಿ ದ್ವಿಪಕ್ಷೀಯ ಸಂಬಂಧಗಳ ಪ್ರಗತಿ, ಗಡಿ ವಿಚಾರ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದರು. ಆಗಸ್ಟ್ 2025ರಲ್ಲಿ ಟಿಯಾಂಜಿನ್ನಲ್ಲಿ ನಡೆದಿದ್ದ ಹಿಂದಿನ ಭೇಟಿಯ ಬಳಿಕ ಉಭಯ ದೇಶಗಳ ಸಂಬಂಧದಲ್ಲಿ ಸ್ಥಿರ ಸುಧಾರಣೆ ಕಂಡುಬಂದಿರುವುದನ್ನು ನಾಯಕರು ಸ್ವಾಗತಿಸಿದರು. ಭಿನ್ನಾಭಿಪ್ರಾಯಗಳು ವಿವಾದಗಳಾಗಿ ಬದಲಾಗದಂತೆ ನೋಡಿಕೊಳ್ಳಬೇಕು ಎಂಬ ಅಭಿಪ್ರಾಯಕ್ಕೂ ಬಂದರು. ಭಾರತ-ಚೀನಾ ಸಂಬಂಧಗಳು ಪರಸ್ಪರ ಗೌರವ, ಸಂವೇದನೆ ಮತ್ತು ಹಿತಾಸಕ್ತಿಗಳ ಆಧಾರದ ಮೇಲೆ ಮುನ್ನಡೆಯಬೇಕು ಎಂದು ಮೋದಿ ಒತ್ತಿ ಹೇಳಿದರು. ದ್ವಿಪಕ್ಷೀಯ ಸಂಬಂಧಗಳ ನಿರಂತರ ಅಭಿವೃದ್ಧಿಗೆ ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿ ಅತ್ಯಗತ್ಯ ಎಂದ ಅವರು, ಗಡಿ ವಿಚಾರಕ್ಕೆ ಸಂಬಂಧಿಸಿದ ಅಸ್ತಿತ್ವದಲ್ಲಿರುವ…
