ನವದೆಹಲಿ: ದೇಶದ ವಾಹನ ಸವಾರರಿಗೆ ಮತ್ತೆ ಇಂಧನ ದರ ಏರಿಕೆಯ ಶಾಕ್ ಎದುರಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು 11 ದಿನಗಳಲ್ಲಿ ನಾಲ್ಕನೇ ಬಾರಿ ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಯಾಗಿವೆ. ಈ ಬಾರಿ ಪೆಟ್ರೋಲ್ ದರ ಲೀಟರ್ಗೆ ₹2.61 ಹಾಗೂ ಡೀಸೆಲ್ ದರ ₹2.71 ಹೆಚ್ಚಳವಾಗಿದೆ. ಮೇ 15ರಿಂದ ದರ ಪರಿಷ್ಕರಣೆ ಆರಂಭವಾದ ಬಳಿಕ ಒಟ್ಟು ಸುಮಾರು ₹7.50ರವರೆಗೆ ಇಂಧನ ದರ ಏರಿಕೆಯಾಗಿದೆ. ರಾಜಧಾನಿ New Delhiಯಲ್ಲಿ ಪೆಟ್ರೋಲ್ ದರ ಲೀಟರ್ಗೆ ₹102.12 ಹಾಗೂ ಡೀಸೆಲ್ ₹95.20ಕ್ಕೆ ಏರಿಕೆಯಾಗಿದೆ. Bengaluruದಲ್ಲಿ ಪೆಟ್ರೋಲ್ ದರ ₹110.93 ಮತ್ತು ಡೀಸೆಲ್ ₹95.99 ಆಗಿದೆ. ಇತರೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ ಹೀಗಿದೆ — Kolkata ₹113.51, Mumbai ₹111.21 ಹಾಗೂ Chennai ₹107.77. ಡೀಸೆಲ್ ದರ ಕ್ರಮವಾಗಿ ₹99.82, ₹97.83 ಮತ್ತು ₹99.55 ಆಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ…
Year: 2026
Mid-air collision in Austria: Paraglider escapes after plane crash scare
Vienna: A woman narrowly escaped death after a Cessna 172 collided mid-air with a paraglider near Zell am See in Austria on Saturday. According to police, the 44-year-old Austrian woman was paragliding from the Smittenhöhe region when the aircraft struck her paraglider during flight. Officials said the woman managed to deploy her emergency rescue parachute immediately after the collision and landed safely without serious injuries. The incident reportedly caused panic among onlookers, though no casualties were reported. Videos of the dramatic mid-air collision and the woman’s escape have since gone…
ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು
ಆಸ್ಟ್ರಿಯಾ: Zell am See ಸಮೀಪ ಶನಿವಾರ ನಡೆದ ಅಪಘಾತದಲ್ಲಿ ಪ್ಯಾರಾಗ್ಲೈಡರ್ಗೆ Cessna 172 ವಿಮಾನ ಡಿಕ್ಕಿ ಹೊಡೆದ ಘಟನೆ ಬೆಚ್ಚಿಬೀಳಿಸುವಂತಿದೆ. ಅಪಘಾತದ ಬಳಿಕ ಪ್ಯಾರಾಗ್ಲೈಡರ್ನಲ್ಲಿ ಹಾರಾಟ ನಡೆಸುತ್ತಿದ್ದ 44 ವರ್ಷದ ಆಸ್ಟ್ರಿಯನ್ ಮಹಿಳೆ ತಕ್ಷಣ ರಕ್ಷಣಾ ಪ್ಯಾರಾಚೂಟ್ ಬಳಸಿ ಸುರಕ್ಷಿತವಾಗಿ ನೆಲಕ್ಕಿಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಸ್ಮಿಟೆನ್ಹೋಹೆ ಪ್ರದೇಶದಿಂದ ಪ್ಯಾರಾಗ್ಲೈಡಿಂಗ್ ಆರಂಭಿಸಿದ್ದರು. ಹಾರಾಟದ ವೇಳೆ ಸೆಸ್ನಾ 172 ವಿಮಾನ ಪ್ಯಾರಾಗ್ಲೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಮಹಿಳೆ ತುರ್ತು ಪ್ಯಾರಾಚೂಟ್ ಬಳಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 🚨 WATCH: A paraglider gets hit by a Cessna 172 near the Austrian town of Zell am See. The paraglider was able to pull her rescue parachute and…
ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ
ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ನಿತಿನ್ ನವೀನ್ ಅವರೊಂದಿಗೆ ನಡೆದ ಸಭೆಯ ನಂತರ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ರಾಜ್ಯದಲ್ಲಿ ಈಗ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ನ ವೈಫಲ್ಯಗಳನ್ನು ಜನರಿಗೆ ಎತ್ತಿತೋರಿಸಿ ಬಿಜೆಪಿ ವಿಶ್ವಾಸಾರ್ಹ ಪಕ್ಷ ಎಂಬುದನ್ನು ಮನವರಿಕೆ ಮಾಡಿಕೊಡಲು ಎಲ್ಲರೂ ಸಂಘಟನಾತ್ಮಕವಾಗಿ ಶ್ರಮಿಸಬೇಕು. ಪಕ್ಷಕ್ಕಾಗಿ ಕಟಿಬದ್ಧರಾಗಿ ದುಡಿಯಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ಸಲಹೆ ನೀಡಿದರು ಎಂದು ವಿವರ ನೀಡಿದರು. ನಿತಿನ್ ನವೀನ್ ಅವರು ಅಧ್ಯಕ್ಷರಾದ ನಂತರ ಕರ್ನಾಟಕಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ. ಪಕ್ಷದ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರ ಮಟ್ಟದ ಮೇಲಿನವರೊಂದಿಗೆ ಸಂವಾದ ನಡೆಸಿದರು. ಪಕ್ಷದ ಪರಿಶ್ರಮದಿಂದಾಗಿ ಇಂದು 22ಕ್ಕೂ ಹೆಚ್ಚು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 400…
ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ
ಕಾರವಾರ: ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 14 ಮಂದಿ ನೀರಿನ ಸುಳಿಗೆ ಸಿಲುಕಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬೆಳಗ್ಗೆ ತಟ್ಟೆಹಕ್ಕಲು ನದಿಗೆ ತೆರಳಿದ್ದ ಕುಟುಂಬದ ಸದಸ್ಯರು ಕಪ್ಪೆಚಿಪ್ಪು ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ ಎನ್ನಲಾಗಿದೆ. ನೀರಿನ ರಭಸಕ್ಕೆ ಹಲವು ಮಂದಿ ಕೊಚ್ಚಿಕೊಂಡು ಹೋಗಿದ್ದಾರೆ. ಮೃತರೆಲ್ಲರೂ ಭಟ್ಕಳದ ಶಿರಾಲಿ ಭಾಗದ ಪಡುಶಿರಾಲಿ ಶಾರದಹೊಳೆ ನಿವಾಸಿಗಳಾಗಿದ್ದು, ಮೃತಪಟ್ಟವರಲ್ಲಿ ಒಬ್ಬ ಪುರುಷ ಹಾಗೂ ಏಳು ಮಹಿಳೆಯರು ಸೇರಿದ್ದಾರೆ. ಮೃತರನ್ನು ಲಕ್ಷ್ಮೀ ಅಣ್ಣಪ್ಪ ನಾಯ್ಕ (44), ಮಾಸ್ತಮ್ಮ ಮಂಜುನಾಥ ನಾಯ್ಕ (43), ಲಕ್ಷ್ಮೀ ಶಿವರಾಮ ನಾಯ್ಕ (39), ಉಮೇಶ್ ಮಂಜುನಾಥ ನಾಯ್ಕ (42), ಲಕ್ಷ್ಮೀ ಮಾದೇವ ನಾಯ್ಕ (38), ಮಾಲತಿ ಜಟ್ಟಪ್ಪ ನಾಯ್ಕ (38), ಲಕ್ಷ್ಮೀ ನಾಯ್ಕ…
ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ
ಮೈಸೂರು: ಟಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ರಸಗೊಬ್ಬರದ ಅಂದಾಜು ಮೌಲ್ಯ ಸುಮಾರು ₹14.40 ಲಕ್ಷ ಎಂದು ತಿಳಿದುಬಂದಿದೆ. ರೈತರಿಗೆ ವಿತರಿಸಬೇಕಾದ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸಲು ಯತ್ನಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿದರು. ಜಂಟಿ ಕೃಷಿ ನಿರ್ದೇಶಕರು (ಜಾಗೃತ ಕೋಶ) ಅವರ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರು, ಟಿ. ನರಸೀಪುರದ ಸಹಾಯಕ ನಿರ್ದೇಶಕರು ಹಾಗೂ ಬನ್ನೂರು ಕೃಷಿ ಅಧಿಕಾರಿಗಳು ಭಾಗವಹಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮವನ್ನು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಮೂಲಕ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈತರ ಹಿತಾಸಕ್ತಿಗೆ ಧಕ್ಕೆ…
ದೇಶಾದ್ಯಂತ 100 ಕೈಗಾರಿಕಾ ಉದ್ಯಾನವನ; ‘BHAVYA’ ಯೋಜನೆ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ
ನವದೆಹಲಿ: ದೇಶದ ಉತ್ಪಾದನಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಭವ್ಯ’ (BHAVYA) ಯೋಜನೆಯ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೈಗಾರಿಕೆ ಇಲಾಖೆ (Department for Promotion of Industry and Internal Trade) ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಯೋಜನೆಯಡಿ 2026-27ರಿಂದ 2031-32ರವರೆಗೆ ಸುಮಾರು ₹33,660 ಕೋಟಿ ವೆಚ್ಚದಲ್ಲಿ ದೇಶಾದ್ಯಂತ 100 ವಿಶ್ವದರ್ಜೆಯ ಕೈಗಾರಿಕಾ ಉದ್ಯಾನವನಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಮೊದಲ ಹಂತದಲ್ಲಿ ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯ ಮೂಲಕ 50 ಉದ್ಯಾನವನಗಳನ್ನು ಆಯ್ಕೆ ಮಾಡಲಾಗುತ್ತದೆ. BHAVYA ಯೋಜನೆ Make in India ಹಾಗೂ PM Gati Shakti ಯೋಜನೆಗಳೊಂದಿಗೆ ಸಂಯೋಜಿತವಾಗಿದ್ದು, ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಿದೆ. ಮಾರ್ಗಸೂಚಿಗಳ ಪ್ರಕಾರ, ಉದ್ಯಾನವನಗಳಲ್ಲಿ ಪ್ಲಗ್-ಅಂಡ್-ಪ್ಲೇ ಮೂಲಸೌಕರ್ಯ, ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ಸಂಪರ್ಕ, ಡಿಜಿಟಲ್ ಆಡಳಿತ ವ್ಯವಸ್ಥೆ, ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳು ಹಾಗೂ…
ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ
ಚೆನ್ನೈ: ಆಫ್ರಿಕಾದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ, ತಮಿಳುನಾಡು (Tamil Nadu) ಸರ್ಕಾರ ರಾಜ್ಯದ ವಿಮಾನ ನಿಲ್ದಾಣಗಳು, ಬಂದರುಗಳು ಹಾಗೂ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕಣ್ಗಾವಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಸಲಹೆಯಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಇದುವರೆಗೆ ಯಾವುದೇ ಎಬೋಲಾ ಪ್ರಕರಣ ಪತ್ತೆಯಾಗಿಲ್ಲ. ಆದರೂ ಆರೋಗ್ಯ ಇಲಾಖೆ ಹೆಚ್ಚಿನ ಸನ್ನದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕ ಆರೋಗ್ಯ ಮತ್ತು ಪ್ರಿವೆಂಟಿವ್ ಮೆಡಿಸಿನ್ ನಿರ್ದೇಶನಾಲಯವು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಿದ್ದು, ಎಬೋಲಾ ಸೋಂಕು ವರದಿಯಾದ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲು ಆದೇಶಿಸಿದೆ. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಬಲಪಡಿಸಲಾಗಿದ್ದು, ಪೀಡಿತ ರಾಷ್ಟ್ರಗಳಿಗೆ ಭೇಟಿ ನೀಡಿದವರ ಪ್ರಯಾಣ ಇತಿಹಾಸ ಪರಿಶೀಲಿಸಲಾಗುತ್ತಿದೆ. ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ಗಳು ಹಾಗೂ ಕ್ಷಿಪ್ರ ಪ್ರತಿಕ್ರಿಯಾ ತಂಡಗಳನ್ನು ಸಿದ್ಧವಾಗಿಡಲಾಗಿದೆ. ವೈದ್ಯಕೀಯ…
ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ
ನವದೆಹಲಿ: ಎಬೋಲಾ ವೈರಸ್ ಸೋಂಕು ಕುರಿತು ವಿಶ್ವ ಆರೋಗ್ಯ ಸಂಸ್ಥೆ (World Health Organization) ಜಾಗತಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಹಿನ್ನೆಲೆ, ಆಫ್ರಿಕಾದ ಕೆಲವು ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ತಪ್ಪಿಸುವಂತೆ ಭಾರತ ಸರ್ಕಾರ ನಾಗರಿಕರಿಗೆ ಸಲಹೆ ನೀಡಿದೆ. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (Democratic Republic of the Congo, Uganda) ಹಾಗೂ ದಕ್ಷಿಣ ಸುಡಾನ್ (South Sudan) ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಮಾಡಬಾರದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಮೇ 17ರಂದು WHO, ಅಂತರರಾಷ್ಟ್ರೀಯ ಆರೋಗ್ಯ ನಿಯಮಾವಳಿಗಳಡಿ (IHR) ಎಬೋಲಾ ಸೋಂಕಿನ ಏಕಾಏಕಿ ಪರಿಸ್ಥಿತಿಯನ್ನು “ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ” (PHEIC) ಎಂದು ಘೋಷಿಸಿತ್ತು. ಇದರ ಬೆನ್ನಲ್ಲೇ ಆಫ್ರಿಕಾ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ಕೂಡ ಕಾಂಗೋ ಮತ್ತು ಉಗಾಂಡಾದಲ್ಲಿ ಹರಡುತ್ತಿರುವ ಬುಂಡಿಬುಗ್ಯೊ ತಳಿ ಎಬೋಲಾ ವೈರಸ್ ಸ್ಫೋಟವನ್ನು ಭೂಖಂಡದ…
ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !
ನವದೆಹಲಿ, (ANU): ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸರ್ಕಾರದ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಮೌಲ್ಯಮಾಪನದಲ್ಲಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಮುನ್ನಡೆಸುತ್ತಿರುವ ಗ್ರಾಹಕ ವ್ಯವಹಾರಗಳ ಸಚಿವಾಲಯ ಮೊದಲ ಸ್ಥಾನ ಪಡೆದಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (B. Y. Vijayendra) ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಪ್ರಲ್ಹಾದ್ ಜೋಶಿ ಅವರ ನಾಯಕತ್ವದಲ್ಲಿ ಸಚಿವಾಲಯವು ಸಾರ್ವಜನಿಕ ಕುಂದುಕೊರತೆಗಳ ತ್ವರಿತ ಪರಿಹಾರ, ಫೈಲ್ ವಿಲೇವಾರಿ ಸೇರಿದಂತೆ ಹಲವು ಮಾನದಂಡಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ “ಉತ್ತಮ ಆಡಳಿತ” ದೃಷ್ಟಿಕೋನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಸಚಿವಾಲಯ ಯಶಸ್ವಿಯಾಗಿದೆ. ಇದು ಪ್ರಲ್ಹಾದ್ ಜೋಶಿ ಅವರ ಸಮರ್ಪಿತ ಆಡಳಿತ, ಪರಿಣಿತಿ…
