ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಎಂ ಬಿದರಿ ಅವರು ತಿಳಿಸಿದ್ದಾರೆ.
Year: 2026
‘ನಾನು ಜೆಡಿಎಸ್ನಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗುವುದಿಲ್ಲ’: ಜಿ.ಟಿ. ದೇವೇಗೌಡ
ಮೈಸೂರು: ರಾಜ್ಯ ಕಾಂಗ್ರೆಸ್ನಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವ ನಡುವೆ, ಜೆಡಿಎಸ್ನಲ್ಲೂ ಚರ್ಚೆಗಳು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ತಮ್ಮ ಪಕ್ಷ ನಿಷ್ಠೆಯನ್ನು ಸ್ಪಷ್ಟಪಡಿಸಿದ್ದು, “ನಾನು ಜೆಡಿಎಸ್ನಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲೂ ಜೆಡಿಎಸ್ನಿಂದಲೇ ಸ್ಪರ್ಧಿಸುತ್ತೇನೆ” ಎಂದು ಹೇಳಿದ್ದಾರೆ. ನಾನು ಯಾವುದೇ ನಾಯಕರಿಗೂ ದ್ರೋಹ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಇದರಲ್ಲಿ ಎರಡು ಬಾರಿ ಹುಣಸೂರು ಕ್ಷೇತ್ರದಿಂದ ಹಾಗೂ ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದೇನೆ. ಜೆಡಿಎಸ್ ಪಕ್ಷದ ಸಂಘಟನೆಗಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದು, ಈಗಲೂ ಪಕ್ಷದಿಂದ ದೂರ ಉಳಿದಿಲ್ಲ ಎಂದು ಹೇಳಿದರು. ಯಾರನ್ನೂ ಟೀಕಿಸದೆ, ಕ್ಷೇತ್ರದ ಅಭಿವೃದ್ಧಿ ಕೆಲಸಗಳಲ್ಲಿಯೇ ತೊಡಗಿಸಿಕೊಂಡಿದ್ದೇನೆ. ಜೆಡಿಎಸ್ ಪಕ್ಷವನ್ನು ಕಟ್ಟುವಲ್ಲಿ ನಾನು ವಹಿಸಿದ ಪಾತ್ರದ ಬಗ್ಗೆ ಹಿರಿಯ ನಾಯಕ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ…
ಎಐಸಿಐಸಿ ಹೋರಾಟಕ್ಕೆ ರಾಜ್ಯದ ಸಾಥ್.. ಮಂಗಳೂರಿನಲ್ಲಿ ಮೊದಲ ಲೀಗಲ್ ಬ್ಯಾಂಕ್ ಅಸ್ತಿತ್ವಕ್ಕೆ
ಮಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷ ಇದೀಗ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಕೇಂದ್ರದ ವಿರುದ್ಧ ‘ಓಟ್ ಚೋರಿ’ ಅಭಿಯಾನವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಈ ಹೋರಾಟವನ್ನು ಚುರುಕುಗೊಳಿಸಲು ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ತಂದಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲಿ ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ಬಂದಿದೆ. ಪಕ್ಷ ಸಂಘಟನೆಗೆ ಕಾನೂನು ಶಕ್ತಿ ತುಂಬುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಆರಂಭಿಸಲಾಗಿದ್ದು, ದಕ್ಷಿಣ ಭಾರತದಲ್ಲೇ ಮೊದಲೆಂಬಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕ ಈ ‘ಲೀಗಲ್ ಬ್ಯಾಂಕ್’ ಸ್ಥಾಪಿಸಿ ಗಮನಸೆಳೆದಿದೆ. ಸುಮಾರು 250 ವಕೀಲರ ತಂಡ ಈ ‘ಲೀಗಲ್ ಬ್ಯಾಂಕ್’ ನಲ್ಲಿ ಕೈಜೋಡಿಸಿರುವುದು ವಿಶೇಷ. ಕೇಂದ್ರದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಲು ಅನುಕೂಲವಾಗುವಂತೆ ಎಲ್ಲಾ ಪ್ರಾದೇಶಿಕ ಸಮಿತಿಗಳು (PCC) ಹಾಗೂ ಜಿಲ್ಲಾ ಸಮಿತಿ (PCC), ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ ‘ಲೀಗಲ್ ಬ್ಯಾಂಕ್’ ಸ್ಥಾಪಿಸಬೇಕೆಂಬುದು…
ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ
ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ದ್ವೀತಿಯ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ವಿವಿಧ ಆಯಾಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದ್ವಿತೀಯ ಸ್ಥಾನದ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ.. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ನೇತೃತ್ವ ಹಾಗೂ ವಿಶೇಷ ಕಾಳಜಿಯಿಂದ ರಾಜ್ಯ ಕೃಷಿ ಇಲಾಖೆ ಮಹತ್ವದ ಸಾಧನೆ ಮಾಡಿದ್ದು, ಕೇಂದ್ರ ಸರ್ಕಾರ, ರಾಜ್ಯ…
‘ನಿಮ್ಮಷ್ಟು ಪೂರ್ವಾಗ್ರಹಪೀಡಿತ ವ್ಯಕ್ತಿಯನ್ನು ನಾನು ನೋಡಿಲ್ಲ’ ರೆಹಮಾನ್ ಬಗ್ಗೆ ಕಂಗನಾ
ಮುಂಬೈ: ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರ ‘ಕೋಮುವಾದಿ’ ಹೇಳಿಕೆ ವಿವಾದದ ನಡುವೆ, ನಟಿ ಹಾಗೂ ನಿರ್ದೇಶಕಿ ಕಂಗನಾ ರನೌತ್ ತಮ್ಮ ನಿರ್ದೇಶನದ ಎಮರ್ಜೆನ್ಸಿ ಚಿತ್ರದ ಸಂದರ್ಭದಲ್ಲಿನ ‘ಅಹಿತಕರ ಅನುಭವ’ವನ್ನು ನೆನಪಿಸಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಪೋಸ್ಟ್ ಮಾಡಿರುವ ಕಂಗನಾ, ಚಿತ್ರಕ್ಕಾಗಿ ರೆಹಮಾನ್ ಅವರನ್ನು ಭೇಟಿಯಾಗಿ ಕಥಾನಕವನ್ನು ವಿವರಿಸಲು ತಾವು ಉತ್ಸುಕರಾಗಿದ್ದೆವು. ಆದರೆ, ಅವರು ಪ್ರಚಾರ ಚಿತ್ರದ ಭಾಗವಾಗಲು ಇಚ್ಛಿಸಿಲ್ಲ ಎಂದು ಹೇಳಿಕೊಂಡು ಭೇಟಿಗೂ ನಿರಾಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ರಾಜಕೀಯ ನಿಲುವಿನ ಕಾರಣಕ್ಕೆ ಚಿತ್ರರಂಗದಲ್ಲಿ ಪೂರ್ವಾಗ್ರಹ ಮತ್ತು ಪಕ್ಷಪಾತವನ್ನು ಎದುರಿಸಬೇಕಾಗುತ್ತಿದೆ ಎಂದು ಕಂಗನಾ ದೂರಿದ್ದಾರೆ. “ನಾನು ಕೇಸರಿ ಪಕ್ಷವನ್ನು ಬೆಂಬಲಿಸುವುದರಿಂದ ನನಗೆ ಚಿತ್ರರಂಗದಲ್ಲಿ ಪಕ್ಷಪಾತ ಎದುರಾಗುತ್ತಿದೆ. ಆದರೆ ನಿಮ್ಮಷ್ಟು ಪೂರ್ವಾಗ್ರಹಪೀಡಿತ ಮತ್ತು ದ್ವೇಷಪೂರಿತ ವ್ಯಕ್ತಿಯನ್ನು ನಾನು ನೋಡಿಲ್ಲ. ಎಮರ್ಜೆನ್ಸಿ ಬಗ್ಗೆ ನಿಮಗೆ ಹೇಳಲು ಬಯಸಿದ್ದೆ, ಆದರೆ ನೀವು ಭೇಟಿಗೂ ನಿರಾಕರಿಸಿದ್ದೀರಿ” ಎಂದು ಕಂಗನಾ…
ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ: ಸಿದ್ದರಾಮಯ್ಯ
ಮೈಸೂರು: ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೆಫ್ಟ್ ಮಾತನಾಡಿದ ಸಿದ್ದರಾಮಯ್ಯ, ಹಿಂದೆ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐ ತನಿಖೆಗೆ ಕೊಟ್ಟಿದ್ದರೆ ಈಗ ನಮ್ಮನ್ನು ಕೇಳಬಹುದಿತ್ತು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ಕಾಂಗ್ರೆಸ್ ನಾಯಕರ ಬಗ್ಗೆ ತುಚ್ಛವಾಗಿ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದರು ಎಂದು ನೆನಪಿಸಿದರು. ಲೋಕಸಭಾ ಚುನಾವಣೆ ಪ್ರಚಾರಕ್ಕೆ ಹೋದಾಗ ಬಳ್ಳಾರಿಯಲ್ಲಿ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ…
ಕಾಂಗ್ರೆಸ್ ರಾಜಕೀಯವನ್ನು ಜನರು ತಿರಸ್ಕರಿಸಿದ್ದಾರೆ: ಪ್ರಧಾನಿ ಮೋದಿ
ಗುವಾಹಟಿ: ದೇಶದ ಜನರು ಕಾಂಗ್ರೆಸ್ ಪಕ್ಷ ಹಾಗೂ ಅದರ ರಾಜಕೀಯವನ್ನು ತಿರಸ್ಕರಿಸಿದ್ದು, ವಿರೋಧ ಪಕ್ಷವು ಹಲವು ರಾಜ್ಯಗಳಲ್ಲಿ ಆಘಾತಕಾರಿ ಸೋಲುಗಳನ್ನು ಅನುಭವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಸ್ಸಾಂನ ಕಾಜಿರಂಗದಲ್ಲಿ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಇತ್ತೀಚಿನ ಪುರಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ಸೋತಿರುವುದನ್ನು ಉಲ್ಲೇಖಿಸಿದರು. ಬಿಜೆಪಿಯ ಆಡಳಿತ ಮಾದರಿಯ ಮೇಲೆ ಕಳೆದ ಒಂದೂವರೆ ವರ್ಷಗಳಲ್ಲಿ ಜನರ ನಂಬಿಕೆ ಹೆಚ್ಚಾಗಿದೆ ಎಂದು ಮೋದಿ ಹೇಳಿದರು. ಬಿಹಾರ, ಕೇರಳ ಸೇರಿದಂತೆ ಹಲವು ರಾಜ್ಯಗಳ ಚುನಾವಣಾ ಫಲಿತಾಂಶಗಳು ಇದಕ್ಕೆ ಸಾಕ್ಷಿಯಾಗಿದೆ ಎಂದ ಅವರು, ಉತ್ತಮ ಆಡಳಿತ ಮತ್ತು ಅಭಿವೃದ್ಧಿಯೇ ಬಿಜೆಪಿಯ ಶಕ್ತಿ ಎಂದು ಹೇಳಿದರು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಅಸ್ಸಾಂನಲ್ಲಿ ಒಂದು ಕೊಂಬಿನ ಖಡ್ಗಮೃಗ ಬೇಟೆ ಹೆಚ್ಚಾಗಿತ್ತು ಎಂದು ಆರೋಪಿಸಿದ ಪ್ರಧಾನಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೇಟೆ ಪ್ರಕರಣಗಳನ್ನು ನಿಯಂತ್ರಿಸಲಾಗಿದ್ದು,…
ಧಾರ್ಮಿಕ ಜೊತೆಗೆ ಜ್ಞಾನ, ಅನ್ನದಾಸೋಹಕ್ಕೂ ಸುತ್ತೂರು ಮಠ ಮಹತ್ವ ನೀಡಿದೆ: ಸಿಎಂ
ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ. ಧಾರ್ಮಿಕವಾಗಿ ತೊಡಗಿಸಿಕೊಂಡಿರುವ ಜೊತೆಗೆ ಜ್ಞಾನ ಮತ್ತು ಅನ್ನದಾಸೋಹಕ್ಕೆ ಮಹತ್ವ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಕೃಷಿ ವಿಚಾರಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುವುದರಿಂದ ಶಿಕ್ಷಣವೇ ಬಹಳ ಮುಖ್ಯ. ನೂರಕ್ಕೆ ಶೇ.75% ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅದನ್ನು ಮನಗಂಡ ಮಠ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ ಎಂದರು. ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಅರ್ಥ…
ಕೇರಳ: ಮಾಜಿ ಸಿಪಿಎಂ ಶಾಸಕ ಎಸ್. ರಾಜೇಂದ್ರನ್ ಬಿಜೆಪಿಗೆ ಸೇರ್ಪಡೆ
ತಿರುವನಂತಪುರಂ: ಕೇರಳ ರಾಜಕೀಯದಲ್ಲಿ ವಾರಗಳ ಕಾಲ ನಡೆದ ಊಹಾಪೋಹಗಳಿಗೆ ತೆರೆ ಎಳೆದಂತೆ, ಮಾಜಿ ಸಿಪಿಎಂ ಶಾಸಕ ಎಸ್. ರಾಜೇಂದ್ರನ್ ಭಾನುವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ತಿರುವನಂತಪುರಂನಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ರಾಜೇಂದ್ರನ್ ಅವರಿಗೆ ಪಕ್ಷದ ಸದಸ್ಯತ್ವ ನೀಡಿದರು. ಈ ತಿಂಗಳ ಆರಂಭದಲ್ಲೇ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದ ರಾಜೇಂದ್ರನ್, ಜನವರಿ 10ರಂದು ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ತಮ್ಮ ರಾಜಕೀಯ ಭವಿಷ್ಯ ಕುರಿತು ಚರ್ಚೆ ನಡೆಸಿದ್ದರು. ಯಾವುದೇ ವೈಯಕ್ತಿಕ ಷರತ್ತುಗಳು ಅಥವಾ ಬೇಡಿಕೆಗಳಿಲ್ಲದೆ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಮೂರು ಬಾರಿ ಶಾಸಕರಾಗಿದ್ದ ರಾಜೇಂದ್ರನ್, ಸುಮಾರು 15 ವರ್ಷಗಳ ರಾಜಕೀಯ ಅನುಭವ ಹೊಂದಿದ್ದಾರೆ. ಇಡುಕ್ಕಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ಅವರು, ಕಳೆದ ನಾಲ್ಕು ವರ್ಷಗಳಿಂದ ಸಿಪಿಎಂನೊಂದಿಗೆ ಅಂತರ ಹೆಚ್ಚಿಸಿಕೊಂಡಿದ್ದರು. ಹಿಂದಿನ…
ಪೊಳಲಿ ಘಟನೆ ಬೆನ್ನಲ್ಲೇ ಇದೀಗ ಅರಕಲಗೂಡು ಸರದಿ, ವೃದ್ಧ ದಂಪತಿ ಮೇಲೆ ಫೈನಾನ್ಸ್ ಕಂಪನಿಯ ಕ್ರೌರ್ಯ
ಹಾಸನ: ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆ ಪೊಳಲಿಯ ಸಹಕಾರ ಸಂಘದ ಅಧಿಕಾರಿಗಳು ಬಲವಂತದ ಸಾಲ ವಸೂಲಾತಿಗೆ ಯತ್ನಿಸಿ ವೃದ್ದೆಗೆ ಕಿರುಕುಳ ನೀಡಿದ್ದ ಬಗ್ಗೆ FIR ದಾಖಲಾಗಿತ್ತು. ಆ ಘಟನೆ ಬೆನ್ನಲ್ಲೇ ಇದೀಗ ಹಾಸನ ಜಿಲ್ಲೆಯಲ್ಲೂ ಖಾಸಗಿ ಫೈನಾನ್ಸ್ಗಳ ಹಾವಳಿ ಬಗ್ಗೆ ವರದಿಯಾಗಿದೆ. ಖಾಸಗಿ ಫೈನಾನ್ಸ್ ಕಡೆಯವರು ಮನೆಗೆ ಬೀಗ ಜಡಿದ ಪರಿಣಾಮ ವೃದ್ಧ ದಂಪತಿ ಬೀದಿಗೆ ಬಿದ್ದಿರುವ ಘಟನೆ ಹಾಸನ ಜಿಲ್ಲೆ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ ಎಂಬ ವರದಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲ ತೀರಿಸಿಲ್ಲ ಎಂಬಕರಣ ನೀಡಿ ಖಾಸಗಿ ಫೈನಾನ್ಸ್ ಕಡೆಯವರೆನ್ನಲಾದ ಗುಂಪು ಅರಕಲಗೂಡು ತಾಲೂಕಿನ ಕೊರಟಕೆರೆಯ ವೃದ್ಧ ದಂಪತಿಗಳಾದ ಸಣ್ಣಯ್ಯ (80) ಮತ್ತು ಜಯಮ್ಮ (75) ಎಂಬವರನ್ನು ಮನೆಯಿಂದ ಹೊರಹಾಕಿದ್ದಾರೆ ಎನ್ನಲಾಗಿದೆ. ಮಗನ ಕ್ಯಾನ್ಸರ್ ಚಿಕಿತ್ಸೆಗಾಗಿ ಖಾಸಗಿ ಫೈನಾನ್ಸ್’ನಿಂದ 2 ಲಕ್ಷ ರೂಪಾಯಿ ಸಾಲವನ್ನು ಪಡೆಯಲಾಗಿತ್ತು ಎನ್ನಲಾಗಿದೆ. ಸಲ ಮರುಪಾವತಿಸದ ಹಿನ್ನೆಲೆ ಕಾನೂನು ಕ್ರಮ…
