ಬೈಂದೂರು, ಮೂಡಿಗೆರೆ ಸಹಿತ BJP ಎರಡನೇ ಪಟ್ಟಿಯಲ್ಲಿ ಹಲವು ಶಾಸಕರಿಗೆ ಟಿಕೆಟ್ ಇಲ್ಲ

ದೆಹಲಿ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಬೈಂದೂರಿನಲ್ಲಿ ಹಾಲಿ ಶಾಸಕ ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ತಪ್ಪಿದ್ದು, ಗುರುರಾಜ್ ಗಂಟಿಹೊಳೆ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಮೂಡಿಗೆರೆಯಲ್ಲಿ ಶಾಸಕ ಎಂಪಿ ಕುಮಾರಸ್ವಾಮಿ ಬದಲಿಗೆ ದೀಪಕ್ ದೊಡ್ಡಯ್ಯಾವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ

ಲೋಕಾಯುಕ್ತ ಬಲೆಗೆ ಬಿದ್ದು ಜೈಲುಪಾಲಾಗಿರುವ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ತಪ್ಪಿದ್ದು, ಆ ಕ್ಷೇತ್ರದಿಂದ ಶಿವಕುಮಾರ್‌ಗೆ ಅವಕಾಶ ನೀಡಲಾಗಿದೆ.

2ನೇ ಪಟ್ಟಿಯಲ್ಲಿ ಟಿಕೆಟ್ ಕಳೆದುಕೊಂಡ  ಶಾಸಕರು:

  • ಚೆನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ
  • ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ
  • ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ
  • ಚೆನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ
  • ಕಲಘಟಗಿ ಶಾಸಕ ನಿಂಬಣ್ಣನವರ್ ಲಿಂಗಣ್ಣ
  • ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ
  • ಹಾವೇರಿ ಶಾಸಕ ನೆಹರು ಓಲೆಕಾರ್
  • ಮಾಯಕೊಂಡ ಶಾಸಕ ಎನ್ ಲಿಂಗಣ್ಣ
  • ಗುರ್ಮಿಠಲ್ ಶಾಸಕ ನಾಗನಗೌಡ ಕಂದಕೂರ್

Related posts