ಕಣಿವೆ ರಾಜ್ಯದಲ್ಲಿ ಉಗ್ರರ ಕಿತಾಪತಿ; ಸೇನೆಯ ಗುಂಡಿಗೆ ಶಂಕಿತ ಬಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರಿದಿದೆ. ಸೇನೆ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ.

ಕಣಿವೆ ರಾಜ್ಯದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಗುರುವಾರ ಗುಂಡಿನ ಚಕಮಕಿ ನಡೆದಿದೆ. ಸೋಪೋರ್‌ನ ರಾಮ್‌ಪೋರಾ ಪ್ರದೇಶದಲ್ಲಿ ಉಗ್ರರ ಅಡಗುತಾಣವನ್ನು ಪತ್ತೆ ಮಾಡಿದ ಪೊಲೀಸರು ಮತ್ತು ಭದ್ರತಾ ಪಡೆ ಯೋಧರು ಜಂಟಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಯೋಧರು, ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ.
ಹತ್ಯೆಯಾದ ಉಗ್ರನ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts