ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್ಸಿಬಿ ತಂಡವನ್ನು ಸಿಎಂ ಸಿದ್ದರಾಮಯ್ಯ ಅಭಿನಂಧಿಸಿದ್ದಾರೆ.
ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ಸಿಬಿಯ ಹುಡುಗರು ನನಸಾಗಿಸಿದ್ದಾರೆ ಎಂದವರು ಬಣ್ಣಿಸಿದ್ದಾರೆ.
Rrrrrrrrr…. Cccccccc…. Bbbbbbbbb…. ಎಂದು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ಆರ್ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.
‘ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ’ ಎಂದವರು ಸಂತಸ ಹಂಚಿಕೊಂಡಿದ್ದಾರೆ.
Rrrrrrrrr…. Cccccccc…. Bbbbbbbbb….
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ಸಿಬಿಯ ಹುಡುಗರು ನನಸಾಗಿಸಿದ್ದಾರೆ.
ಆರ್ಸಿಬಿಯ ಈ… pic.twitter.com/dYG4OHVNVN
— Siddaramaiah (@siddaramaiah) June 3, 2025