ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

ಬೆಂಗಳೂರು: RCB ವಿಜಯೋತ್ಸವ ಸಂದರ್ಭದ ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ, ಈ ದುರ್ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಏಕೆ ಎಫ್‌ಐಆರ್ ಹಾಕಬಾರದು? ಎಂದು ಪ್ರಶ್ನಿಸಿದೆ.

ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ನಲ್ಲಿ ಬಿಜೆಪಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಕಾಂಗ್ರೆಸ್ ಪೊಲೀಸರನ್ನು ತಮ್ಮ ಪಕ್ಷದ ಇಂಟರ್ನ್‌ಗಳಾಗಿ ಬಳಸುವುದನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ಹೇಳಿದೆ.

ಸಿಎಂ ಮತ್ತು ಡಿಸಿಎಂ ಅಭಿಮಾನಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎಂಬುದಕ್ಕೆ ಸ್ಪಷ್ಟ ಪುರಾವೆಗಳಿವೆ, ಆದರೆ ಬೆಂಗಳೂರು ಪೊಲೀಸರು ಆರ್‌ಸಿಬಿ, ಈವೆಂಟ್ ಮ್ಯಾನೇಜರ್‌ಗಳು ಮತ್ತು ಕೆಎಸ್‌ಸಿಎ ವಿರುದ್ಧ ಮಾತ್ರ ಎಫ್‌ಐಆರ್ ದಾಖಲಿಸುತ್ತಾರೆ ಎಂದು ಬಿಜೆಪಿ ಹೇಳಿದೆ. ಇದು ಮರೆಮಾಚುವಿಕೆಗಿಂತ ಬೇರೇನೂ ಅಲ್ಲ. ಬಲಿಪಶುಗಳನ್ನು ಮಾತ್ರವಲ್ಲ, ಎಲ್ಲರನ್ನೂ ಹೊಣೆಗಾರರನ್ನಾಗಿ ಮಾಡಿ ಎಂದು ಬಿಜೆಪಿ ಸವಾಲು ಹಾಕಿದೆ.

Related posts