OBC ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದಿಂದ ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

ಬೆಂಗಳೂರು: 2A ವರ್ಗ ಹಾಗೂ ಲಿಂಗಾಯತ ಉಪಸಮುದಾಯಗಳಿಗೆ ಒಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹಿಸಿ, ಪಂಚಮಸಾಲಿ ಸಮುದಾಯ ತನ್ನ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದೆ. ‘ಉಳವಿ ಕ್ಷೇತ್ರಕ್ಕೆ ಮತ್ತೆ ಹೋಗೋಣ’ ಎಂಬ ಘೋಷಣೆಯೊಂದಿಗೆ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಈ ಹೋರಾಟಕ್ಕೆ ಕರೆ ನೀಡಿದ್ದಾರೆ.

ಜೂನ್ 23, ಸೋಮವಾರ ಮಧ್ಯಾಹ್ನ 1 ಗಂಟೆಗೆ ಉಳವಿಯಲ್ಲಿ ಸಂಕಲ್ಪ ಸಭೆ ನಡೆಯಲಿದೆ. ನಂತರ ಜೂನ್ 24, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಇಷ್ಟಲಿಂಗ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ತೀವ್ರವಾದ ಸಂದೇಶ ರವಾನೆಯಾಗಲಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

“ಪಂಚಮಸಾಲಿ, ಮಲೆಗೌಡ, ಗೌಳಿ, ಲಿಂಗಾಯತ ಗೌಡ, ದೀಕ್ಷಾ ಲಿಂಗಾಯತ ಸೇರಿದಂತೆ ಲಿಂಗಾಯತ ಉಪಸಮುದಾಯಗಳ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿಗಾಗಿ ನಾವು ಈ ಹೋರಾಟ ನಡೆಸುತ್ತಿದ್ದೇವೆ,” ಎಂದು ಸ್ವಾಮೀಜಿ ವಿವರಿಸಿದ್ದಾರೆ.

ಈ ಹೋರಾಟವನ್ನು ಬೆಳಗಾವಿ, ಧಾರವಾಡ ಹಾಗೂ ಕಾರವಾರ ಜಿಲ್ಲೆಗಳ ಪಂಚಮಸಾಲಿ ಘಟಕಗಳ ಸಹಭಾಗಿತ್ವದಲ್ಲಿ ಹಾಗೂ ಉಳವಿ ಚನ್ನಬಸವೇಶ್ವರ ಟ್ರಸ್ಟ್ ಸಹಕಾರದಲ್ಲಿ ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Related posts