ಬೆಂಗಳೂರು: ವೇತನ ವಿಚಾರದಲ್ಲಿನ ತಾರತಮ್ಯ ವಿರೋಧಿಸಿ ರಾಜ್ಯದ ಆಶಾ ಕಾರ್ಯಕತೆಯರು ಮತ್ತೊಮ್ಮೆ ಹೋರಾಟದ ಅಖಾಡಕ್ಕೆ ಧುಮುಕಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್ 26) ಆಶಾ ಕಾರ್ತೆಯರು ಪ್ರತಿಭಟನೆ ನಡೆಸಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಜಮಾಯಿಸಿದ ನೂರಾರು ಆಶಾ ಕಾರ್ಯಕರ್ತೆಯರು, ವೇತನ ವಿಚಾರದಲ್ಲಿ ತಮ್ಮನ್ನು ಶೋಷಣೆಗೆ ಒಳಪಡಿಸುತ್ತಿರುವ ರಾಜ್ಯ ಸರ್ಕಾರ ಇದೀಗ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ’ ಹೆಸರಿನಲ್ಲೂ ಆಶಾ ಕಾರ್ಯಕರ್ತೆಯರಿಗೆ ಅನ್ಯಾಯ ಎಸಗುತ್ತಿದೆ ಎಂಬ ಆರೋಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ 2025’ ನಡೆಯುತ್ತಿದ್ದು, ಆಶಾ ಕಾರ್ಯಕರ್ತೆಯರನ್ನು ಈ ಜಾತಿ ಗಣತಿ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲಾಗಿದೆ. ಆದರೆ ಸಮೀಕ್ಷೆಗೆ ನಿಗದಿಯಾಗಿರುವ ಭತ್ಯೆಯನ್ನು ನೀಡದೆ ಆಶಾ ಕಾರ್ಯಕರ್ತೆಯರಿಂದ ಬಿಟ್ಟಿ ಚಾಕರಿ ಮಾಡಿಸಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ಟಿ.ಸಿ.ರಮ್ಯಾ ಆರೋಪಿಸಿದರು.
ಇದೇ ವೇಳೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ಟಿ.ಸಿ.ರಮ್ಯಾ ನೇತೃತ್ವದ ನಿಯೋಗ ಈಗಾಗಲೇ ಘೋಷಿಸಿರುವಂತೆ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10,000 ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಮತ್ತು ಈ ವರ್ಷದ ಬಜೆಟ್ನಲ್ಲಿ ರೂ. 1000 ಹೆಚ್ಚಳದ ಆದೇಶವನ್ನು ಕೂಡಲೇ ನೀಡುವ ಕುರಿತು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಸೂಕ್ತಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ, ಇದೇ ಜನವರಿ 7 ರಿಂದ 10 ನೇ ತಾರೀಖಿನವರೆಗೆ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದಿದ್ದು ತಮಗೆ ತಿಳಿದಿದೆ. ರೂ.15,000 ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ನಡೆಸಿದ ಈ ಹೋರಾಟದಲ್ಲಿ ರಾಜ್ಯದ ಸುಮಾರು 40,000 ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಜನವರಿ 10, 2025 ರಂದು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ, ಮಾನ್ಯ ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳನ್ನು ಕರೆದು ಸಭೆ ಮಾಡಿರುತ್ತಾರೆ. ಈ ಸಭೆಯಲ್ಲಿ ನಮ್ಮೊಂದಿಗೆ ಮಾನ್ಯ ಆರೋಗ್ಯ ಸಚಿವರು, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಕೆಳಗಿಂತೆ ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ತೀರ್ಮಾನಿಸಲಾಗಿತ್ತು ಎಂದು ಈ ಮನವಿ ಪತ್ರದಲ್ಲಿ ಗಮನಸೆಳೆಯಲಾಗಿದೆ.
ಎಪ್ರಿಲ್ 2025ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10000 ಗಳ ಗೌರವಧನವನ್ನು ನೀಡಲಾಗುವುದು. ರೂ.10,000 ಹೊರತುಪಡಿಸಿ, ಕಾಂಪೋನೆಂಟ್ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್ ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹ ಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, ರೂ. 10,000 ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು. ಈ ಕುರಿತು ಕೂಡಲೇ ಸರ್ಕಾರದಿಂದ ಆದೇಶಿಸಬೇಕು ಎಂದು ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
ಈ ವರ್ಷದ ಬಜೆಟ್ನಲ್ಲಿ ಎಲ್ಲಾ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿರುತ್ತೀರಿ. ಆದರೆ ಈ ಬಜೆಟ್ನಲ್ಲಿ ರಾಜ್ಯದ 42000 ಆಶಾಗಳಿಗೆ ರೂ.1000 ಹೆಚ್ಚಳ ಮಾಡದೆ, 42000 ಆಶಾಗಳಲ್ಲಿ ಈಗಾಗಲೇ ಸುಮಾರು 27000 ಆಶಾಗಳಿಗೆ ತಂಡ ಆಧಾರಿತ (ಟೀಮ್ ಬೇಸ್ಟ್ ಇನ್ಸೆಂಟಿವ್) ರೂ.1000 ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಕಳೆದ 2 ವರ್ಷಗಳಿಂದ ಹೇಳಿದ ಇನ್ನುಳಿದ 15004 ಆಶಾಗಳಿಗೆ ಕಡಿಮೆ ಇದ್ದ ತಂಡ ಆಧಾರಿತ (ಟೀಮ್ ಬೇಸ್ಟ್ ಇನ್ಸೆಂಟಿವ್) ರೂ.1000 ರಂತೆ ಪ್ರೋತ್ಸಾಹ ಧನವನ್ನು ಮಾತ್ರ ಈ ಬಜೆಟ್ನಲ್ಲಿ ನೀಡಲಾಗಿದೆ. ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಳ ಮಾಡಬೇಕು. ಎಂದು ಆಶಾ ಕಾರ್ಯಕರ್ತೆಯರು ಗಮನಸೆಳೆದರು.