ನಂದಿನಿ ತುಪ್ಪ ದುಬಾರಿ; ‘ಹಗಲು ದರೋಡೆ’ ಎಂದ ಜೆಡಿಎಸ್

ಬೆಂಗಳೂರು: ನಂದಿನಿ ತುಪ್ಪ ದುಬಾರಿಯಾಗಲಿದೆ. ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಲು ಸರ್ಕಾರ ಸಹಮತ ವ್ಯಕ್ತಪಡಿಸಿದೆ. ಕೆಎಂಎಫ್ ನಿರ್ಧಾರ ಬಗ್ಗೆ ಸಾರ್ವಜನಿಕವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಪ್ರತಿಪಕ್ಷ ಜೆಡಿಎಸ್ ಕೂಡಾ ಆಕ್ರೋಶ ಹೊರಹಾಕಿದೆ.

‘ಸಾಲ ಮಾಡಿಯಾದರೂ ತುಪ್ಪ ತಿನ್ನು’ ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು ಕಾಂಗ್ರೆಸ್ ಸರ್ಕಾರ ತುಪ್ಪ ತಿನ್ನುತ್ತಿದೆ’ ಎಂದು ಜೆಡಿಎಸ್ ಪ್ರತಿಕ್ರಿಯಿಸಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆಮಾಡಿದ್ದರೂ, ಕಾಂಗ್ರೆಸ್‌ ಸರ್ಕಾರ ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಿ ಹಗಲು ದರೋಡೆ ಮಾಡುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.

ಗ್ಯಾರಂಟಿಗಾಗಿ ಬೊಕ್ಕಸ ಖಾಲಿಮಾಡಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ನಿರಂತರವಾಗಿ ರಾಜ್ಯದ ಜನರಿಗೆ ದರ ಏರಿಕೆಯ ಬರೆ ಹಾಕುತ್ತ ಸುಲಿಗೆಗೆ ಇಳಿದಿದೆ ಎಂದು ಜೆಡಿಎಸ್ ತನ್ನ ‘X’ ಖಾತೆಯಲ್ಲಿ ಆಕ್ರೋಶ ಹೊರಹಾಕಿದೆ.

Related posts