ಕರ್ನಾಟಕದ ಹಣ ಕಾಂಗ್ರೆಸ್ ಪಕ್ಷದ ನಿಧಿಯಲ್ಲ; ಭಾರತ್ ಜೋಡೋ ಯುವ ಸಂಘ ಯೋಜನೆಗೆ ಆರ್.ಅಶೋಕ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ 6,000 ‘ಭಾರತ್ ಜೋಡೋ ಯುವ ಸಂಘ’ ರಚಿಸಲು ಮುಂದಾಗಿರುವ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಸಾರ್ವಜನಿಕ ಹಣವನ್ನು ಕಾಂಗ್ರೆಸ್ ಪಕ್ಷದ ರಾಜಕೀಯ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಹಣವನ್ನು ಕಾಂಗ್ರೆಸ್ ಪ್ರಚಾರಕ್ಕೆ ಬಳಸುತ್ತಿದೆ. ‘ಭಾರತ್ ಜೋಡೋ ಯುವ ಸಂಘ’ ಯೋಜನೆ ತೆರಿಗೆದಾರರ ಹಣದಿಂದ ನಡೆಯುವ ಕಾಂಗ್ರೆಸ್ ಪ್ರಚಾರ ಯಂತ್ರವಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ಖಾತರಿ ಅನುಷ್ಠಾನ ಸಮಿತಿಗಳ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ಆಶ್ರಯ ನೀಡಲಾಗಿತ್ತು. ಇದೀಗ “ಸಾಂವಿಧಾನಿಕ ಮೌಲ್ಯಗಳು” ಮತ್ತು “ಸಾಮಾಜಿಕ ಸಾಮರಸ್ಯ” ಹೆಸರಿನಲ್ಲಿ ಮತ್ತೊಮ್ಮೆ ತೆರಿಗೆದಾರರ ಹಣವನ್ನು ಪಕ್ಷದ ಹಿತಾಸಕ್ತಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

“ರಾಜ್ಯದ ಖಜಾನೆ ಕಾಂಗ್ರೆಸ್ ಪಕ್ಷದ ಖಾಸಗಿ ಚುನಾವಣಾ ನಿಧಿಯಲ್ಲ. ಅದು ರಾಹುಲ್ ಗಾಂಧಿ ಅವರ ರಾಜಕೀಯ ಅಭಿಯಾನ ಅಥವಾ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಮಹತ್ವಾಕಾಂಕ್ಷೆಗಳಿಗೆ ಬಳಸುವ ನಿಧಿಯೂ ಅಲ್ಲ” ಎಂದು ಅಶೋಕ್ ಹೇಳಿದ್ದಾರೆ.

ರೈತರು ಸಂಕಷ್ಟದಲ್ಲಿದ್ದಾರೆ, ಮೂಲಸೌಕರ್ಯ ಕುಸಿಯುತ್ತಿದೆ, ಅಭಿವೃದ್ಧಿ ಕಾಮಗಾರಿಗಳು ನಿಧಿ ಕೊರತೆಯಿಂದ ಸ್ಥಗಿತಗೊಂಡಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ರಾಜಕೀಯ ನಿಷ್ಠಾವಂತರ ಜಾಲ ನಿರ್ಮಿಸುವ ಕೆಲಸದಲ್ಲಿ ತೊಡಗಿದೆ ಎಂದು ಟೀಕಿಸಿದ್ದಾರೆ.

“ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಅಭಿಯಾನ ಮುಂದುವರಿಸಬೇಕಾದರೆ ಕಾಂಗ್ರೆಸ್ ಪಕ್ಷವೇ ಅದರ ವೆಚ್ಚ ಭರಿಸಲಿ. ದೆಹಲಿ ನಾಯಕರ ರಾಜಕೀಯ ಉಳಿವಿಗಾಗಿ ಕರ್ನಾಟಕದ ಜನರ ಹಣ ಬಳಸುವುದನ್ನು ನಿಲ್ಲಿಸಬೇಕು. ಕರ್ನಾಟಕಕ್ಕೆ ಉತ್ತಮ ಆಡಳಿತ ಬೇಕೇ ಹೊರತು ರಾಜ್ಯದ ಖಜಾನೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಒಪ್ಪಿಸುವುದಲ್ಲ” ಎಂದು ಆರ್. ಅಶೋಕ್ ಹೇಳಿದ್ದಾರೆ.

Karnataka’s tax payers’ money or Congress’ Party Fund?

The @INCKarnataka government in Karnataka has crossed all limits of shamelessness. In a blatant, unapologetic abuse of public money, the CM @DKShivakumar has now approved 6,000 “Bharat Jodo Yuva Sanghas” across the state.… https://t.co/g2jFuYqYs9

— R. Ashoka (@RAshokaBJP) July 15, 2026

Related posts