ಅತ್ತಿಬೆಲೆ ಪಟಾಕಿ ದುರಂತ; ಮೃತರ ಸಂಖ್ಯೆ 15ಕ್ಕೆ ಏರಿಕೆ

ಬೆಂಗಳೂರು ರಾಜಧಾನಿ ಹೊರವಲಯದ ಆನೇಕಲ್ ಸಮೀಪದ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಶನಿವಾರ ಅಪರಾಹ್ನ 3.30ರ ಸುಮಾರಿಗೆ ಲಾರಿಯಿಂದ ಪಟಾಕಿ ಇಳಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ.

ಮೃತಪಟ್ಟವರು ಕಾರ್ಮಿಕರಾಗಿದ್ದು ಬಹುತೇಕರು ಮಂದಿ ತಮಿಳುನಾಡಿನ ಶಿವಕಾಶಿ ಮೂಲದವರೆನ್ನಲಾಗಿದೆ. ಗೋದಾಮಿನ ನಿರ್ಲಕ್ಷ್ಯದಿಂದ ದುರಂತಕ್ಕೆ ಸಂಭವಿಸಿದೆ ಎನ್ನಲಾಗಿದ್ದು, ಅಗ್ನಿಶಾಮಕ ನಿಯಮ ಉಲ್ಲಂಘನೆಯು ಈ ಅನಾಹತಕ್ಕೆ ಕಾರಣ ಎನ್ನಲಾಗಿದೆ. ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ಈ ದುರ್ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ.

Related posts