ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

ನವದೆಹಲಿ: ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಉಷ್ಣಾಂಶ ಮತ್ತು ಅರ್ಬನ್ ಹೀಟ್ ಐಲ್ಯಾಂಡ್ (UHI) ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರ್ಕಾರ ಹಸಿರು ಮೂಲಸೌಕರ್ಯ, ತಂಪಾದ ಛಾವಣಿಗಳು ಹಾಗೂ ಹವಾಮಾನ-ನಿರೋಧಕ ನಗರಗಳ ನಿರ್ಮಾಣಕ್ಕೆ ಒತ್ತು ನೀಡಿದೆ. ಅಮೃತ್ 2.0 ಯೋಜನೆಯಡಿ 12 ನಗರಗಳಲ್ಲಿ ಪೈಲಟ್ ಕಾರ್ಯಕ್ರಮ ಆರಂಭಿಸಲಾಗಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA) ಮಾರ್ಗಸೂಚಿಗಳಂತೆ 23 ರಾಜ್ಯಗಳು, 195 ಜಿಲ್ಲೆಗಳು ಹಾಗೂ 64 ನಗರಗಳು ಶಾಖದ ಅಲೆಗಳಿಗೆ ತಕ್ಕಂತೆ ಕಾರ್ಯಯೋಜನೆ ರೂಪಿಸಿವೆ. ಬೀದಿ ವ್ಯಾಪಾರಿಗಳು ಹಾಗೂ ಅನೌಪಚಾರಿಕ ಕಾರ್ಮಿಕರ ರಕ್ಷಣೆಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ತಂಪು ಕೇಂದ್ರಗಳು, ಹೊಂದಿಕೊಳ್ಳುವ ಕೆಲಸದ ಸಮಯ ಹಾಗೂ ಶಾಖ ಎಚ್ಚರಿಕೆ ವ್ಯವಸ್ಥೆಗಳನ್ನು ಬಲಪಡಿಸಲಾಗುತ್ತಿದೆ. ಭಾರತ ತಂಪಾಗಿಸುವ ಕ್ರಿಯಾ ಯೋಜನೆ (ICAP) ಮೂಲಕ ಇಂಧನ ದಕ್ಷತೆ ಹೆಚ್ಚಿಸುವುದು ಮತ್ತು ಸುಸ್ಥಿರ ತಂಪಾಗಿಸುವ ತಂತ್ರಜ್ಞಾನಗಳಿಗೆ ಉತ್ತೇಜನ…

ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

ನವದೆಹಲಿ: ಹೆದ್ದಾರಿ ಪ್ರಯಾಣವನ್ನು ಮತ್ತಷ್ಟು ಸುಲಭ ಮತ್ತು ಪಾರದರ್ಶಕಗೊಳಿಸುವ ಉದ್ದೇಶದಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರಾಜಮಾರ್ಗಯಾತ್ರ ಮೊಬೈಲ್ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್ ಹಾಗೂ AI ಆಧಾರಿತ ‘ಮಾರ್ಗಮಿತ್ರ’ ಸಹಾಯ ಕೇಂದ್ರವನ್ನು ಆರಂಭಿಸಿದೆ. ಡಿಜಿಟಲ್ ಲೋಕಲ್ ಪಾಸ್ ಮೂಲಕ ಅರ್ಹ ವಾಹನ ಸವಾರರು ಟೋಲ್ ಪ್ಲಾಜಾಗೆ ತೆರಳದೆ ಆನ್‌ಲೈನ್‌ನಲ್ಲೇ ಮಾಸಿಕ ಟೋಲ್ ಪಾಸ್ ಪಡೆಯಬಹುದು. ಈ ಸೇವೆಯನ್ನು ಮೊದಲ ಹಂತದಲ್ಲಿ ದೆಹಲಿಯ ಮುಂಡ್ಕಾ–ಬಕ್ಕರ್‌ವಾಲಾ ಟೋಲ್ ಪ್ಲಾಜಾದಲ್ಲಿ ಆರಂಭಿಸಲಾಗಿದ್ದು, ಮುಂದಿನ ತಿಂಗಳುಗಳಲ್ಲಿ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸಲಾಗುತ್ತದೆ. ಟೋಲ್ ಪ್ಲಾಜಾದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವವರು DigiLocker, VAHAN ಮತ್ತು FASTag ಪರಿಶೀಲನೆ ಮೂಲಕ ಒಂದು ತಿಂಗಳ ಅವಧಿಗೆ ಅನಿಯಮಿತ ಸಂಚಾರದ ಡಿಜಿಟಲ್ ಪಾಸ್ ಪಡೆಯಬಹುದಾಗಿದೆ. ಇದೇ ವೇಳೆ, ಮಾರ್ಗಮಿತ್ರ ಸಹಾಯ ಕೇಂದ್ರವು 22 ಭಾರತೀಯ ಭಾಷೆಗಳಲ್ಲಿ ಪಠ್ಯ ಹಾಗೂ ಧ್ವನಿ ಮೂಲಕ ಸೇವೆ…

‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

ನವದೆಹಲಿ: ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ ಸಾಧಿಸಲು ಕೇಂದ್ರ ಸರ್ಕಾರ SMILE ಯೋಜನೆಯನ್ನು 2030-31ರ ವೇಳೆಗೆ ದೇಶದ 295 ನಗರಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಯೋಜನೆಯಡಿ ಇದುವರೆಗೆ 10,200ಕ್ಕೂ ಹೆಚ್ಚು ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಪ್ರಕಾರ, ಪ್ರಸ್ತುತ ಯೋಜನೆ 216 ನಗರಗಳಲ್ಲಿ ಜಾರಿಯಲ್ಲಿದ್ದು, ಮುಂದಿನ ಐದು ವರ್ಷಗಳಲ್ಲಿ 35,000 ಫಲಾನುಭವಿಗಳಿಗೆ ಪುನರ್ವಸತಿ ಒದಗಿಸುವ ಗುರಿ ಹೊಂದಿದೆ. ಮೆಟ್ರೋ ನಗರಗಳು, ಧಾರ್ಮಿಕ ಕ್ಷೇತ್ರಗಳು, ಪ್ರವಾಸಿ ತಾಣಗಳು ಹಾಗೂ ಐತಿಹಾಸಿಕ ನಗರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಯೋಜನೆಯಡಿ ಭಿಕ್ಷಾಟನೆಯಲ್ಲಿ ತೊಡಗಿರುವವರಿಗೆ ಕೌಶಲ್ಯಾಭಿವೃದ್ಧಿ, ಶಿಕ್ಷಣ, ಆರೋಗ್ಯ ಸೇವೆ, ಸಮಾಲೋಚನೆ ಹಾಗೂ ಜೀವನೋಪಾಯ ಬೆಂಬಲ ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಯೋಜನೆಯ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಜಿಲ್ಲಾಡಳಿತ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಇತರ ಅನುಷ್ಠಾನ ಸಂಸ್ಥೆಗಳು ಸಮನ್ವಯದಿಂದ…

PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) ಅಡಿಯಲ್ಲಿ ದೇಶಾದ್ಯಂತ 99.07 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈಗಾಗಲೇ ಮಂಜೂರಾಗಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಯೋಜನೆಯ ಅವಧಿಯನ್ನು 2026ರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಾರ, 2015ರಿಂದ ಇದುವರೆಗೆ 127.68 ಲಕ್ಷ ಮನೆಗಳಿಗೆ ಅನುಮೋದನೆ ನೀಡಲಾಗಿದ್ದು, ಅವುಗಳಲ್ಲಿ 121.02 ಲಕ್ಷ ಮನೆಗಳ ನಿರ್ಮಾಣ ಆರಂಭವಾಗಿದೆ. ಜುಲೈ 13, 2026ರ ವೇಳೆಗೆ 99.07 ಲಕ್ಷ ಮನೆಗಳು ಪೂರ್ಣಗೊಂಡಿವೆ. PMAY-U 2.0 ಯೋಜನೆಯನ್ನು 2024ರ ಸೆಪ್ಟೆಂಬರ್ 1ರಂದು ಆರಂಭಿಸಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ 1 ಕೋಟಿ ಹೆಚ್ಚುವರಿ ನಗರ ಫಲಾನುಭವಿಗಳಿಗೆ ವಸತಿ ಸೌಲಭ್ಯ ಒದಗಿಸುವ ಗುರಿ ಹೊಂದಿದೆ. ಫಲಾನುಭವಿ ನೇತೃತ್ವದ ನಿರ್ಮಾಣ, ಕೈಗೆಟುಕುವ ವಸತಿ, ಕೈಗೆಟುಕುವ ಬಾಡಿಗೆ ವಸತಿ ಹಾಗೂ ಬಡ್ಡಿ ಸಬ್ಸಿಡಿ ಯೋಜನೆಗಳ ಮೂಲಕ ಯೋಜನೆ ಜಾರಿಯಾಗುತ್ತಿದೆ.…

ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಜುಲೈ 22ರವರೆಗೂ ಇದೇ ರೀತಿಯ ಹವಾಮಾನ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ಉತ್ತರ…

ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

ಲಂಡನ್: ಲೇಬರ್ ಪಕ್ಷದ ಹಿರಿಯ ನಾಯಕ ಹಾಗೂ ಗ್ರೇಟರ್ ಮ್ಯಾಂಚೆಸ್ಟರ್‌ನ ಮಾಜಿ ಮೇಯರ್ ಆ್ಯಂಡಿ ಬರ್ನ್‌ಹ್ಯಾಮ್ ಯುನೈಟೆಡ್ ಕಿಂಗ್‌ಡಮ್‌ನ ನೂತನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಕಿಂಗ್ಹ್ಯಾಮ್ ಅರಮನೆಯಲ್ಲಿ ರಾಜ ಚಾರ್ಲ್ಸ್ III ಅವರನ್ನು ಭೇಟಿಯಾದ ಬಳಿಕ ಅವರು ಅಧಿಕೃತವಾಗಿ ಪದಗ್ರಹಣ ಮಾಡಿದರು. ಕೀರ್ ಸ್ಟಾರ್ಮರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬರ್ನ್‌ಹ್ಯಾಮ್ ನೇಮಕವಾಗಿದ್ದು, 2016ರಿಂದೀಚೆಗೆ ಬ್ರಿಟನ್ ಕಂಡ ಏಳನೇ ಪ್ರಧಾನಮಂತ್ರಿಯಾಗಿದ್ದಾರೆ. ಅಧಿಕಾರ ಹಸ್ತಾಂತರದ ಸಾಂಪ್ರದಾಯಿಕ ವಿಧಿ ಬಳಿಕ ಹೊಸ ಸರ್ಕಾರ ರಚಿಸಲು ರಾಜರು ಆಹ್ವಾನಿಸಿದ್ದು, ಅದನ್ನು ಬರ್ನ್‌ಹ್ಯಾಮ್ ಸ್ವೀಕರಿಸಿದ್ದಾರೆ ಎಂದು ಅರಮನೆ ತಿಳಿಸಿದೆ. ನಿರ್ಗಮಿತ ಪ್ರಧಾನಿ ಕೀರ್ ಸ್ಟಾರ್ಮರ್ 10 ಡೌನಿಂಗ್ ಸ್ಟ್ರೀಟ್‌ನಲ್ಲಿ ವಿದಾಯ ಭಾಷಣ ಮಾಡಿ, ತಮ್ಮ ಆಡಳಿತಾವಧಿಯಲ್ಲಿ ದೇಶವನ್ನು ಬಲಿಷ್ಠಗೊಳಿಸಲು ಪ್ರಯತ್ನಿಸಿದ್ದಾಗಿ ಹೇಳಿದ್ದಾರೆ. 56 ವರ್ಷದ ಬರ್ನ್‌ಹ್ಯಾಮ್ ಈ ಹಿಂದೆ ಸಂಸದ, ಸಚಿವ ಹಾಗೂ ಗ್ರೇಟರ್ ಮ್ಯಾಂಚೆಸ್ಟರ್ ಮೇಯರ್ ಆಗಿ ಸೇವೆ ಸಲ್ಲಿಸಿದ್ದಾರೆ. ಉತ್ತರ…

ಫಿನ್‌ಟೆಕ್ ನಿಯಮಗಳು ಮತ್ತಷ್ಟು ಕಠಿಣ; ಸೈಬರ್ ಭದ್ರತೆಗೆ ಕೇಂದ್ರ-ಆರ್‌ಬಿಐ ಒತ್ತು

ನವದೆಹಲಿ: ಡಿಜಿಟಲ್ ಹಣಕಾಸು ಸೇವೆಗಳನ್ನು ಹೆಚ್ಚು ಸುರಕ್ಷಿತ ಮತ್ತು ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಫಿನ್‌ಟೆಕ್ ವಲಯದ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ ಕೈಗೊಂಡಿವೆ. ಡಿಜಿಟಲ್ ಸಾಲ ವೇದಿಕೆಗಳು, ಪಾವತಿ ಸಂಗ್ರಾಹಕರು ಹಾಗೂ ಫಿನ್‌ಟೆಕ್ ಸಂಸ್ಥೆಗಳ ಕಾರ್ಯಾಚರಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಮಾರುಕಟ್ಟೆ ಶಿಸ್ತನ್ನು ಹೆಚ್ಚಿಸಲು ಹೊಸ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ. ಆರ್‌ಬಿಐ ಫಿನ್‌ಟೆಕ್ ಕ್ಷೇತ್ರಕ್ಕೆ ಸ್ವಯಂ-ನಿಯಂತ್ರಕ ಸಂಸ್ಥೆಗಳ (SRO-FT) ಚೌಕಟ್ಟು ಜಾರಿಗೆ ತಂದಿದ್ದು, ಡಿಜಿಟಲ್ ಪಾವತಿಗಳ ಭದ್ರತೆಯನ್ನು ಬಲಪಡಿಸಿದೆ. ಅಲ್ಲದೆ, ಯುಪಿಐ ವಹಿವಾಟುಗಳಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ಯಂತ್ರ ಕಲಿಕೆ (ML) ಆಧಾರಿತ ವಂಚನೆ ಪತ್ತೆ ವ್ಯವಸ್ಥೆಗಳ ಬಳಕೆಯನ್ನು ಉತ್ತೇಜಿಸಲಾಗಿದೆ. ಡೇಟಾ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ (DPDP) ಕಾಯ್ದೆ-2023 ಹಾಗೂ ಸಂಬಂಧಿತ ನಿಯಮಗಳನ್ನು ಜಾರಿಗೆ ತಂದಿದೆ.…

ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಯಿತು. ಜಂತರ್ ಮಂತರ್‌ನಿಂದ ಸಂಸತ್ತಿನತ್ತ ಮೆರವಣಿಗೆ ( ‘ಚಲೋ ಸಂಸದ್’) ನಡೆಸಲು ಪ್ರತಿಭಟನಾಕಾರರು ಯತ್ನಿಸಿದ ವೇಳೆ ಪೊಲೀಸರು ತಡೆದಿದ್ದು, ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಹಾಗೂ ತಳ್ಳಾಟ ಉಂಟಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಪ್ರತಿಭಟನಾ ಸ್ಥಳದಲ್ಲಿ ಹಲವು ರಾಜಕೀಯ ನಾಯಕರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ಆಜಾದ್ ಸಮಾಜ ಪಾರ್ಟಿ-ಕಾನ್ಶಿರಾಮ್ ಅಧ್ಯಕ್ಷ ಹಾಗೂ ಸಂಸದ ಚಂದ್ರಶೇಖರ್ ಆಜಾದ್, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಹಲವು ಗಣ್ಯರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು. ಭದ್ರತಾ ಕಾರಣಗಳಿಂದ ಸಂಸತ್ ಪ್ರದೇಶದಲ್ಲಿ ಮೆರವಣಿಗೆಗೆ…

‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ

ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ಮಾಜಿ ಅಧೀನ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಅವರು ಎಎನ್‌ಐ ಪಾಡ್‌ಕ್ಯಾಸ್ಟ್‌ನಲ್ಲಿ ಮಾಡಿದ ಹೇಳಿಕೆಗಳ ಕುರಿತು ಸ್ವತಂತ್ರ ಹಾಗೂ ಕಾಲಮಿತಿಯೊಳಗಿನ ತನಿಖೆ ನಡೆಸುವಂತೆ ಸಿಟಿಜನ್ ರೈಟ್ಸ್ ಫೌಂಡೇಶನ್ (ಸಿಆರ್‌ಎಫ್) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಸಿಆರ್‌ಎಫ್ ಅಧ್ಯಕ್ಷ ಕೆ.ಎ. ಪಾಲ್ ಅವರು ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ಮನವಿಯಲ್ಲಿ, ಮಣಿ ಅವರ ಹೇಳಿಕೆಗಳನ್ನು ಪರಿಶೀಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವುದು ಅಥವಾ ಸೂಕ್ತ ಸ್ವತಂತ್ರ ತನಿಖಾ ಸಂಸ್ಥೆಗೆ ಜವಾಬ್ದಾರಿ ವಹಿಸುವಂತೆ ಕೋರಿದ್ದಾರೆ. ‘ಹಿಂದೂ ಟೆರರಿಸಂ’ ಎಂದು ಪ್ರಯತ್ನ ಏಕೆ ನಡೆದಿತ್ತು? ಮುಂಬೈ ದಾಳಿ ಹಿಂದಿನ ಮರ್ಮ ಏನು? ಸಾಧ್ವಿ ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ವಿರುದ್ಧದ ಆರೋಪದ ಹಿಂದಿನ ಪಿತೂರಿ ಯಾರದ್ದು? ಪಾಕಿಸ್ತಾನದ ISI ಜೊತೆ ರಾಜಕೀಯ ಪಕ್ಷದ ನಂಟು ಏನು? ಎಂಬ ಬಗ್ಗೆ ನಿವೃತ್ತ MHA…

ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್‌ಗಳು ಹಾಗೂ ನಕಲಿ ಖಾತೆಗಳ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸ್ಯಾಂಡಲ್‌ವುಡ್ ನಟಿ ಐಶ್ವರ್ಯ ಸಿಂದೋಗಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳಿಗೆ ನಿರಂತರವಾಗಿ ಅಶ್ಲೀಲ, ಅವಹೇಳನಕಾರಿ ಹಾಗೂ ಮಾನಹಾನಿಕರ ಕಾಮೆಂಟ್‌ಗಳು ಬರುತ್ತಿವೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕೃತ್ಯಕ್ಕೆ ತಮಗೆ ಪರಿಚಯವಿರುವ ವ್ಯಕ್ತಿಯೊಬ್ಬನೇ ಕಾರಣ ಎಂದು ಅವರು ಆರೋಪಿಸಿದ್ದಾರೆ. ಈ ಹಿಂದೆ ಇದೇ ವ್ಯಕ್ತಿ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಅದೇ ವ್ಯಕ್ತಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸಿ, ಅವುಗಳ ಮೂಲಕ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿರುವುದಾಗಿ ಐಶ್ವರ್ಯ ಸಿಂದೋಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಿರುಕುಳ ನೀಡುತ್ತಿರುವ ನಕಲಿ ಖಾತೆಗಳ ಕುರಿತು ಸಮಗ್ರ ತನಿಖೆ…