ಬೆಂಗಳೂರು: ದೇಶದ ಡಿಜಿಟಲ್ ಮೂಲಸೌಕರ್ಯವನ್ನು ಮತ್ತಷ್ಟು ಸುರಕ್ಷಿತಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಕಾಲ’ ಉಪಕ್ರಮದಡಿ ‘ವೈಟ್ ರ್ಯಾಬಿಟ್ ತಂತ್ರಜ್ಞಾನ’ ಆಧಾರಿತ ಭಾರತೀಯ ಪ್ರಮಾಣಿತ ಸಮಯ (IST) ವಿತರಣಾ ಪ್ರದರ್ಶನ ಜಾಲಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜಕ್ಕೂರಿನ ಪ್ರಾದೇಶಿಕ ಉಲ್ಲೇಖ ಮಾನದಂಡಗಳ ಪ್ರಯೋಗಾಲಯದಲ್ಲಿ ಚಾಲನೆ ನೀಡಿದರು. ಈ ಯೋಜನೆಯು ಜಿಪಿಎಸ್ ಸೇರಿದಂತೆ ವಿದೇಶಿ ಸಮಯ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ದೇಶಾದ್ಯಂತ ಏಕರೂಪದ, ನಿಖರ ಮತ್ತು ಸುರಕ್ಷಿತ ಸಮಯ ಸಿಂಕ್ರೊನೈಸೇಶನ್ ವ್ಯವಸ್ಥೆ ರೂಪಿಸುವ ಗುರಿ ಹೊಂದಿದೆ. ಈ ವ್ಯವಸ್ಥೆಯಿಂದ ಬ್ಯಾಂಕಿಂಗ್, ಷೇರುಪೇಟೆ, ಡಿಜಿಟಲ್ ಪಾವತಿ, ದೂರಸಂಪರ್ಕ, ರಕ್ಷಣಾ ವಲಯ ಹಾಗೂ ರಾಷ್ಟ್ರೀಯ ವಿದ್ಯುತ್ ಜಾಲಕ್ಕೆ ವಿಶ್ವಾಸಾರ್ಹ ಸಮಯ ಉಲ್ಲೇಖ ದೊರೆಯಲಿದ್ದು, ಸೈಬರ್ ದಾಳಿ ಹಾಗೂ ಡೇಟಾ ತಿರುಚುವಿಕೆ ಸೇರಿದಂತೆ ಭದ್ರತಾ ಅಪಾಯಗಳನ್ನು ತಡೆಯಲು ನೆರವಾಗಲಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು. ಗ್ರಾಹಕ…
Author: admin
ಉತ್ತರ ಕನ್ನಡದಲ್ಲಿ TRAI ಮೊಬೈಲ್ ನೆಟ್ವರ್ಕ್ ಪರೀಕ್ಷೆ; ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ
ನವದೆಹಲಿ: ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಸಿದ ಸ್ವತಂತ್ರ ಮೊಬೈಲ್ ನೆಟ್ವರ್ಕ್ ಗುಣಮಟ್ಟ ಪರೀಕ್ಷೆಯ ವರದಿಯನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಪ್ರಕಟಿಸಿದ್ದು, ವಿವಿಧ ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ. ಮೇ 18ರಿಂದ 21ರವರೆಗೆ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಭಟ್ಕಳ, ದಾಂಡೇಲಿ, ಹಳಿಯಾಳ, ಯಲ್ಲಾಪುರ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಏರ್ಟೆಲ್, ಬಿಎಸ್ಎನ್ಎಲ್, ರಿಲಯನ್ಸ್ ಜಿಯೋ ಹಾಗೂ ವೊಡಾಫೋನ್ ಐಡಿಯಾ ಸೇವೆಗಳ ಗುಣಮಟ್ಟವನ್ನು ಪರಿಶೀಲಿಸಲಾಯಿತು. ಡೌನ್ಲೋಡ್ ವೇಗದಲ್ಲಿ ರಿಲಯನ್ಸ್ ಜಿಯೋ ಸರಾಸರಿ 229.12 Mbps ದಾಖಲಿಸಿ ಮೊದಲ ಸ್ಥಾನ ಪಡೆದಿದೆ. ಬಳಿಕ ಏರ್ಟೆಲ್ 109.02 Mbps, ವೊಡಾಫೋನ್ ಐಡಿಯಾ 25.04 Mbps ಹಾಗೂ ಬಿಎಸ್ಎನ್ಎಲ್ 5.73 Mbps ವೇಗ ದಾಖಲಿಸಿವೆ. ಅಪ್ಲೋಡ್ ವೇಗದಲ್ಲಿ ಏರ್ಟೆಲ್ 26.02 Mbps ದಾಖಲಿಸಿ ಅಗ್ರಸ್ಥಾನ ಪಡೆದಿದ್ದು, ಜಿಯೋ 18.19 Mbps, ವೊಡಾಫೋನ್ ಐಡಿಯಾ 10.78 Mbps ಹಾಗೂ…
ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ MSMEಗಳಿಗೆ ಕೇಂದ್ರದಿಂದ ಮಾರ್ಗದರ್ಶಿ ಪುಸ್ತಕ ಬಿಡುಗಡೆ
ನವದೆಹಲಿ: ಭಾರತೀಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSME) ಜಾಗತಿಕ ಮಾರುಕಟ್ಟೆ ಪ್ರವೇಶಿಸಿ ರಫ್ತು ಹೆಚ್ಚಿಸಿಕೊಳ್ಳಲು ನೆರವಾಗುವ ಉದ್ದೇಶದಿಂದ “Going Global: A Practical Guide for Indian MSMEs” ಮಾರ್ಗದರ್ಶಿ ಪುಸ್ತಕವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಭಾರತೀಯ ವಿದೇಶಿ ವ್ಯಾಪಾರ ಸಂಸ್ಥೆ (IIFT)ಯ ವ್ಯಾಪಾರ ಮತ್ತು ಹೂಡಿಕೆ ಕಾನೂನು ಕೇಂದ್ರ (CTIL) ಹಾಗೂ ಭಾರತೀಯ ಕೈಗಾರಿಕಾ ಒಕ್ಕೂಟ (CII) ಸಹಯೋಗದಲ್ಲಿ ಈ ಮಾರ್ಗದರ್ಶಿ ಸಿದ್ಧಪಡಿಸಲಾಗಿದೆ. ಮಾರುಕಟ್ಟೆ ಅವಕಾಶಗಳ ಗುರುತింపు, ರಫ್ತು ಪ್ರಕ್ರಿಯೆ, ಅಂತರರಾಷ್ಟ್ರೀಯ ಗುಣಮಟ್ಟದ ಮಾನದಂಡಗಳ ಪಾಲನೆ, ವ್ಯಾಪಾರ ಮಾಹಿತಿ ಪರಿಕರಗಳ ಬಳಕೆ ಹಾಗೂ ರಫ್ತು ಸಿದ್ಧತೆ ಕುರಿತು MSMEಗಳಿಗೆ ಈ ಪುಸ್ತಕ ಸಮಗ್ರ ಮಾರ್ಗದರ್ಶನ ನೀಡಲಿದೆ. ವಿದೇಶಿ ಖರೀದಿದಾರರ ಪತ್ತೆ, ಜಾಗತಿಕ ಪ್ರಮಾಣೀಕರಣ, ಬೆಲೆ ಸ್ಪರ್ಧಾತ್ಮಕತೆ ಹಾಗೂ ಮಾರುಕಟ್ಟೆ ಸಂಶೋಧನೆಗೆ ಸಂಬಂಧಿಸಿದ ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದನ್ನೂ ಇದರಲ್ಲಿ ವಿವರಿಸಲಾಗಿದೆ. ಕಾರ್ಯಕ್ರಮದಲ್ಲಿ…
ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ
ಮಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 5.20 ಕೋಟಿ ರೂ. ಮೌಲ್ಯದ 5 ಕೆಜಿಗೂ ಹೆಚ್ಚು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರು ಡ್ರಗ್ಸ್ ಪೆಡಲರುಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ಎಂಡಿಎಂಎ ಜೊತೆ ಬ್ಯಾಗ್ ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 25 ರಂದು ಅಣ್ಣಪ್ಪ ಸ್ವಾಮಿ ಎಂಬ ವ್ಯಕ್ತಿಯನ್ನು ಬಂಧಿಸಿ, ಆತನಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿತ್ತು. ಆತನ ವಿಚಾರಣೆಯ ಸಮಯದಲ್ಲಿ, ಆತನಿಗೆ ಮಾದಕವಸ್ತು ಪೂರೈಕೆದಾರರ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಮತ್ತೆ ಇಬ್ಬರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬೆಳ್ತಂಗಡಿ ತಾಲೂಕಿನ ಇಂಡಬೆಟ್ಟು ಗ್ರಾಮದ ಮುಹಮ್ಮದ್ ಅಲ್ಫಾಝ್ (28 ವರ್ಷ) ಹಾಗೂ ಉಜಿರೆಯ ಹಳೆಪೇಟೆ ಲಾಯಿಲಾ ವಿವೇಕನಂದ ನಗರದ ಮುಹಮ್ಮದ್ ಮುಸ್ತಫ (28 ವರ್ಷ) ಎಂಬಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು…
NEET UG 2026 ಫಲಿತಾಂಶ ಪ್ರಕಟ; 715 ಅಂಕಗಳೊಂದಿಗೆ ಇಬ್ಬರಿಗೆ ದೇಶದ ಮೊದಲ ರ್ಯಾಂಕ್
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) NEET UG 2026 ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಪಂಜಾಬ್ನ ಆರ್ಯನ್ ಗುಪ್ತಾ ಮತ್ತು ಹರಿಯಾಣದ ಪನ್ಶುಲ್ ಬನ್ಸಾಲ್ ತಲಾ 715 ಅಂಕ ಪಡೆದು ದೇಶದ ಮೊದಲ ರ್ಯಾಂಕ್ ಹಂಚಿಕೊಂಡಿದ್ದಾರೆ. ಜೂನ್ 21ರಂದು ದೇಶದ 551 ನಗರಗಳು ಹಾಗೂ ವಿದೇಶದ 14 ನಗರಗಳಲ್ಲಿ ನಡೆದ ಪರೀಕ್ಷೆಗೆ ಸುಮಾರು 20 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದು, ಅವರಲ್ಲಿ 11.21 ಲಕ್ಷ ಮಂದಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಹಾಗೂ ಇತರ ವೈದ್ಯಕೀಯ ಕೋರ್ಸ್ಗಳಿಗೆ ಅರ್ಹತೆ ಪಡೆದಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಉತ್ತೀರ್ಣರಾದವರಲ್ಲಿ ಶೇ.58ಕ್ಕೂ ಹೆಚ್ಚು ಮಂದಿ ಬಾಲಕಿಯರು ಎಂದು ಎನ್ಟಿಎ ತಿಳಿಸಿದೆ. ಅಂಕಗಳ ವಿವರದ ಪ್ರಕಾರ, 19 ಅಭ್ಯರ್ಥಿಗಳು 700ಕ್ಕಿಂತ ಹೆಚ್ಚು, 138 ಮಂದಿ 690ಕ್ಕೂ ಹೆಚ್ಚು, 1,492 ಮಂದಿ 650ಕ್ಕೂ ಹೆಚ್ಚು ಹಾಗೂ 10,160 ಅಭ್ಯರ್ಥಿಗಳು 600ಕ್ಕೂ ಹೆಚ್ಚು…
ಆಗಸ್ಟ್ 6ರೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ದೆಹಲಿ ನಾಯಕರ ನಡೆಯ ಕೌತುಕ
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಕಾಂಗ್ರೆಸ್ ನಾಯಕತ್ವದೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಆಗಸ್ಟ್ 6ರಂದು ಆರಂಭವಾಗಲಿರುವ ವಿಧಾನಸಭಾ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ. ರಾಹುಲ್ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸುರ್ಜೇವಾಲಾ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗವಹಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಯೋಜನೆ ಇದ್ದರೂ, ತುರ್ತು ಕಾರ್ಯಕ್ರಮದ ಕಾರಣ ಅದು ಸಾಧ್ಯವಾಗಲಿಲ್ಲ. ಸಭೆಯ ಬಳಿಕ ಮಾತನಾಡಿದ ಸುರ್ಜೇವಾಲಾ, “ಚರ್ಚೆಗಳು ಪ್ರಾಥಮಿಕ ಹಂತದಲ್ಲಿದ್ದು, ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ” ಎಂದರು. ರಾಜ್ಯ ಸಚಿವ ಸಂಪುಟ ಹಾಗೂ ವಿಧಾನಸಭೆ ಸ್ಪೀಕರ್ ಹುದ್ದೆ…
ಎಂ.ಕೆ. ಪ್ರಾಣೇಶ್ ಆಯ್ಕೆ ಅಮಾನ್ಯ, ಗಾಯತ್ರಿ ಶಾಂತೇಗೌಡಗೆ ಒಲಿದ MLC ಸ್ಥಾನ; ಸುಪ್ರೀಂ ತೀರ್ಪಿಗೆ ಬಿಕೆಹೆಚ್ ಹರ್ಷ
ಬೆಂಗಳೂರು: ವಿಧಾನಪರಿಷತ್ತಿನ ಸದಸ್ಯತ್ವ ಸ್ಥಾನದಿಂದ ಎಂ.ಕೆ. ಪ್ರಾಣೇಶ್ ಅವರನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಪ್ರಜಾಪ್ರಭುತ್ವದ ಮೌಲ್ಯಗಳು, ಜನಾದೇಶ ಹಾಗೂ ಸತ್ಯದ ಗೆಲುವು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು, ಜನರು ನೀಡಿದ ಸ್ಪಷ್ಟ ಜನಾದೇಶವನ್ನು ಕಾನೂನು ಪ್ರಕ್ರಿಯೆಯ ದುರ್ಬಳಕೆಯ ಮೂಲಕ ವಿಕೃತಗೊಳಿಸುವ ಎಲ್ಲ ಪ್ರಯತ್ನಗಳಿಗೆ ಸುಪ್ರೀಂ ಕೋರ್ಟ್ ತೀರ್ಪು ಸ್ಪಷ್ಟ ಉತ್ತರ ನೀಡಿದೆ ಎಂದು ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪೇ ಸರ್ವೋಚ್ಚವಾಗಿದ್ದು, ಅದನ್ನು ರಾಜಕೀಯ ಕುತಂತ್ರಗಳ ಮೂಲಕ ಅಥವಾ ನ್ಯಾಯಾಂಗವನ್ನು ರಾಜಕೀಯ ಹೋರಾಟದ ವೇದಿಕೆಯಾಗಿ ಬಳಸುವ ಮೂಲಕ ಬದಲಾಯಿಸಲು ಸಾಧ್ಯವಿಲ್ಲ. ಸಂವಿಧಾನ ಮತ್ತು ನ್ಯಾಯಾಂಗ ಮತ್ತೊಮ್ಮೆ ಜನರ ವಿಶ್ವಾಸವನ್ನು ಎತ್ತಿಹಿಡಿದಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ತೀರ್ಪು ಪ್ರಜಾಪ್ರಭುತ್ವದ ಮೌಲ್ಯಗಳ ಗೆಲುವು, ಜನಾದೇಶದ ಗೆಲುವು ಹಾಗೂ ಸತ್ಯದ ಗೆಲುವಾಗಿದೆ…
ಹಿರಿಯ ನಾಗರಿಕರ ಕಲ್ಯಾಣಕ್ಕೆ 5.36 ಲಕ್ಷಕ್ಕೂ ಹೆಚ್ಚು ಮಂದಿ ಪ್ರತಿಜ್ಞೆ; ಎಲ್ಡರ್ಲೈನ್ 14567ಗೆ ಕೇಂದ್ರ ಉತ್ತೇಜನ
ನವದೆಹಲಿ: ಹಿರಿಯ ನಾಗರಿಕರ ಘನತೆ, ಕಾಳಜಿ ಮತ್ತು ಗೌರವವನ್ನು ಖಚಿತಪಡಿಸುವ ಉದ್ದೇಶದ ‘ಏಜಿಂಗ್ ವಿತ್ ಡಿಗ್ನಿಟಿ’ ಅಭಿಯಾನದಡಿ 5.36 ಲಕ್ಷಕ್ಕೂ ಹೆಚ್ಚು ನಾಗರಿಕರು ರಾಷ್ಟ್ರೀಯ ಪ್ರತಿಜ್ಞೆ ಸ್ವೀಕರಿಸಿದ್ದಾರೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ತಿಳಿಸಿದೆ. ಈ ಅಭಿಯಾನಕ್ಕೆ ಪೂರಕವಾಗಿ ಎಲ್ಡರ್ಲೈನ್ 14567 ರಾಷ್ಟ್ರೀಯ ಉಚಿತ ಸಹಾಯವಾಣಿ ದೇಶಾದ್ಯಂತ ಹಿರಿಯ ನಾಗರಿಕರಿಗೆ ಮಾಹಿತಿ, ಸಮಾಲೋಚನೆ, ಕುಂದುಕೊರತೆ ಪರಿಹಾರ ಮತ್ತು ತುರ್ತು ನೆರವು ಒದಗಿಸುತ್ತಿದೆ. ಕೇಂದ್ರ ಸಚಿವ ಡಾ. ವೀರೇಂದ್ರ ಕುಮಾರ್, ಹಿರಿಯ ನಾಗರಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಸಾಮಾಜಿಕ ಮತ್ತು ರಾಷ್ಟ್ರೀಯ ಜವಾಬ್ದಾರಿಯಾಗಿದೆ ಎಂದು ಹೇಳಿ, ‘ಏಜಿಂಗ್ ವಿತ್ ಡಿಗ್ನಿಟಿ’ ಪೋರ್ಟಲ್ನಲ್ಲಿ ಪ್ರತಿಜ್ಞೆ ಸ್ವೀಕರಿಸುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ. 2021ರ ಅಕ್ಟೋಬರ್ 1ರಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಡರ್ಲೈನ್ 14567 ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಸೇವೆ ನೀಡುತ್ತಿದೆ. ಆರೋಗ್ಯ ಸೇವೆ, ಪಿಂಚಣಿ,…
‘ಬಿಡದಿ ಟೌನ್ಶಿಪ್ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ಕೈ ಬಿಡದ ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸುವ ಹೊಸ ನಾಟಕ ಮಾಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನರ ಸಿಂಪತಿ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಎಂದಿಗೂ ಸ್ವಾಧೀನಕ್ಕೆ ಆದೇಶ ಹೊರಡಿಸಿರಲಿಲ್ಲ, ಕಾಂಗ್ರೆಸ್ ಕೂಡ ಯೋಜನೆಯನ್ನು ವಿರೋಧ ಮಾಡಿತ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್ಶಿಪ್ ವಿರುದ್ಧ ರೈತರು ಉಗ್ರ ಹೋರಾಟ ಮಾಡುತ್ತಿದ್ದರೂ ಸರ್ಕಾರ ಪೊಲೀಸರನ್ನು ಕಳಿಸಿ ಹಲ್ಲೆ ಮಾಡಿದೆ. ಕೊಲೆ, ಬೆದರಿಕೆ ಎಂಬುದಾಗಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಈಗ ಇದಕ್ಕಾಗಿ ಸದನ ಸಮಿತಿ ನೇಮಿಸಿರುವುದು ಹಾಸ್ಯಾಸ್ಪದವಾಗಿದೆ. ರೈತರು ಜಮೀನು ಕೊಡುವುದಿಲ್ಲ ಎಂದಮೇಲೂ ಸದನ ಸಮಿತಿ ಅಗತ್ಯವಿರಲಿಲ್ಲ. ಆದರೆ ಅಧಿವೇಶನ ನಡೆಯಲಿರುವುದರಿಂದ, ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡಲಾಗಿದೆ ಎಂದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ಹಿಂದೆ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರೇ ಹೊರತು, ಆದೇಶ…
ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ
ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, “2010ರಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಿ ಈಗಿನ ವೈಫಲ್ಯವನ್ನು ಸಮರ್ಥಿಸಿಕೊಳ್ಳಬೇಡಿ. ನಿಮ್ಮ ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಹೇಳಬೇಡಿ” ಎಂದು ಟೀಕಿಸಿದ್ದಾರೆ. “ನಿಮಗೆ ಆರ್ಎಸ್ಎಸ್ ಬಗ್ಗೆ ಮಾತನಾಡಲು ಸಮಯ ಇದೆ. ಆದರೆ ಜೈಲು ಭದ್ರತೆ ಮತ್ತು ಕಾನೂನು-ಸುವ್ಯವಸ್ಥೆ ಕಾಪಾಡಲು ಸಮಯ ಇಲ್ಲವೇ?” ಎಂದು ವ್ಯಂಗ್ಯವಾಡಿದ್ದಾರೆ. ಗೃಹ ಸಚಿವರ ತವರು ಜಿಲ್ಲೆಯಲ್ಲೇ ಕೈದಿಗಳು ಜೈಲಿನಿಂದ ಪರಾರಿಯಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿರುವ ಅವರು, “ಮಹತ್ವದ ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವರು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಅವರ ಯೋಗ್ಯತೆಯನ್ನು ತೋರಿಸುತ್ತದೆ” ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಮೂರು…
