‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

ಚೆನ್ನೈ: ‘ಪ್ರೇಮ ದೇಶಪು ಯುವರಾಣಿ’ ಮತ್ತು ‘ಲೀಗಲಿ ವೀರ್’ ನಂತಹ ತೆಲುಗು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾದ ನಟಿ ಪ್ರಿಯಾಂಕಾ ರೇವ್ರಿ, ಈಗ ನಟ ಆರ್ಯವರ್ಧನ್ ಅವರೊಂದಿಗೆ ‘ಯಾರಿಗೆ ಬೇಕು ಈ ಲೋಕ’ ಚಿತ್ರದಲ್ಲಿ ಕನ್ನಡಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಇತ್ತೀಚೆಗೆ, ಚಿತ್ರದ ನಿರ್ಮಾಪಕರು ಟೀಸರ್ ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಮತ್ತು ಚಲನಚಿತ್ರ ಪ್ರೇಮಿಗಳ ಸಂತೋಷಕ್ಕೆ ಕಾರಣವಾಗಿದೆ. ಚಿತ್ರದ ಟೀಸರ್ ಬಿಡುಗಡೆಯೊಂದಿಗೆ, ಪ್ರಿಯಾಂಕಾ ರೇವ್ರಿ ಚಿತ್ರ ಮತ್ತು ಅದರಲ್ಲಿನ ಅವರ ಪಾತ್ರದ ಬಗ್ಗೆ ಮಾತನಾಡಿದರು. ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡುತ್ತಾ, ‘ಇದು ಒಂದು ಉತ್ತಮ ಅನುಭವವಾಗಿತ್ತು. ನನಗೆ ಉಪಭಾಷೆಗಳು ತುಂಬಾ ಇಷ್ಟವಾಯಿತು, ವಿಶೇಷವಾಗಿ ಅವು ಅನೇಕ ಸಂಸ್ಕೃತ ಪದಗಳನ್ನು ಒಳಗೊಂಡಿರುವುದರಿಂದ. ಸಂಸ್ಕೃತಿ ಮತ್ತು ಭಾಷೆ ನನಗೆ ಹೊಸದಾಗಿತ್ತು, ಆದರೆ ಅದು ಅದನ್ನು ಇನ್ನಷ್ಟು ರೋಮಾಂಚನಗೊಳಿಸಿತು. ನಾನು ಬಹಳಷ್ಟು ಕಲಿಯಲು ಸಾಧ್ಯವಾಯಿತು ಮತ್ತು ಅದು ಒಂದು…

ಒಂದೆಡೆ ‘ಸಾಧನಾ ಸಮಾವೇಶ’ಕ್ಕೆ ತಯಾರಿ.. ಇನ್ನೊಂದೆಡೆ ‘ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ’ ಎಂಬ ಪೋಸ್ಟರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ‘ಸಾಧನಾ ಸಮಾವೇಶ’ಕ್ಕೆ ತಯಾರಿ ನಡೆದಿರುವಾಗಲೇ ಪ್ರತಿಪಕ್ಷ ಬಿಜೆಪಿ ‘ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಸೋಮವಾರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್. ಹರೀಶ್, ವಕ್ತಾರ ಪ್ರಕಾಶ್ ಶೇಷಾರಾಘವಾಚಾರ್, ಎಸ್‌ಸಿ ಮೋರ್ಚಾ ಕಚೇರಿ ಕಾರ್ಯದರ್ಶಿ ಜಿ. ಪ್ರಶಾಂತ್ ಮತ್ತು ಪಕ್ಷದ ನಾಯಕ ಸಿ. ಮುನಿಕೃಷ್ಣ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ನಾಯಕ ಅಶ್ವಥ್ ನಾರಾಯಣ್, ಕಳೆದ ಎರಡು ವರ್ಷಗಳ ಸಾಧನೆಗಳನ್ನು ಪ್ರದರ್ಶಿಸಲು ಕಾಂಗ್ರೆಸ್ ಸರ್ಕಾರ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಆದಾಗ್ಯೂ, ಕಾಂಗ್ರೆಸ್ ಸರ್ಕಾರದ “ಸಾಧನೆ ಚಿತ್ರ”ದ ಟ್ರೇಲರ್ ಈಗಾಗಲೇ ಬೆಂಗಳೂರಿನಲ್ಲಿ ಭಾರೀ ಮಳೆಯ ರೂಪದಲ್ಲಿ ಬಿಡುಗಡೆಯಾಗಿದೆ ಮತ್ತು ಪೂರ್ಣ…

ಮತ್ತೆ ಕೋವಿಡ್-19 ಗುಮ್ಮಾ..! ಭಯಪಡಬೇಡಿ, ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಿ ಎಂದ ಬಿಎಂಸಿ

ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಸೋಮವಾರ ನಾಗರಿಕರು ಭಯಭೀತರಾಗಬೇಡಿ ಎಂದು ಮನವಿ ಮಾಡಿದೆ, ವಿಶೇಷವಾಗಿ ಗಂಭೀರ ಕಾಯಿಲೆಗಳ ಹಿನ್ನೆಲೆಯಲ್ಲಿ. ಸಿಂಧುದುರ್ಗ ಮತ್ತು ಡೊಂಬಿವ್ಲಿಯ ಇಬ್ಬರು ಮಹಿಳೆಯರು ಭಾನುವಾರ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಬಹು ಗಂಭೀರ ಕಾಯಿಲೆಗಳಿಂದ (ಹೈಪೋಕಾಲ್ಸೆಮಿಕ್ ರೋಗಗ್ರಸ್ತವಾಗುವಿಕೆಗಳೊಂದಿಗೆ ನೆಫ್ರೋಟಿಕ್ ಸಿಂಡ್ರೋಮ್, ಕ್ಯಾನ್ಸರ್) ಸಾವನ್ನಪ್ಪಿದ ನಂತರ ಈ ಸಲಹೆಯನ್ನು ನೀಡಲಾಗಿದೆ. ಅವರು ಕೋವಿಡ್-19 ಕಾರಣದಿಂದಾಗಿ ಸಾವನ್ನಪ್ಪಿಲ್ಲ ಎಂದು ಬಿಎಂಸಿ ಸ್ಪಷ್ಟಪಡಿಸಿದೆ. “ಕೋವಿಡ್-19 ಅನ್ನು ಈಗ ಸ್ಥಳೀಯ ಮತ್ತು ನಡೆಯುತ್ತಿರುವ ಆರೋಗ್ಯ ಸಮಸ್ಯೆ ಎಂದು ಪರಿಗಣಿಸಲಾಗಿದೆ. ಸಮುದಾಯ ಮಟ್ಟದಲ್ಲಿ ವೈರಸ್ ಸ್ಥಾಪಿತವಾಗಿರುವುದರಿಂದ, ಕೋವಿಡ್-19 ಪ್ರಕರಣಗಳು ಈಗ ವಿರಳವಾಗಿವೆ ಮತ್ತು ಬಹಳ ಅಪರೂಪ” ಎಂದು ಬಿಎಂಸಿ ಹೇಳಿದೆ. ಇತ್ತೀಚಿನ ದಿನಗಳಲ್ಲಿ, ಸಿಂಗಾಪುರ, ಹಾಂಗ್ ಕಾಂಗ್, ಪೂರ್ವ ಏಷ್ಯಾ ಮತ್ತು ಇತರ ದೇಶಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಅದು ಹೇಳಿದೆ. ಕೋವಿಡ್-19 ಹರಡುವಿಕೆಯನ್ನು ನಿಯಂತ್ರಣದಲ್ಲಿಡಲು…

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ. They can’t clear waterlogged roads or fallen trees after a single downpour, but they want to dig tunnels costing ₹48,000 crore to “solve” Bengaluru’s traffic? Maybe the tunnel’s real purpose is to serve as a water reservoir. pic.twitter.com/yNQRHgWeF6 — P C Mohan (@PCMohanMP) May 19, 2025 ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ “ಬ್ರಾಂಡ್ ಬೆಂಗಳೂರು”ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ…

ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಭಾನುವಾರ ಮತ್ತು ಸೋಮವಾರ ಸುರಿದ ಭಾರೀ ಮಳೆಗೆ ಹಲವು ಜೀವಗಳು ಬಲಿಯಾಗಿವೆ. Just one normal rain and our Bengaluru turns into a swimming pool but our Karnataka government is more interested in tunnel roads, dismantling BBMP, and Tumkur Metro extensions instead of fixing these issues. What a pathetic/lazy government we have 😒🙏 pic.twitter.com/izMqc2DhhU — Virat👑Rocky✨️ (@Virat_Rocky18) May 18, 2025 ಸೋಮವಾರ ಬಿಟಿಎಂ ಲೇಔಟ್ ಸಮೀಪದ ಎನ್.ಎಸ್.ಪಾಳ್ಯದಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​’ನಲ್ಲಿ ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು 55 ವರ್ಷದ ಮನೋಹರ ಕಾಮತ್​​ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್…

ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

ಇಂಡಿಯನ್ ಪ್ರೀಮಿಯರ್ ಲೀಗ್​ನ ಸೋಮವಾರದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳ ಆಟಗಾರರು ರಣಾಂಗಣದಲ್ಲೇ ಜಗಳಕ್ಕಿಳಿದ ಪ್ರಸಂಗ ಗೊಂದಲ ಸೃಷ್ಟಿಸಿತು. Lit Abhishek Sharma 🗿🥵🔥 pic.twitter.com/zyBhiQxByJ — Antara (@AntaraonX) May 19, 2025 ಲಕ್ನೋದಲ್ಲಿನ ಏಕಾನ ಸ್ಡೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಮಹತ್ವದ ಪಂದ್ಯ ನಡೆಯಿತು. ಸನ್​ರೈಸರ್ಸ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಔಟಾದ ಸಂದರ್ಭದಲ್ಲಿ ಲಕ್ನೋ ಸ್ಪಿನ್ನರ್ ದಿಗ್ವೇಶ್ ರಾಥಿ, ತಮಾಷೆಯ ಮಾತುಗಳಿಂದ ಕೆಣಕಿದರು. ‘ಹೋಯ್ತಾ ಇರು’ ಎಂಬ ದಿಗ್ವೇಶ್ ರಾಥಿ ಅವರ ಕೈ ಸನ್ನೆ ಅಭಿಷೇಕ್ ಶರ್ಮಾ ಅವರನ್ನು ಕೆರಳಿಸಿತು. ಈ ಆಸಂದರ್ಭದಲ್ಲಿ ಇಬ್ಬರ ನಡುವೆ ಜಗಳ ಏರ್ಪಟ್ಟಿತು. ಇಬ್ಬರ ಜಗಳವು ತಾರಕ್ಕೇರುತ್ತಿದ್ದಂತೆ ಅಂಪೈರ್ ಹಾಗೂ ಇತರ ಆಟಗಾರರು ಮಧ್ಯ ಪ್ರವೇಶಿಸಿ ಕುಪಿತ ಇಬ್ಬರು ಆಟಗಾರರನ್ನೂ ದೂರ ಸರಿಯುವಂತೆ…

ರೋಚಕ ಘಟ್ಟದಲ್ಲಿ ಐಪಿಎಲ್: ಪ್ಲೇಆಫ್ ರೇಸ್‌ನಿಂದ ಹೊರಬಿದ್ದ LSG

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ ರೋಚಕ ಘಟ್ಟ ತಲುಪಿದೆ. ಸೋಮವಾರ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಸೋಲುಂಡ ಲಕ್ನೋ ಸೂಪರ್ ಜೈಂಟ್ಸ್ (LSG) ಈ ಬಾರಿಯ ಐಪಿಎಲ್ ಕದನದಿಂದ ಹೊರಬಿದ್ದಿದೆ. When Abhishek Sharma decided to make the ball fly 🚀 🎥 A glimpse of his onslaught during a blistering 59(20) 🔥 Updates ▶ https://t.co/GNnZh911Xr#TATAIPL | #LSGvSRH | @SunRisers pic.twitter.com/92w8j21Niw — IndianPremierLeague (@IPL) May 19, 2025 ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೋಮವಾರದ ಪಂದ್ಯದಲ್ಲಿನ ಗೆಲುವು ಅನಿವಾರ್ಯವಾಗಿತ್ತು. ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ ಬರೋಬ್ಬರಿ…

ಅನಾಹುತಗಳಿಗೆ ಸರ್ಕಾರದ ಬೇಜವಬ್ದಾರಿತನ ಕಾರಣ: ಆರ್.ಅಶೋಕ್ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ “ಬ್ರಾಂಡ್ ಬೆಂಗಳೂರು”ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಮಧ್ಯ ರಾತ್ರಿಯಿಂದಲೇ ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ…

ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶಗಳನ್ನು ಪ್ರಕಟಿಸಿ ವಿವರಗಳನ್ನು ನೀಡಿದ್ದಾರೆ. ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು. ಬಹುತೇಕ ಕಡೆ ಸರ್ಕಾರದ ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಮಳೆ ನೀರು ಸುಗಮವಾಗಿ ಹರಿದು ಹೋಗದೆ ಅವಾಂತರ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕೇವಲ ಒಂದೆರಡು ದಿನಗಳ…

ಬೆಂಗಳೂರಿನಲ್ಲಿ ಭಾರೀ ಮಳೆ; ಜನ ಜೀವನ ಏರುಪೇರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶಗಳನ್ನು ಪ್ರಕಟಿಸಿ ವಿವರಗಳನ್ನು ನೀಡಿದ್ದಾರೆ. ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು. ಬಹುತೇಕ ಕಡೆ ಸರ್ಕಾರದ ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಮಳೆ ನೀರು ಸುಗಮವಾಗಿ ಹರಿದು ಹೋಗದೆ ಅವಾಂತರ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕೇವಲ ಒಂದೆರಡು ದಿನಗಳ…