ಅಹಮದಾಬಾದ್: 2026ರ ಐಸಿಸಿ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡ 96 ರನ್ಗಳ ಭರ್ಜರಿ ಜಯ ಸಾಧಿಸಿ ದಾಖಲೆಯ ಮೂರನೇ ಬಾರಿ ಟ್ರೋಫಿ ಎತ್ತಿಹಿಡಿದಿದೆ. ಫೈನಲ್ನಲ್ಲಿ ನ್ಯೂಜಿಲೆಂಡ್ ರಾಷ್ಟ್ರೀಯ ಕ್ರಿಕೆಟ್ ತಂಡ ವಿರುದ್ಧ ಈ ಐತಿಹಾಸಿಕ ಗೆಲುವು ಸಾಧಿಸಲಾಗಿದೆ. ಈ ಜಯದೊಂದಿಗೆ ಭಾರತ ಸತತ ಎರಡು ಬಾರಿ ಟಿ20 ವಿಶ್ವಕಪ್ ಗೆದ್ದ ಮೊದಲ ದೇಶ ಎಂಬ ದಾಖಲೆಯನ್ನೂ ನಿರ್ಮಿಸಿದೆ. ಇದಲ್ಲದೆ, ಆತಿಥೇಯ ತಂಡವಾಗಿ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದ ಮೊದಲ ತಂಡ ಎಂಬ ಗೌರವವೂ ಭಾರತಕ್ಕೇ ಸಲ್ಲಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಮತ್ತೊಮ್ಮೆ ಕಿರೀಟ ಗೆದ್ದು ಇತಿಹಾಸ ನಿರ್ಮಿಸಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಹಿಂದೆಂದೂ ಜಯ ಸಾಧಿಸಿರಲಿಲ್ಲ. 2007, 2016 ಮತ್ತು 2021ರ ಮುಖಾಮುಖಿಗಳಲ್ಲಿ ನ್ಯೂಜಿಲೆಂಡ್ ಭಾರತವನ್ನು…
Author: NavaKarnataka
‘ಟ್ರಂಪ್ ಒಬ್ಬ ಡಿಕ್ಟೇಟರ್, ಮೋದಿ ಅವರ ಗುಲಾಮ’: ಖರ್ಗೆ ಲೇವಡಿ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮೂಲಕ ಆರ್ಟಿಕಲ್ 371 (ಜೆ) ಜಾರಿಗೆ ತಂದಿದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ. ಹಿಂದಿನ ಎನ್ ಡಿಎ ಸರ್ಕಾರದಲ್ಲಿ, ಅಂದಿನ ಗೃಹ ಸಚಿವ ಅಡ್ವಾಣಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿರಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಯುಪಿಎ-2 ಸರ್ಕಾರದಲ್ಲಿ ನಮ್ಮ ಪರವಾಗಿರಲು ಬೇರೆ ಬೇರೆ ಪಕ್ಷಗಳ 130 ಜನ ಎಂ.ಪಿಗಳಿಗೆ ಹೇಗೆ ಮನವೊಲಿಸಿದ್ದೇನೆ ಅನ್ನುವ ವಿಚಾರ ನನಗೆ ಮಾತ್ರ ತಿಳಿದಿದೆ ಎಂದವರು ಹೇಳಿದ್ದಾರೆ. ಆರ್ಟಿಕಲ್ 371 (ಜೆ) ಮೂಲಕ ನನಗೆ, ನನ್ನ ಮಕ್ಕಳಿಗೆ ಹಾಗೂ ಮೊಮ್ಮಕ್ಕಳಿಗೆ ಅನುಕೂಲವಾಗಲ್ಲ. ಅದು ಅನುಕೂಲವಾಗುವುದು ನಮ್ಮ ಕಲ್ಯಣ ಕರ್ನಾಟಕ ಭಾಗದ ಜನಸಾಮಾನ್ಯರಿಗೆ. ಇಂದು ನಮ್ಮ ಭಾಗದ ಯುವಜನರಿಗೆ ಮೆಡಿಕಲ್, ಇಂಜಿನಿಯರಿಂಗ್ ಸೀಟು ಪಡೆದುಕೊಳ್ಳಲು ಅನುಕೂಲವಾಗಿದೆ ಎಂದಿದ್ದಾರೆ. ನಮ್ಮ ದೇಶದ ಯುವಕರ ಭವಿಷ್ಯ ಉಜ್ವಲವಾಗಬೇಕಾದರೆ ಜನಪರ ಯೋಜನೆಗಳು ಜಾರಿಯಾಗಬೇಕು. ಆದರೆ…
ನಟ ವಿಜಯ್ ವಿರುದ್ಧ ಮತ್ತೆ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸಂಗೀತಾ
ಚೆನ್ನೈ: ನಟ ಹಾಗೂ ವಿಜಯ್ ಅವರೊಂದಿಗೆ ನಡೆಯುತ್ತಿರುವ ವೈವಾಹಿಕ ವಿವಾದದ ನಡುವೆ, ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ಕಾನೂನು ರಕ್ಷಣೆ ಹಾಗೂ ನೀಲಂಕರೈಯಲ್ಲಿರುವ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ಚೆನ್ನೈ (Chennai) ಸಮೀಪದ ನೀಲಂಕರೈ (Neelankarai) ನಿವಾಸದಲ್ಲಿ ವಾಸಿಸಲು ತಮ್ಮನ್ನು ತಡೆಯಲಾಗುತ್ತಿದೆ ಮತ್ತು ತಾವು ಪ್ರಸ್ತುತ ಮನೆ ಇಲ್ಲದೆ ಉಳಿದಿರುವುದಾಗಿ ಸಂಗೀತಾ ಆರೋಪಿಸಿದ್ದಾರೆ. ಆದ್ದರಿಂದ ಆಸ್ತಿಯಲ್ಲಿ ವಾಸಿಸಲು ಅವಕಾಶ ನೀಡುವಂತೆ ನ್ಯಾಯಾಲಯ ಆದೇಶಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಅರ್ಜಿಯಲ್ಲಿ, ವಿಜಯ್ ಅವರ ಕಾನೂನು ಪ್ರತಿನಿಧಿಗಳಿಂದ ತಮಗೆ ಬೆದರಿಕೆ ಎದುರಾಗುತ್ತಿದೆ ಎಂದು ಸಂಗೀತಾ ಹೇಳಿಕೊಂಡಿದ್ದಾರೆ. ನೀಲಂಕರೈ ಮನೆಯಲ್ಲಿ ತಮಗೂ ಸಮಾನ ಪಾಲು ಇದೆ ಎಂದು ಹೇಳಿಕೊಂಡು, ಆಸ್ತಿಯಲ್ಲಿ ಶೇಕಡಾ 50ರಷ್ಟು ಮಾಲೀಕತ್ವಕ್ಕೆ ತಾವು ಅರ್ಹರು ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ದಂಪತಿಗಳ ನಡುವಿನ ಕಾನೂನು ಪ್ರಕ್ರಿಯೆಗಳು ಮುಕ್ತಾಯಗೊಳ್ಳುವವರೆಗೆ…
ಎಲ್ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
ಬೆಂಗಳೂರು: ಗೃಹ ಬಳಕೆಯ ಎಲ್ಪಿಜಿ (LPG) ಗ್ಯಾಸ್ ಸಿಲಿಂಡರ್ ದರವನ್ನು ₹60 ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ದೇಶದ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರಗಳನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ ₹60 ಹಾಗೂ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹115 ಹೆಚ್ಚಳ ಮಾಡಲಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಮತ್ತೊಂದು ಭಾರೀ ಹೊರೆ ಬಿದ್ದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈಗಾಗಲೇ ದುಬಾರಿ ಬೆಲೆಯಿಂದ ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಈ ನಿರ್ಧಾರ ದೊಡ್ಡ ಹೊಡೆತವಾಗಿದೆ. ಚುನಾವಣೆಯ ಮುನ್ನ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಿ, ನಂತರ ಮತ್ತೆ ಬೆಲೆ ಏರಿಕೆ ಮಾಡುವುದು ಪ್ರಧಾನಿ ನರೇಂದ್ರ…
ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಸನ್ನಿವೇಶದ ನಡುವೆ ಭಾರತದಲ್ಲಿ ಗೃಹ ಬಳಕೆಯ ಎಲ್ಪಿಜಿ (LPG) ಸಿಲಿಂಡರ್ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ₹60 ಹೆಚ್ಚಿಸಲಾಗಿದೆ. ಈ ಹೆಚ್ಚಳದೊಂದಿಗೆ ದೆಹಲಿಯಲ್ಲಿ (Delhi) ಒಂದು ಸಿಲಿಂಡರ್ ಬೆಲೆ ₹853ರಿಂದ ₹913ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ 19 ಕಿಲೋಗ್ರಾಂ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನೂ ₹115 ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ₹1,883 ಆಗಿದ್ದು, ಮುಂಬೈ (Mumbai)ನಲ್ಲಿ ₹1,835ಕ್ಕೆ ತಲುಪಿದೆ. ಇದೇ ವೇಳೆ ಇರಾನ್ (Iran)–ಇಸ್ರೇಲ್ (Israel) ನಡುವಿನ ಸಂಘರ್ಷವು ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಇದರ ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ. ಆದರೆ ಭಾರತದಲ್ಲಿ ಇಂಧನ ಕೊರತೆ…
‘ಮಧ್ಯಪ್ರಾಚ್ಯ ಸಂಘರ್ಷ’; ಅನಿವಾಸಿ ಭಾರತೀಯರ ರಕ್ಷಣೆಗೆ ಧಾವಿಸಲು ಕೇಂದ್ರಕ್ಕೆ ಪದ್ಮರಾಜ್ ಆಗ್ರಹ
ಮಂಗಳೂರು: ‘ಮಧ್ಯಪ್ರಾಚ್ಯ ಸಂಘರ್ಷ’ ಹಿನ್ನೆಲೆಯಲ್ಲಿ ಅನಿವಾಸಿ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಆಗ್ರಹಿಸಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ದಿನೇದಿನೇ ಉಲ್ಬಣಿಸುತ್ತಿರುವ ಯುದ್ಧದ ಪರಿಸ್ಥಿತಿಯು ಅಲ್ಲಿ ನೆಲೆಸಿರುವ ಲಕ್ಷಾಂತರ ತುಳುನಾಡಿನವರು ಸೇರಿದಂತೆ ಭಾರತೀಯರ ನೆಮ್ಮದಿಯನ್ನು ಕಸಿದುಕೊಂಡಿದೆ. ಇಸ್ರೇಲ್, ಇರಾನ್, ದುಬೈ, ಕತಾರ್, ಬಹರೇನ್ ಸೇರಿದಂತೆ ಯುದ್ಧ ಪೀಡಿತ ಪ್ರದೇಶಗಳಲ್ಲಿನ ಅನಿಶ್ಚಿತತೆ ಅತ್ಯಂತ ಕಳವಳಕಾರಿಯಾಗಿದ್ದು, ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪದ್ಮರಾಜ್ ಪೂಜಾರಿ ಪ್ರತಿಪಾದಿಸಿದ್ದಾರೆ. ಪ್ರತಿದಿನದ ಸ್ಫೋಟದ ಸದ್ದುಗಳು ಮತ್ತು ಅಸುರಕ್ಷಿತ ಭಾವನೆ ಅಲ್ಲಿನ ಕುಟುಂಬಗಳು, ವಿಶೇಷವಾಗಿ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ತೀವ್ರವಾದ ಕೆಟ್ಟ ಪರಿಣಾಮ ಬೀರುತ್ತಿದೆ. ಯುದ್ಧದ ಸನ್ನಿವೇಶ ಮಕ್ಕಳ ಸಹಜ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತಿದ್ದು, ಅಲ್ಲಿನ ಭಾರತೀಯರು ಪ್ರತಿಕ್ಷಣವನ್ನೂ ಆತಂಕದಲ್ಲೇ ಕಳೆಯುವಂತಾಗಿದೆ ಎಂದವರು ಗಮನಸೆಳೆದಿದ್ದಾರೆ. ವಿಮಾನ ಸಂಚಾರಗಳು ಸ್ಥಗಿತಗೊಂಡಿರುವುದು…
ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್’; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ ರಾಜ್ಯ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವಂತಾಗಿದೆ ಎಂದು ಪ್ರತಿಪಕ್ಷ ಬಿಜೆಪಿ (BJP) ತೀವ್ರ ಟೀಕಿಸಿದೆ. ಮುಸ್ಲಿಂ ಸಮುದಾಯದವರನ್ನು ‘ಬ್ರದರ್ಸ್’ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾ ಬಂದಿರುವುದನ್ನೇ ಉಲ್ಲೇಖಿಸಿ, ಈ ಬಾರಿ ಮಂಡಿಸಲಾದ ಬಜೆಟ್ ಅನ್ನು ‘ಬ್ರದರ್ಸ್ ಬಜೆಟ್’ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಅನೇಕ ಯೋಜನೆಗಳನ್ನು ಘೋಷಿಸಿರುವುದನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಿ ಮಾಡಿ, ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಪಸಂಖ್ಯಾತರ ಶಾಲೆಗಳನ್ನು ಕೆಪಿಎಸ್ (KPS) ಮಾದರಿಯಲ್ಲಿ ಉನ್ನತೀಕರಣಗೊಳಿಸಲು ₹1000 ಕೋಟಿ ಮೀಸಲು, ಅಲ್ಪಸಂಖ್ಯಾತ ವಸತಿ ಶಾಲೆಗಳ ಆರಂಭ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ಪ್ರಕಟಿಸಿದೆ. ಇದರ ಜೊತೆಗೆ ಅಲ್ಪಸಂಖ್ಯಾತ ಕಾಲೋನಿಗಳ ಮೂಲಸೌಕರ್ಯ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಮೀಸಲು, ನಿರ್ಗತಿಕರಿಗೆ ಎರಡು ವೃದ್ಧಾಶ್ರಮಗಳ ಆರಂಭ, ನಿರುದ್ಯೋಗಿಗಳಿಗೆ…
‘ರಾಜ್ಯದ ಯುವ ಸಮೂಹಕ್ಕೆ ಕೌಶಲ್ಯತೆ, ಉದ್ಯೋಗ ಅವಕಾಶ ಹೆಚ್ಚಿಸಲು ಸರ್ಕಾರ ಬದ್ಧ’: ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿ ಐಟಿಐಗಳ, ಜಿಟಿಟಿಸಿ ಮೂಲಕ ಯುವ ಸಮದಾಯಕ್ಕೆ ಹೆಚ್ಚಿನ ಕೌಶಲ್ಯ ತರಬೇತಿ ಒದಗಿಸಲು ಕೆ-ಕ್ವೆಸ್ಟ್ ಯೋಜನೆಗೆ ಘೋಷಿರುವುದು ಗಮನಾರ್ಹ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿದ ನಂತರ ಪ್ರತಿಕ್ರಿಯೆ ನೀಡಿರುವ ಡಾ. ಪಾಟೀಲ್, ಯುವ ಸಮುದಾಯಕ್ಕೆ ಆದ್ಯತೆ ನೀಡಲಾಗಿದೆ. ಇದು ಸ್ವಾಗತಾರ್ಹ ಕ್ರಮ ಎಂದರು. ಎಡಿಬಿ ಸಹಭಾಗಿತ್ವದಲ್ಲಿ ಒಟ್ಟು 1,386 ಕೋಟಿ ರೂ.ಗಳ ವೆಚ್ಚದಲ್ಲಿ ಐದು ವರ್ಷಗಳ ಅವಧಿಯ “K-QUEST” (KARNATAKA – Quality Upgradation for Employment and Skills Transformation) ಯೋಜನೆಯನ್ನು ಬಜೆಟ್ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರಿಂದ ಗುಣಮಟ್ಟದ ಹಾಗೂ ಕೌಶಲ್ಯಭರಿತ ತರಬೇತಿ, ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು. ನಮ್ಮ ನಾಡಿನ…
ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಬಸವರಾಜ್ ಬೊಮ್ಮಾಯಿ ಟೀಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಕಳಪೆ ಬಜೆಟ್. ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತವಾಗಿರುವುದರ ಜೊತೆಗೆ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಸುಮಾರು ₹1.32 ಲಕ್ಷ ಕೋಟಿ ಸಾಲ ಮಾಡಿ, ಮತ್ತೊಂದೆಡೆ ಸುಮಾರು ₹25 ಸಾವಿರ ಕೋಟಿ ಹೊಸ ತೆರಿಗೆ ವಿಧಿಸಿ, ₹32 ಸಾವಿರ ಕೋಟಿ ಕೊರತೆಯ ಬಜೆಟ್ ಮಂಡನೆ ಮಾಡಿದ್ದಾರೆ. ದಿಕ್ಕು-ದೆಸೆ ಇಲ್ಲದ ಈ ಬಜೆಟ್ ರಾಜ್ಯವನ್ನು ಸಾಲದ ಶೂಲಕ್ಕೆ ತೆಗೆದುಕೊಂಡು ಹೋಗುವಂತಾಗಿದೆ. ಇದರ ಪರಿಣಾಮ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇದು ರಾಜ್ಯವನ್ನು ಕನಿಷ್ಠ 10 ರಿಂದ 15 ವರ್ಷ ಹಿಂದೆ ತಳ್ಳುವಂತಾಗಬಹುದು. 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳಿಂದ ಇಂತಹ ಬಜೆಟ್ ಬರುತ್ತದೆ ಎಂದು ನಿರೀಕ್ಷಿಸಿರಲಿಲ್ಲ, ಆದ್ದರಿಂದ ನಿರಾಸೆಯಾಗಿದೆ ಎಂದವರು ಹೇಳಿದ್ದಾರೆ. ನೀರಾವರಿಗೆ ಕೇವಲ ₹22 ಸಾವಿರ ಕೋಟಿ…
ಹಲವು ರಾಜ್ಯಗಳ ರಾಜ್ಯಪಾಲರ ಬದಲಾವಣೆ: ಹೊಸ ಪಟ್ಟಿ ಹೀಗಿದೆ
ನವದೆಹಲಿ: ರಾಷ್ಟ್ರಪತಿ ಭವನವು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಮಹತ್ವದ ರಾಜ್ಯಪಾಲರು (Governors) ಹಾಗೂ ಲೆಫ್ಟಿನೆಂಟ್ ಗವರ್ನರ್ಗಳ (Lieutenant Governors) ಪುನರ್ವ್ಯವಸ್ಥೆಯನ್ನು ಶುಕ್ರವಾರ ಘೋಷಿಸಿದೆ. ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಲವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳನ್ನು ವರ್ಗಾವಣೆ ಮಾಡಲಾಗಿದ್ದು, ಕೆಲವರನ್ನು ಹೊಸ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಸಂಬಂಧಿತ ಅಧಿಕಾರಿಗಳು ತಮ್ಮ ಹುದ್ದೆಗಳನ್ನು ಸ್ವೀಕರಿಸುವ ದಿನಾಂಕದಿಂದ ಈ ನೇಮಕಾತಿಗಳು ಜಾರಿಗೆ ಬರಲಿವೆ ಎಂದು ತಿಳಿಸಲಾಗಿದೆ. ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳ ನೇಮಕಾತಿ/ವರ್ಗಾವಣೆಗಳ ಪಟ್ಟಿ: ವಿನಯ್ ಕುಮಾರ್ ಸಕ್ಸೇನಾ (Vinai Kumar Saxena) – ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ (ಪ್ರಸ್ತುತ ದೆಹಲಿ ಎಲ್ಜಿ)…
