ಜಿಗಲೂರು ಕ್ರಾಸ್ ಬಳಿ ಅಪಘಾತ; ಮೂವರು ಮಹಿಳೆಯರು ಸಾವು

ಗದಗ: ಜಿಲ್ಲೆಯ ಜಿಗಲೂರು ಕ್ರಾಸ್ ಬಳಿ ಗುರುವಾರ ಪ್ರಯಾಣಿಕ ವಾಹನ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರನ್ನು ಗಜೇಂದ್ರಗಡದ ಶಿವಾಜಿಪೇಟೆ ನಿವಾಸಿಗಳಾದ ಅನ್ನಪೂರ್ಣ (56), ಸಂಗೀತಾ ಹೊಸಮಣಿ (48) ಮತ್ತು ಮರಿಯಮ್ಮ ಹುನಗುಂದ (55) ಎಂದು ಗುರುತಿಸಲಾಗಿದೆ. ಇವರು ರೋಣ ತಾಲ್ಲೂಕಿಗೆ ನೆಲಗಡಲೆ ಕೊಯ್ಲು ಕೆಲಸಕ್ಕಾಗಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗಜೇಂದ್ರಗಡದ ಶಿವಾಜಿ ನಗರ ಪ್ರದೇಶದ ದಿನಗೂಲಿ ಕಾರ್ಮಿಕರು ಪ್ರಯಾಣಿಕ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ವಾಹನ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಐಎಂಎಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಆರು ಮಂದಿಗೆ ಕೈ–ಕಾಲುಗಳಲ್ಲಿ ಮುರಿತಗಳಾಗಿವೆ ಎಂದು ಆಸ್ಪತ್ರೆ ಮೂಲಗಳು…

ಸದನದಲ್ಲಿ ಯಾವುದೇ ಅಸಂಸದೀಯ, ಮಾನಹಾನಿಕರ ಪದಬಳಕೆ ಮಾಡಿಲ್ಲ; ಸಿ.ಟಿ.ರವಿ ಸ್ಪಷ್ಟನೆ

ಬೆಂಗಳೂರು: ‘ವಿಧಾನ ಪರಿಷತ್ತಿನಲ್ಲಿ ಮಾತನಾಡುವ ಸಂದರ್ಭದಲ್ಲಿ, ನಾನು ಯಾವುದೇ ಅಸಂಸದೀಯ, ಮಾನಹಾನಿಕರ ಪದಬಳಕೆ ಮಾಡಿಲ್ಲ. ನನ್ನ ನಿಲುವಿನಲ್ಲಿ ನಾನು ಸ್ಪಷ್ಟವಾಗಿದ್ದೇನೆ’ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಸ್ಪಷ್ಟನೆ ನೀಡಿದ್ದಾರೆ. ಭಾರತದ ಪ್ರಧಾನ ಮಂತ್ರಿಯ ಹುದ್ದೆ ಎನ್ನುವುದು ಒಂದು ಉನ್ನತವಾದ, ಪಕ್ಷಾತೀತವಾದ ಸಂಸದೀಯ ಹುದ್ದೆ. ಯಾವ ಪಕ್ಷದ ನಾಯಕ ಪ್ರಧಾನಿಯಾಗಿದ್ದರೂ, ಅವರು ಸಮಸ್ತ ದೇಶದ ಪ್ರಧಾನಿ. ಆ ಸ್ಥಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಸಮರ್ಥರಲ್ಲದಿದ್ದರೆ, ದೇಶದ ಜನರು ಸತತವಾಗಿ ಮೂರು ಅವಧಿಗೆ ಎನ್‌ಡಿಎ ಸರ್ಕಾರವನ್ನು ಅಧಿಕಾರಕ್ಕೆ ತರುತ್ತಿತ್ತೇನು? ಪ್ರಧಾನಿಯವರ ಕುರಿತು ಕಾಂಗ್ರೆಸ್ ನಾಯಕರು ಆಡಿರುವ ಅಗೌರವದ ಮಾತುಗಳು ಸಮಸ್ತ ದೇಶಕ್ಕೇ ಮಾಡಿರುವ ಅವಮಾನ’ ಎಂದು ಸಿ.ಟಿ.ರವಿ ಎದಿರೇಟು ನೀಡಿದ್ದಾರೆ. ಸರ್ಕಾರದ ನಡೆಗಳನ್ನು ಟೀಕಿಸಿ, ಕ್ರಮಗಳನ್ನು ಟೀಕಿಸಿ. ಪ್ರಜಾಪ್ರಭುತ್ವದಲ್ಲಿ ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯವಿದೆ. ಆದರೆ, ಓರ್ವ ಪ್ರಧಾನಿಯ ಕುರಿತು ದೇಶದ್ರೋಹದ…

‘ರಂಜಾನ್’ ಸಮಯದಲ್ಲಿ ಶಾಲಾ ಸಮಯದಲ್ಲಿ ಬದಲಾವಣೆಗೆ ಶಾಸಕರ ಆಕ್ಷೇಪ

ಬೆಂಗಳೂರು: ರಂಜಾನ್ ಸಮಯದಲ್ಲಿ ತರಗತಿಯ ವೇಳಾಪಟ್ಟಿ ಹಾಗೂ ಶಾಲಾ ಸಮಯವನ್ನು ಬದಲಾವಣೆ ಮಾಡುವ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಂಜಾನ್ ಸಮಯದಲ್ಲಿ ತರಗತಿಯ ವೇಳಾಪಟ್ಟಿ ಹಾಗೂ ಶಾಲಾ ಸಮಯವನ್ನು ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಹಿಂದೂಗಳು ಶ್ರದ್ಧಾಭಕ್ತಿಯಿಂದ ಆಚರಿಸುವ ದೀಪಾವಳಿ, ನಾಗರಪಂಚಮಿ, ಹೋಳಿ ಹುಣ್ಣಿಮೆ, ರಾಮನವಮಿ, ಹನುಮ ಜಯಂತಿಗೆ ರಜೆ ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ. ‘ನಾಡಿನ ನಾಡಿನ ಪ್ರಮುಖ ಸಾಂಸ್ಕೃತಿಕ ಆಚರಣೆಗಳಾದ ಗವಿ ಸಿದ್ದೇಶ್ವರ ಜಾತ್ರೆ ಸೇರಿದಂತೆ ಆಯಾ ಭಾಗದ/ಜಿಲ್ಲೆಗಳ ಪ್ರಮುಖ ಹಿಂದೂ ಹಬ್ಬಗಳಿಗೆ, ರಜೆ ಘೋಷಿಸಿ ಎಲ್ಲರಿಗೂ ಒಂದೇ ರೀತಿಯಾದ ನ್ಯಾಯ ಎಂದು ತೋರಿಸಲಿ’ ಎಂದು ಯತ್ನಾಳ್ ಸಲಹೆ ನೀಡಿದ್ದಾರೆ.

‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಆರೋಪವನ್ನು ಮುಂದಿಟ್ಟು ಬಿಜೆಪಿ ಶಾಸಕರು ಹೋರಾಟವನ್ನು ಮುಂದುವರಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿರುವ ಶಾಸಕರು, ಅಬಕಾರಿ ಸಚಿವರ ರಾಜೀನಾಮೆಗೆ ಪಟ್ಟುಹಿಡಿದರು. ವಿಧಾನ ಪರಿಷತ್ ಸದಸ್ಯರೂ ಈ ಹೋರಾಟವನ್ನು ಬೆಂಬಲಿಸಿದ್ದು, ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿ ಗಮನಸೆಳೆದರು. ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ.#CongressFailsKarnataka#CongressLootsKarnataka pic.twitter.com/gIXKHQR4o3 — N Ravi Kumar (@nrkbjp) February 4, 2026

ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್‌ ಮಂಜೂರಾತಿಗೆ ಲಂಚ, ವರ್ಗಾವಣೆ ಮಾಡಿಸಲು ಲಂಚ ಪಡೆಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಆಡಿಯೋಗಳು ಬಿಡುಗಡೆಯಾಗಿ ಲೋಕಾಯುಕ್ತದಲ್ಲಿ ದೂರುಗಳು ದಾಖಲಾಗಿವೆ. ಆದ್ದರಿಂದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅಬಕಾರಿ ಇಲಾಖೆಯು ಭ್ರಷ್ಟಾಚಾರದ ಅಪರಾಧಿ ನಂ.1 ಇಲಾಖೆಯಾಗಿದೆ. ಲೈಸೆನ್ಸ್‌ಗೆ ಲಂಚ, ವರ್ಗಾವಣೆಗೆ ಹಣ ಫಿಕ್ಸ್‌ ಹೀಗೆ ಮೊದಲಾದ ರೀತಿಯಲ್ಲಿ ಅಕ್ರಮ ನಡೆಯುತ್ತಿದೆ. ವಿಬಿ ಜಿ ರಾಮ್‌ ಜಿ ಯೋಜನೆಯನ್ನು ವಿರೋಧಿಸಿರುವ ಕಾಂಗ್ರೆಸ್‌ ನಾಯಕರು ಮಹಾತ್ಮ ಗಾಂಧೀಜಿಯ ಆದರ್ಶಗಳ ಬಗ್ಗೆ ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಪಕ್ಷ ಗಾಂಧೀಜಿಯ ಆದರ್ಶ ಪಾಲಿಸುತ್ತಿಲ್ಲ. ಸರ್ಕಾರಿ ಅಧಿಕಾರಿಗಳ ಕಡೆಯಿಂದ ಮಾಡಿರುವ ವಾಟ್ಸಾಪ್‌ ಸಂದೇಶದಲ್ಲಿ, ಹುಬ್ಬಳ್ಳಿಯಲ್ಲಿ ವಸತಿ ಇಲಾಖೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಹಾಗೂ ಡಿಸಿಎಂ ಭಾಗವಹಿಸುವುದರಿಂದ ಹೆಚ್ಚು ಜನರು ಬರುತ್ತಿದ್ದಾರೆ. ಆದ್ದರಿಂದ ಮದ್ಯದಂಗಡಿಗಳು ಸಾಕಷ್ಟು ಪ್ರಮಾಣದ…

‘ಸ್ಥಳೀಯ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ ಆದ್ಯತೆ ಸಿಗಲಿ’; ಬಿಜೆಪಿ ಸಂಸದೆ ಆಗ್ರಹ

ಜೈಪುರ: ದತ್ತಾಂಶ ಸುರಕ್ಷತೆ ಮತ್ತು ತಾಂತ್ರಿಕ ಸ್ವಾವಲಂಬನೆಯ ವಿಷಯವು ಲೋಕಸಭೆಯಲ್ಲಿ ಪ್ರತಿಧ್ವನಿಸಿತು, ರಾಜಸ್ಥಾನದ ಜೈಪುರದ ಭಾರತೀಯ ಜನತಾ ಪಕ್ಷದ ಲೋಕಸಭಾ ಸಂಸದ ಮಂಜು ಶರ್ಮಾ ಅವರು ವಿದೇಶಿ ತಂತ್ರಜ್ಞಾನಗಳ ಮೇಲೆ ಭಾರತ ಹೆಚ್ಚುತ್ತಿರುವ ಅವಲಂಬನೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಸೋಮವಾರ ಸಂಸತ್ತನ್ನುದ್ದೇಶಿಸಿ ಮಾತನಾಡಿದ ಶರ್ಮಾ, ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ, ಅರೆವಾಹಕಗಳು, ಡಿಜಿಟಲ್ ಪಾವತಿಗಳು, ಕ್ಲೌಡ್ ಸೇವೆಗಳು ಮತ್ತು ದತ್ತಾಂಶ ನಿರ್ವಹಣೆಯಂತಹ ಕ್ಷೇತ್ರಗಳು ಕಾರ್ಯತಂತ್ರದ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ ಎಂದು ಹೇಳಿದರು. ವಿದೇಶಿ ಸಾಫ್ಟ್‌ವೇರ್, ಹಾರ್ಡ್‌ವೇರ್ ಮತ್ತು ವೇದಿಕೆಗಳ ಮೇಲಿನ ಅತಿಯಾದ ಅವಲಂಬನೆಯು ದತ್ತಾಂಶ ಸುರಕ್ಷತೆ, ಗೌಪ್ಯತೆ ಮತ್ತು ಡಿಜಿಟಲ್ ಸಾರ್ವಭೌಮತ್ವಕ್ಕೆ ಗಮನಾರ್ಹ ಅಪಾಯಗಳನ್ನುಂಟುಮಾಡುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ದೇಶದಲ್ಲಿ ಹಲವಾರು ನಿರ್ಣಾಯಕ ಸರ್ಕಾರಿ ಮತ್ತು ಸಾರ್ವಜನಿಕ ಡಿಜಿಟಲ್ ವ್ಯವಸ್ಥೆಗಳು ವಿದೇಶಿ ತಾಂತ್ರಿಕ ಮೂಲಸೌಕರ್ಯದ ಮೇಲೆ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿವೆ ಎಂದು ಸಂಸದರು ಹೇಳಿದರು. ಇದು ಸೂಕ್ಷ್ಮ ದತ್ತಾಂಶದ…

ಕಲ್ಯಾಣ ಕರ್ನಾಟಕ ಮಂಡಳಿಯ ವತಿಯಿಂದ ಮಾಡಬೇಕಿರುವ ಕಾಮಗಾರಿಗಳನ್ನು ಇನ್ನೂ ನಡೆಸಿಲ್ಲ

ಬೆಂಗಳೂರು: ರಾಜ್ಯದಲ್ಲಿರುವುದು 80% ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಮೂರು ಬಾರಿ ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಬಿಜೆಪಿ ಸರ್ಕಾರವಿದ್ದರೂ 40 ಪರ್ಸೆಂಟ್‌ ಎಂದು ಆರೋಪ ಮಾಡಲಾಗಿತ್ತು. ಮಧ್ಯವರ್ತಿಗಳ ಹಾವಳಿ, ಹಿಂದಿನ ಸರ್ಕಾರಕ್ಕಿಂತ ದುಪ್ಪಟ್ಟು ಕಮಿಶನ್‌, 80 ಪರ್ಸೆಂಟ್‌ ಕಮಿಶನ್ ಹೀಗೆ ಮೊದಲಾದ ಆರೋಪಗಳನ್ನು ಮಾಡಿದ್ದಾರೆ. ಅವರು ಮಾಡಿರುವ ಆರೋಪ ರಾಹುಲ್‌ ಗಾಂಧಿಯ ತನಕ ಹೋಗಿದೆ. ಆಂಧ್ರದವರಿಗೆ ಟೆಂಡರ್‌ ನೀಡಲಾಗಿದೆ, ಹಳೆ ಬಿಲ್‌ಗಳಿಗೆ ಹೆಚ್ಚಿನ ಕಮಿಶನ್‌ ಪಡೆಯಲಾಗುತ್ತಿದೆ, 37,370 ಕೋಟಿ ರೂ. ಬಾಕಿ ಇದೆ ಎಂದಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ, ಮುಷ್ಕರ ಮಾಡದೇ ಬೇರೆ ದಾರಿಯಿಲ್ಲ ಎಂದು ಗುತ್ತಿಗೆದಾರರ ಸಂಘ ತಿಳಿಸಿದೆ. ನಗರಾಭಿವೃದ್ಧಿ ಇಲಾಖೆ ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಘ ಪತ್ರ ಬರೆದಿದೆ. ಇಷ್ಟೆಲ್ಲ ಆಪಾದನೆಗಳು ಬಂದರೂ ಗುತ್ತಿಗೆದಾರರ…

ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ

ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ ಬಗ್ಗೆ ಅಭಿಪ್ರಾಯಾಗಲು ಕೇಳಿಬಂದಿವೆ. ಇನ್ನೊಂದೆಡೆ, ಸಾಮಾಜಿಕ ಮಾಧ್ಯಮ ಕುರಿತ ಜಾಗೃತಿಗೆ ಪೂರಕವಾಗಿ ಶೈಕ್ಷಣಿಕ ಪಠ್ಯಕ್ರಮ ರೂಪಿಸಬೇಕೆಂದು ಆಡಳಿತ ಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ. ಈ ಸಂಬಂಧ ಸರ್ಕಾರಕ್ಕೆ ಕಾಂಗ್ರೆಸ್ ಕಾನೂನು ಘಟಕದಿಂದ ಪ್ರಸ್ತಾವನೆಯೊಂದು ಸಲ್ಲಿಕೆಯಾಗುವ ಮೂಲಕ ಸೋಶಿಯಲ್ ಮೀಡಿಯಾ ಕುರಿತ ಬೆಳವಣಿಗೆಗಳಿಗೆ ನಿರ್ಣಾಯಕ ತಿರುವು ಸಿಕ್ಕಿದೆ. ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಸಿ.ಕೆ.ಶಿವಕುಮಾರ್, ಗೃಹಸಚಿವ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿ, ಕಾನೂನು ರೂಪಿಸುವುದಷ್ಟೇ ಅಲ್ಲ, ವಿದ್ಯಾರ್ಥಿ ಬದುಕಿನಲ್ಲೇ ಸಾಮಾಜಿಕ ಮಾಧ್ಯಮ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ…

‘ಆರ್ಥಿಕ ಸುಧಾರಣೆಗಿತ ಸಾಮಾಜಿಕ ಸುಧಾರಣೆ ಆದ್ಯತೆಯಾಗಲಿ’; ಅರುಣ್ ಶ್ಯಾಮ್

ಬೆಂಗಳೂರು: ಪ್ರಭು ಶ್ರೀರಾಮನ ಆದರ್ಶ, ಶ್ರೀಕೃಷ್ಣನ ಉಪದೇಶ, ಅಣ್ಣಾ ಬಸವಣ್ಣರ ವಚನಗಳನ್ನು ಜನರು ಅಳವಡಿಸಿ ಅನುಸರಿಸಿದರೆ, ನಮಾಜದಲ್ಲಿ ಕಾನೂನು, ನ್ಯಾಯಾಲಯ ಸೇರಿದಂತೆ ನ್ಯಾಯಾಂಗ ವ್ಯವಸ್ಥೆಯೇ ಅವಶ್ಯಕತೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ಪ್ರತಿಪಾದಿಸಿದ್ದಾರೆ. ಅನ್ನದಾನ, ಅಕ್ಷರದಾನದೊಂದಿಗೆ ನ್ಯಾಯದಾನಕ್ಕೂ ಹೆಸರಾದ ಸಿರಿಗೆರೆ ಮಠದ ಪರಮಪೂಜ್ಯ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆಯೋಜಿಸಿದ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಜನಪರ ಆಡಳಿತ ಹಾಗೂ ಜನಸ್ನೇಹಿ ಸಮಾಜಕ್ಕೆ ರಾಮ ರಾಜ್ಯವನ್ನು ನಾವು ಉದಾಹರಿಸುತ್ತೇವೆ. ಯಾಕೆಂದರೆ, ಶ್ರೀರಾಮಾನ ಆಶಯವು ಸಮಾಜದ ಹಿತಕ್ಕಾಗಿ ಇತ್ತು. ಶ್ರೀಕೃಷ್ಣನ ಉಪದೇಶ, ಅಣ್ಣ ಬಸವಣ್ಣರ ವಚನಗಳು ಕೂಡಾ ಶಾಂತಿ ಸಹಬಾಳ್ವೆ, ಸಾಮಾಜಿಕ ಹಿತಾಸಕ್ತಿಯ ಸೂತ್ರ ಎಂಬಂತಿದೆ. ಈ ಸೂತ್ರವನ್ನು ಅನುಸರಿಸಿದರೆ ಸಮಾಜದಲ್ಲಿ ವಿವಾದಗಳೇ ಇರಲ್ಲ ಎಂದು ಅರುಣ್ ಶ್ಯಾಮ್ ಪ್ರತಿಪಾದಿಸಿದರು. ಹಿರಿಯ ವಕೀಲರೂ ಆದ ಅರುಣ್ ಶ್ಯಾಮ್ ಅವರು,…

ಅಭಿವೃದ್ಧಿ ಹೊಂದಿದ ಭಾರತಕ್ಕೆ ನಮ್ಮ ಬಜೆಟ್‌ ನೀಲನಕ್ಷೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2026–27ರ ಕೇಂದ್ರ ಬಜೆಟ್‌ ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ಕನಸನ್ನು ಸಾಕಾರಗೊಳಿಸುವ ಸ್ಪಷ್ಟ ನೀಲನಕ್ಷೆಯಾಗಿದೆ ಎಂದು ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಬಜೆಟ್‌ ಏಳು ಪ್ರಮುಖ ವಲಯಗಳಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಬಲಪಡಿಸುವ ಉದ್ದೇಶ ಹೊಂದಿರುವ ಬೆಳವಣಿಗೆ ಕೇಂದ್ರೀತ ದಾಖಲೆ ಎಂದು ಅವರು ಅಭಿಪ್ರಾಯಪಟ್ಟರು. ಬಯೋಫಾರ್ಮಾ ವಲಯಕ್ಕೆ ರೂ.10,000 ಕೋಟಿ ಹಂಚಿಕೆ ಮಾಡಿರುವುದು ಆರೋಗ್ಯ ರಕ್ಷಣಾ ಕ್ಷೇತ್ರದಲ್ಲಿ ನಾವೀನ್ಯತೆ ಹಾಗೂ ಉತ್ಪಾದನೆಗೆ ಮಹತ್ವದ ಉತ್ತೇಜನ ನೀಡಲಿದೆ ಎಂದರು. ಭಾರತೀಯ ಸೆಮಿಕಂಡಕ್ಟರ್ ಮಿಷನ್‌ 2.0ರ ಉಡಾವಣೆ ಭಾರತವನ್ನು ಜಾಗತಿಕ ತಂತ್ರಜ್ಞಾನ ಶಕ್ತಿ ಕೇಂದ್ರವಾಗಿ ರೂಪಿಸುವ ದಿಟ್ಟ ಹೆಜ್ಜೆಯಾಗಿದೆ ಎಂದು ಜೋಶಿ ಹೇಳಿದರು. ದೇಶೀಯ ಉತ್ಪಾದನೆಗೆ ವೇಗ ನೀಡುವ ಉದ್ದೇಶದಿಂದ ಎಲೆಕ್ಟ್ರಾನಿಕ್ಸ್ ಘಟಕ ಉತ್ಪಾದನಾ ಯೋಜನೆಯಡಿಯಲ್ಲಿ ಹೂಡಿಕೆಯನ್ನು…