ನವದೆಹಲಿ: ಡಿಜಿಲಾಕರ್ ಏಕೀಕರಣ ಮತ್ತು ಡಿಜಿಟಲ್ ಆಡಳಿತ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗಾಗಿ ಗುಜರಾತ್, ಕರ್ನಾಟಕ, ಕೇರಳ, ನಾಗಾಲ್ಯಾಂಡ್ ಮತ್ತು ರಾಜಸ್ಥಾನ ರಾಜ್ಯಗಳಿಗೆ ರಾಷ್ಟ್ರೀಯ ಇ-ಆಡಳಿತ ವಿಭಾಗ (NeGD) ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಮೇ 11ರಂದು ನಡೆದ “ರಾಜ್ಯ ದತ್ತಾಂಶಕ್ಕಾಗಿ ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ” ರಾಷ್ಟ್ರೀಯ ಕಾರ್ಯಾಗಾರದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಡಿಜಿಟಲ್ ಆಡಳಿತ ವಿಭಾಗದ ಜಂಟಿ ಕಾರ್ಯದರ್ಶಿ ಹಾಗೂ NeGD ಅಧ್ಯಕ್ಷ-ಸಿಇಒ ನಂದ ಕುಮಾರಮ್ ಪ್ರಶಸ್ತಿ ವಿತರಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರಕಾರ, ವಿವಿಧ ಸರ್ಕಾರಿ ಸೇವೆಗಳೊಂದಿಗೆ ಡಿಜಿಲಾಕರ್ ಯಶಸ್ವಿಯಾಗಿ ಸಂಯೋಜಿಸಿ, ನಾಗರಿಕರಿಗೆ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸುಲಭವಾಗಿ ಲಭ್ಯವಾಗುವಂತೆ ಮಾಡಿದಕ್ಕಾಗಿ ರಾಜ್ಯಗಳನ್ನು ಗುರುತಿಸಲಾಗಿದೆ. ಕರ್ನಾಟಕದಲ್ಲಿ ಶೇಕಡಾ 73ರಷ್ಟು ಸರ್ಕಾರಿ ಇ-ಸೇವೆಗಳನ್ನು ಡಿಜಿಲಾಕರ್ಗೆ ಜೋಡಿಸಲಾಗಿದ್ದು, 2.7 ಕೋಟಿಗೂ ಹೆಚ್ಚು ಬಳಕೆದಾರರು ನೋಂದಾಯಿಸಿಕೊಂಡಿದ್ದಾರೆ. ರಾಜ್ಯದ ಎಲ್ಲಾ ಐದು ಡಿಸ್ಕಾಂಗಳನ್ನು ಸಂಯೋಜಿಸಿ ಸುಮಾರು 3…
Author: NavaKarnataka
IPL: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಜಯ
ಧರ್ಮಶಾಲಾ: ಐಪಿಎಲ್ 2026ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 3 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಈ ಫಲಿತಾಂಶದಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 210 ರನ್ ಗಳಿಸಿತು. ಪ್ರಿಯಾಂಶ್ ಆರ್ಯ 33 ಎಸೆತಗಳಲ್ಲಿ 56 ರನ್ ಸಿಡಿಸಿ ಮಿಂಚಿದರೆ, ಶ್ರೇಯಸ್ ಅಯ್ಯರ್ ಹಾಗೂ ಕೂಪರ್ ಕೊನೊಲಿ ಕೂಡ ಉತ್ತಮ ಕೊಡುಗೆ ನೀಡಿದರು. ಆರಂಭಿಕ ಆಟಗಾರರಾದ ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಮೊದಲ ವಿಕೆಟ್ಗೆ 78 ರನ್ಗಳ ಜೊತೆಯಾಟ ನೀಡಿದರು. ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಕ್ಸರ್ ಪಟೇಲ್ ಮತ್ತು ಡೇವಿಡ್ ಮಿಲ್ಲರ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಅಕ್ಸರ್ 57 ರನ್ ಹಾಗೂ ಮಿಲ್ಲರ್ 51 ರನ್ ಗಳಿಸಿ ತಂಡವನ್ನು ಗೆಲುವಿನ…
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸದಂತೆ ಕೇಂದ್ರಕ್ಕೆ ಆಂಧ್ರ ಆಗ್ರಹ
ಅಮರಾವತಿ: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ಪ್ರಸ್ತಾವನೆ ಕುರಿತಂತೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟವಾಗುವವರೆಗೆ ಯಾವುದೇ ಗೆಜೆಟ್ ಅಧಿಸೂಚನೆ ಹೊರಡಿಸಬಾರದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ನಾಯ್ಡು, ಆಂಧ್ರಪ್ರದೇಶದ ವಿವಿಧ ಯೋಜನೆಗಳಿಗೆ ಹೆಚ್ಚುವರಿ ಕೇಂದ್ರ ಸಹಾಯ ನೀಡುವಂತೆ ಮನವಿ ಮಾಡಿದರು. ಆಲಮಟ್ಟಿ ಯೋಜನೆ ವಿಚಾರದಲ್ಲಿ ಬಲ ಹಾಗೂ ಎಡ ಕಾಲುವೆಗಳ ಸಾಮರ್ಥ್ಯವನ್ನು 17,500 ಕ್ಯೂಸೆಕ್ಗಳಿಗೆ ಹೆಚ್ಚಿಸಿರುವುದಾಗಿ ತಿಳಿಸಿದ ಅವರು, ಅದರ ಅನುಗುಣವಾಗಿ ವೆಚ್ಚ ಮರುಪಾವತಿ ಮಾಡುವಂತೆ ಕೋರಿದರು. ಜೊತೆಗೆ, ರಾಯಲಸೀಮಾ ಹಾಗೂ ದಕ್ಷಿಣ ಕರಾವಳಿ ಪ್ರದೇಶಗಳಿಗೆ ನೀರು ಪೂರೈಸುವ ಪೋಲವರಂ–ಬಣಕಚೆರ್ಲಾ ಲಿಂಕ್ ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ರಾಜ್ಯದ 297 ಜಲಮೂಲಗಳ ಪುನಶ್ಚೇತನ…
ನೀಟ್-ಯುಜಿ ಅಕ್ರಮಗಳ ಬಗ್ಗೆ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನೀಟ್-ಯುಜಿ 2026 ಪರೀಕ್ಷೆಯ ಅಕ್ರಮಗಳ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ತಮ್ಮ X ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕಿ, “ಮತ್ತೊಮ್ಮೆ ನೀಟ್-ಯುಜಿ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮಗಳ ವರದಿಗಳು ಬೆಳಕಿಗೆ ಬರುತ್ತಿವೆ” ಎಂದು ಹೇಳಿದ್ದಾರೆ. ಬಿಜೆಪಿ ಆಡಳಿತದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಭ್ರಷ್ಟಾಚಾರದಿಂದ ಸುಮಾರು 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅಪಾಯಕ್ಕೆ ಸಿಲುಕಿದೆ ಎಂದು ಅವರು ಟೀಕಿಸಿದ್ದಾರೆ. “ನೀಟ್ನಂತಹ ಪರೀಕ್ಷೆಗಳಿಗೆ ಮಕ್ಕಳು ಅಪಾರ ಶ್ರಮ ಪಡುತ್ತಾರೆ. ಪೋಷಕರು ಕೂಡ ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಸಂಪೂರ್ಣ ಶಕ್ತಿ ಹೂಡಿಕೆ ಮಾಡುತ್ತಾರೆ. ಆದರೆ ಪ್ರತಿಯೊಂದು ಪರೀಕ್ಷೆಯೂ ಭ್ರಷ್ಟಾಚಾರಕ್ಕೆ ಬಲಿಯಾಗುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. एक बार फिर से NEET UG…
ಪಾಕಿಸ್ತಾನದಲ್ಲಿ ಹೊಸ ಉಗ್ರ ಸಂಘಟನೆ ದಾಳಿ; 21 ಸೈನಿಕರ ಸಾವು
ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ರಕ್ತಸಿಕ್ತ ಭಾನುವಾರ! ವಾಯುವ್ಯ ಪಾಕಿಸ್ತಾನದಲ್ಲಿರುವ ಪೊಲೀಸ್ ಚೆಕ್ಪಾಯಿಂಟ್ ಮೇಲೆ ಭಯೋತ್ಪಾದಕರು ನಡೆಸಿದ ಉಗ್ರ ದಾಳಿಯಲ್ಲಿ 21 ಸೈನಿಕರು ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಕೋರರು ಮೊದಲು ಕಾರು ಬಾಂಬ್ ಸ್ಫೋಟಗೊಳಿಸಿ, ನಂತರ ಭಾರೀ ಗುಂಡಿನ ದಾಳಿ ನಡೆಸಿದ್ದಾರೆ. ಸ್ಫೋಟದ ತೀವ್ರತೆಗೆ ಚೆಕ್ಪಾಯಿಂಟ್ ಕ್ಷಣಾರ್ಧದಲ್ಲಿ ಧ್ವಂಸವಾಗಿದ್ದು, ಪೊಲೀಸರು ಪ್ರತಿದಾಳಿಗೆ ಸಿದ್ಧಗೊಳ್ಳುವ ಮೊದಲು ಪರಿಸ್ಥಿತಿ ನಿಯಂತ್ರಣದ ಹೊರಗೆ ಹೋಗಿದೆ. ದಾಳಿಯ ನಂತರ ಉಗ್ರರು ಪೊಲೀಸರ ಶಸ್ತ್ರಾಸ್ತ್ರಗಳನ್ನು ದೋಚಿ ಪರಾರಿಯಾಗಿದ್ದು, ಗಡಿಯತ್ತ ಓಡಿಹೋಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆಯು ಖೈಬರ್ ಪಖ್ತುಂಖ್ವಾದ ಬನ್ನು ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಈ ವಿಧ್ವಂಸ ನಡೆದಿದ್ದು, ಈ ದಾಳಿಯ ಹೊಣೆಯನ್ನು ಇತ್ತೇಹಾದ್-ಉಲ್-ಮುಜಾಹಿದ್ದೀನ್ ಪಾಕಿಸ್ತಾನ್ ಸಂಘಟನೆ ಹೊತ್ತುಕೊಂಡಿದೆ.
ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ (High Blood Pressure) ಸಮಸ್ಯೆ ಅನೇಕ ಮಂದಿಯನ್ನು ಕಾಡುತ್ತಿದೆ. ಆಹಾರ ಪದ್ಧತಿ, ಒತ್ತಡದ ಜೀವನಶೈಲಿ ಹಾಗೂ ವ್ಯಾಯಾಮದ ಕೊರತೆಯಿಂದ ಈ ಸಮಸ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮನೆಯಲ್ಲೇ ಸಿಗುವ ಶುಂಠಿ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಉಪಯೋಗವಾಗುತ್ತದೆ ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯವಾಗಿದೆ. ಶುಂಠಿಯಲ್ಲಿ ಇರುವ ಜಿಂಜರೋಲ್ (Gingerol) ಹಾಗೂ ಶೋಗೋಲ್ (Shogaol) ಎಂಬ ಸಕ್ರಿಯ ಅಂಶಗಳು ದೇಹದಲ್ಲಿ ರಕ್ತಪ್ರವಾಹ ಸುಧಾರಿಸಲು ನೆರವಾಗುತ್ತವೆ. ಇದರಿಂದ ರಕ್ತನಾಳಗಳು ವಿಶ್ರಾಂತಿ ಪಡೆಯುವ ಸಾಧ್ಯತೆ ಇದ್ದು, ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿಯಾಗಬಹುದು ಎಂದು ಹೇಳಲಾಗುತ್ತದೆ. ಶುಂಠಿ ರಕ್ತದೊತ್ತಡ ಕಡಿಮೆ ಮಾಡಲು ಹೇಗೆ ಸಹಾಯ ಮಾಡುತ್ತದೆ? ತಜ್ಞರ ಪ್ರಕಾರ, ಶುಂಠಿ ದೇಹದಲ್ಲಿ ರಕ್ತಸಂಚಾರ ಸುಧಾರಿಸಲು ನೆರವಾಗುತ್ತದೆ. ಜೊತೆಗೆ ದೇಹದ ಉರಿಯೂತವನ್ನು ಕಡಿಮೆ ಮಾಡುವ ಗುಣವೂ ಇದಕ್ಕಿದೆ. ಕೆಲ ಅಧ್ಯಯನಗಳ ಪ್ರಕಾರ ಶುಂಠಿ: ರಕ್ತನಾಳಗಳ ಒತ್ತಡವನ್ನು ಕಡಿಮೆ ಮಾಡಲು ನೆರವಾಗಬಹುದು ರಕ್ತದ…
ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ ಸಿ.ಎಸ್.ಸ್ಕಂದ ಆಯ್ಕೆ
ಮಂಗಳೂರು: ಸುಳ್ಯ ಮೂಲದ ಸ್ಕಂದ ಸಿ.ಎಸ್ ಕರ್ನಾಟಕ 7A ಸೈಡ್ ಅಂಡರ್-15 ಫುಟ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಮೇ 14ರಿಂದ ಗೋವಾದಲ್ಲಿ ನಡೆಯಲಿರುವ ಸಬ್-ಜ್ಯೂನಿಯರ್ ನ್ಯಾಷನಲ್ ಟೂರ್ನಮೆಂಟ್ನಲ್ಲಿ ಅವರು ಕರ್ನಾಟಕ ಪರವಾಗಿ ಆಡಲಿದ್ದಾರೆ. ಸ್ಕಂದ ಸದ್ಯ ಬೆಂಗಳೂರಿನಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದಾರೆ. ಇಂಜಿನಿಯರ್ ಆಗಿರುವ ಎಣ್ಮೂರಿನ ತೇಜಸ್ವಿನಿ ಕೆ.ಎನ್ ಮತ್ತು ದಂಬೆ ರವಿಶಂಕರ ಶಾಸ್ತ್ರಿ ದಂಪತಿಗಳ ಪುತ್ರ. ನಿವೃತ್ತ ಅಧ್ಯಾಪಕರಾದ ಕೀರಿಕ್ಕಾಡು ನಾರಾಯಣ ಭಟ್ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎ.ಆರ್ ಅವರ ಮೊಮ್ಮಗ. ಸ್ಕಂದನ ಆಯ್ಕೆಯಿಂದ ಕುಟುಂಬ ಹಾಗೂ ಸ್ಥಳೀಯ ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
‘ದೃಶ್ಯಂ 3’: ಜಾರ್ಜ್ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದೃಶ್ಯಂ 3’ ಟ್ರೇಲರ್ ಭಾನುವಾರ ಅನಾವರಣಗೊಂಡಿದೆ. ಜನಪ್ರಿಯ ಥ್ರಿಲ್ಲರ್ ಫ್ರಾಂಚೈಸಿಯ ಮುಂದಿನ ಭಾಗವಾಗಿರುವ ಈ ಚಿತ್ರ, ಜಾರ್ಜ್ಕುಟ್ಟಿ ಜೀವನದಲ್ಲಿ ಮತ್ತೆ ಹೊಸ ಸಂಕಷ್ಟಗಳನ್ನು ತೋರಿಸುವ ಸುಳಿವು ನೀಡುತ್ತಿದೆ. ನಿರ್ದೇಶಕ ಜೀತು ಜೋಸೆಫ್ ರಚಿಸಿ ನಿರ್ದೇಶಿಸಿರುವ ಈ ಟ್ರೇಲರ್, 2013ರಲ್ಲಿ ಆರಂಭವಾದ ‘ದೃಶ್ಯಂ’ ಸರಣಿಯ ನಂತರದ ಘಟನೆಗಳ ಭಾವನಾತ್ಮಕ ಹಾಗೂ ಮಾನಸಿಕ ಪರಿಣಾಮಗಳನ್ನು ಹೆಚ್ಚು ಆಳವಾಗಿ ಅನಾವರಣಗೊಳಿಸುತ್ತದೆ. ಟ್ರೇಲರ್ನಲ್ಲಿ ಜಾರ್ಜ್ಕುಟ್ಟಿ ತನ್ನ ಭೂತಕಾಲದ ಘಟನೆಗಳಿಂದ ಉಂಟಾದ ಮಾನಸಿಕ ಒತ್ತಡವನ್ನು ಹೊತ್ತುಕೊಂಡಿರುವಂತೆ ತೋರಿಸಲಾಗಿದ್ದು, ಅವನು ಸಂಪೂರ್ಣವಾಗಿ ಮುಕ್ತನಾದರೂ ಆ ಘಟನೆಗಳ ನೆರಳು ಅವನನ್ನು ಬಿಡದೆ ಹಿಂಬಾಲಿಸುತ್ತಿರುವುದನ್ನು ಚಿತ್ರಿಸಲಾಗಿದೆ. ಅವನ ಸುತ್ತ ನಡೆಯುತ್ತಿರುವ ನಿರಂತರ ಪೊಲೀಸ್ ಪರಿಶೀಲನೆ, ಮಾಧ್ಯಮಗಳ ಪ್ರಶ್ನೆಗಳು ಹಾಗೂ ತನಿಖಾಧಿಕಾರಿಗಳ ಸಂಶಯಗಳು ಟ್ರೇಲರ್ನ ಪ್ರಮುಖ ಅಂಶಗಳಾಗಿವೆ. ಆದರೆ ಜಾರ್ಜ್ಕುಟ್ಟಿ ಯಾವಾಗಲೂ ಒಂದೆ ಹೆಜ್ಜೆ ಮುಂಚಿತನಾಗಿರುವಂತೆ ಕಾಣುವ ದೃಶ್ಯಗಳು ಫ್ರಾಂಚೈಸಿಯ…
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ; 10 ವರ್ಷದ ಬಾಲಕ ದುರ್ಮರಣ
ಹನೂರು: ಮಲೆ ಮಹದೇಶ್ವರ ಬೆಟ್ಟ ಸಮೀಪದ ನಾಗಮಲೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿಗೆ ಒಳಗಾದ 10 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರು ಮೂಲದ ಹರ್ಷಿತ್ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಕುಟುಂಬದವರೊಂದಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಹರ್ಷಿತ್, ಭಾನುವಾರ ಬೆಳಿಗ್ಗೆ ನಾಗಮಲೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಬಾಲಕನನ್ನು ಎಳೆದೊಯ್ದ ಚಿರತೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆಯ ಬಳಿಕ ಸ್ಥಳೀಯರು ಹಾಗೂ ಕುಟುಂಬಸ್ಥರು ಬಾಲಕನಿಗಾಗಿ ಹುಡುಕಾಟ ನಡೆಸಿದ್ದು, ಸುಮಾರು ಅರ್ಧ ಗಂಟೆಯ ನಂತರ ಹರ್ಷಿತ್ನ ಮೃತದೇಹ ಪತ್ತೆಯಾಗಿದೆ. ಬಾಲಕನ ಕತ್ತು ಸೇರಿದಂತೆ ದೇಹದ ಹಲವೆಡೆ ಗಂಭೀರ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವಾಚರ್ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ…
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ
ಚೆನ್ನೈ: ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ತಮಿಳುನಾಡಿನಲ್ಲಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ ಮುಖ್ಯಸ್ಥ ವಿಜಯ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಚೆನ್ನೈನ ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು. ತಮಿಳು ಚಿತ್ರರಂಗದ ಸೂಪರ್ಸ್ಟಾರ್ ಹಾಗೂ ‘ದಳಪತಿ’ ಎಂದೇ ಖ್ಯಾತರಾಗಿರುವ ವಿಜಯ್ ಇನ್ನು ಮುಂದೆ ತಮಿಳುನಾಡಿನ ಆಡಳಿತ ನಡೆಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟ ಸದಸ್ಯರಿಗೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. C. Joseph Vijay enum naan 😭😭 #CMJosephVijay pic.twitter.com/AAbkokhsxV — Vijay Fans Trends (@VijayFansTrends) May 10, 2026 ನೂತನ ಸಚಿವರಾಗಿ ಬಸ್ಸಿ ಎನ್ ಆನಂದ್, ಆದವ್ ಅರ್ಜುನ, ಕೆ.ಎ. ಸೆಂಗೊಟ್ಟಯ್ಯನ್,…
