ಉಪಚುನಾವಣೆ; ಬಿಜೆಪಿಗೆ ಎರಡೂ ಕ್ಷೇತ್ರಗಳಲ್ಲಿ ಗೆಲುವಿನ ವಿಶ್ವಾಸ

ದಾವಣಗೆರೆ: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭಾರೀ ಅಂತರದಿಂದ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತದಿಂದ ಜನರು ಬೇಸತ್ತಿದ್ದು, ಬದಲಾವಣೆಯ ನಿರೀಕ್ಷೆಯಲ್ಲಿ ಇದ್ದಾರೆ ಎಂದು ಹೇಳಿದರು. “ಕಾಂಗ್ರೆಸ್‌ಗೆ ಅತಿರೇಕದ ಬಹುಮತವಿದೆ. ಜನರು ಈಗ ಸೂಕ್ತ ಪಾಠ ಕಲಿಸಲು ಸಿದ್ಧರಾಗಿದ್ದಾರೆ. ಎರಡೂ ಕ್ಷೇತ್ರಗಳ ಮತದಾರರು ಬಿಜೆಪಿಗೆ ಮತ ನೀಡಿ ಗೆಲುವು ಖಚಿತಪಡಿಸಬೇಕು” ಎಂದು ಮನವಿ ಮಾಡಿದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, “ಉಪಚುನಾವಣೆಯಲ್ಲಿ ಸೋಲು ಖಚಿತವಾಗಿರುವ ಕಾರಣದಿಂದ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಆರೋಪಿಸಿದರು. ರಾಜ್ಯದಲ್ಲಿ ರಾಜಕೀಯ ವಾತಾವರಣ ಬಿಜೆಪಿಗೆ ಅನುಕೂಲಕರವಾಗಿದೆ ಎಂದು ಹೇಳಿದ ಅವರು, “ನಮ್ಮ ಅಭ್ಯರ್ಥಿಗಳು ಎರಡೂ ಕ್ಷೇತ್ರಗಳಲ್ಲಿ ಭಾರೀ ಅಂತರದಿಂದ ಗೆಲ್ಲುತ್ತಾರೆ” ಎಂದು…

ಮಧ್ಯಪ್ರಾಚ್ಯ ಸಂಘರ್ಷದ ಕಾಟ: 2,100ಕ್ಕೂ ಹೆಚ್ಚು ಮಕ್ಕಳು ಸಾವು–ಗಾಯ – ಯುಎನ್

ವಿಶ್ವಸಂಸ್ಥೆ: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಪರಿಣಾಮವಾಗಿ 2,100ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ ಅಥವಾ ಗಾಯಗೊಂಡಿದ್ದಾರೆ ಎಂದು UNICEF ಉಪ ಕಾರ್ಯನಿರ್ವಾಹಕ ನಿರ್ದೇಶಕ ಟೆಡ್ ಚೈಬನ್ ತಿಳಿಸಿದ್ದಾರೆ. ನ್ಯೂಯಾರ್ಕ್‌ನ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇವಲ 23 ದಿನಗಳಲ್ಲೇ ಪ್ರದೇಶದಾದ್ಯಂತ ಮಕ್ಕಳು ಭಾರೀ ಬೆಲೆ ಕಟ್ಟುತ್ತಿದ್ದಾರೆ. ಈ ಸಂಘರ್ಷ ಇನ್ನಷ್ಟು ವಿಸ್ತರಿಸಿದರೆ ಲಕ್ಷಾಂತರ ಜನರಿಗೆ ಮಹಾ ದುರಂತವಾಗಲಿದೆ” ಎಂದು ಎಚ್ಚರಿಸಿದರು. ಮಕ್ಕಳ ಸಾವುನೋವುಗಳ ವಿವರ ನೀಡಿದ ಚೈಬನ್, ಇರಾನ್‌ನಲ್ಲಿ 206, ಲೆಬನಾನ್‌ನಲ್ಲಿ 118, ಇಸ್ರೇಲ್‌ನಲ್ಲಿ 4 ಮತ್ತು ಕುವೈತ್‌ನಲ್ಲಿ 1 ಮಗು ಸಾವನ್ನಪ್ಪಿದೆ ಎಂದು ಹೇಳಿದರು. “ಯುದ್ಧ ಆರಂಭವಾದ ಬಳಿಕ ಪ್ರತಿದಿನ ಸರಾಸರಿ 87 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಅಥವಾ ಗಾಯಗೊಳ್ಳುತ್ತಿದ್ದಾರೆ” ಎಂದು ಅವರು ವಿವರಿಸಿದರು. ಸಂಘರ್ಷದ ಪರಿಣಾಮವಾಗಿ ವ್ಯಾಪಕ ಮಟ್ಟದಲ್ಲಿ ಸ್ಥಳಾಂತರವೂ ನಡೆದಿದೆ. ಇರಾನ್‌ನಲ್ಲಿ ಸುಮಾರು 3.2 ಮಿಲಿಯನ್ ಜನರು, ಅದರಲ್ಲೂ 8.64 ಲಕ್ಷ ಮಕ್ಕಳು…

ಇರಾನ್ ಜೊತೆ ಮಾತುಕತೆ ಪ್ರಗತಿಯಲ್ಲಿವೆ ಎಂದ ಟ್ರಂಪ್; ಟೆಹ್ರಾನ್ ಸ್ಪಷ್ಟ ನಿರಾಕರಣೆ

ನ್ಯೂಯಾರ್ಕ್: ಇರಾನ್ ಜೊತೆ ಮಾತುಕತೆಗಳು ಮಹತ್ವದ ಹಂತ ತಲುಪಿದ್ದು ಒಪ್ಪಂದದ ಪ್ರಮುಖ ಅಂಶಗಳು ಸಿದ್ಧವಾಗಿವೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಆದರೆ, ಟೆಹ್ರಾನ್ ಈ ಹೇಳಿಕೆಯನ್ನು ತಳ್ಳಿ ಹಾಕಿದ್ದು ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ವರದಿಗಾರರೊಂದಿಗೆ ಮಾತನಾಡಿದ ಟ್ರಂಪ್, “ಒಪ್ಪಂದದ ಬಹುತೇಕ ಪ್ರಮುಖ ಅಂಶಗಳು ನಮ್ಮ ಬಳಿ ಇವೆ, ವಿಶೇಷವಾಗಿ ಪರಮಾಣು ಕಾರ್ಯಕ್ರಮವನ್ನು ನಿಯಂತ್ರಿಸುವ ವಿಷಯದಲ್ಲಿ” ಎಂದು ಹೇಳಿದರು. ಈ ಹೇಳಿಕೆಗಳ ನಂತರ ತೈಲ ಬೆಲೆಗಳಲ್ಲಿ ಇಳಿಕೆ ಹಾಗೂ ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡುಬಂದಿದೆ. ಹಾರ್ಮುಜ್ ಜಲಸಂಧಿಯ ವಿಚಾರದಲ್ಲೂ ಟ್ರಂಪ್ ಪ್ರಸ್ತಾಪಿಸಿ, ಜಾಗತಿಕ ಇಂಧನ ಸಾಗಣೆಗೆ ಪ್ರಮುಖವಾದ ಈ ಮಾರ್ಗವನ್ನು ತೆರೆಯಲು ಇರಾನ್ ಮುಂದಾಗಬೇಕು ಎಂದು ಒತ್ತಾಯಿಸಿದರು. ಜಾಗತಿಕ ತೈಲ ಸಾಗಣೆಯ ಸುಮಾರು 20% ಈ ಮಾರ್ಗದ ಮೂಲಕ ನಡೆಯುತ್ತದೆ ಎಂಬುದು ಗಮನಾರ್ಹ. ಟ್ರಂಪ್ ಪ್ರಕಾರ, ಅವರ ಪ್ರತಿನಿಧಿಗಳಾದ ಸ್ಟೀವ್…

ಕೊಲಂಬಿಯಾದಲ್ಲಿ ಸಿ-130 ಸೇನಾ ವಿಮಾನ ಪತನ: 66 ಸಾವು, 83 ಮಂದಿಗೆ ಗಾಯ

ಬೊಗೋಟಾ: ದಕ್ಷಿಣ ಕೊಲಂಬಿಯಾದ ಪುಟುಮಾಯೊ ಪ್ರದೇಶದಲ್ಲಿ ಸೈನಿಕ ಸಾರಿಗೆ ವಿಮಾನ ಪತನಗೊಂಡ ಪರಿಣಾಮ ಕನಿಷ್ಠ 66 ಮಂದಿ ಸಾವನ್ನಪ್ಪಿದ್ದು, 83 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಆಡಳಿತ ಮಾಹಿತಿ ನೀಡಿದೆ. ಪುಟುಮಾಯೊ ಗವರ್ನರ್ ಜಾನ್ ಗೇಬ್ರಿಯಲ್ ಮೋಲಿನಾ ಈ ಮಾಹಿತಿ ನೀಡಿದ್ದು, ದುರಂತವು ದೊಡ್ಡ ಮಾನವೀಯ ನಷ್ಟಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಅಪಘಾತಕ್ಕೀಡಾದ ವಿಮಾನವು ಸಿ-130 ಹರ್ಕ್ಯುಲಸ್ ಮಾದರಿಯದ್ದಾಗಿದ್ದು, ಇದರಲ್ಲಿ 114 ಪ್ರಯಾಣಿಕರು ಮತ್ತು 11 ಸಿಬ್ಬಂದಿ ಇದ್ದರು ಎಂದು ಕೊಲಂಬಿಯಾದ ಏರೋಸ್ಪೇಸ್ ಫೋರ್ಸ್ ಕಮಾಂಡರ್ ಕಾರ್ಲೋಸ್ ಸಿಲ್ವಾ ತಿಳಿಸಿದ್ದಾರೆ. ಪೋರ್ಟೊ ಲೆಗುಯಿಜಾಮೊದಿಂದ ಟೇಕ್ ಆಫ್ ಆಗುವ ವೇಳೆ ವಿಮಾನ ಪತನಗೊಂಡಿದೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ತಿಳಿಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ; ತನಿಖೆಗಾಗಿ ವಿಶೇಷ ತಂಡವನ್ನು ರವಾನಿಸಲಾಗಿದೆ. ಗಾಯಗೊಂಡ ಸೈನಿಕರಲ್ಲಿ ಕೆಲವರನ್ನು ತುರ್ತು ಚಿಕಿತ್ಸೆಗಾಗಿ ರಾಜಧಾನಿ ಬೊಗೋಟಾಗೆ ಸ್ಥಳಾಂತರಿಸಲಾಗಿದೆ. ಘಟನೆಯ ಬಗ್ಗೆ…

‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

ಮುಂಬೈ: ಮಲಯಾಳಂ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರ ‘ದೃಶ್ಯಂ 3’ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಇದೀಗ ಈ ಚಿತ್ರವು ಮೇ 21ರಂದು, ನಟ ಮೋಹನ್ ಲಾಲ್ ಅವರ ಹುಟ್ಟುಹಬ್ಬದಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಮೊದಲಿಗೆ ಏಪ್ರಿಲ್ 2ರಂದು ಬಿಡುಗಡೆಯಾಗಬೇಕಿದ್ದ ಚಿತ್ರವನ್ನು ತಯಾರಕರು ಮುಂದೂಡಿದ್ದು, ಹೊಸ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿ ಹಂಚಿಕೊಂಡ ಮೋಹನ್ ಲಾಲ್, “ಭೂತಕಾಲ ಎಂದಿಗೂ ಮೌನವಾಗಿರುವುದಿಲ್ಲ… ಅದು ಕಾಯುತ್ತದೆ. ಜಾರ್ಜ್‌ಕುಟ್ಟಿ ಮೇ 21, 2026ರಂದು ಬರುತ್ತಾನೆ” ಎಂದು ಬರೆದುಕೊಂಡಿದ್ದಾರೆ. ಈ ಚಿತ್ರದ ನಿರ್ದೇಶನವನ್ನು ಜೀತು ಜೋಸೆಫ್ ಮಾಡಿದ್ದು, ಬಿಡುಗಡೆ ಮುಂದೂಡಿಕೆಗೆ ಪಶ್ಚಿಮ ಏಷ್ಯಾದ ಉದ್ವಿಗ್ನತೆಯೂ ಒಂದು ಕಾರಣವಾಗಿರಬಹುದು ಎಂದು ವರದಿಗಳು ಸೂಚಿಸುತ್ತಿವೆ. ‘ದೃಶ್ಯಂ 3’ ಚಿತ್ರದಲ್ಲಿ ಮೋಹನ್ ಲಾಲ್ ಮತ್ತೆ ಜಾರ್ಜ್‌ಕುಟ್ಟಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಮೀನಾ, ಅನ್ಸಿಬಾ ಹಸನ್, ಎಸ್ತರ್ ಅನಿಲ್, ಆಶಾ ಶರತ್, ಸಿದ್ದಿಕ್ ಸೇರಿದಂತೆ ಪ್ರಮುಖ ಕಲಾವಿದರು ನಟಿಸಿದ್ದಾರೆ.…

ಮಧ್ಯಪ್ರಾಚ್ಯ ಸಂಘರ್ಷ: ಭಾರತೀಯರ ಸುರಕ್ಷತೆ, ಭದ್ರತೆಗೆ ಮೊದಲ ಆದ್ಯತೆ”: ಪ್ರಧಾನಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಭಾರತಕ್ಕೆ ಆರ್ಥಿಕ, ಭದ್ರತಾ ಹಾಗೂ ಮಾನವೀಯ ಸವಾಲುಗಳು ಎದುರಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಸಂಘರ್ಷದ ಕುರಿತು ಸದನದಲ್ಲಿ ಮಾತನಾಡಿದ ಅವರು, “ಪಶ್ಚಿಮ ಏಷ್ಯಾದ ಪರಿಸ್ಥಿತಿ ಕಳವಳಕಾರಿಯಾಗಿದೆ. ಈ ಬಿಕ್ಕಟ್ಟು ಈಗ ಮೂರು ವಾರಗಳನ್ನು ಮೀರಿ ತೀವ್ರಗೊಂಡಿದೆ. ಇದರ ಪರಿಣಾಮ ಜಾಗತಿಕ ಆರ್ಥಿಕತೆ ಮತ್ತು ಜನಜೀವನದ ಮೇಲೆ ಸ್ಪಷ್ಟವಾಗಿ ಕಾಣಿಸುತ್ತಿದೆ” ಎಂದು ಹೇಳಿದರು. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಈ ಕುರಿತು ಈಗಾಗಲೇ ಸದನಕ್ಕೆ ಮಾಹಿತಿ ನೀಡಿದ್ದಾರೆ ಎಂದು ಪ್ರಧಾನಿ ಉಲ್ಲೇಖಿಸಿದರು. ಭಾರತ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾತನಾಡಿದ ಮೋದಿ, “ಈ ಸಂಘರ್ಷವು ಭಾರತಕ್ಕೆ ಅನಿರೀಕ್ಷಿತ ಸವಾಲುಗಳನ್ನು ತಂದಿದೆ. ಅವು ಆರ್ಥಿಕ, ರಾಷ್ಟ್ರೀಯ ಭದ್ರತೆ ಹಾಗೂ ಮಾನವೀಯತೆಗೂ ಸಂಬಂಧಿಸಿದೆ. ಯುದ್ಧದಲ್ಲಿರುವ ಮತ್ತು ಪ್ರಭಾವಿತ ರಾಷ್ಟ್ರಗಳೊಂದಿಗೆ ನಮ್ಮ ವ್ಯಾಪಕ ವ್ಯಾಪಾರ…

ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ

ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. . ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡುಬಿದರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹಾಗೂ ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದರು. ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ಆರೋಪ ಬಂದ ಬಳಿಕ ಅಮಾನತು ಮಾಡುವ ಮೂಲಕ ತಕ್ಷಣದ ಕ್ರಮ‌ಕೈಗೊಳ್ಳಲಾಗಿದೆ. ವರದಿ ನೀಡುವಂತೆ ಸೂಚಿಸಲಾಗಿದ್ದು, ಕೊಡುತ್ತಾರೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು…

ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ; ಸಿಎಂ–ಡಿಸಿಎಂ ಸಾಥ್

ದಾವಣಗೆರೆ: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಇಂದು ನಾಮಪತ್ರ ಸಲ್ಲಿಸಿದರು. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದು ಬೆಂಬಲ ಸೂಚಿಸಿದರು. ಇದೇ ಸಂದರ್ಭದಲ್ಲಿ ಅಭ್ಯರ್ಥಿಯ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಭಾಗವಹಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿದ್ದರೂ, ಅಂತಿಮವಾಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದೇವೆ. ನಾನೂ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದೇನೆ. ಬ್ಲಾಕ್ ಸಮಿತಿ ಅಧ್ಯಕ್ಷ ಅಯುಬ್ ಸಹ ಉಪಸ್ಥಿತರಿದ್ದರು”…

ಇರಾನ್ ಯುದ್ಧದ ಹೊಡೆತ: ಭಾರತದ ಗಲ್ಫ್ ಆರ್ಥಿಕ ಜೀವನಾಡಿಗೆ ಭಾರಿ ಆಘಾತ

ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಯುದ್ಧ ತೀವ್ರಗೊಳ್ಳುತ್ತಿದ್ದಂತೆ, ಭಾರತದ ಆರ್ಥಿಕತೆಯ ಮೇಲೆ ಹೊಸ ಒತ್ತಡ ಉಂಟಾಗಿದೆ. ವ್ಯಾಪಾರ, ಇಂಧನ ಪೂರೈಕೆ ಮತ್ತು ವಿದೇಶಿ ಹಣ ರವಾನೆಯ ಪ್ರಮುಖ ಕೇಂದ್ರವಾಗಿರುವ ಗಲ್ಫ್ ಪ್ರದೇಶದೊಂದಿಗೆ ಭಾರತದ ಆಳವಾದ ಸಂಪರ್ಕ ಇದೀಗ ದುರ್ಬಲತೆಯಾಗಿ ಪರಿಣಮಿಸುತ್ತಿದೆ ಎಂದು *ದಿ ನ್ಯೂಯಾರ್ಕ್ ಟೈಮ್ಸ್* ವರದಿ ತಿಳಿಸಿದೆ. ಕೆಲವೇ ವಾರಗಳ ಹಿಂದೆ ಬಲವಾದ ಬೆಳವಣಿಗೆ, ನಿಯಂತ್ರಿತ ಹಣದುಬ್ಬರ ಮತ್ತು ಸ್ಥಿರ ವಿದೇಶಿ ವಿನಿಮಯ ಮೀಸಲುಗಳೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳಲ್ಲಿ ಭಾರತ ಮುಂಚೂಣಿಯಲ್ಲಿತ್ತು. ಆದರೆ ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ “ಪರಿಪೂರ್ಣ ಚಂಡಮಾರುತ” ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿ ವಿಶ್ಲೇಷಿಸಿದೆ. ಭಾರತದ ತೈಲ ಆಮದುಗಳಲ್ಲಿ ಸುಮಾರು 40% ಮತ್ತು ಅನಿಲ ಪೂರೈಕೆಯಲ್ಲಿ 80% ಗಲ್ಫ್ ಪ್ರದೇಶದ ಮೇಲೆ ಅವಲಂಬಿತವಾಗಿದ್ದು, ಇಂಧನ ಬೆಲೆಗಳ ಏರಿಕೆ ಈಗಾಗಲೇ ಆರ್ಥಿಕ ವ್ಯವಸ್ಥೆಯಲ್ಲಿ ಅಲೆಗಳನ್ನೆಬ್ಬಿಸಿದೆ. ಇದು ಬೆಳವಣಿಗೆ–ಹಣದುಬ್ಬರ ಸಮತೋಲನಕ್ಕೆ ದೊಡ್ಡ ಸವಾಲು ಎಸೆಯುತ್ತಿದೆ. ಗಲ್ಫ್…

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಟಿಕೆಟ್ ಹಂಚಿಕೆ ಕುರಿತಿದ್ದ ಕಗ್ಗಂಟಿಗೆ ಕಾಂಗ್ರೆಸ್ ಕೊನೆಗೂ ತೆರೆ ಎಳೆದಿದೆ. ಏಪ್ರಿಲ್ 9ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಅಭ್ಯರ್ಥಿ ಪಟ್ಟಿಯನ್ನು ಇಂದು ಭಾನುವಾರ ಬಿಡುಗಡೆ ಮಾಡಿದೆ. ದಾವಣಗೆರೆ ದಕ್ಷಿಣದಿಂದ ಸಮರ್ಥ್ ಮಲ್ಲಿಕಾರ್ಜುನ್ ಹಾಗೂ ಬಾಗಲಕೋಟೆಯಿಂದ ಉಮೇಶ್ ಮೇಟಿ ಇವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ದೃಡಪಡಿಸಿವೆ. ಉಪಚುನಾವಣೆಯ ಸನ್ನಾಹದಲ್ಲಿ ಕಾಂಗ್ರೆಸ್ ಈ ಬಾರಿ ಜಾಗರೂಕ ನಡೆ ತೆಗೆದುಕೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಗಟ್ಟಿಯಾದ ಸ್ಪರ್ಧೆಗೆ ತಯಾರಾಗಿದೆ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.