ನ.25,26ರಂದು ಬೆಂಗಳೂರಿನಲ್ಲಿ ‘ಕಂಬಳೋತ್ಸವ’ ತಯಾರಿ ಹೇಗಿದೆ ಗೊತ್ತಾ?

ಮಂಗಳೂರು: ಕರಾವಳಿಯ ಸಾಂಪ್ರದಾಯಿಕ ಕಂಬಳೋತ್ಸವದ ರಂಗು ರಾಜಧಾನಿ ಬೆಂಗಳೂರಿಗೂ ಪಸರಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು “ಬೆಂಗಳೂರು ಕಂಬಳ-ನಮ್ಮ ಕಂಬಳ’ ಹೆಸರಲ್ಲಿ ಹೊಸ ಕಂಬಳ ಜಗತ್ತು ಅನಾವರಣಗೊಳ್ಳಲಿದೆ.

ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ‘ಬೆಂಗಳೂರು ಕಂಬಳ-ನಮ್ಮ ಕಂಬಳ’ಕ್ಕೆ ಭರ್ಜರಿ ತಯಾರಿ ಸಾಗಿದ್ದು, ಈ ಸಂಬಂಧ ತುಳುನಾಡಿನಲ್ಲೂ ಕಾರ್ಯತಂತ್ರ ನಡೆಯುತ್ತಿದೆ. ಈ ಸಂಬಂಧ ಮಂಗಳೂರಿನಲ್ಲಿ ಬಾನುವಾರ ನಡೆದ ಸಭೆ ಕಂಬಳ ಕಸರತ್ತಿನ ಕೇಂದ್ರಬಿಂದುವಾಯಿತು.

ಅಶೋಕ್ ರೈ, ಶಾಸಕರು

ಶಾಸಕ ಅಶೋಕ ರೈ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆದ ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ , ಕಂಬಳ ಸಮಿತಿಯ ಪ್ರಮುಖರಾದ ಪಿ.ಆರ್‌. ಶೆಟ್ಟಿ, ಎರ್ಮಾಳ್‌ ರೋಹಿತ್‌ ಹೆಗ್ಡೆ, ಲೋಕೇಶ್‌, ವಿಜಯ ಕುಮಾರ್‌ ಕಂಗಿನಮನೆ, ಚಂದ್ರಹಾಸ್‌ ಸನಿಲ್‌, ಮುರಳೀಧರ್‌ ಸಹಿತ ಅನೇಕರು ಭಾಗವಹಿಸಿದ್ದರು.

ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಶಾಸಕ ಅಶೋಕ್ ರೈ, ರಾಜಧಾನಿಯಲ್ಲಿ ‘ಬೆಂಗಳೂರು ಕಂಬಳ-ನಮ್ಮ ಕಂಬಳ’ ಮೊದಲ ಪ್ರಯೋಗವಾಗಿದ್ದು, ಇದರಲ್ಲಿ 125ಕ್ಕೂ ಅಧಿಕ ಜತೆ ಕೋಣಗಳು ಭಾಗವಹಿಸಲಿದೆ. ಜೊತೆಗೆ 7 ಲಕ್ಷಕ್ಕೂ ಹೆಚ್ಚು ಜನರು ಈ ಜನಪದ ಕಲೆಯನ್ನು ಸಾಕ್ಷೀಕರಿಸುವ ನಿರೀಕ್ಷೆಯಿದೆ ಎಂದರು.

(ಸಾಂದರ್ಭಿಕ ಚಿತ್ರ)

ಕಂಬಳ ತಯಾರಿಯ ಸಡಗರ

  • ನವೆಂಬರ್‌ 23ರಂದು 125ಕ್ಕೂ ಹೆಚ್ಚು ಜತೆ ಕೋಣಗಳು ಮಂಗಳೂರಿನಿಂದ ಮೆರವಣಿಗೆ ಮೂಲಕ ಬೆಂಗಳೂರಿಗೆ ತೆರಳಲಿದೆ,

  • ಮಾರ್ಗ ಮಧ್ಯೆ ಹಾಸನದಲ್ಲಿ ಭವ್ಯ ಸ್ವಾಗತ ಸಿಗಲಿದೆ.

  • ಕಂಬಳ ಕೋಣಗಳ ಯಜಮಾನರ ಕೋರಿಕೆಯಂತೆ ಕೋಣಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ 6 ಟ್ಯಾಂಕರ್‌ ನೀರನ್ನು ದ.ಕ. ಜಿಲ್ಲೆಯಿಂದಲೇ ಕೊಂಡೊಯ್ಯಲಾಗತ್ತದೆ.

  • ಕಂಬಳದಲ್ಲಿ ವಿಜಯಿಯಾಗುವ ಕೋಣಗಳಿಗೆ ಚಿನ್ನದ ಬಹುಮಾನ ಸಿಗಲಿದೆ. ಪ್ರಥಮ ಬಹುಮಾನದ ಕೋಣಗಳಿಗೆ 2 ಪವನ್‌ ಬಂಗಾರ, ದ್ವಿತೀಯ ಸ್ಥಾನ ಗಳಿಸುವ ಕೋಣಗಳಿಗೆ 1 ಪವನ್‌ ಬಂಗಾರ, ಹಾಗೂ ಭಾಗವಹಿಸುವ ಪ್ರತೀ ಕೋಣಗಳಿಗೂ ಸ್ವರ್ಣ ಪದಕ ನೀಡಲಾಗುತ್ತದೆ.

  • ಕಂಬಳಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ 145 ಮೀಟರ್‌ ಉದ್ದದ ಜೋಡುಕರೆ ನಿರ್ಮಿಸಲಾಗುವುದು.

  • ಈ ಕಂಬಳೋತ್ಸವ ಜಾತ್ರೆಯ ವೈಭವಕ್ಕೆ ಸಾಕ್ಷಿಯಾಗಲಿದೆ. ಕಂಬಳ ವೀಕ್ಷಿಸಲು ಗ್ಯಾಲರಿ ನಿರ್ಮಿಸಲಾಗುತ್ತದೆ.

  • 150ಕ್ಕೂ ಹೆಚ್ಚು ಬಗೆಯ ಕರಾವಳಿ ಆಹಾರ, ತಿಂಡಿ ತಿನಿಸುಗಳು, ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆಯಲಾಗುತ್ತದೆ.

Related posts