ಸುಹಾಸ್ ಶೆಟ್ಟಿ ಕ್ರೂರ ಹತ್ಯೆಯ ತನಿಖೆಯನ್ನು NIAಗೆ ವರ್ಗಾಯಿಸಿ; ಬಿಜೆಪಿ ಪಟ್ಟು

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ಹಿಂದೂ ಸಮುದಾಯದಲ್ಲಿ ಅವರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಮಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸುಹಾಸ್ ಶೆಟ್ಟಿ ಅವರ ಕ್ರೂರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವರ್ಗಾಯಿಸಿ ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ನಾವು ಬಲವಾಗಿ ಒತ್ತಾಯಿಸುತ್ತೇವೆ ಎಂದಿದ್ದಾರೆ.

Related posts