Blog

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ನಡೆಯುತ್ತಿರುವ ಪರ-ವಿರೋಧ ಚರ್ಚೆಗಳ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಖಡಕ್ ಆಗಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಆರ್ಥಿಕವಾಗಿ ಹೆಚ್ಚು ಹೊರೆಯಾಗುತ್ತಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ ಸುಮಾರು 120 ಕೋಟಿಗೂ ಅಧಿಕ ಹಣ ಖರ್ಚಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ನಡುವೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ಪರಿಶೀಲನೆ ಹಾಗೂ ಪರಿಷ್ಕರಣೆ ಪ್ರಕ್ರಿಯೆಗೆ ಮುಂದಾಗಿದೆ. ಇದೇ ವಿಚಾರವನ್ನು ಅಸ್ತ್ರವಾಗಿಸಿಕೊಂಡಿರುವ ವಿಪಕ್ಷ ನಾಯಕರು, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಹೆಸರಿನಲ್ಲಿ ಸಂಪೂರ್ಣವಾಗಿ ರದ್ದು ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದಾರೆ.…

ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಅಂತ್ಯಗೊಳ್ಳುವ ಹಂತದಲ್ಲಿದ್ದು, ಭಾನುವಾರ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್ ಅವರ ಪ್ರಕಾರ, ಈ ಒಪ್ಪಂದವು ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಉದ್ವಿಗ್ನತೆಯನ್ನು ಕಡಿಮೆ ಮಾಡಲಿದ್ದು, ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಪ್ರಮುಖ ವ್ಯಾಪಾರ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಅಂತರರಾಷ್ಟ್ರೀಯ ಸಾಗಣೆಗೆ ಮತ್ತೆ ತೆರೆಯಲಾಗುವುದು. ತಮ್ಮ ಟ್ರೂತ್ ಸೋಶಿಯಲ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಟ್ರಂಪ್, “ಒಪ್ಪಂದಕ್ಕೆ ಸಹಿ ಹಾಕಿದ ತಕ್ಷಣ ಹಾರ್ಮುಜ್ ಜಲಸಂಧಿ ಎಲ್ಲಾ ದೇಶಗಳಿಗೆ ಮುಕ್ತವಾಗಲಿದೆ” ಎಂದು ತಿಳಿಸಿದ್ದಾರೆ. ವಿಶ್ವದ ಪ್ರಮುಖ ಇಂಧನ ಮಾರ್ಗಗಳಲ್ಲಿ ಒಂದಾಗಿರುವ ಹಾರ್ಮುಜ್ ಜಲಸಂಧಿ ಮೂಲಕ ಜಾಗತಿಕ ತೈಲ ಸಾಗಣೆಯ ದೊಡ್ಡ ಪ್ರಮಾಣ ಹಾದುಹೋಗುತ್ತದೆ. ಜಲಸಂಧಿ ತೆರೆಯುವುದರಿಂದ ಇಂಧನ ಮಾರುಕಟ್ಟೆಯ ಮೇಲಿನ ಒತ್ತಡ ಕಡಿಮೆಯಾಗುವ ನಿರೀಕ್ಷೆಯಿದೆ. ಇರಾನ್‌ನ ಪರಮಾಣು ಚಟುವಟಿಕೆಗಳ ಕುರಿತು ಮಾತನಾಡಿದ ಟ್ರಂಪ್,…

ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಉದ್ವಿಗ್ನತೆಯ ನಡುವೆಯೇ ಇರಾನ್ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸರ್ಕಾರಿ ಅಂತ್ಯಕ್ರಿಯೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವರದಿಗಳ ಪ್ರಕಾರ, ಅಂತ್ಯಕ್ರಿಯೆ ಸಮಾರಂಭಗಳು ಜುಲೈ 4, 2026ರಂದು ಆರಂಭವಾಗಲಿದ್ದು, ಜುಲೈ 9ರಂದು ಈಶಾನ್ಯ ಇರಾನ್‌ನ ಇಮಾಮ್ ರೆಜಾ ದೇಗುಲದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಫೆಬ್ರವರಿ 28, 2026ರಂದು ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಆದರೆ ಪ್ರಾದೇಶಿಕ ಉದ್ವಿಗ್ನತೆ ಮತ್ತು ಭದ್ರತಾ ಕಾರಣಗಳಿಂದಾಗಿ ಅಂತ್ಯಕ್ರಿಯೆಯನ್ನು ಹಲವು ತಿಂಗಳು ಮುಂದೂಡಲಾಗಿತ್ತು. ಅಂತ್ಯಕ್ರಿಯೆಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸೇರಿದಂತೆ ಇರಾನ್‌ನ ಉನ್ನತ ರಾಜಕೀಯ ಹಾಗೂ ಸೇನಾ ನಾಯಕರು ಭಾಗವಹಿಸುವ ನಿರೀಕ್ಷೆಯಿದ್ದು, ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ. ಅಧಿಕೃತ ವೇಳಾಪಟ್ಟಿಯಂತೆ, ಜುಲೈ 4 ಮತ್ತು 5ರಂದು ಟೆಹ್ರಾನ್‌ನ ಖಮೇನಿ ಮೊಸಲ್ಲಾದಲ್ಲಿ ಸಾರ್ವಜನಿಕ ವಿದಾಯ ಕಾರ್ಯಕ್ರಮಗಳು ನಡೆಯಲಿವೆ. ಜುಲೈ…

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಮತ್ತು ಸಚಿವರ ನೇಮಕಾತಿ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಾಮಾಜಿಕ ಮಾಧ್ಯಮ X ನಲ್ಲಿ ವಾಕ್ಸಮರ ನಡೆದಿದೆ. ರಾಜ್ಯದ 20 ಇಲಾಖೆಗಳಿಗೆ ಇನ್ನೂ ಸಚಿವರನ್ನು ನೇಮಕ ಮಾಡಿಲ್ಲ ಎಂದು ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಆಡಳಿತ ಯಂತ್ರ ಸ್ಥಗಿತಗೊಂಡಿದ್ದು, ಜನರ ಕೆಲಸಗಳು ವಿಳಂಬವಾಗುತ್ತಿವೆ ಎಂದು ಟೀಕಿಸಿದೆ. “20 ಇಲಾಖೆಗಳಿಗೆ ಇನ್ನೂ ಸಚಿವರಿಲ್ಲ. ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿರುವ ಕೆಲ ಸಚಿವರೂ ಅತೃಪ್ತರಾಗಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉಳಿದ ಖಾತೆಗಳ ಹಂಚಿಕೆಗೆ ಯಾವಾಗ ದಿನಾಂಕ ನಿಗದಿಪಡಿಸುತ್ತೀರಿ?” ಎಂದು ಬಿಜೆಪಿ ಪ್ರಶ್ನಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಹಿಂದಿನ ಬಿಜೆಪಿ ಸರ್ಕಾರಗಳ ಉದಾಹರಣೆಗಳನ್ನು ಉಲ್ಲೇಖಿಸಿ ತಿರುಗೇಟು ನೀಡಿದೆ. “2019ರಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆದಾಗ ಒಂದು ತಿಂಗಳ ಕಾಲ ಏಕಸದಸ್ಯ ಸಚಿವ ಸಂಪುಟವೇ ಇತ್ತು.…

ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

ಹೈದರಾಬಾದ್: ನಿರ್ದೇಶಕ ಭರತ್ ದರ್ಶನ್ ಅವರ ಬಹುನಿರೀಕ್ಷಿತ ತೆಲುಗು ಚಿತ್ರ ‘ಓ ಸುಕುಮಾರಿ!’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಪ್ರೇಮಿಗಳ ಗಮನ ಸೆಳೆದಿದೆ. ಗಂಗಾ ಎಂಟರ್‌ಟೈನ್‌ಮೆಂಟ್ಸ್ ನಿರ್ಮಿಸಿರುವ ಈ ಚಿತ್ರದಲ್ಲಿ ನಟ ತಿರುವೀರ್ ಮತ್ತು ನಟಿ ಐಶ್ವರ್ಯಾ ರಾಜೇಶ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೀಸರ್‌ನಲ್ಲಿ ಮದುವೆಯಾಗುವ ಆಸೆ ವ್ಯಕ್ತಪಡಿಸುವ ಯುವಕನ (ತಿರುವೀರ್) ಕಥೆ ತೆರೆದುಕೊಳ್ಳುತ್ತದೆ. ತನ್ನ ನಿರೀಕ್ಷೆಗಳಿಗೆ ತಕ್ಕ ಹುಡುಗಿಯನ್ನು ಹುಡುಕುವಂತೆ ಕುಟುಂಬದವರಿಗೆ ಹೇಳುವ ನಾಯಕ, ಆಕೆ ಮೃದು ಸ್ವಭಾವದವಳಾಗಿರಬೇಕು ಎಂದು ಬಯಸುತ್ತಾನೆ. ಬಳಿಕ ಐಶ್ವರ್ಯಾ ರಾಜೇಶ್ ಪಾತ್ರದೊಂದಿಗೆ ಆತನ ವಿವಾಹವಾಗುತ್ತದೆ. ಆದರೆ ಮದುವೆಯ ನಂತರ ಅನಿರೀಕ್ಷಿತ ತಿರುವೊಂದು ಕಥೆಗೆ ಹೊಸ ಆಯಾಮ ನೀಡುತ್ತದೆ. ‘ಓ ಸುಕುಮಾರಿ!’ ಭರತ್ ದರ್ಶನ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದ್ದು, ಗಂಗಾ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಮಹೇಶ್ವರ ರೆಡ್ಡಿ ಮೂಲಿ ನಿರ್ಮಿಸಿದ್ದಾರೆ. ವೈವಿಧ್ಯಮಯ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ತಿರುವೀರ್ ಈ ಚಿತ್ರದಲ್ಲಿ…

ರಾಷ್ಟ್ರವ್ಯಾಪಿ ಆಂದೋಲನವಾಗಿ ‘ಬೇಟಿ ಬಚಾವೋ ಬೇಟಿ ಪಡಾವೋ’ ವಿಕಸನ: ಸರ್ಕಾರ

ನವದೆಹಲಿ: ಹೆಣ್ಣು ಮಗುವಿನ ರಕ್ಷಣೆ, ಶಿಕ್ಷಣ ಮತ್ತು ಸಬಲೀಕರಣಕ್ಕಾಗಿ ಆರಂಭಿಸಲಾದ ‘ಬೇಟಿ ಬಚಾವೋ ಬೇಟಿ ಪಡಾವೋ’ (BBBP) ಯೋಜನೆ ಇದೀಗ ರಾಷ್ಟ್ರವ್ಯಾಪಿ ಸಾಮಾಜಿಕ ಆಂದೋಲನವಾಗಿ ರೂಪುಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ. 2015ರ ಜನವರಿ 22ರಂದು ಆರಂಭವಾದ ಈ ಯೋಜನೆಯು ಕುಸಿಯುತ್ತಿದ್ದ ಮಕ್ಕಳ ಲಿಂಗ ಅನುಪಾತವನ್ನು ಸುಧಾರಿಸುವುದು ಮತ್ತು ಹೆಣ್ಣು ಮಕ್ಕಳ ವಿರುದ್ಧದ ಲಿಂಗ ಆಧಾರಿತ ತಾರತಮ್ಯವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಶಿಕ್ಷಣ ಸಚಿವಾಲಯಗಳು ಜಂಟಿಯಾಗಿ ಯೋಜನೆಯನ್ನು ಜಾರಿಗೊಳಿಸುತ್ತಿವೆ. ಸರ್ಕಾರಿ ಸಂಸ್ಥೆಗಳು, ಸಮುದಾಯಗಳು, ಮಾಧ್ಯಮ ಮತ್ತು ನಾಗರಿಕ ಸಮಾಜದ ಸಹಭಾಗಿತ್ವದ ಮೂಲಕ ಹೆಣ್ಣು ಮಕ್ಕಳ ಸುರಕ್ಷಿತ ಜನನ, ಶಿಕ್ಷಣ ಮತ್ತು ಸಮಗ್ರ ಬೆಳವಣಿಗೆಗೆ ಒತ್ತು ನೀಡಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ. ಆರೋಗ್ಯ ನಿರ್ವಹಣಾ ಮಾಹಿತಿ ವ್ಯವಸ್ಥೆ (HMIS) ಅಂಕಿಅಂಶಗಳ…

ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

ವಾಷಿಂಗ್ಟನ್: ಮುಂದಿನ ವಾರ ಫ್ರಾನ್ಸ್‌ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ಶ್ವೇತಭವನ ದೃಢಪಡಿಸಿದೆ. ಜೂನ್ 17ರಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆಯಲಿರುವ ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರು ನಾಯಕರು ಭೇಟಿಯಾಗಿ ಭಾರತ-ಅಮೆರಿಕ ನಡುವಿನ ಪ್ರಸ್ತಾವಿತ ವ್ಯಾಪಾರ ಒಪ್ಪಂದದ ಮಾತುಕತೆಗಳ ಪ್ರಗತಿಯನ್ನು ಪರಿಶೀಲಿಸುವ ನಿರೀಕ್ಷೆಯಿದೆ. ವಾಷಿಂಗ್ಟನ್ ಮತ್ತು ನವದೆಹಲಿ ನಡುವಿನ ಮೊದಲ ಔಪಚಾರಿಕ ವ್ಯಾಪಾರ ಒಪ್ಪಂದದ ರೂಪುರೇಷೆಗಳ ಕುರಿತು ಚರ್ಚೆಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಆದರೆ ಶೃಂಗಸಭೆಯಲ್ಲೇ ಅಂತಿಮ ಒಪ್ಪಂದಕ್ಕೆ ಸಹಿ ಬೀಳುವ ಸಾಧ್ಯತೆ ಕಡಿಮೆ ಎಂದು ಹಿರಿಯ ಆಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ವರ್ಷ ನಡೆದ ಆಪರೇಷನ್ ಸಿಂಧೂರ್ ಬಳಿಕ ಮೋದಿ ಮತ್ತು ಟ್ರಂಪ್ ನಡುವಿನ ಮೊದಲ ನೇರ ದ್ವಿಪಕ್ಷೀಯ ಭೇಟಿಯಾಗಿರುವುದರಿಂದ ಈ ಸಭೆಯು ವಿಶೇಷ ಗಮನ ಸೆಳೆದಿದೆ.…

ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

ನವದೆಹಲಿ: ಕೈಲಾಸ ಮಾನಸ ಸರೋವರ ಯಾತ್ರೆ (KMY) 2026ರ ಮೊದಲ ತಂಡದ ಯಾತ್ರಿಕರ ಉದ್ಘಾಟನಾ ಸಮಾರಂಭವು ಶನಿವಾರ ನವದೆಹಲಿಯ ಜವಾಹರಲಾಲ್ ನೆಹರು ಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಪಬಿತ್ರ ಮಾರ್ಗರಿಟಾ ಅಧ್ಯಕ್ಷತೆ ವಹಿಸಿದ್ದರು. ಆಯ್ಕೆಯಾದ ಯಾತ್ರಿಕರನ್ನು ಅಭಿನಂದಿಸಿದ ಸಚಿವೆ, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಉದ್ಘಾಟಿಸಿದ ಹೊಸ ಒಗ್ಗಿಸುವಿಕೆ ಕೇಂದ್ರಗಳಲ್ಲಿ ಯಾತ್ರಿಕರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಯಾತ್ರಿಕರಿಗೆ ಸುರಕ್ಷಿತ ಹಾಗೂ ಸ್ಮರಣೀಯ ಅನುಭವ ಒದಗಿಸಲು ವಿವಿಧ ಸಚಿವಾಲಯಗಳು ಮತ್ತು ಉತ್ತರಾಖಂಡ, ಸಿಕ್ಕಿಂ ಹಾಗೂ ಉತ್ತರ ಪ್ರದೇಶ ಸರ್ಕಾರಗಳು ಕೈಗೊಂಡಿರುವ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಈ ನಡುವೆ, ಚೀನಾದಲ್ಲಿನ ಭಾರತದ ರಾಯಭಾರಿ ವಿಕ್ರಮ್ ದೊರೈಸ್ವಾಮಿ ಅವರು ಟಿಬೆಟ್‌ನ ಲಾಸಾಗೆ ಭೇಟಿ ನೀಡಿ, ಸ್ಥಳೀಯ ಅಧಿಕಾರಿಗಳೊಂದಿಗೆ ಯಾತ್ರಿಕರಿಗಾಗಿ ಮಾಡಲಾಗಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದರು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ವಿದೇಶಾಂಗ ಸಚಿವ…

ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

ನವದೆಹಲಿ: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಗುರಿ ಕೃಷಿಭೂಮಿ, ಹೊಲಗಳು ಮತ್ತು ಹಳ್ಳಿಗಳ ಪ್ರಗತಿಯೊಂದಿಗೆ ನೇರವಾಗಿ ಸಂಬಂಧಿಸಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ “ವಿಕ್ಷಿತ್ ಭಾರತ್@2047 ಗಾಗಿ ಸುಸ್ಥಿರ ಕೃಷಿ: ಸಂಪ್ರದಾಯ, ತಂತ್ರಜ್ಞಾನ ಮತ್ತು ಸ್ಪಷ್ಟ ಫಲಿತಾಂಶಗಳು” ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಸುಸ್ಥಿರ ಕೃಷಿ, ಸಂಶೋಧನೆ ಮತ್ತು ತಾಂತ್ರಿಕ ನಾವೀನ್ಯತೆಗಳು ಭಾರತದ ಭವಿಷ್ಯದ ಅಭಿವೃದ್ಧಿಯ ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಹೇಳಿದರು. ಕೃಷಿ ಕೇವಲ ಆರ್ಥಿಕ ಚಟುವಟಿಕೆಯಲ್ಲ, ಅದು ಭಾರತದ ಸಂಸ್ಕೃತಿ, ನಾಗರಿಕತೆ ಮತ್ತು ಜೀವನಶೈಲಿಯ ಭಾಗವಾಗಿದೆ ಎಂದು ಬಿರ್ಲಾ ಹೇಳಿದರು. ಆಹಾರ ಭದ್ರತೆ, ಗ್ರಾಮೀಣ ಸಮೃದ್ಧಿ ಮತ್ತು ಸಮಗ್ರ ಅಭಿವೃದ್ಧಿಗೆ ಕೃಷಿ ಕ್ಷೇತ್ರದ ಬಲವರ್ಧನೆ ಅಗತ್ಯ ಎಂದರು. ಹವಾಮಾನ ಬದಲಾವಣೆ ಮತ್ತು ಜಾಗತಿಕ ಸವಾಲುಗಳನ್ನು ಎದುರಿಸಲು ಸಾಂಪ್ರದಾಯಿಕ ಕೃಷಿ ಜ್ಞಾನವನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸಬೇಕು ಎಂದು…

ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಕಮೀಷನ್ ಮಿನಿಸ್ಟರ್ ಎಂದಿರುವ ಪ್ರತಿಪಕ್ಷ ನಾಯಕ ಡಿ.ಕೆ.ಶಿವಕುಮಾರ್, ರೈತರ ಜಮೀನಿನ ಮೇಲೆ ಬುಲ್ಡೋಜರ್ ಓಡಿಸಿ, ರಿಯಲ್ ಎಸ್ಟೇಟ್ ಸಾಮ್ರಾಜ್ಯ ಕಟ್ಟಲು ಹೊರಟಿರುವ ಅವರೇ, ಅನ್ನದಾತರಆಕ್ರೋಶದ ಜ್ವಾಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಸ್ಮವಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸುಮಾರು 470 ದಿನಗಳಿಂದ ಅನ್ನದಾತರು ನಡೆಸುತ್ತಿರುವ ಹೋರಾಟ, ಕಣ್ಣೀರು ಮತ್ತು ಆಕ್ರೋಶವನ್ನು ಲೆಕ್ಕಿಸದೆ, ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ 499 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕಬಳಿಸಲು ಅಂತಿಮ ಅಧಿಸೂಚನೆ ಹೊರಡಿಸಿರುವುದು ಕಾಂಗ್ರೆಸ್ ಸರ್ಕಾರದ ನಿಜವಾದ ಮುಖವನ್ನು ಬಯಲು ಮಾಡಿದೆ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ರೈತರನ್ನು ನೀವು ದುರ್ಬಲರೆಂದು ಭಾವಿಸಿದ್ದರೆ ಅದು ನಿಮ್ಮ ದೊಡ್ಡ ತಪ್ಪು! ಇನ್ನು ಕೇವಲ ಒಂದೂವರೆ ವರ್ಷದಲ್ಲಿ ನಿಮ್ಮ ಈ ಜನವಿರೋಧಿ ಸರ್ಕಾರ ಇತಿಹಾಸದ ಪುಟ ಸೇರಲಿದೆ ಎಂದು ಅವರು ಸಾಮಾಜಿಕ ಮಾಧ್ಯಮ X ನಲ್ಲಿ ಪ್ರತಿಕ್ರಿಯಿಸಿದ್ದಾರೆ. 2028ರಲ್ಲಿ ಬಿಜೆಪಿ ಸರ್ಕಾರ…