Blog

CWMA ಸಭೆ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ತೀರ್ಮಾನ: ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಬೆಳೆದಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯ ಬಳಿಕ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ರೈತರ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸಂಕಷ್ಟದ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು ಸರ್ಕಾರದ ಆದ್ಯತೆ. ಆದರೆ ಈ ವರ್ಷ ನಿರೀಕ್ಷಿತ ಮಳೆಯಾಗದ ಕಾರಣ ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದು, ಕುಡಿಯುವ ನೀರಿನ ಅಗತ್ಯವನ್ನೂ ಗಮನದಲ್ಲಿಟ್ಟುಕೊಳ್ಳಬೇಕಿದೆ ಎಂದು ಅವರು ಹೇಳಿದರು. ಜಿಲ್ಲೆಯ ಎಲ್ಲ ಶಾಸಕರು ಮುಖ್ಯಮಂತ್ರಿಗಳೊಂದಿಗೆ ಈ ಕುರಿತು ಚರ್ಚಿಸಿದ್ದು, ದೆಹಲಿಯಲ್ಲಿ ನಡೆಯಲಿರುವ CWMA ಹಾಗೂ CWRC ಸಭೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು. ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಕುಡಿಯುವ ನೀರಿನ ಅಗತ್ಯ, ಬೆಳೆಗಳ ಸ್ಥಿತಿ ಹಾಗೂ ರಾಜ್ಯದ…

ಕರ್ನಾಟಕದಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ನೇತೃತ್ವದ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ನಡೆದ Google I/O Connect India 2026 ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ರಾಜ್ಯದಲ್ಲಿ AI ಹಬ್ ಸ್ಥಾಪಿಸಿ, ಸ್ಟಾರ್ಟ್‌ಅಪ್‌ಗಳು, ಉದ್ಯಮಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಂಶೋಧಕರನ್ನು ಒಂದೇ ವೇದಿಕೆಗೆ ತಂದು AI ಆಧಾರಿತ ಸಂಶೋಧನೆ ಮತ್ತು ನವೀನ ಪರಿಹಾರಗಳಿಗೆ ಉತ್ತೇಜನ ನೀಡಲಾಗುವುದು ಎಂದು ಅವರು ಹೇಳಿದರು. “ಬೆಂಗಳೂರು ಈಗಾಗಲೇ ವಿಶ್ವದ ಪ್ರಮುಖ ತಂತ್ರಜ್ಞಾನ ನಗರಗಳಲ್ಲಿ ಒಂದಾಗಿದೆ. ಭಾರತದ ಸಾಫ್ಟ್‌ವೇರ್ ರಫ್ತಿನ ಶೇ.40ರಷ್ಟು ಕೊಡುಗೆ ಕರ್ನಾಟಕದ್ದಾಗಿದ್ದು, 17 ಸಾವಿರಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಈಗ ಕರ್ನಾಟಕವನ್ನು ಭಾರತದ AI ರಾಜಧಾನಿಯನ್ನಾಗಿ ರೂಪಿಸುವುದು ನಮ್ಮ ಗುರಿ,” ಎಂದು ಮುಖ್ಯಮಂತ್ರಿ ಹೇಳಿದರು. AI ಶಿಕ್ಷಣವನ್ನು ಶಾಲಾ…

ರಾಮಚಂದ್ರ ಗೌಡ ನಿಧನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಸಂತಾಪ

ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಅವರ ನಿಧನಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ತೀವ್ರ ಸಂತಾಪ ಸೂಚಿಸಿದ್ದಾರೆ. ಶೋಕ ಸಂದೇಶದಲ್ಲಿ ಮಾತನಾಡಿರುವ ಅವರು, ರಾಮಚಂದ್ರ ಗೌಡರು ನಿಷ್ಠಾವಂತ ಆರ್‌ಎಸ್‌ಎಸ್‌ ಸ್ವಯಂಸೇವಕರಾಗಿದ್ದು, ಬೆಂಗಳೂರು ನಗರ ಪಾಲಿಕೆ ಸದಸ್ಯರಾಗಿ ನಗರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಹಲವು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, ಸಚಿವರಾಗಿಯೂ ಸೇವೆ ಸಲ್ಲಿಸಿದ್ದು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿಬೆಳೆಸಿದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ಹೇಳಿದ್ದಾರೆ. “ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ. ಅವರ ಅಗಲಿಕೆಯಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ಕರುಣಿಸಲಿ” ಎಂದು ವಿ. ಸೋಮಣ್ಣ ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಗೌಡ ನಿಧನ; ನಾಯಕರ ಕಂಬನಿ

ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದ ಅವರು ಜನಸಂಘದ ಕಾಲದಿಂದಲೇ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡಿದ್ದು, ಕರ್ನಾಟಕದಲ್ಲಿ ಬಿಜೆಪಿ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದರು. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲೂ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ನಾಯಕ ಸಿ.ಟಿ. ರವಿ, ರಾಮಚಂದ್ರ ಗೌಡರನ್ನು ಪಕ್ಷದ ಸಂಸ್ಥಾಪಕ ಸದಸ್ಯರು, ಮಾರ್ಗದರ್ಶಕರು ಹಾಗೂ ಕಾರ್ಯಕರ್ತರ ಪ್ರೇರಣಾಸ್ತಂಭ ಎಂದು ಸ್ಮರಿಸಿದ್ದಾರೆ. “ರಾಮಚಂದ್ರ ಗೌಡರು ಕೇವಲ ಹಿರಿಯ ರಾಜಕಾರಣಿಯಲ್ಲ; ಸಾವಿರಾರು ಕಾರ್ಯಕರ್ತರಿಗೆ ಧೈರ್ಯ ತುಂಬಿದ, ತಪ್ಪು ತಿದ್ದಿ ದಾರಿತೋರಿಸಿದ ಹಿರಿಯರಾಗಿದ್ದರು. ಅಧಿಕಾರದಲ್ಲಿದ್ದರೂ ಸರಳತೆ, ಸಜ್ಜನಿಕೆ, ಸಿದ್ಧಾಂತನಿಷ್ಠೆ ಹಾಗೂ ಕಾರ್ಯಕರ್ತರ ಮೇಲಿನ ಪ್ರೀತಿಯನ್ನು ಎಂದಿಗೂ ಬಿಟ್ಟಿರಲಿಲ್ಲ,” ಎಂದು ಹೇಳಿದ್ದಾರೆ. 1992ರ ಚಿಕ್ಕಮಗಳೂರು ಯುವ…

“ಗೃಹ ಸಚಿವ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ಬ್ಯುಸಿ’; ಕಲಬುರಗಿ ಜೈಲು ಕೈದಿಗಳ ಪರಾರಿ ಬಗ್ಗೆ ವಿಜಯೇಂದ್ರ ಟೀಕೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಪರಾರಿಯಾದ ಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಗೃಹ ಸಚಿವರ ತವರಲ್ಲೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಬಿಜೆಪಿ ಟೀಕಿಸಿದೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ವ್ಯಸ್ತರಾಗಿದ್ದಾರೆ. ಅದನ್ನು ಮುಗಿಸಿ ಇಲ್ಲಿಗೆ ಬರುತ್ತಾರೆ” ಎಂದು ವ್ಯಂಗ್ಯವಾಡಿದರು. ಇತ್ತೀಚೆಗೆ ಜುಲೈ 3ರಂದು ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೋ ಪ್ರಕರಣದ ಆರೋಪಿ ಕೈಕೋಳವನ್ನು ಬಿಚ್ಚಿಕೊಂಡು ಪರಾರಿಯಾಗಿದ್ದ ಘಟನೆ ನಡೆದಿತ್ತು. ಅದರ ಬೆನ್ನಲ್ಲೇ ಇದೀಗ ಕೇಂದ್ರ ಕಾರಾಗೃಹದಿಂದಲೇ ಮೂವರು ಶಿಕ್ಷಿತ ಕೈದಿಗಳು ತಪ್ಪಿಸಿಕೊಂಡಿರುವುದು ಕಲಬುರಗಿ ಜಿಲ್ಲೆಯ ಭದ್ರತಾ ವ್ಯವಸ್ಥೆ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ಪವನ್ ಕಲ್ಯಾಣ್; ಪತ್ನಿ ಮಾಹಿತಿ

ಹೈದರಾಬಾದ್: ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಪತ್ನಿ ಅನ್ನಾ ಲೆಜ್ನೇವಾ ತಿಳಿಸಿದ್ದಾರೆ. ಎರಡೂ ಭುಜಗಳಲ್ಲಿ ತೀವ್ರ ರೋಟೇಟರ್ ಕಫ್ ಗಾಯ ಉಂಟಾಗಿದ್ದ ಹಿನ್ನೆಲೆಯಲ್ಲಿ ವೈದ್ಯರು ಸುಮಾರು ಮೂರೂವರೆ ಗಂಟೆಗಳ ಕಾಲ ಅವರ ಬಲ ಭುಜಕ್ಕೆ ಶಸ್ತ್ರಚಿಕಿತ್ಸೆ ನಡೆಸಿದ್ದರು. ಆಸ್ಪತ್ರೆಯಲ್ಲಿ ಪವನ್ ಕಲ್ಯಾಣ್ ಅವರನ್ನು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಭೇಟಿ ಮಾಡಿದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಅನ್ನಾ, “ಪವನ್ ಅವರು ತಮ್ಮ ನೋವನ್ನು ಎಂದಿಗೂ ತೋರಿಸಿಕೊಳ್ಳುವುದಿಲ್ಲ. ಜೀವನದ ಹೊರೆ ಅವರ ದೈಹಿಕ ನೋವಿಗಿಂತಲೂ ದೊಡ್ಡದಾಗಿರುತ್ತದೆ. ಅವರು ಅಪರೂಪಕ್ಕೆ ಮಾತ್ರ ನೋವಿನ ಬಗ್ಗೆ ಮಾತನಾಡುತ್ತಾರೆ, ಅದು ಸಹ ನೋವು ಅತಿಯಾಗಿ ಹೆಚ್ಚಾದಾಗ ಮಾತ್ರ,” ಎಂದು ಬರೆದುಕೊಂಡಿದ್ದಾರೆ. “ಸದ್ಯ ಅವರಿಗೆ ಉತ್ತಮ ಆರೈಕೆ ನೀಡುವುದು ನನ್ನ…

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳ ಪರಾರಿ; ಗೃಹ ಸಚಿವರ ತಾವರಲ್ಲೇ ಅವಾಂತರ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಜೈಲಿನ ಬ್ಯಾರಕ್‌ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಗಳನ್ನು ಬಳಸಿ ಕಾಂಪೌಂಡ್ ಗೋಡೆ ಏರಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ್ ಮತ್ತು ಸಾಗರ್ ಎಂದು ಗುರುತಿಸಲಾಗಿದೆ. ಬೀದರ್ ಜಿಲ್ಲೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಇವರು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ 15ರಿಂದ 20 ಅಡಿ ಎತ್ತರದ ಜೈಲು ಗೋಡೆ ಹಾರಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲಿನ ಭದ್ರತಾ ವ್ಯವಸ್ಥೆ, ಬ್ಯಾರಕ್‌ಗಳು ಹಾಗೂ ಕಾಂಪೌಂಡ್ ಗೋಡೆಯ ಪರಿಶೀಲನೆ ನಡೆಸಿರುವ ಅಧಿಕಾರಿಗಳು,…

ಮಲೆನಾಡಿನಲ್ಲಿ ಮಳೆ ಹಿನ್ನಡೆ; ಲಿಂಗನಮಕ್ಕಿ, ಭದ್ರಾ ಜಲಾಶಯಗಳ ಒಳಹರಿವು ಕುಸಿತ

ಶಿವಮೊಗ್ಗ: ಕಳೆದ ವಾರ ಧಾರಾಕಾರ ಮಳೆಗೆ ಸಾಕ್ಷಿಯಾಗಿದ್ದ ಮಲೆನಾಡಿನಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಮುಂಗಾರು ದುರ್ಬಲಗೊಂಡಿದ್ದು, ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಬಿಸಿಲಿನ ವಾತಾವರಣ ಹೆಚ್ಚಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಮಳೆ ಕೊರತೆಯಿಂದ ಪ್ರಮುಖ ಜಲಾಶಯಗಳ ಒಳಹರಿವು ಕುಸಿದಿದ್ದು, ಭತ್ತದ ನಾಟಿ ಕಾರ್ಯವೂ ಇನ್ನೂ ಆರಂಭವಾಗಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಅಕ್ಕಿ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜುಲೈ 13ರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪಶ್ಚಿಮಘಟ್ಟ ಪ್ರದೇಶಗಳಾದ ಯಡೂರು (10 ಮಿ.ಮೀ.), ಚಕ್ರಾ (10 ಮಿ.ಮೀ.), ಮಾಸ್ತಿಕಟ್ಟೆ (8 ಮಿ.ಮೀ.), ಮಾಣಿ (7 ಮಿ.ಮೀ.), ಸಾವೇಹಕ್ಲು (6 ಮಿ.ಮೀ.) ಹಾಗೂ ಹುಲಿಕಲ್ (5 ಮಿ.ಮೀ.)ಗಳಲ್ಲಿ ಮಾತ್ರ ತುಸು ಮಳೆಯಾಗಿದೆ. ಶಿವಮೊಗ್ಗ, ಸೊರಬ ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆ ಅತಿ ಕಡಿಮೆಯಾಗಿದೆ. ಜಲಾಶಯಗಳ ಮಾಹಿತಿಯಂತೆ, ಲಿಂಗನಮಕ್ಕಿ ಜಲಾಶಯಕ್ಕೆ 4,999 ಕ್ಯೂಸೆಕ್ ಒಳಹರಿವು…

ಹತ್ತಾರು ಬಡ ಕುಟುಂಬಗಳಿಗೆ ಮನೆ ಭಾಗ್ಯ.. ಇದೀಗ ಸರ್ಕಾರಿ ಶಾಲೆಗೆ ಡಿಜಿಟಲ್ ಸ್ಪರ್ಶ.. ಬಿಜೂರು ಶಾಲೆಗೆ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಕೊಡುಗೆ ನೀಡಿದ ಗೋವಿಂದ ಬಾಬು ಪೂಜಾರಿ

ಉಡುಪಿ: ಬರಡು ಭೂಮಿಗೆ ಕುಡಿಯುವ ನೀರು ಹರಿಸಿ ಆಧುನಿಕ ಭಗೀರಥ ಎಂದು ಕರೆಸಿಕೊಂಡಿರುವ ಉದ್ಯಮಿ, ಹೆಸರಾಂತ ಸಮಾಜ ಸೇವಕ ಡಾ.ಗೋವಿಂದ ಬಾಬು ಪೂಜಾರಿ, ಕರ್ನಾಟಕದ ಹಲವೆಡೆ 50ಕ್ಕೂ ಹೆಚ್ಚು ಕುಟುಂಬಗಳಿಗೆ ಮನೆಗಳನ್ನು ಉಚಿತವಾಗಿ ನಿರ್ಮಿಸಿ ಕೊಟ್ಟು ಆಧುನಿಕ ಕರ್ಣ ಎನಿಸಿಕೊಂಡಿದ್ದಾರೆ. ಇದೀಗ ಕರಾವಳಿಯ ಉಡುಪಿ ಸಮೀಪದ ಬಿಜೂರಿನ ಸರ್ಕಾರಿ ಶಾಲೆಯನ್ನು ಐಟಿ ಕಂಪನಿಗೂ ಸಾಟಿಯಿಲ್ಲದ ರೀತಿ ಡಿಜಿಟಲ್ ವ್ಯವಸ್ಥೆಯೊಂದಿಗೆ ಅಭಿವೃದ್ಧಿಪಡಿಸಿ ದೇಶದ ಗಮನಸೆಳೆದಿದ್ದಾರೆ. ಖಾಸಗಿ ಶಾಲೆಗಳ ಸೌಲಭ್ಯ ಸರ್ಕಾರಿ ಶಾಲೆಗಳಲ್ಲಿ ಸಿಗಲ್ಲ ಎಂಬ ಅಭಿಪ್ರಾಯ ಹಲವರದ್ದು. ಆದರೆ, ದುಬಾರಿ ಶುಲ್ಕ ನೀಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಸಾಮರ್ಥ್ಯ ಬಹುತೇಕ ಜನರಿಗೆ ಇಲ್ಲ. ಇಂತಹ ಸಂದರ್ಭದಲ್ಲಿ ತನ್ನೂರಿನ ಮಕ್ಕಳಿಗಾಗಿ ಬೈಂದೂರು ಸಮೀಪದ ಬಿಜೂರಿನ ಸರ್ಕಾರಿ ಶಾಲೆಯನ್ನೇ ದತ್ತು ಪಡೆದಿರುವ ChefTalk ಕಂಪನಿಯ ಮಾಲೀಕ ಡಾ.ಗೋವಿಂದ ಬಾಬು ಪೂಜಾರಿ ಎಲ್ಲರಿಗೂ, ಆ ಶಾಲೆಯನ್ನು ಯಾವ ಕಾರ್ಪೊರೇಟ್ ಶಾಲೆಗೂ…

ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

ಬೆಂಗಳೂರು: ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ದೇಣಿಗೆಗಳ ಭದ್ರತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆ ಹೆಚ್ಚಿಸಲು ಕರ್ನಾಟಕ ಸರ್ಕಾರ ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಜಾರಿಗೊಳಿಸಿದೆ. ಹೊಸ ನಿಯಮದಂತೆ, ಎಲ್ಲಾ ದೇವಾಲಯಗಳಲ್ಲಿ ಹುಂಡಿಗಳನ್ನು ನಾಲ್ಕೂ ದಿಕ್ಕಿನಿಂದ ಆವರಿಸುವಂತೆ ಸಿಸಿಟಿವಿ ಅಥವಾ ವೆಬ್ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿದ್ದು, ದೃಶ್ಯಗಳನ್ನು ಕೇಂದ್ರ ಸರ್ವರ್‌ನಲ್ಲಿ ಸಂಗ್ರಹಿಸಲಾಗುತ್ತದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮುಜರಾಯಿ ಇಲಾಖೆ ಮತ್ತು ಪೊಲೀಸರಿಂದ ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತದೆ. ಭಕ್ತರ ಅನುಕೂಲಕ್ಕಾಗಿ QR ಕೋಡ್ ಮೂಲಕ ಡಿಜಿಟಲ್ ದೇಣಿಗೆ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಅದನ್ನು ದೇವಾಲಯದ ಲೆಕ್ಕಪತ್ರ ವ್ಯವಸ್ಥೆಗೆ ಸಂಪರ್ಕಿಸಲಾಗುತ್ತದೆ. QR ಕೋಡ್‌ನಲ್ಲಿ ಬ್ಯಾಂಕ್ ಹಾಗೂ IFSC ವಿವರಗಳನ್ನು ಪ್ರದರ್ಶಿಸಬೇಕು. ಹುಂಡಿ ಎಣಿಕೆಗೆ ಕಂದಾಯ ಇಲಾಖೆಯ ಅಧಿಕಾರಿಗಳ ಹಾಜರಾತಿ ಕಡ್ಡಾಯವಾಗಿದ್ದು, ದೊಡ್ಡ ದೇವಾಲಯಗಳಲ್ಲಿ ವಾರಕ್ಕೊಮ್ಮೆ ಹಾಗೂ ಇತರ ದೇವಾಲಯಗಳಲ್ಲಿ ಎರಡು ವಾರಕ್ಕೊಮ್ಮೆ ಎಣಿಕೆ ನಡೆಸಬೇಕು. ಎಣಿಕೆ ವೇಳೆ ದೊರೆಯುವ…