ಬಿಷ್ಕೆಕ್: ಕಿರ್ಗಿಸ್ತಾನ್ ರಾಜಧಾನಿ ಬಿಷ್ಕೆಕ್ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅರ್ಮೇನಿಯಾ ಪ್ರಧಾನಿ ನಿಕೋಲ್ ಪಶಿನಿಯಾನ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ರಕ್ಷಣೆ, ಆರ್ಥಿಕತೆ, ಐಟಿ, ಬಾಹ್ಯಾಕಾಶ, ಔಷಧ, ಶಿಕ್ಷಣ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ-ಅರ್ಮೇನಿಯಾ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಇಬ್ಬರೂ ನಾಯಕರು ಚರ್ಚಿಸಿದರು. ಇತ್ತೀಚಿನ ವರ್ಷಗಳಲ್ಲಿ ಉಭಯ ದೇಶಗಳ ರಕ್ಷಣಾ ಸಹಕಾರ ಹೆಚ್ಚಾಗಿದೆ. ಭಾರತದಿಂದ ಪಿನಾಕ ರಾಕೆಟ್ ಲಾಂಚರ್, ಆಕಾಶ್ ವಾಯು ರಕ್ಷಣಾ ವ್ಯವಸ್ಥೆ, ಸ್ವಾತಿ ರೇಡಾರ್, ATAGS ಫಿರಂಗಿ ಹಾಗೂ ಆಂಟಿ-ಡ್ರೋನ್ ವ್ಯವಸ್ಥೆಗಳನ್ನು ಅರ್ಮೇನಿಯಾ ಖರೀದಿಸಿದೆ. ಮುಂದಿನ ದಿನಗಳಲ್ಲಿ ರಕ್ಷಣಾ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆಯೂ ಚರ್ಚೆ ನಡೆದಿದೆ. ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳನ್ನು ಬಲಪಡಿಸುವ ಅಗತ್ಯದ ಬಗ್ಗೆಯೂ ಮೋದಿ ಹಾಗೂ ಪಶಿನಿಯಾನ್ ಮಾತುಕತೆ ನಡೆಸಿದರು.…
Blog
ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧನ
ಬೆಂಗಳೂರು: ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ ಮಧ್ಯವರ್ತಿ ಹಾಗೂ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಅವರನ್ನು ಸಿಐಡಿ ಬಂಧಿಸಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ನಿವಾಸಿಯಾಗಿರುವ ಕನ್ನಾಳೆ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೂ ಆಗಿದ್ದಾರೆ. ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು, ಬಳಿಕ ಭಾಲ್ಕಿಯಲ್ಲಿರುವ ಅವರ ಮನೆಗಳಲ್ಲೂ ಶೋಧ ನಡೆಸಿದ್ದಾರೆ. ಗ್ಯಾನೇಂದ್ರ ಕುಮಾರ್ ಮತ್ತು ಬಸವರಾಜ್ ಕನ್ನಾಳೆ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 9ರವರೆಗೆ ಸಿಐಡಿ ಕಸ್ಟಡಿಗೆ ನೀಡಲಾಗಿದೆ. ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ? ತನಿಖೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಸಿಐಡಿಗೆ ಲಭ್ಯವಾಗಿದೆ. ಪರೀಕ್ಷೆಗಳ ಉಸ್ತುವಾರಿ ಹಾಗೂ ಪರೀಕ್ಷಾ ನಿಯಂತ್ರಕರಾಗಿದ್ದ ಗ್ಯಾನೇಂದ್ರ ಕುಮಾರ್ ಅವರೇ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಮುಖ ಸೂತ್ರಧಾರ ಎನ್ನಲಾಗಿದೆ.…
ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಬೆಂಗಳೂರು ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯ ಮುಂದುವರಿದ ಭಾಗವಾಗಿ, ನಗರದ ವಿವಿಧೆಡೆ ವಶಕ್ಕೆ ಪಡೆಯಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಸೋಮವಾರ ಗಡಿಪಾರು ಪ್ರಕ್ರಿಯೆಗಾಗಿ ಕಳುಹಿಸಲಾಗಿದೆ. ನಗರದ 10 ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದ್ದ ಇವರನ್ನು ಎಸ್ಎಂವಿಟಿ ಬೆಂಗಳೂರು ರೈಲು ನಿಲ್ದಾಣದಿಂದ ಪಶ್ಚಿಮ ಬಂಗಾಳದ ಮಾಲ್ಡಾ ರೈಲು ನಿಲ್ದಾಣಕ್ಕೆ ರೈಲಿನಲ್ಲಿ ಕರೆದೊಯ್ಯಲಾಯಿತು. 31 ಮಂದಿಯನ್ನು 20 ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಕರೆದೊಯ್ದಿದ್ದು, ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮಾಲ್ಡಾ ತಲುಪುವ ನಿರೀಕ್ಷೆಯಿದೆ. ಬಳಿಕ ಅಲ್ಲಿಂದ ಮುಂದಿನ ಗಡಿಪಾರು ಪ್ರಕ್ರಿಯೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಈ ಕುರಿತು ಮಾಹಿತಿ ನೀಡಿದ್ದು, ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ, ಅಕ್ರಮ ವಲಸಿಗರ ಕುರಿತು ಮಾಹಿತಿ ಇದ್ದರೆ ಪೊಲೀಸರಿಗೆ…
‘ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ, ಸಿಎಂಗೆ ದುಬಾರಿ ಶಾಲು’: ಡಿಕೆಶಿ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸದಿರುವ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದು, ಕೂಡಲೇ ಮಕ್ಕಳಿಗೆ ಶೂ-ಸಾಕ್ಸ್ ವಿತರಿಸುವಂತೆ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅಶೋಕ್, “ಲಕ್ಷಾಂತರ ರೂಪಾಯಿ ಮೌಲ್ಯದ Louis Vuitton ಬ್ರ್ಯಾಂಡ್ ಶಾಲು ಧರಿಸಿ ಮೆರೆಯುವ ನಿಮಗೆ ಸರ್ಕಾರಿ ಶಾಲೆಯ ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ ಹೋಗುತ್ತಿರುವುದು ಕಾಣುತ್ತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ. ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದಿದ್ದರೂ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಇನ್ನೂ ಶೂ ಮತ್ತು ಸಾಕ್ಸ್ ನೀಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ಇದರ ಜೊತೆಗೆ, ಸಕ್ಕರೆ ಬೆಲೆ ಏರಿಕೆಯ ನೆಪವೊಡ್ಡಿ ಕೆಲವೆಡೆ…
ರಾಹುಲ್ ಗಾಂಧಿ ವಿರುದ್ಧ FIR ಗೆ ಕಾಂಗ್ರೆಸ್ ಆಕ್ರೋಶ; ದೇಶವ್ಯಾಪಿ ಪ್ರತಿಭಟನೆಗೆ ಕರೆ
ನವದೆಹಲಿ: ಉತ್ತರಾಖಂಡದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಎನ್ನಲಾದ “ಶುದ್ಧೀಕರಣ”ದ ವಿರುದ್ಧ ರಾಹುಲ್ ಗಾಂಧಿ ಕ್ರಮಕ್ಕೆ ಆಗ್ರಹಿಸಿದ ಮರುದಿನವೇ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದು “ಬೇರೆಯವರನ್ನು ದೂಷಿಸುವವರು ತಮ್ಮದೇ ತಪ್ಪನ್ನು ಮಾಡುತ್ತಿರುವಂತಿದೆ” ಎಂದು ವೇಣುಗೋಪಾಲ್ ಎಕ್ಸ್ನಲ್ಲಿ ಟೀಕಿಸಿದ್ದಾರೆ. ಬಿಜೆಪಿ ಜಾತಿ ಆಧಾರಿತ ತಾರತಮ್ಯವನ್ನು ಸಮರ್ಥಿಸುತ್ತಿದೆ ಎಂದು ಆರೋಪಿಸಿದ ಅವರು, ದಲಿತರ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ರಾಜ್ಯದ ಸಂಪೂರ್ಣ ಆಡಳಿತ ವ್ಯವಸ್ಥೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿದರು. ಇದು ಸಂವಿಧಾನ ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯದ ಮೌಲ್ಯಗಳ ಮೇಲಿನ ದಾಳಿ ಎಂದು ವೇಣುಗೋಪಾಲ್ ಆರೋಪಿಸಿದರು. ಈ ವಿಚಾರದಲ್ಲಿ ಕಾಂಗ್ರೆಸ್…
ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರಿನಲ್ಲಿ ನಿರ್ಮಿಸಲಾಗಿರುವ ವೃಕ್ಷೋದ್ಯಾನವನ್ನು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಲೋಕಾರ್ಪಣೆ ಮಾಡಿದರು. ಶ್ರೀ ಬಸಲಿಂಗ ಸ್ವಾಮೀಜಿ ಹಾಗೂ ಶ್ರೀ ಸಿದ್ದಲಿಂಗ ದೇವರು ತಾಳಿಕೋಟಿ ಅವರ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ‘ಪ್ರಕೃತಿಯಲ್ಲಿಯೇ ದೇವರನ್ನು ಕಾಣಬೇಕು’ ಎಂಬ ಸಂದೇಶ ಇಂದಿನ ಸಂದರ್ಭದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಮರ-ಗಿಡಗಳನ್ನು ಬೆಳೆಸುವುದು ಕೇವಲ ಪರಿಸರ ಸಂರಕ್ಷಣೆಯಲ್ಲ; ಮುಂದಿನ ಪೀಳಿಗೆಯ ಬದುಕನ್ನು ಸುರಕ್ಷಿತಗೊಳಿಸುವ ಕಾರ್ಯವೂ ಆಗಿದೆ ಎಂದರು. ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆಶಯದಂತೆ ಸಾವಳಗಸಂಗದ ಬರಡು ಗುಡ್ಡವನ್ನು ಹಸಿರು ಪ್ರದೇಶವನ್ನಾಗಿ ರೂಪಿಸುವ ಸಂಕಲ್ಪವನ್ನು ಶಾಸಕ ಯಶವಂತರಾಯಗೌಡ ಪಾಟೀಲರು ಕೈಗೊಂಡಿರುವುದು ಶ್ಲಾಘನೀಯ. ಅವರ ಜನಪರ ಕಾರ್ಯಗಳು ಸಜ್ಜನರಿಗೆ ಅಧಿಕಾರ ದೊರೆತರೆ ಸಮಾಜಕ್ಕೆ ಒಳಿತಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಗಿವೆ…
ರಾಯರೆಡ್ಡಿ ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿಸಿ, ಇಲ್ಲವೇ ಸಚಿವ ಸ್ಥಾನದಿಂದ ವಜಾ ಮಾಡಿ- ಆರ್. ಅಶೋಕ್
ಬೆಂಗಳೂರು: ಸಚಿವ ಬಸವರಾಜ ರಾಯರೆಡ್ಡಿ ಅವರ ಧಾರ್ಮಿಕ ಹೇಳಿಕೆಯನ್ನು ಖಂಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಮಧ್ಯಪ್ರವೇಶಿಸಿ ಸಚಿವರಿಂದ ಸಾರ್ವಜನಿಕ ಕ್ಷಮೆಯಾಚನೆ ಮಾಡಿಸಬೇಕು. ಇಲ್ಲವಾದಲ್ಲಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಶೋಕ್, “ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ- ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ’!” ಎಂದು ವ್ಯಂಗ್ಯವಾಡಿದ್ದಾರೆ. ಸಚಿವ ಬಸವರಾಜ ರಾಯರೆಡ್ಡಿ ಅವರು “ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ” ಎಂದು ಹೇಳಿರುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಅಶೋಕ್ ಆರೋಪಿಸಿದ್ದಾರೆ. “ಧರ್ಮದ ವಿಚಾರದಲ್ಲಿ ಪ್ರತಿಯೊಬ್ಬರಿಗೂ ಅವರದೇ ಆದ ವೈಯಕ್ತಿಕ ನಂಬಿಕೆ ಇರಬಹುದು. ಆದರೆ ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಕೋಟ್ಯಂತರ ಜನರ ಆರಾಧನೆ, ಮಠ-ಮಾನ್ಯಗಳು ಮತ್ತು ಸನಾತನ ಪರಂಪರೆಯ…
ಅಲ್-ಹಿಂದ್ ಐಸಿಸ್ ಸಂಚು ಪ್ರಕರಣ: ಸೈಯದ್ ಫಸಿಯುರ್ ರೆಹಮಾನ್ಗೆ 7 ವರ್ಷ ಜೈಲು
ಬೆಂಗಳೂರು: ಅಲ್-ಹಿಂದ್ ಐಸಿಸ್ ಭಯೋತ್ಪಾದಕ ಸಂಚು ಪ್ರಕರಣದಲ್ಲಿ ಆರೋಪಿ ಸೈಯದ್ ಫಸಿಯುರ್ ರೆಹಮಾನ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜೊತೆಗೆ ₹48 ಸಾವಿರ ದಂಡವನ್ನೂ ವಿಧಿಸಿ ತೀರ್ಪು ನೀಡಿದೆ. ನಿಷೇಧಿತ ಐಸಿಸ್ ಸಂಘಟನೆಯ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪ ರೆಹಮಾನ್ ವಿರುದ್ಧ ಸಾಬೀತಾಗಿದೆ ಎಂದು ಎನ್ಐಎ ತಿಳಿಸಿದೆ. ಅಲ್-ಹಿಂದ್ ಸದಸ್ಯರಿಗೆ ಕಾಡಿನಲ್ಲಿ ತರಬೇತಿ ಶಿಬಿರ ನಡೆಸಲು ಅಗತ್ಯವಿದ್ದ ಟೆಂಟ್ಗಳು ಹಾಗೂ ಚಾಕುಗಳನ್ನು ಡೆಕಾಥ್ಲಾನ್ ಶೋರೂಮ್ನಿಂದ ಖರೀದಿಸಲು ರೆಹಮಾನ್ ನೆರವಾಗಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸಂಚಿಗೆ ಸಂಬಂಧಿಸಿದ ಸಭೆಗಳಲ್ಲೂ ಅವರು ಭಾಗಿಯಾಗಿದ್ದರು ಎನ್ನಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮೆಹಬೂಬ್ ಪಾಷಾ, ಬೆಂಗಳೂರಿನ ಗುರುಪ್ಪನಪಾಳ್ಯದಲ್ಲಿರುವ ನಿವಾಸದಲ್ಲಿ ಹಲವು ಸಭೆಗಳನ್ನು ನಡೆಸಿದ್ದ. ಈ ಸಭೆಗಳಲ್ಲಿ ಕೋಮುಗಲಭೆ ಸೃಷ್ಟಿಸುವುದು, ನಿರ್ದಿಷ್ಟ ವ್ಯಕ್ತಿಗಳ ಹತ್ಯೆ ನಡೆಸುವುದು ಹಾಗೂ ಐಸಿಸ್ನ ಸಿದ್ಧಾಂತವನ್ನು ಮುಂದುವರಿಸುವ ಕುರಿತು ಚರ್ಚೆ…
ಕಾರವಾರ ಕಡಲಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; 24 ಮೀನುಗಾರರ ರಕ್ಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕರಾವಳಿಯ ಅಂಜದೀವ್ ದ್ವೀಪದ ಸಮೀಪ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ವೊಂದು ಮುಳುಗಿದ ಘಟನೆ ನಡೆದಿದೆ. ಬೋಟ್ನಲ್ಲಿದ್ದ 24 ಮಂದಿ ಮೀನುಗಾರರನ್ನು ಸಕಾಲಿಕ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಹೆಸರಿನ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅಪಾಯಕ್ಕೆ ಸಿಲುಕಿದ್ದು, ಬಳಿಕ ಸಂಪೂರ್ಣವಾಗಿ ಮುಳುಗಿದೆ ಎನ್ನಲಾಗಿದೆ. ಬೋಟ್ ಅಪಾಯದಲ್ಲಿರುವುದನ್ನು ಸಮೀಪದಲ್ಲಿ ಸಂಚರಿಸುತ್ತಿದ್ದ ಐದಾರು ಮೀನುಗಾರಿಕಾ ಬೋಟ್ಗಳಲ್ಲಿದ್ದ ಮೀನುಗಾರರು ಗಮನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಬೋಟ್ನಲ್ಲಿದ್ದ ಎಲ್ಲ 24 ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ
ಮೈಸೂರು: ನಗರದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಕಿರಿಯ ಪೀಠಾಧಿಪತಿ ಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿಗಳ 23ನೇ ಚಾತುರ್ಮಾಸ್ಯ ವೈಭವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಕಾರ್ಯಕ್ರಮದ ಅಂಗವಾಗಿ ಶ್ರೀಗಳು ಗೋಪೂಜೆ ನೆರವೇರಿಸಿದರು. ಬಳಿಕ ಕಡಪ ಆಶ್ರಮದ ಭಜನಾ ತಂಡದಿಂದ ಭಜನಾ ಸೇವೆ ನಡೆಯಿತು. ಇದೇ ವೇಳೆ ಶ್ರೀಚಕ್ರ ಪೂಜೆಯನ್ನು ಶ್ರೀಗಳು ನೆರವೇರಿಸಿದರು. ನಂತರ ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಡಾ. ಶ್ರೀ ಶಿವರಾಜೇಂದ್ರ ಮಹಾಸ್ವಾಮೀಜಿಯವರ 111ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ, ಮಾಜಿ ಮುಖ್ಯಮಂತ್ರಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ಸಂಜೆ ಪೌಂಡರೀಕಾ ಮಂಟಪದಲ್ಲಿ ನಡೆದ ಧರ್ಮಸಭೆಯಲ್ಲಿ ಶ್ರೀಗಳು ವಿಷ್ಣುಪುರಾಣ ಕಥಾ ಮಾಲಿಕೆ ಕುರಿತು ಪ್ರವಚನ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪ್ರವಚನ ಆಲಿಸಿ ಭಕ್ತಿ…
