Blog

ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯದ ಚಿಂತನೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ತಮಿಳುನಾಡಿಗೆ ಪ್ರತಿದಿನ ಸುಮಾರು 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿದಿನ ಸುಮಾರು 1 ಟಿಎಂಸಿ ನೀರು ಬಿಡುವಂತೆ CWRC ಆದೇಶಿಸಿದೆ. ಕಳೆದ ತಿಂಗಳು ತಮಿಳುನಾಡಿಗೆ 3,500 ಕ್ಯುಸೆಕ್ ನೀರು ಹರಿಸುವಂತೆ ಸೂಚಿಸಿದ ಸಂದರ್ಭದಲ್ಲೇ ರಾಜ್ಯಕ್ಕೆ ನೀರು ಬಿಡುವುದು ಕಷ್ಟವಾಗಿತ್ತು ಎಂದು ಹೇಳಿದರು.   ಅದೇ ಸಂದರ್ಭದಲ್ಲಿ ಉತ್ತಮ ಮಳೆಯಾದ ಕಾರಣ ಕಬಿನಿ ಜಲಾಶಯದಿಂದಲೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಹೋಗಿತ್ತು. ಇಂದು ಕಬಿನಿಯಿಂದ ಎಷ್ಟು ಪ್ರಮಾಣದ ನೀರು ಹೊರಹೋಗಿದೆ…

ಪ್ರತಿಪಕ್ಷಗಳ ಗದ್ದಲ: ಸಂಸತ್‌ ಕಲಾಪಕ್ಕೆ ಅಡ್ಡಿ, ಎನ್‌ಡಿಎ ಸಂಸದರಿಂದಲೂ ಪ್ರತಿಭಟನಾ ಮೆರವಣಿಗೆ

ನವದೆಹಲಿ: ಸಂಸತ್‌ ಮುಂಗಾರು ಅಧಿವೇಶನದ ಮಂಗಳವಾರದ ಕಲಾಪವೂ ಆಡಳಿತಾರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಯಿತು. ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್‌ ಕ್ರಮದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದರೆ, ಈ ವಿಚಾರದ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಆಡಳಿತ ಪಕ್ಷ ತಿಳಿಸಿತು. ಆದರೆ, ಪ್ರತಿಪಕ್ಷಗಳ ನಿರಂತರ ಪ್ರತಿಭಟನೆ ಹಾಗೂ ಘೋಷಣೆಗಳಿಂದಾಗಿ ಸದನದ ಕಲಾಪಕ್ಕೆ ಪದೇಪದೇ ಅಡ್ಡಿಯಾಯಿತು. ಗದ್ದಲದ ನಡುವೆಯೇ ಸರ್ಕಾರ ಕೇರಳ (ಹೆಸರು ಬದಲಾವಣೆ) ಮಸೂದೆ, 2026 ಹಾಗೂ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ತಿದ್ದುಪಡಿ) ಮಸೂದೆ, 2026 ಸೇರಿದಂತೆ ಪ್ರಮುಖ ಮಸೂದೆಗಳನ್ನು ಸಂಸತ್ತಿನಲ್ಲಿ ಮಂಡಿಸಿತು. ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು ಮುಂದೂಡಲಾಯಿತು. ಇದೇ ವೇಳೆ, ಸಂಸತ್‌ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುತ್ತಿರುವ ಪ್ರತಿಪಕ್ಷಗಳ ಕ್ರಮವನ್ನು ಖಂಡಿಸಿ ಎನ್‌ಡಿಎ ಸಂಸದರು…

ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

ನ್ಯೂಯಾರ್ಕ್: ಉದ್ಯಮಿ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಮಾಜಿ ಉದ್ಯೋಗಿ ವಿನೀತ್ ಜೈನ್ ವಿರುದ್ಧ ಅಮೆರಿಕದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಫೆಡರಲ್ ನ್ಯಾಯಾಲಯ ವಜಾಗೊಳಿಸಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ನಿಕೋಲಸ್ ಜಿ. ಗರೌಫಿಸ್ ಅವರು ಅಮೆರಿಕದ ನ್ಯಾಯಾಂಗ ಇಲಾಖೆಯ ಮನವಿ ಮೇರೆಗೆ ಪ್ರಕರಣವನ್ನು ‘ಡಿಸ್ಮಿಸ್ಡ್ ವಿತ್ ಪ್ರಿಜುಡಿಸ್’ ಎಂದು ವಜಾಗೊಳಿಸಿದ್ದಾರೆ. ಇದರೊಂದಿಗೆ ಇದೇ ಆರೋಪಗಳ ಆಧಾರದ ಮೇಲೆ ಪ್ರಕರಣವನ್ನು ಮತ್ತೆ ದಾಖಲಿಸಲು ಅವಕಾಶ ಇರುವುದಿಲ್ಲ. 2024ರ ನವೆಂಬರ್‌ನಲ್ಲಿ ಅಮೆರಿಕದ ಪ್ರಾಸಿಕ್ಯೂಟರ್‌ಗಳು ಅದಾನಿ ಮತ್ತು ಇತರರ ವಿರುದ್ಧ ಭಾರತದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 25 ಕೋಟಿ ಡಾಲರ್ ಲಂಚ ನೀಡುವ ಸಂಚು ರೂಪಿಸಿ ಸೌರ ವಿದ್ಯುತ್ ಯೋಜನೆಗಳ ಗುತ್ತಿಗೆ ಪಡೆಯಲು ಯತ್ನಿಸಿದ ಆರೋಪ ಹೊರಿಸಿದ್ದರು. ಅಮೆರಿಕದ ಮಾರುಕಟ್ಟೆಗಳಲ್ಲಿ 300 ಕೋಟಿ ಡಾಲರ್‌ಗೂ ಹೆಚ್ಚು ಹಣ ಸಂಗ್ರಹಿಸುವಾಗ ಹೂಡಿಕೆದಾರರನ್ನು ದಾರಿ ತಪ್ಪಿಸಿದ ಆರೋಪವೂ…

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

ಬೊಗೋಟಾ: ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ ಸೋಮವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 110ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಾರು ಕಟ್ಟಡಗಳು ಹಾನಿಗೊಳಗಾಗಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭೂಕಂಪದ ತೀವ್ರತೆ ನೆರೆಯ ಈಕ್ವೆಡಾರ್ ಮತ್ತು ಪನಾಮ ದೇಶಗಳಲ್ಲೂ ಅನುಭವವಾಗಿದೆ. ಪೆರೇರಾ, ಕ್ವಿಬ್ಡೊ, ಕಾಲಿ ಹಾಗೂ ಮನಿಜಾಲೆಸ್ ಸೇರಿದಂತೆ ಪಶ್ಚಿಮ ಭಾಗದ ಹಲವು ನಗರಗಳಲ್ಲಿ ಭೂಕಂಪದಿಂದ ಭಾರೀ ಹಾನಿಯಾಗಿದೆ. ರಕ್ಷಣಾ ಸಿಬ್ಬಂದಿ ಹಾಗೂ ಸ್ಥಳೀಯರು ಅವಶೇಷಗಳ ನಡುವೆ ಸಿಲುಕಿರುವವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡಿರುವವರು ಆತಂಕದಲ್ಲಿ ರಕ್ಷಣಾ ಕಾರ್ಯಾಚರಣೆಯ ಸ್ಥಳಗಳಲ್ಲಿ ಬೀಡುಬಿಟ್ಟಿದ್ದಾರೆ. ರಿಸಾರಾಲ್ಡಾ ಪ್ರದೇಶದಲ್ಲಿ ಕನಿಷ್ಠ 40 ಮಂದಿ, ವ್ಯಾಲೆ ಡೆಲ್ ಕೌಕಾದಲ್ಲಿ 27 ಮಂದಿ, ಚೋಕೋದಲ್ಲಿ 9 ಮಂದಿ ಹಾಗೂ ಕಾಲ್ಡಾಸ್‌ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆಂಟಿಯೋಕಿಯಾ ಪ್ರದೇಶದಲ್ಲಿ 73 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಕೊಲಂಬಿಯಾದ ಪೆಸಿಫಿಕ್…

ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳಿರುವ ಆರೋಪಕ್ಕೆ ಪರಮೇಶ್ವರ್ ತಿರುಗೇಟು; ದಾಖಲೆ ಇದ್ದರೆ ಕ್ರಮ

ತುಮಕೂರು: ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳು ವಾಸಿಸುತ್ತಿದ್ದಾರೆ, ಬೆಂಗಳೂರಿನಲ್ಲೇ 4.5 ಲಕ್ಷ ಮಂದಿ ಇದ್ದಾರೆ ಎಂಬ ಆರೋಪವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಳ್ಳಿಹಾಕಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಅಂಕಿ-ಅಂಶಗಳಿಗೆ ವಿಶ್ವಾಸಾರ್ಹ ದಾಖಲೆ ಮತ್ತು ಅಧಿಕೃತ ಮಾಹಿತಿಯ ಆಧಾರ ಇರಬೇಕು ಎಂದು ಹೇಳಿದರು. “ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದೆ. ಅದರ ಅಂಕಿ-ಅಂಶಗಳಿಂದ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳು ಇರುವುದಾಗಿ ದೃಢಪಟ್ಟರೆ, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಆಧಾರವಿಲ್ಲದೆ ಅಂಕಿ-ಅಂಶಗಳನ್ನು ಹೇಳಲು ಸಾಧ್ಯವಿಲ್ಲ,” ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು. ಬರ ಪರಿಹಾರ ವಿಚಾರದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು. “ವಿಸ್ತೃತ ವರದಿ ಸಲ್ಲಿಸಿದ ಬಳಿಕವೂ ಕೇಂದ್ರ ಸರ್ಕಾರ ಪರಿಹಾರ ನಿಧಿ ಬಿಡುಗಡೆ ಮಾಡದಿದ್ದರೆ ಪ್ರತಿಭಟನೆ ನಡೆಸುತ್ತೇವೆ.…

ಜಾರ್ಖಂಡ್ ನೇಮಕಾತಿ ಅಕ್ರಮ ಆರೋಪ: ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿದ ರಾಹುಲ್ ಗಾಂಧಿ

ನವದೆಹಲಿ/ರಾಂಚಿ: ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಸಭೆ ಬಳಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪೊಲೀಸ್ ಕ್ರಮ ಖಂಡಿಸಿ ಬಿಜೆಪಿ ಆಗಸ್ಟ್‌ 11ರಂದು ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿದೆ. ನೇಮಕಾತಿ ಅಕ್ರಮದ ವಿರುದ್ಧ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೆಎಲ್‌ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದಕ್ಕೆ ತೀವ್ರ ರಾಜಕೀಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡ ಪೊಲೀಸ್ ಕ್ರಮವನ್ನು ಖಂಡಿಸಿದ್ದಾರೆ. ಜಾರ್ಖಂಡ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿರುವುದನ್ನು ಖಂಡಿಸಬೇಕು. ವಿದ್ಯಾರ್ಥಿಗಳಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ. ಇಂತಹ ಸಮಸ್ಯೆಗಳನ್ನು…

ನೀಟ್ ಬೆನ್ನಲ್ಲೇ ಜಾರ್ಖಂಡ್ ನೇಮಕಾತಿ ಅಕ್ರಮ ಆರೋಪ: ಪ್ರತಿಭಟನೆ ವೇಳೆ ಘರ್ಷಣೆ; ಬಂದ್‌ಗೆ ಕರೆ

ರಾಂಚಿ: ಜಾರ್ಖಂಡ್‌ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಸಭೆ ಬಳಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪೊಲೀಸ್ ಲಾಠಿಚಾರ್ಜ್ ಖಂಡಿಸಿ ಬಿಜೆಪಿ ಆಗಸ್ಟ್‌ 11ರಂದು ಜಾರ್ಖಂಡ್ ಬಂದ್‌ಗೆ ಕರೆ ನೀಡಿದೆ. ನೇಮಕಾತಿ ಅಕ್ರಮದ ವಿರುದ್ಧ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೆಎಲ್‌ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣ ತೀವ್ರವಾಗಿ ಕುಸಿದಿದ್ದು, ಸದ್ಯ ರಾಂಚಿ ಸದರ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಅಧಿಕಾರಿ ನ್ಯಾನ್ಸಿ ಪ್ರಿಯಾ ತಿಳಿಸಿದ್ದಾರೆ.   ಇದೇ ವೇಳೆ ವಿಧಾನಸಭೆ ಬಳಿ ನಡೆದ ಪೊಲೀಸ್ ಲಾಠಿಚಾರ್ಜ್‌ನಲ್ಲಿ ಮಹ್ತೊ ಅವರ ಸಹಾಯಕ ಪಂಕಜ್ ಕುಮಾರ್ ಗಾಯಗೊಂಡಿದ್ದು, ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ಸುಧಾರಣಾ…

ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

ವಿಜಯಪುರ: ವಿಧಾನ ಪರಿಷತ್‌ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಸಚಿವ ಸಂಪುಟದ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದು ತಪ್ಪಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರದಲ್ಲೂ ಅಂತಿಮ ನಿರ್ಧಾರವನ್ನು ಪಕ್ಷದ ನಾಯಕತ್ವ ಹಾಗೂ ಹೈಕಮಾಂಡ್‌ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. ಸಚಿವರು ತಮಗೆ ನಿರ್ದಿಷ್ಟ ಖಾತೆ ಬೇಕೆಂದು ಕೇಳಬಹುದು. ಆದರೆ, ಯಾರಿಗೆ ಯಾವ ಖಾತೆ ನೀಡಬೇಕು ಎಂಬುದನ್ನು ಅಂತಿಮವಾಗಿ ಹೈಕಮಾಂಡ್‌ ನಿರ್ಧರಿಸಲಿದೆ ಎಂದರು. ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸು ಮಾಡಿದ ಶಾಸಕರಿಗೆ ಅವಕಾಶ ನೀಡದಿರುವುದಕ್ಕೆ ಅವರು ಹೈಕಮಾಂಡ್‌ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳನ್ನು ಯತೀಂದ್ರ ತಳ್ಳಿಹಾಕಿದರು. “ಸಿದ್ದರಾಮಯ್ಯ ಅವರು ಎಂದಾದರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ? ಪಕ್ಷ ತಮ್ಮನ್ನು ಕಡೆಗಣಿಸಿದೆ ಎಂದು ಹೇಳಿದ್ದಾರೆಯೇ?” ಎಂದು ಪ್ರಶ್ನಿಸಿದ ಅವರು, ಸಂಪುಟ ವಿಸ್ತರಣೆಗೆ ಮುನ್ನ…

ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

ಆಲ್ಮೋರಾದ ಯುವ ಆವಿಷ್ಕಾರಿ ರವಿ ಟಮ್ಟಾ ಅವರು ತಮ್ಮ ಸ್ಟಾರ್ಟ್ಅಪ್ HAPIDA SKYNEX ಅಡಿಯಲ್ಲಿ ಸಿಂಗಲ್-ಸೀಟರ್ ಫ್ಲೈಯಿಂಗ್ ಕಾರ್ ಪ್ರೊಟೋಟೈಪ್‌ನ ಯಶಸ್ವಿ ಪರೀಕ್ಷೆ ನಡೆಸಿ ಭಾರತದ ಭವಿಷ್ಯದ ಚಲನಶೀಲತೆಗೆ ಹೊಸ ಆಯಾಮ ನೀಡಿದ್ದಾರೆ. ಈ ವಿಶತೇ ಕುರಿತಂತೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಪಕ್ಷ, ಈ ಸಾಧನೆಯು ನವ ಭಾರತದ ಯುವಕರ ಪ್ರತಿಭೆ, ತಾಂತ್ರಿಕ ಚಿಂತನೆ ಮತ್ತು ನಾವೀನ್ಯತೆಗೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದೆ. ಕೌಶಲ್ಯ ಸ್ವದೇಶಿಯಾಗಿರಲಿ, ಚಿಂತನೆಗಳು ದೊಡ್ಡದಾಗಿರಲಿ ಮತ್ತು ಧೈರ್ಯ ಆಕಾಶದೆತ್ತರದಲ್ಲಿರಲಿ… ಏಕೆಂದರೆ ಹಾರಾಟಕ್ಕೆ ಯಾವುದೇ ಮಿತಿ ಇಲ್ಲ ! ಎಂದು ಕೇಂದ್ರ ಸರ್ಕಾರದ ಬೆಂಬಲದತ್ತ ಬೊಟ್ಟು ಮಾಡಿದೆ. ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ ! 🚗🇮🇳 ಆಲ್ಮೋರಾದ ಯುವ ಆವಿಷ್ಕಾರಿ ರವಿ ಟಮ್ಟಾ ಅವರು ತಮ್ಮ ಸ್ಟಾರ್ಟ್ಅಪ್ HAPIDA SKYNEX ಅಡಿಯಲ್ಲಿ ಸಿಂಗಲ್-ಸೀಟರ್ ಫ್ಲೈಯಿಂಗ್ ಕಾರ್ ಪ್ರೊಟೋಟೈಪ್‌ನ ಯಶಸ್ವಿ ಪರೀಕ್ಷೆ…

PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) ಮತ್ತು PMAY-U 2.0 ಅಡಿಯಲ್ಲಿ ದೇಶಾದ್ಯಂತ 1.25 ಕೋಟಿಗೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಗಿದ್ದು, ಒಂದು ಕೋಟಿಗೂ ಅಧಿಕ ಮನೆಗಳ ನಿರ್ಮಾಣ ಪೂರ್ಣಗೊಂಡು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನಗರ ಪ್ರದೇಶಗಳ ಅರ್ಹ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಮನೆ ಒದಗಿಸುವ ಉದ್ದೇಶದಿಂದ PMAY-U 2.0 ಅನುಷ್ಠಾನಕ್ಕೆ ಸರ್ಕಾರ ಮತ್ತಷ್ಟು ವೇಗ ನೀಡಿದೆ. ಆಗಸ್ಟ್ 6ರಂದು ನವದೆಹಲಿಯಲ್ಲಿ ನಡೆದ ಕೇಂದ್ರ ಮಂಜೂರಾತಿ ಮತ್ತು ಮೇಲ್ವಿಚಾರಣಾ ಸಮಿತಿಯ (CSMC) ಎಂಟನೇ ಸಭೆಯಲ್ಲಿ 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರ್ಥಿಕವಾಗಿ ದುರ್ಬಲ ವರ್ಗದ ಕುಟುಂಬಗಳಿಗೆ 2.09 ಲಕ್ಷ ಮನೆಗಳಿಗೆ ಹೆಚ್ಚುವರಿ ಅನುಮೋದನೆ ನೀಡಲಾಗಿದೆ. ಇತ್ತೀಚಿನ ಮಂಜೂರಾತಿಯಲ್ಲಿ ಸುಮಾರು 1.42 ಲಕ್ಷ ಮನೆಗಳು ಫಲಾನುಭವಿ ನೇತೃತ್ವದ ನಿರ್ಮಾಣ (BLC) ಘಟಕಕ್ಕೆ ಸೇರಿವೆ. ಸ್ವಂತ ಜಮೀನಿನಲ್ಲಿ ಪಕ್ಕಾ ಮನೆ ನಿರ್ಮಿಸಿಕೊಳ್ಳುವ ಅರ್ಹ…