ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಹೈಕೋರ್ಟ್ ಮುಖ್ಯನ್ಯಾಯಮೂರ್ತಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಹಿಮಾಚಲ ಪ್ರದೇಶ ಸಿಎಂ ಸುಖವೇಂದರ್ ಸಿಂಗ್, ತೆಲಂಗಾಣ ಸಿಎಂ ವೇಮಂತ್ ರೆಡ್ಡಿ, ಕೇರಳ ಸಿಎಂ ಸತೀಶನ್, ಸಂಸತ್ ಸದಸ್ಯರಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ ಮೊದಲಾದ ನಾಯಕರ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಜನತೆಗೆ ನಮಸ್ಕರಿಸಿ, ಅಜ್ಜಯ್ಯ ಫೋಟೋಗೆ ನಮಿಸಿ, ಸಂವಿಧಾನದ ಪುಸ್ತಕವನ್ನು ಹಿಡಿದುಕೊಂಡು ವೀರ ಅಜ್ಜಯರ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ ವೈಖರಿ ಗಮನಸೆಳೆಯಿತು. ಇದೇ ವೇಳೆ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದರು. ಸಚಿವರಾಗಿ ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ,…
Blog
ವಿಧಾನಸಭೆ ಸ್ಪೀಕರ್, ಮೇಲ್ಮನೆ ಸಭಾಪತಿ ಬದಲಾವಣೆಗೂ ಕಾಂಗ್ರೆಸ್ ತಯಾರಿ
ಬೆಂಗಳೂರು (ANU): ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಸ್ಥಾನಗಳಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರು ಸಂಪುಟಕ್ಕೆ ಸೇರುವ ಸಾಧ್ಯತೆ ಇದ್ದು, ಸಚಿವ ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಅವರಿಗೆ ಮಂತ್ರಿ ಸ್ಥಾನ ನೀಡಲಾಗಬಹುದು ಎನ್ನಲಾಗಿದೆ. 2023ರಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಖಾದರ್ ಅವರನ್ನು ನಂತರ ವಿಧಾನ ಪರಿಷತ್ ಸಭಾಪತಿಯನ್ನಾಗಿ ಮಾಡಲಾಗಿತ್ತು. ಸಂಪುಟ ಪುನರ್ರಚನೆ ವೇಳೆ ಖಾದರ್ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಹೀಗಾಗಿ ಅವರು ತೆರವುಗೊಳಿಸಬಹುದಾದ ಸ್ಥಾನಕ್ಕೆ ಹೊಸ ಸದಸ್ಯರನ್ನು ಸ್ಪೀಕರ್ ಆಗಿ ನೇಮಿಸುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ. ಇತ್ತ, ವಿಧಾನ ಪರಿಷತ್ನಲ್ಲಿಯೂ ಸಮೀಕರಣಗಳು ಕಾಂಗ್ರೆಸ್ ಪರವಾಗಿ ಅನುಕೂಲಕರವಾಗುವ ಸಾಧ್ಯತೆ ಇದೆ. ಜೂನ್…
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಕ
ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ನ ಅತ್ಯುನ್ನತ ನೀತಿ ನಿರ್ಧಾರ ಕೈಗೊಳ್ಳುವ ಘಟಕವಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದು, ಪಕ್ಷದ ರಾಷ್ಟ್ರೀಯ ಮಟ್ಟದ ಪ್ರಮುಖ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರಿಗೆ ವಹಿಸಲಾಗಿದೆ. ಈ ಹಿಂದೆ 2018ರಲ್ಲಿ ಆಗಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೈಗೊಂಡಿದ್ದ ಸಂಘಟನಾ ಪುನರ್ರಚನೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಸಿಡಬ್ಲ್ಯೂಸಿ ಸದಸ್ಯರಾಗಿ ನೇಮಕ ಮಾಡಲಾಗಿತ್ತು. ಬಳಿಕ 2019ರಲ್ಲಿ ಅವರು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯಿಂದ ಅವರನ್ನು ಕೈಬಿಡಲಾಗಿತ್ತು. ಈಗ ಮತ್ತೆ ಸಿದ್ದರಾಮಯ್ಯ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಪಕ್ಷದ ರಾಷ್ಟ್ರೀಯ ಮಟ್ಟದ ಚರ್ಚೆಗಳು, ನೀತಿ ನಿರ್ಧಾರಗಳು ಹಾಗೂ…
ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ
ನವದೆಹಲಿ: ನೈಋತ್ಯ ಮುಂಗಾರು ಜೂನ್ 4ರಂದು ಕೇರಳ ಕರಾವಳಿಯನ್ನು ಅಧಿಕೃತವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ಕೇರಳದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಕೆಲವೆಡೆ ಭಾರೀ ಮಳೆಯೊಂದಿಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಇನ್ನೊಂದೆಡೆ, ಕೇರಳ ಪ್ರವೇಶದ ಕೆಲವೇ ದಿನಗಳಲ್ಲಿ ಮುಂಗಾರು ಕರ್ನಾಟಕದತ್ತ ಚಲಿಸುವ ಸಾಧ್ಯತೆ ಇದೆ. ಹವಾಮಾನ ತಜ್ಞರ ಪ್ರಕಾರ, ಜೂನ್ 7 ಅಥವಾ 8ರ ವೇಳೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗುವ ಸಾಧ್ಯತೆ ಇದೆ. ಈ ಬಾರಿ ‘ಎಲ್ ನಿನೋ’ ಪರಿಣಾಮದ ಹಿನ್ನೆಲೆಯಲ್ಲಿ ದೇಶದ ಹಲವೆಡೆ ಮಳೆಯ ಪ್ರಮಾಣ ಸಾಮಾನ್ಯ ಮಟ್ಟಕ್ಕಿಂತ ಸ್ವಲ್ಪ…
ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ
ನವದೆಹಲಿ: ಬಲಿಷ್ಠ, ಸಮೃದ್ಧ ಹಾಗೂ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಬುಡಕಟ್ಟು ಸಮುದಾಯದ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರು ಶಿಕ್ಷಣ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಪ್ರಮುಖ ವಿದ್ಯಾರ್ಥಿವೇತನ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತ ಪ್ರತಿಭಾವಂತ ಯುವಜನರಿಂದ ಸಮೃದ್ಧವಾಗಿದ್ದು, ಸೂಕ್ತ ಅವಕಾಶ, ಮಾರ್ಗದರ್ಶನ ಹಾಗೂ ಬೆಂಬಲ ದೊರೆತರೆ ಹಳ್ಳಿಗಳು, ದೂರದ ಪ್ರದೇಶಗಳು ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳು ಕೂಡ ಗಮನಾರ್ಹ ಸಾಧನೆ ಮಾಡಬಹುದು ಎಂದು ಹೇಳಿದರು. ವಿದ್ಯಾರ್ಥಿವೇತನ ಯೋಜನೆಗಳು ಕೇವಲ ಆರ್ಥಿಕ ನೆರವಿಗೆ ಸೀಮಿತವಾಗಿಲ್ಲ. ಅವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪನ್ಮೂಲಗಳ ಕೊರತೆಯನ್ನು ಮೀರಿ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ನೆರವಾಗುವ ಮಹತ್ವದ ವೇದಿಕೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು. “ಶಿಕ್ಷಣವು ವ್ಯಕ್ತಿಯನ್ನು ಸ್ವಾವಲಂಬಿ, ಜಾಗೃತ ಹಾಗೂ ಸಮರ್ಥನನ್ನಾಗಿ ರೂಪಿಸುವ ಅತ್ಯಂತ ಪರಿಣಾಮಕಾರಿ…
ತೂತುಕುಡಿ ಲೈಂಗಿಕ ದೌರ್ಜನ್ಯ ಪ್ರಕರಣ: ಟಿವಿಕೆ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಚೆನ್ನೈ: ತೂತುಕುಡಿ ಜಿಲ್ಲೆಯ ಶ್ರೀವೈಕುಂಠಂನಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಪ್ರಕರಣದಲ್ಲಿ ಟಿವಿಕೆ ಕಾರ್ಯಕರ್ತರ ಭಾಗವಹಿಸುವಿಕೆ ಕುರಿತು ವರದಿಗಳು ಹೊರಬಂದಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಹೇಳಿದ್ದಾರೆ. ಈ ಘಟನೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಆರೋಪಿಸಿದರು. ಟಿವಿಕೆ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಕ್ಷದ ಸದಸ್ಯರನ್ನು ಒಳಗೊಂಡ ಭ್ರಷ್ಟಾಚಾರ, ಲಂಚ ಹಾಗೂ ಇತರೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ನಾಗೇಂದ್ರನ್ ಟೀಕಿಸಿದರು. ಇದೀಗ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳಲ್ಲಿಯೂ ಆಡಳಿತ ಪಕ್ಷದ ಕಾರ್ಯಕರ್ತರ ಹೆಸರು ಕೇಳಿಬರುತ್ತಿರುವುದು ಕಳವಳಕಾರಿ ಎಂದು ಹೇಳಿದರು. ಮುಖ್ಯಮಂತ್ರಿ ಸಿ. ಜೋಸೆಫ್…
ಭಾರತದಲ್ಲಿನ ಡ್ರಗ್ಸ್ ಮಾಫಿಯಾದಲ್ಲಿ ದಾವೂದ್ ಕೈ? 20ಕ್ಕೂ ಹೆಚ್ಚು ಕಡೆ ED ಭರ್ಜರಿ ಕಾರ್ಯಾಚರಣೆ
ಮುಂಬೈ: ಅಂತರರಾಷ್ಟ್ರೀಯ ಮಾದಕ ದ್ರವ್ಯ ಜಾಲದ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಭಾರಿ ಕಾರ್ಯಾಚರಣೆ ನಡೆಸಿದ್ದು, ಮುಂಬೈ ಹಾಗೂ ಗುಜರಾತ್ನ ಹಲವು ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಿದೆ. ಮೂಲಗಳ ಪ್ರಕಾರ, ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಸಲೀಂ ಇಸ್ಮಾಯಿಲ್ ಡೋಲಾ ಮತ್ತು ಆತನ ಸಹಚರರು ನಡೆಸುತ್ತಿದ್ದ ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ತನಿಖೆ ನಡೆಯುತ್ತಿದೆ. ಮುಂಬೈ ಸೇರಿದಂತೆ ಸೂರತ್, ಅಂಕಲೇಶ್ವರ ಮತ್ತು ರಾಜ್ಕೋಟ್ನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, ಮೆಫೆಡ್ರೋನ್ (ಎಂಡಿ) ಮಾದಕ ದ್ರವ್ಯ ತಯಾರಿಕೆ, ಪೂರ್ವಗಾಮಿ ರಾಸಾಯನಿಕಗಳ ಪೂರೈಕೆ, ಹವಾಲಾ ವ್ಯವಹಾರ ಹಾಗೂ ಬೇನಾಮಿ ಆಸ್ತಿ ಹೊಂದಿರುವವರ ನಿವಾಸ ಮತ್ತು ಕಚೇರಿಗಳನ್ನು ಪರಿಶೀಲಿಸಲಾಗಿದೆ. ಇತ್ತೀಚೆಗೆ ಟರ್ಕಿಯಿಂದ ಭಾರತಕ್ಕೆ ಹಸ್ತಾಂತರಗೊಂಡ ಸಲೀಂ ಡೋಲಾ, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಆಪ್ತ ಸಹಚರ ಎಂದು ತನಿಖಾ ಸಂಸ್ಥೆಗಳು…
ಟ್ರಂಪ್-ನೆತನ್ಯಾಹು ನಡುವೆ ಭಿನ್ನಾಭಿಪ್ರಾಯ? ಲೆಬನಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಡುವಿನ ಸಂಬಂಧಗಳ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ. ಲೆಬನಾನ್ನಲ್ಲಿ ಇಸ್ರೇಲ್ ನಡೆಸುತ್ತಿರುವ ಸೇನಾ ಕಾರ್ಯಾಚರಣೆಗಳ ಹಿನ್ನೆಲೆ ಉಭಯ ನಾಯಕರ ನಡುವೆ ನಡೆದ ದೂರವಾಣಿ ಮಾತುಕತೆ ವೇಳೆ ತೀವ್ರ ಭಿನ್ನಾಭಿಪ್ರಾಯ ವ್ಯಕ್ತವಾಗಿರುವುದಾಗಿ ಅಮೆರಿಕದ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ಇತ್ತೀಚಿನ ವಾರಗಳಲ್ಲಿ ವಾಯುದಾಳಿ ಹಾಗೂ ಭೂ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿದ್ದು, ಈ ಬೆಳವಣಿಗೆ ಮಧ್ಯಪ್ರಾಚ್ಯದಲ್ಲಿ ಆತಂಕ ಹೆಚ್ಚಿಸಿದೆ. ಇದೇ ವೇಳೆ ಇರಾನ್ ಜೊತೆ ಉದ್ವಿಗ್ನತೆ ಕಡಿಮೆ ಮಾಡುವ ಉದ್ದೇಶದಿಂದ ಅಮೆರಿಕಾ ರಾಜತಾಂತ್ರಿಕ ಪ್ರಯತ್ನಗಳನ್ನು ಮುಂದುವರಿಸುತ್ತಿರುವ ಕಾರಣ, ಇಸ್ರೇಲ್ನ ಕ್ರಮಗಳು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಬಹುದು ಎಂಬ ಕಳವಳ ವಾಷಿಂಗ್ಟನ್ನಲ್ಲಿ ವ್ಯಕ್ತವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಟ್ರಂಪ್ ದೂರವಾಣಿ ಸಂಭಾಷಣೆಯಲ್ಲಿ ಇಸ್ರೇಲ್ನ ಕೆಲವು ಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.…
ವಿಜಯಾನಂದ್ ಕಾಶಪ್ಪನವರ್ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಪಂಚಮಸಾಲಿ ಲಿಂಗಾಯಿತ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ನೀಡಬೇಕು ಹಾಗೂ ಯುವ ಶಾಸಕ ವಿಜಯಾನಂದ್ ಎಸ್. ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ–ಪಂಚಮಸಾಲಿ ಸಂಘ ಒತ್ತಾಯಿಸಿದೆ. ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ–ಪಂಚಮಸಾಲಿ ಸಂಘ ಹಾಗೂ ವಿಜಯಾನಂದ್ ಕಾಶಪ್ಪನವರ್ ಅಭಿಮಾನಿ ಬಳಗದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬೇಡಿಕೆ ಮುಂದಿರಿಸಲಾಯಿತು. ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ಡಿಂಡೂರ ಮಾತನಾಡಿ, ರಾಜ್ಯದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದ ಜನಸಂಖ್ಯೆ ಒಂದು ಕೋಟಿಗೂ ಅಧಿಕವಿದ್ದು, ಕೃಷಿ ಆಧಾರಿತ ಸಮುದಾಯವಾಗಿ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ಆದಾಗ್ಯೂ, ಹಲವು ಸರ್ಕಾರಗಳಲ್ಲಿ ಸಮುದಾಯಕ್ಕೆ ಸಮರ್ಪಕ ಆದ್ಯತೆ ಸಿಕ್ಕಿಲ್ಲ ಎಂಬ ಬೇಸರವಿದೆ ಎಂದು ಹೇಳಿದರು. ಪಂಚಮಸಾಲಿ ಸಮುದಾಯಕ್ಕೆ ಒಂದು ಉಪಮುಖ್ಯಮಂತ್ರಿ ಹುದ್ದೆ ಹಾಗೂ ಎರಡು ಸಚಿವ ಸ್ಥಾನಗಳನ್ನು ನೀಡಬೇಕು…
ಫ್ಯಾಟಿ ಲಿವರ್: ಆಲ್ಕೋಹಾಲ್ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?
ಯಕೃತ್ತಿನಲ್ಲಿ (ಲಿವರ್) ಅತಿಯಾದ ಕೊಬ್ಬು ಸಂಗ್ರಹವಾದಾಗ ಫ್ಯಾಟಿ ಲಿವರ್ ಕಾಯಿಲೆ ಉಂಟಾಗುತ್ತದೆ. ವೈದ್ಯಕೀಯವಾಗಿ ಇದನ್ನು ಮುಖ್ಯವಾಗಿ ಎರಡು ವಿಧಗಳಾಗಿ ವಿಂಗಡಿಸಲಾಗಿದೆ – ಆಲ್ಕೋಹಾಲ್-ಲಿಂಕ್ಡ್ ಫ್ಯಾಟಿ ಲಿವರ್ ಡಿಸೀಸ್ (AFLD) ಮತ್ತು ಮೆಟಾಬಾಲಿಕ್ ಡಿಸ್ಫಂಕ್ಷನ್-ಸಂಬಂಧಿತ ಸ್ಟೀಟೋಟಿಕ್ ಲಿವರ್ ಡಿಸೀಸ್ (MASLD). ಆಲ್ಕೋಹಾಲ್-ಲಿಂಕ್ಡ್ ಫ್ಯಾಟಿ ಲಿವರ್ (AFLD) ಅತಿಯಾದ ಮದ್ಯಪಾನದಿಂದ ಈ ಸಮಸ್ಯೆ ಉಂಟಾಗುತ್ತದೆ. ಆಲ್ಕೋಹಾಲ್ ದೇಹದಲ್ಲಿ ವಿಭಜನೆಯಾಗುವಾಗ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಯಕೃತ್ತಿನ ಕೋಶಗಳಿಗೆ ಹಾನಿ ಉಂಟುಮಾಡುತ್ತವೆ. ಇದರಿಂದ ಲಿವರ್ನಲ್ಲಿ ಕೊಬ್ಬಿನ ಶೇಖರಣೆ, ಉರಿಯೂತ ಹಾಗೂ ಗಾಯದ ಗುರುತುಗಳು (Scarring) ಉಂಟಾಗಬಹುದು. ತಜ್ಞರ ಪ್ರಕಾರ, ಆರಂಭಿಕ ಹಂತದಲ್ಲೇ ಮದ್ಯಪಾನವನ್ನು ಸಂಪೂರ್ಣವಾಗಿ ನಿಲ್ಲಿಸಿದರೆ ಯಕೃತ್ತಿನ ಹಾನಿಯನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಮೆಟಾಬಾಲಿಕ್-ಲಿಂಕ್ಡ್ ಫ್ಯಾಟಿ ಲಿವರ್ (MASLD) ಹಿಂದೆ ಇದನ್ನು ನಾನ್-ಆಲ್ಕೋಹಾಲಿಕ್ ಫ್ಯಾಟಿ ಲಿವರ್ ಡಿಸೀಸ್ (NAFLD) ಎಂದು ಕರೆಯಲಾಗುತ್ತಿತ್ತು. ಇದು ಮದ್ಯಪಾನದಿಂದ ಉಂಟಾಗುವುದಿಲ್ಲ. ಬೊಜ್ಜು, ಟೈಪ್-2 ಮಧುಮೇಹ, ಅಧಿಕ ಕೊಲೆಸ್ಟ್ರಾಲ್,…
