ಬೆಂಗಳೂರು: ಬಿಡದಿ ಟೌನ್ಶಿಪ್ ಹೆಸರಿನಲ್ಲಿ ರೈತರ ಜಮೀನಿನ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪ್ರಶ್ನಿಸಿದ ಅನ್ನದಾತರ ಮೇಲೆಯೇ ಸುಳ್ಳು FIR ದಾಖಲಿಸಿ ಬೆದರಿಕೆ ಹಾಕಲಾಗಿದೆ ಆರೋಪಿಸಿದ್ದಾರೆ. ಬಿಡದಿ ಟೌನ್ಶಿಪ್ ಹೆಸರಿನಲ್ಲಿ ರೈತರ ಜಮೀನಿನ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ನಿಜ ಮುಖ ಮತ್ತೊಮ್ಮೆ ಬಯಲಾಗಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ. ರೈತರಿಗೆ ಯಾವುದೇ ಪೂರ್ವ ಮಾಹಿತಿ ನೀಡದೆ ಜಮೀನಿಗೆ ನುಗ್ಗಿ ಜಂಟಿ ಮಾಪನ (JMC) ನಡೆಸಲು ಮುಂದಾಗಿರುವುದು ಮಾತ್ರವಲ್ಲ, ಅದನ್ನು ಪ್ರಶ್ನಿಸಿದ ಅನ್ನದಾತರ ಮೇಲೆಯೇ ಸುಳ್ಳು FIR ದಾಖಲಿಸಿ ಬೆದರಿಕೆ ಹಾಕಲಾಗಿದೆ. ರೈತರ ಪರವಾಗಿ ನಿಲ್ಲಬೇಕಾದ ಸರ್ಕಾರವೇ ಪೊಲೀಸರನ್ನು ಬಳಸಿಕೊಂಡು ಹೋರಾಟವನ್ನು ಹತ್ತಿಕ್ಕಲು ಹೊರಟಿರುವುದು ಅತ್ಯಂತ ಖಂಡನೀಯ ಎಂದವರು ಹೇಳಿದ್ದಾರೆ. ಅನ್ನದಾತರ ವಿರುದ್ಧ ಸೇಡಿನ ರಾಜಕಾರಣ ಮಾಡುವುದನ್ನು ತಕ್ಷಣ ನಿಲ್ಲಿಸಿ. 48 ಗಂಟೆಗಳ ಒಳಗೆ ರೈತರ ಮೇಲಿನ ಎಲ್ಲಾ ಸುಳ್ಳು FIRಗಳನ್ನು ಹಿಂಪಡೆಯಬೇಕು ಎಂದು ಅಶೋಕ್ ಮುಖ್ಯಮಂತ್ರಿ…
Blog
2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ
ಕೊಚ್ಚಿ: 2017ರಲ್ಲಿ ನಟಿಯ ಮೇಲಿನ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಸಲ್ಲಿಸಿದ್ದ ಶಿಕ್ಷೆ ಅಮಾನತು ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಇಂತಹ ಅರ್ಜಿಗಳನ್ನು ಪರಿಗಣಿಸುವ ವೇಳೆ ಸಂತ್ರಸ್ತೆಯ ಘನತೆ ಮತ್ತು ಹಕ್ಕುಗಳನ್ನೂ ಗಮನದಲ್ಲಿಡಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದ ವಿಚಾರಣಾ ನ್ಯಾಯಾಲಯ ಪಲ್ಸರ್ ಸುನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಹೈಕೋರ್ಟ್ನಲ್ಲಿ ಬಾಕಿಯಿದ್ದು, ಅಂತಿಮ ತೀರ್ಪು ಬರುವವರೆಗೆ ಶಿಕ್ಷೆ ಅಮಾನತುಗೊಳಿಸುವಂತೆ ಅವರು ಮನವಿ ಮಾಡಿದ್ದರು. ಸಂತ್ರಸ್ತೆಯ ಪರ ವಕೀಲರು, ಇದು ಅತ್ಯಂತ ಗಂಭೀರ ಅಪರಾಧವಾಗಿದ್ದು, ಶಿಕ್ಷೆ ಅಮಾನತುಗೊಳಿಸಿದರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ ಎಂದು ವಾದಿಸಿದರು. ಪ್ರಾಸಿಕ್ಯೂಷನ್ ಕೂಡ ಅರ್ಜಿಯನ್ನು ತೀವ್ರವಾಗಿ ವಿರೋಧಿಸಿ, ಆರೋಪಿಯ ವಿರುದ್ಧ ಶಿಕ್ಷೆ ಹೆಚ್ಚಿಸುವ ಮನವಿಯೂ ಬಾಕಿಯಿದೆ ಎಂದು ತಿಳಿಸಿತು.…
ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ
ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಹಡಗುಗಳ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ 30 ಭಾರತೀಯ ನಾವಿಕರ ಪೈಕಿ ಒಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಎಂಟಿ ಅಲ್ ಬಹಿಯಾ ಹಡಗಿನಲ್ಲಿ 12 ಭಾರತೀಯರು ಇದ್ದು, ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ. ಎಂಟಿ ಮೊಂಬಾಸಾ ಹಡಗಿನಲ್ಲಿ ಇದ್ದ 18 ಭಾರತೀಯರಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಭಾರತ, ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುತ್ತಿದೆ. ಈ ದಾಳಿಗೆ ಸಂಬಂಧಿಸಿ ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯ ಉಪ ಮುಖ್ಯಸ್ಥರನ್ನು ವಿದೇಶಾಂಗ ಸಚಿವಾಲಯ ಕರೆಸಿ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. ಹಾರ್ಮುಜ್ ಜಲಸಂಧಿಯಂತಹ ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ಹಾಗೂ ಸುರಕ್ಷಿತ…
ಬಿಡದಿ ಟೌನ್ಶಿಪ್ ಯೋಜನೆ ಕೈಬಿಡಲು ದೇವೇಗೌಡ ಆಗ್ರಹ, ವಿಧಾನಸೌಧ ಎದುರು ಸತ್ಯಾಗ್ರಹದ ಎಚ್ಚರಿಕೆ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧ ತೀವ್ರಗೊಂಡಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಯೋಜನೆಯನ್ನು ತಕ್ಷಣ ಕೈಬಿಡುವಂತೆ ಆಗ್ರಹಿಸಿದ್ದಾರೆ. ಸರ್ಕಾರ ಮನವಿಯನ್ನು ಕಡೆಗಣಿಸಿದರೆ ರೈತರ ಪರವಾಗಿ ಜೆಡಿಎಸ್ ಹೋರಾಟ ನಡೆಸುವುದರ ಜೊತೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ರಾಮನಗರ ಮತ್ತು ಹಾರೋಹಳ್ಳಿ ಭಾಗದ 7,481 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ₹18,133 ಕೋಟಿ ವೆಚ್ಚದಲ್ಲಿ ಸಮಗ್ರ ಉಪನಗರ ಯೋಜನೆ ಜಾರಿಗೆ ಮುಂದಾಗಿದೆ. ಆದರೆ ಈ ಪ್ರದೇಶದಲ್ಲಿ ಈಗಾಗಲೇ ಸಾವಿರಾರು ಎಕರೆ ಭೂಮಿಯನ್ನು ಕೈಗಾರಿಕೆಗಳಿಗೆ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ. ಯೋಜನೆಯಿಂದ 10,580 ರೈತರು ಬಾಧಿತರಾಗಲಿದ್ದು, ಅವರಲ್ಲಿ ಶೇ.82ರಷ್ಟು ಮಂದಿ ಒಂದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರು ಎಂದು ಅವರು ಉಲ್ಲೇಖಿಸಿದ್ದಾರೆ. ಭೈರಮಂಗಲ ಕೆರೆ…
ಡಿಸಿಪಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ; ಹಣ ವಂಚನೆ ಪ್ರಕರಣ ದಾಖಲು
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸಾರ್ವಜನಿಕರಿಂದ ಹಣ ವಂಚಿಸಿದ ಆರೋಪದಡಿ ಹೆಬ್ಬಗೋಡಿ ಪೊಲೀಸರು ಅಪರಿಚಿತನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಡಿಸಿಪಿ ನಾರಾಯಣ ಅವರ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿ ಹಿರಿಯ ಐಪಿಎಸ್ ಅಧಿಕಾರಿಯ ಹೆಸರಿನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ, ಅವರ ಸ್ನೇಹಿತರು ಹಾಗೂ ಸಾರ್ವಜನಿಕರನ್ನು ಸಂಪರ್ಕಿಸಿ ವಿವಿಧ ನೆಪಗಳಲ್ಲಿ ಹಣ ಕಳುಹಿಸುವಂತೆ ಕೇಳಿದ್ದಾನೆ. ಪ್ರಕರಣ ದಾಖಲಿಸಿರುವ ಪೊಲೀಸರು, ಸಾಮಾಜಿಕ ಜಾಲತಾಣ ಚಟುವಟಿಕೆ ಮತ್ತು ಹಣದ ವಹಿವಾಟಿನ ಡಿಜಿಟಲ್ ಮಾಹಿತಿಯನ್ನು ಪರಿಶೀಲಿಸಿ, ವಂಚನೆಯ ಜಾಲ ಹಾಗೂ ಆರೋಪಿಯನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ಡಿಸಿಪಿ ಎಂ. ನಾರಾಯಣ ವಿಡಿಯೊ ಬಿಡುಗಡೆ ಮಾಡಿ, ತಮ್ಮ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ರಿಯಾಯಿತಿ ದರದಲ್ಲಿ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುವ ನೆಪದಲ್ಲಿ ಹಣ ಸಂಗ್ರಹಿಸಲಾಗುತ್ತಿದೆ ಎಂದು…
ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಕಾರ, ಪರ್ಯಾಯ ಸ್ಥಳದಲ್ಲಿ ನಮಾಜ್ಗೆ ಸೂಚನೆ
ನವದೆಹಲಿ: ಮಧ್ಯಪ್ರದೇಶದ ಧಾರ್ನಲ್ಲಿರುವ ವಿವಾದಿತ ಭೋಜಶಾಲಾ–ಕಮಲ್ ಮೌಲಾ ಮಸೀದಿ ಸಂಕೀರ್ಣವನ್ನು ಹಿಂದೂ ದೇವಾಲಯವೆಂದು ಘೋಷಿಸಿದ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ, ಮುಸ್ಲಿಂ ಸಮುದಾಯದವರು ಶುಕ್ರವಾರ ಮಧ್ಯಾಹ್ನ 1ರಿಂದ 3 ಗಂಟೆಯವರೆಗೆ ನಮಾಜ್ ಸಲ್ಲಿಸಲು ಸ್ಮಾರಕದ ಸಮೀಪ ಪ್ರತ್ಯೇಕ ಮುಕ್ತ ಸ್ಥಳವನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ, ಈ ಮಧ್ಯಂತರ ವ್ಯವಸ್ಥೆ ಅಂತಿಮ ತೀರ್ಪಿಗೆ ಒಳಪಟ್ಟಿದ್ದು, ಎರಡೂ ಕಡೆಯ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗದಂತೆ ಜಾರಿಯಾಗಬೇಕು ಎಂದು ತಿಳಿಸಿದೆ. ಭೋಜಶಾಲಾ ಆವರಣದೊಳಗೆ ಶುಕ್ರವಾರದ ನಮಾಜ್ಗೆ ಮಧ್ಯಂತರ ಅನುಮತಿ ನೀಡಲು ನ್ಯಾಯಾಲಯ ನಿರಾಕರಿಸಿದ್ದು, ಹೈಕೋರ್ಟ್ನ ನಿರ್ಬಂಧ ಮುಂದುವರಿಯಲಿದೆ. ಇದೇ ವೇಳೆ, ಸುಪ್ರೀಂ ಕೋರ್ಟ್ನ ಪೂರ್ವಾನುಮತಿಯಿಲ್ಲದೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಸ್ಮಾರಕದಲ್ಲಿ ಯಾವುದೇ ರಚನಾತ್ಮಕ ಬದಲಾವಣೆಗಳನ್ನು ಕೈಗೊಳ್ಳಬಾರದು ಎಂದು ನಿರ್ದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ…
CWMA ಸಭೆ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ತೀರ್ಮಾನ: ಚಲುವರಾಯಸ್ವಾಮಿ
ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಬೆಳೆದಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯ ಬಳಿಕ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ರೈತರ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸಂಕಷ್ಟದ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು ಸರ್ಕಾರದ ಆದ್ಯತೆ. ಆದರೆ ಈ ವರ್ಷ ನಿರೀಕ್ಷಿತ ಮಳೆಯಾಗದ ಕಾರಣ ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದು, ಕುಡಿಯುವ ನೀರಿನ ಅಗತ್ಯವನ್ನೂ ಗಮನದಲ್ಲಿಟ್ಟುಕೊಳ್ಳಬೇಕಿದೆ ಎಂದು ಅವರು ಹೇಳಿದರು. ಜಿಲ್ಲೆಯ ಎಲ್ಲ ಶಾಸಕರು ಮುಖ್ಯಮಂತ್ರಿಗಳೊಂದಿಗೆ ಈ ಕುರಿತು ಚರ್ಚಿಸಿದ್ದು, ದೆಹಲಿಯಲ್ಲಿ ನಡೆಯಲಿರುವ CWMA ಹಾಗೂ CWRC ಸಭೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು. ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಕುಡಿಯುವ ನೀರಿನ ಅಗತ್ಯ, ಬೆಳೆಗಳ ಸ್ಥಿತಿ ಹಾಗೂ ರಾಜ್ಯದ…
ಕರ್ನಾಟಕದಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಡಿ.ಕೆ. ಶಿವಕುಮಾರ್ ಘೋಷಣೆ
ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ನೇತೃತ್ವದ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ನಡೆದ Google I/O Connect India 2026 ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ರಾಜ್ಯದಲ್ಲಿ AI ಹಬ್ ಸ್ಥಾಪಿಸಿ, ಸ್ಟಾರ್ಟ್ಅಪ್ಗಳು, ಉದ್ಯಮಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಂಶೋಧಕರನ್ನು ಒಂದೇ ವೇದಿಕೆಗೆ ತಂದು AI ಆಧಾರಿತ ಸಂಶೋಧನೆ ಮತ್ತು ನವೀನ ಪರಿಹಾರಗಳಿಗೆ ಉತ್ತೇಜನ ನೀಡಲಾಗುವುದು ಎಂದು ಅವರು ಹೇಳಿದರು. “ಬೆಂಗಳೂರು ಈಗಾಗಲೇ ವಿಶ್ವದ ಪ್ರಮುಖ ತಂತ್ರಜ್ಞಾನ ನಗರಗಳಲ್ಲಿ ಒಂದಾಗಿದೆ. ಭಾರತದ ಸಾಫ್ಟ್ವೇರ್ ರಫ್ತಿನ ಶೇ.40ರಷ್ಟು ಕೊಡುಗೆ ಕರ್ನಾಟಕದ್ದಾಗಿದ್ದು, 17 ಸಾವಿರಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಈಗ ಕರ್ನಾಟಕವನ್ನು ಭಾರತದ AI ರಾಜಧಾನಿಯನ್ನಾಗಿ ರೂಪಿಸುವುದು ನಮ್ಮ ಗುರಿ,” ಎಂದು ಮುಖ್ಯಮಂತ್ರಿ ಹೇಳಿದರು. AI ಶಿಕ್ಷಣವನ್ನು ಶಾಲಾ…
ರಾಮಚಂದ್ರ ಗೌಡ ನಿಧನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಸಂತಾಪ
ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಅವರ ನಿಧನಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ತೀವ್ರ ಸಂತಾಪ ಸೂಚಿಸಿದ್ದಾರೆ. ಶೋಕ ಸಂದೇಶದಲ್ಲಿ ಮಾತನಾಡಿರುವ ಅವರು, ರಾಮಚಂದ್ರ ಗೌಡರು ನಿಷ್ಠಾವಂತ ಆರ್ಎಸ್ಎಸ್ ಸ್ವಯಂಸೇವಕರಾಗಿದ್ದು, ಬೆಂಗಳೂರು ನಗರ ಪಾಲಿಕೆ ಸದಸ್ಯರಾಗಿ ನಗರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಹಲವು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, ಸಚಿವರಾಗಿಯೂ ಸೇವೆ ಸಲ್ಲಿಸಿದ್ದು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿಬೆಳೆಸಿದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ಹೇಳಿದ್ದಾರೆ. “ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ. ಅವರ ಅಗಲಿಕೆಯಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ಕರುಣಿಸಲಿ” ಎಂದು ವಿ. ಸೋಮಣ್ಣ ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.
ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಗೌಡ ನಿಧನ; ನಾಯಕರ ಕಂಬನಿ
ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದ ಅವರು ಜನಸಂಘದ ಕಾಲದಿಂದಲೇ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡಿದ್ದು, ಕರ್ನಾಟಕದಲ್ಲಿ ಬಿಜೆಪಿ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದರು. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲೂ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ನಾಯಕ ಸಿ.ಟಿ. ರವಿ, ರಾಮಚಂದ್ರ ಗೌಡರನ್ನು ಪಕ್ಷದ ಸಂಸ್ಥಾಪಕ ಸದಸ್ಯರು, ಮಾರ್ಗದರ್ಶಕರು ಹಾಗೂ ಕಾರ್ಯಕರ್ತರ ಪ್ರೇರಣಾಸ್ತಂಭ ಎಂದು ಸ್ಮರಿಸಿದ್ದಾರೆ. “ರಾಮಚಂದ್ರ ಗೌಡರು ಕೇವಲ ಹಿರಿಯ ರಾಜಕಾರಣಿಯಲ್ಲ; ಸಾವಿರಾರು ಕಾರ್ಯಕರ್ತರಿಗೆ ಧೈರ್ಯ ತುಂಬಿದ, ತಪ್ಪು ತಿದ್ದಿ ದಾರಿತೋರಿಸಿದ ಹಿರಿಯರಾಗಿದ್ದರು. ಅಧಿಕಾರದಲ್ಲಿದ್ದರೂ ಸರಳತೆ, ಸಜ್ಜನಿಕೆ, ಸಿದ್ಧಾಂತನಿಷ್ಠೆ ಹಾಗೂ ಕಾರ್ಯಕರ್ತರ ಮೇಲಿನ ಪ್ರೀತಿಯನ್ನು ಎಂದಿಗೂ ಬಿಟ್ಟಿರಲಿಲ್ಲ,” ಎಂದು ಹೇಳಿದ್ದಾರೆ. 1992ರ ಚಿಕ್ಕಮಗಳೂರು ಯುವ…
