ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗದ ವಿವರವಾದ ಯೋಜನಾ ವರದಿ (ಡಿಪಿಆರ್)ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ. ಬೆಂಗಳೂರು ಹೊರವಲಯದ ಮಾದಾವರ ಮೆಟ್ರೋ ನಿಲ್ದಾಣದಿಂದ ತುಮಕೂರುವರೆಗೆ ಹಸಿರು ಮಾರ್ಗವನ್ನು 59.60 ಕಿಲೋಮೀಟರ್ ವಿಸ್ತರಿಸುವ ಯೋಜನೆ ರೂಪಿಸಲಾಗಿದೆ. ಯೋಜನೆ ಪೂರ್ಣಗೊಂಡರೆ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ದೈನಂದಿನ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಮಾರ್ಗದಲ್ಲಿ ಪ್ರತಿ ಗಂಟೆಗೆ ಒಂದು ದಿಕ್ಕಿನಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. 2024-25ರ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಯನ್ನು ಘೋಷಿಸಿದ್ದರು. ಯೋಜನೆಯ ಮೊದಲ ಹಂತಕ್ಕೆ ಸುಮಾರು ₹20,649 ಕೋಟಿ ವೆಚ್ಚವಾಗುವ ನಿರೀಕ್ಷೆಯಿದೆ. ಯೋಜನೆ ಅನುಷ್ಠಾನಗೊಂಡರೆ ಹೊಸ ಮೆಟ್ರೋ ಕಾರಿಡಾರ್ ನೆಲಮಂಗಲ, ದಾಬಸ್ಪೇಟೆ ಹಾಗೂ ಕ್ಯಾತ್ಸಂದ್ರ ಮಾರ್ಗವಾಗಿ ಸಾಗಲಿದೆ.…
Blog
ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್ ಮೇಲ್ವಿಚಾರಣೆ
ಬೆಂಗಳೂರು: ರಾಜ್ಯದ ಜನತೆಗೆ ತುರ್ತು ಸಮಯದಲ್ಲಿ ಅತ್ಯಂತ ಗುಣಮಟ್ಟದ ಹಾಗೂ ಪಾರದರ್ಶಕ ವೈದ್ಯಕೀಯ ಸೇವೆ ತಲುಪಿಸುವುದು ನಮ್ಮ ಸರ್ಕಾರದ ಪರಮೋಚ್ಚ ಧ್ಯೇಯ. ಇವತ್ತು ಇಡೀ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಸಂಪೂರ್ಣ ಸರ್ಕಾರಿ ಸ್ವಾಮ್ಯದ ಅತ್ಯಾಧುನಿಕ ‘108’ ಕೇಂದ್ರಿಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರವನ್ನು ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಸ್ತೆ ಅಪಘಾತಗಳು, ಹೆರಿಗೆ ಅಥವಾ ಹೃದಯರೋಗದಂತಹ ಕ್ಲಿಷ್ಟ ಸಂದರ್ಭಗಳಲ್ಲಿ ಆ ‘ಗೋಲ್ಡನ್ ಅವರ್’ ಚಿಕಿತ್ಸೆ ಜೀವ ಉಳಿಸಲು ಅತ್ಯಂತ ನಿರ್ಣಾಯಕ. ಇಂತಹ ತುರ್ತು ಸಂದರ್ಭದಲ್ಲಿ ಶೇ.80 ರಷ್ಟು ಜನರನ್ನು ಬದುಕಿಸಲು ಈ ನೂತನ ತಂತ್ರಜ್ಞಾನದ ಕೇಂದ್ರ ನೆರವಾಗಲಿದೆ. ಸಾರ್ವಜನಿಕರು ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳ ದುಬಾರಿ ವೆಚ್ಚಕ್ಕೆ ಹೆದರಿ ತೊಂದರೆಗೆ ಸಿಲುಕುವ ಬದಲು, ಧೈರ್ಯವಾಗಿ ನಮ್ಮ ಅತ್ಯಾಧುನಿಕ ಸೌಲಭ್ಯವುಳ್ಳ ಸರ್ಕಾರಿ ಆಸ್ಪತ್ರೆಗಳಿಗೆ ಬರಬೇಕು. ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ…
ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್
ನವದೆಹಲಿ: ಆಫ್ರಿಕಾದ ಕೆಲವು ಭಾಗಗಳಲ್ಲಿ ಎಬೋಲಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಸೋಮವಾರ ದೇಶದ ಸನ್ನದ್ಧತೆ ಮತ್ತು ಕಣ್ಗಾವಲು ಕ್ರಮಗಳ ಪರಿಶೀಲನಾ ಸಭೆ ನಡೆಸಿದರು. ಬುಂಡಿಬುಗ್ಯೊ ತಳಿಯ ಎಬೋಲಾ ಸೋಂಕಿನ ಯಾವುದೇ ಪ್ರಕರಣ ಭಾರತದಲ್ಲಿ ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ವಿಶ್ವ ಆರೋಗ್ಯ ಸಂಸ್ಥೆ ಈ ಸೋಂಕನ್ನು ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ ಎಂದು ಹೇಳಿದರು. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ, ಡಿಜಿಎಚ್ಎಸ್, ನಾಗರಿಕ ವಿಮಾನಯಾನ ಮತ್ತು ವಲಸೆ ಅಧಿಕಾರಿಗಳ ಸಹಯೋಗದಲ್ಲಿ ದೇಶಾದ್ಯಂತ ಕಣ್ಗಾವಲು ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಬಲಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು. ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಹಾಗೂ ಪ್ರವೇಶ ಬಿಂದುಗಳಲ್ಲಿ ತಪಾಸಣೆ ಮತ್ತು ನಿಗಾವ್ಯವಸ್ಥೆ ಹೆಚ್ಚಿಸಲಾಗಿದ್ದು, ಸೋಂಕು…
ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ
ನವದೆಹಲಿ: ಭಾರತ ಚುನಾವಣಾ ಆಯೋಗ ನವದೆಹಲಿಯ ಇಂಡಿಯಾ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ ಅಂಡ್ ಎಲೆಕ್ಷನ್ ಮ್ಯಾನೇಜ್ಮೆಂಟ್ನಲ್ಲಿ “ಅಪಾಯ ನಿರ್ವಹಣೆ ಮತ್ತು ಚುನಾವಣಾ ಸ್ಥಿತಿಸ್ಥಾಪಕತ್ವ” ಕುರಿತ ಐದು ದಿನಗಳ ಅಂತರರಾಷ್ಟ್ರೀಯ ಕಾರ್ಯಾಗಾರವನ್ನು ಆರಂಭಿಸಿದೆ. ಅಂತರರಾಷ್ಟ್ರೀಯ ಐಡಿಯಾ ಸಹಯೋಗದೊಂದಿಗೆ ಆಯೋಜಿಸಲಾದ ಈ ಕಾರ್ಯಾಗಾರ ಮೇ 25ರಿಂದ 29ರವರೆಗೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಸಹ ಭಾಗವಹಿಸಿದ್ದರು. 12 ದೇಶಗಳ ಚುನಾವಣಾ ಆಯುಕ್ತರು, ಚುನಾವಣಾ ನಿರ್ವಹಣಾ ಸಂಸ್ಥೆಗಳ ಹಿರಿಯ ಅಧಿಕಾರಿಗಳು, ತಂತ್ರಜ್ಞಾನ ತಜ್ಞರು ಮತ್ತು ಬಿಕ್ಕಟ್ಟು ನಿರ್ವಹಣಾ ವೃತ್ತಿಪರರು ಸೇರಿದಂತೆ ಒಟ್ಟು 32 ಮಂದಿ ಕಾರ್ಯಾಗಾರದಲ್ಲಿ ಭಾಗಿಯಾಗಿದ್ದಾರೆ. ಚುನಾವಣಾ ಅಪಾಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು ಹಾಗೂ ಚುನಾವಣಾ ಪ್ರಕ್ರಿಯೆಯ ಸ್ಥಿರತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಕಾಪಾಡುವ ಕುರಿತು ಕಾರ್ಯಾಗಾರದಲ್ಲಿ ಚರ್ಚೆಗಳು ನಡೆಯಲಿವೆ. ಚುನಾವಣಾ…
ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ
ನವದೆಹಲಿ: ಆಯುಷ್ ಉತ್ಪನ್ನಗಳು ಮತ್ತು ಔಷಧೀಯ ಮಸಾಲೆಗಳ ಜಾಗತಿಕ ಪ್ರಚಾರವನ್ನು ಬಲಪಡಿಸುವ ಉದ್ದೇಶದಿಂದ ಆಯುಷ್ ಎಕ್ಸಿಲ್ ಮತ್ತು ಭಾರತೀಯ ಮಸಾಲೆ ಮಂಡಳಿ ನಡುವೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಲಾಗಿದೆ. ಆಯುಷ್ ರಾಜ್ಯ ಸಚಿವ ಪ್ರತಾಪರಾವ್ ಜಾಧವ್ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ನಡೆದಿದ್ದು, ಈ ಸಹಭಾಗಿತ್ವವನ್ನು “ದೂರದೃಷ್ಟಿಯ ಮತ್ತು ಭವಿಷ್ಯಮುಖಿ ಉಪಕ್ರಮ” ಎಂದು ಅವರು ಬಣ್ಣಿಸಿದ್ದಾರೆ. ಭಾರತದ ಆಯುರ್ವೇದ ಮತ್ತು ಔಷಧೀಯ ಮಸಾಲೆಗಳ ಶ್ರೀಮಂತ ಪರಂಪರೆಯನ್ನು ಉಲ್ಲೇಖಿಸಿದ ಜಾಧವ್, ಈ ಒಪ್ಪಂದದಿಂದ ರೈತರು, ರಫ್ತುದಾರರು, ನವೋದ್ಯಮಗಳು, ಎಂಎಸ್ಎಂಇಗಳು ಹಾಗೂ ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಬೆಂಬಲ ಸಿಗಲಿದೆ ಎಂದು ಹೇಳಿದರು. “ಮಸಾಲೆ ಮತ್ತು ಗುಣಪಡಿಸುವಿಕೆ” ಎಂಬ ವಿಶೇಷ ಉಪಕ್ರಮದ ಮೂಲಕ ಭಾರತವನ್ನು ನೈಸರ್ಗಿಕ ಚಿಕಿತ್ಸೆ ಮತ್ತು ಸಮಗ್ರ ಸ್ವಾಸ್ಥ್ಯ ಕ್ಷೇತ್ರದಲ್ಲಿ ಜಾಗತಿಕ ನಾಯಕನನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು. ಈ ಸಹಭಾಗಿತ್ವದಡಿ ರಫ್ತು ಪ್ರೋತ್ಸಾಹ,…
‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಭಗವಾನ್ ಗೌತಮ ಬುದ್ಧನ ಸಂದೇಶ ಮತ್ತು ತತ್ವಶಾಸ್ತ್ರವನ್ನು ಪ್ರತಿಬಿಂಬಿಸುವ ಮೂಲಕ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ‘X’ ರಂದು ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು ಮತ್ತು ‘ಭಗವಾನ್ ಗೌತಮ ಬುದ್ಧನ ಜೀವನ ತತ್ವಶಾಸ್ತ್ರ ಮತ್ತು ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠವಾಗಿ ಕಾರ್ಯನಿರ್ವಹಿಸುತ್ತವೆ – ಅಹಿಂಸೆ, ಕರುಣೆ, ಸತ್ಯ, ಸಾಮಾಜಿಕ ಸಾಮರಸ್ಯ ಮತ್ತು ನೈತಿಕತೆಯ ಪಾಠ. ಅವರು ತೋರಿಸಿದ ಮಾರ್ಗವು ಯಾವಾಗಲೂ ಶಾಂತಿ ಮತ್ತು ಸಾಮರಸ್ಯದ ಹಾದಿಯಲ್ಲಿ ನಡೆಯಲು ನಮಗೆ ಸ್ಫೂರ್ತಿ ನೀಡುತ್ತದೆ’ ಎಂದವರು ತಿಳಿಸಿದ್ದಾರೆ. आप सभी को बुद्ध पूर्णिमा की हार्दिक शुभकामनाएं। भगवान गौतम बुद्ध का जीवन दर्शन और उनके विचार सम्पूर्ण मानवता के लिए शिक्षा हैं…
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ: ಹೆಚ್ಚುವರಿ ಖಾತೆ ವಹಿಸಿಕೊಂಡ ಸಿದ್ದರಾಮಯ್ಯ, ಕೆ.ವೆಂಕಟೇಶ್
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚುವರಿ ಖಾತೆಗಳ ಜವಾಬ್ದಾರಿ ನೀಡಲಾಗಿದೆ. ಈ ಕುರಿತು ರಾಜಭವನ ಕರ್ನಾಟಕ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಸಚಿವ ಕೆ. ವೆಂಕಟೇಶ್ ಅವರಿಗೆ ವಹಿಸಲಾಗಿದೆ. ಇನ್ನೊಂದೆಡೆ, ಕೆ. ಎನ್. ರಾಜಣ್ಣ ರಾಜೀನಾಮೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಹಾಗೂ ಬಿ. ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾಗಿದ್ದ ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಪ್ರಸ್ತುತ ಸಿದ್ದರಾಮಯ್ಯ ಅವರು ಹಣಕಾಸು, ಸಂಸದೀಯ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ವಾರ್ತಾ ಇಲಾಖೆ ಸೇರಿದಂತೆ ಯುವಜನ ಸೇವೆ…
K’taka to welcome students with festive reopening of schools: Madhu Bangarappa
Bengaluru: Karnataka School Education and Literacy Minister Madhu Bangarappa has called for a grand and festive start to the new academic year across government schools in the state. The minister directed officials and local communities to ensure that school campuses are cleaned between May 29 and 31 and that students returning on June 1 are welcomed in a celebratory atmosphere with garlands and special arrangements. He said members of School Development and Monitoring Committees, local residents and alumni should actively participate in organising the reopening celebrations to make schools more…
ಜೂನ್ 1ರಂದು ‘ಮಕ್ಕಳ ಹಬ್ಬ’: ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿ ಸ್ವಾಗತಕ್ಕೆ ಕರೆ
ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಹಬ್ಬದ ರೀತಿಯಲ್ಲಿ ಆಚರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವಮಧು ಬಂಗಾರಪ್ಪ (Madhu Bangarappa) ಕರೆ ನೀಡಿದ್ದಾರೆ. ಮೇ 29, 30 ಮತ್ತು 31ರಂದು ಶಾಲಾ ಆವರಣಗಳನ್ನು ಸ್ವಚ್ಛಗೊಳಿಸಿ, ಜೂನ್ 1ರಂದು ಶಾಲೆಗೆ ಆಗಮಿಸುವ ಮಕ್ಕಳನ್ನು ತಳಿರು ತೋರಣ, ಹಬ್ಬದ ವಾತಾವರಣ ಮತ್ತು ವಿಶೇಷ ಸ್ವಾಗತದೊಂದಿಗೆ ಬರಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಸಮುದಾಯದವರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (School Development and Monitoring Committee) ಸದಸ್ಯರು ಹಾಗೂ ಹಳೆಯ ವಿದ್ಯಾರ್ಥಿಗಳು ಮಕ್ಕಳಿಗಾಗಿ ವಿಶೇಷ ಊಟದ ವ್ಯವಸ್ಥೆ ಮಾಡುವ ಮೂಲಕ ಶಾಲೆಯತ್ತ ಆಕರ್ಷಣೆ ಹೆಚ್ಚಿಸಬೇಕು ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯಾದ್ಯಂತ 1,000 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸುವ ಗುರಿ ಹೊಂದಿರುವುದಾಗಿ ತಿಳಿಸಿದ ಅವರು, ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D. K.…
Petrol, diesel prices hiked again; fourth increase in 11 days shocks motorists
New Delhi: Fuel prices were raised once again across the country on Sunday, marking the fourth hike in just 11 days and adding to the burden on consumers. Petrol prices have been increased by Rs 2.61 per litre, while diesel rates have gone up by Rs 2.71 per litre with immediate effect. Since the latest round of revisions began on May 15, fuel prices have risen by nearly Rs 7.50 per litre overall. In the national capital, petrol is now priced at Rs 102.12 per litre and diesel at Rs…
