ಬೆಂಗಳೂರು: ಕೈಗಾರಿಕೆ ಹೆಸರಲ್ಲಿ ಭೂಸವಾಧೀನ ಮಾಡಿಸಿ ವೈಯಕ್ತಿಕ ಬ್ಯುಸಿನೆಸ್ ನಡೆಸುವ ರಿಯಲ್ ಎಸ್ಟೇಟ್ ಉದ್ಯಮಿ ದಯಾನಂದ್ ಪೈ ಪ್ರಯತ್ನಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಮಹತ್ವದ ಆದೇಶವೊಂದರಲ್ಲಿ ಬೆಂಗಳೂರಿನ ಹೆಬ್ಬಾಳ ಬಳಿ ಲೇಕ್ ವ್ಯೂ ಪ್ರವಾಸೋದ್ಯಮ ನಿಗಮಕ್ಕೆ ನೂರಾರು ಕೋಟಿ ಬೆಲೆಬಾಳುವ ಜಾಮೀನು ಸ್ವಾಧೀನ ಅಧಿಸೂಚನೆಯನ್ನೇ ಹೈಕೋರ್ಟ್ ರದ್ದುಪಡಿಸಿದೆ. ಅಷ್ಟೇ ಅಲ್ಲ ಉದ್ಯಮಿ ದಯಾನಂದ್ ಪೈ ಅವರಿಗೆ ಬರೋಬ್ಬರಿ 10 ಲಕ್ಷ ರೂಪಾಯಿ ದಂಡ ವಿಧಿಸಿದ್ದಲ್ಲದೆ, ಸಿಬಿಐ ತನಿಖೆಗೂ ಆದೇಶಿಸಿ ಶುಕ್ರವಾರ ತೀರ್ಪು ಪ್ರಕಟಿಸಿದೆ. ಹೆಬ್ಬಾಳದಲ್ಲಿ ಸ್ಥಳೀಯರ ಆಕ್ಷೇಪದ ನಡುವೆಯೂ ಕೈಗಾರಿಕೆಗಳ ಸ್ಥಾಪನೆ ಮತ್ತು ಅಭಿವೃದ್ಧಿಗಾಗಿ 63.33 ಎಕರೆ ಭೂಮಿಯನ್ನು ಸ್ವಾಧೀನ ಕುರಿತು KIADBಯು 2002ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಅದೇ ಜಮೀನನ್ನು ಬಿಡಿಡಿಎಯು 2004ರಲ್ಲಿ ಅರ್ಕಾವತಿ ಲೇಔಟ್ ನಿರ್ಮಾಣಕ್ಕೂ ಅಧಿಸೂಚನೆ ಹೊರಡಿಸಿದೆ. ಅದಾಗಿಯೂ KIADBಯು ಕಾಯ್ದೆಯ ಸೆಕ್ಷನ್ 28 (ಎ) ರ ಅಡಿಯಲ್ಲಿ 63.33 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು…
Blog
ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಮೂರು ಸಾಲಿನ ವಿಪ್ ಜಾರಿ
ನವದೆಹಲಿ: ಏಪ್ರಿಲ್ 16ರಿಂದ ಆರಂಭವಾಗಲಿರುವ ವಿಶೇಷ ಸಂಸತ್ ಅಧಿವೇಶನಕ್ಕೂ ಮುನ್ನ ಬಿಜೆಪಿ ತನ್ನ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸಂಸದರಿಗೆ ಕಟ್ಟುನಿಟ್ಟಾದ ಮೂರು ಸಾಲಿನ ವಿಪ್ ಜಾರಿ ಮಾಡಿದೆ. ಏಪ್ರಿಲ್ 16ರಿಂದ 18ರವರೆಗೆ ನಡೆಯುವ ಅಧಿವೇಶನದ ಅವಧಿಯಲ್ಲಿ ಎಲ್ಲ ಸಂಸದರೂ ಕಡ್ಡಾಯವಾಗಿ ಸದನದಲ್ಲಿ ಹಾಜರಿರಬೇಕು ಎಂದು ಪಕ್ಷ ಸೂಚಿಸಿದೆ. ಯಾವುದೇ ರಜೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಪಕ್ಷದ ಕಚೇರಿ ಕಾರ್ಯದರ್ಶಿ ಶಿವಶಕ್ತಿ ನಾಥ್ ಬಕ್ಷಿ ಸಹಿ ಮಾಡಿದ ಅಧಿಕೃತ ನೋಟಿಸ್ನಲ್ಲಿ, “ಎಲ್ಲಾ ಕೇಂದ್ರ ಸಚಿವರು ಹಾಗೂ ಸಂಸದರು ಈ ಮೂರು ದಿನಗಳಲ್ಲೂ ಸದನದಲ್ಲಿ ನಿರಂತರವಾಗಿ ಹಾಜರಿರಬೇಕು” ಎಂದು ತಿಳಿಸಲಾಗಿದೆ. ಬಜೆಟ್ ಅಧಿವೇಶನದ ವಿರಾಮದ ಬಳಿಕ ಲೋಕಸಭೆ ಮತ್ತು ರಾಜ್ಯಸಭೆ ಏಪ್ರಿಲ್ 16ರಂದು ಮತ್ತೆ ಸಭೆ ಸೇರುವುದರೊಂದಿಗೆ ಈ ವಿಶೇಷ ಅಧಿವೇಶನ ಆರಂಭವಾಗಲಿದೆ. ಸರ್ಕಾರ ಪ್ರಮುಖ ಮಸೂದೆಗಳು ಮತ್ತು ಸುಧಾರಣಾ ಕ್ರಮಗಳನ್ನು ಮುಂದಿಡುವ ಸಾಧ್ಯತೆ ಇದೆ. ಮುಖ್ಯವಾಗಿ ಮಹಿಳೆಯರಿಗೆ…
ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ; ಶ್ರದ್ದಾಂಜಲಿಯ ಮಹಾಪೂರ
ಮುಂಬೈ,: ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ಭಾನುವಾರ ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಅವರು ಮುಂಬೈನ Breach Candy Hospitalನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಾ ಘಟಕದಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದರೂ, ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದರು. ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಚಿತ್ರರಂಗದ ಗಣ್ಯರು ಹಾಗೂ ಸಂಗೀತ ಕ್ಷೇತ್ರದ ಅನೇಕರು ಅವರ ಶೀಘ್ರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಆ ಪ್ರಾರ್ಥನೆ ಫಲಕಾರಿಯಾಗದೆ, ಸಂಗೀತ ಲೋಕವು ತನ್ನ ಅಮೂಲ್ಯ ಧ್ವನಿಯನ್ನು ಕಳೆದುಕೊಂಡಂತಾಗಿದೆ. ಹಿಂದಿ ಸೇರಿದಂತೆ ಕನ್ನಡ, ತಮಿಳು, ತೆಲುಗು, ಮರಾಠಿ, ಮಲಯಾಳಂ, ಬೆಂಗಾಲಿ ಸೇರಿದಂತೆ ಅನೇಕ ಭಾಷೆಗಳಲ್ಲಿ ಲಕ್ಷಾಂತರ ಹಾಡುಗಳನ್ನು ಹಾಡಿರುವ ಆಶಾ ಭೋಸ್ಲೆ, ಭಾರತೀಯ ಸಂಗೀತಕ್ಕೆ ಅಪಾರ ಕೊಡುಗೆ…
ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು
ಬೆಂಗಳೂರು: ದಾವಣಗೆರೆ ಕ್ಷೇತ್ರದ ಉಪಚುನಾವಣೆಯಲ್ಲಿ ನೀಡದ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ ಸೃಷ್ಟಿಸಿದೆ. ಅದರಲ್ಲೂ ಮುಸ್ಲಿಂ ನಾಯಕರು ಪಕ್ಷದ ಪ್ರಚಾರದಿಂದ ಉಳಿದಿರುವ ಬೆಳವಣಿಗೆ ಪಕ್ಷದ ವರಿಷ್ಠರಿಗೆ ಮುಜುಗರ ತಂದಿದೆ. ಈ ಬೆಳವಣಿಗೆಯ ನಡುವೆಯೇ, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ. “ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ” ಎಂದು ಶಿವಕುಮಾರ್ ತಿಳಿಸಿದ್ದಾರೆ.
ಇರಾನ್-ಅಮೇರಿಕ ಜೊತೆಗಿನ ಪಾಕ್ ಸಂಧಾನ ವಿಫಲ
ಇಸ್ಲಾಮಾಬಾದ್: ಇರಾನ್ ಜೊತೆ ನಡೆದ ಮಹತ್ವದ ಮಾತುಕತೆಗಳು ಯಾವುದೇ ಒಪ್ಪಂದವಿಲ್ಲದೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪಾಕಿಸ್ತಾನ ತೊರೆದಿದ್ದಾರೆ. ಇಸ್ಲಾಮಾಬಾದ್ನಲ್ಲಿ ನಡೆದ ಇತ್ತೀಚಿನ ಸುತ್ತಿನ ಚರ್ಚೆಗಳಲ್ಲಿ ಅಮೆರಿಕ ತನ್ನ “ಅಂತಿಮ ಮತ್ತು ಉತ್ತಮ ಕೊಡುಗೆ”ಯನ್ನು ಮಂಡಿಸಿದ್ದರೂ, ಇರಾನ್ ಅದನ್ನು ಅಂಗೀಕರಿಸದ ಕಾರಣ ಮಾತುಕತೆಗಳು ಫಲಶೂನ್ಯವಾಗಿ ಅಂತ್ಯಗೊಂಡಿವೆ ಎಂದು ವ್ಯಾನ್ಸ್ ತಿಳಿಸಿದ್ದಾರೆ. ಸುಮಾರು ಒಂದು ದಿನದ ಮ್ಯಾರಥಾನ್ ಮಾತುಕತೆಗಳ ಬಳಿಕವೂ ಪ್ರಮುಖ ವಿಷಯಗಳಲ್ಲಿ ಒಪ್ಪಂದಕ್ಕೆ ಬರಲಾಗಿಲ್ಲ. ಸದ್ಭಾವನೆಯಿಂದ ಚರ್ಚೆಗಳು ನಡೆದರೂ ಅಂತಿಮ ನಿರ್ಧಾರ ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ. ಇರಾನ್ ಪರಮಾಣು ಕಾರ್ಯಕ್ರಮವೇ ಮಾತುಕತೆಗಳ ಪ್ರಮುಖ ವಿಷಯವಾಗಿದ್ದು, ಇರಾನ್ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿ ಮಾಡಬಾರದು ಎಂಬುದರ ಕುರಿತು ದೀರ್ಘಕಾಲೀನ ಭರವಸೆ ಅಗತ್ಯವಿದೆ ಎಂದು ವ್ಯಾನ್ಸ್ ಒತ್ತಿಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಇರಾನ್ ಮೂಲಗಳು, ಅಮೆರಿಕದ “ಅತಿಯಾದ ಬೇಡಿಕೆಗಳು” ಮಾತುಕತೆ ವಿಫಲವಾಗಲು ಕಾರಣವಾಗಿವೆ ಎಂದು ಆರೋಪಿಸಿವೆ. ಜೊತೆಗೆ, ತನ್ನ…
‘ಜನ ನಾಯಗನ್’ ಚಿತ್ರದ ದೃಶ್ಯ ಇಂಟರ್ನೆಟ್ನಲ್ಲಿ ಸೋರಿಕೆ
ಹೈದರಾಬಾದ್: ಬಹು ನಿರೀಕ್ಷಿತ ‘ಜನ ನಾಯಗನ್’ ಚಿತ್ರದ ದೃಶ್ಯಾವಳಿ ಇಂಟರ್ನೆಟ್ನಲ್ಲಿ ಸೋರಿಕೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ತೆಲುಗು ನಟ ವಿಜಯ್ ದೇವರಕೊಂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು, “#ಜನನಾಯಗನ್ ಸೋರಿಕೆ ನನಗೆ ಕೋಪ ತರಿಸುತ್ತದೆ. ವೃತ್ತಿಜೀವನದ ಆರಂಭದಲ್ಲಿ ಇಂತಹ ಘಟನೆ ಎದುರಿಸಿದ ಅನುಭವವಿದೆ. ಇದು ಕೇವಲ ನನ್ನ ವಿಷಯವಲ್ಲ; ಸಹ-ನಟರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಅನೇಕ ಜನರ ಕನಸುಗಳಿಗೆ ಹೊಡೆತ ನೀಡುತ್ತದೆ” ಎಂದು ಹೇಳಿದ್ದಾರೆ. ಈ ಸಮಸ್ಯೆಯನ್ನು ತಕ್ಷಣ ಬಗೆಹರಿಸಿ, ಅದರ ಹಿಂದಿರುವವರನ್ನು ಪತ್ತೆಹಚ್ಚಬೇಕು. ಇಲ್ಲವಾದರೆ ಇದು ವ್ಯವಸ್ಥೆಯ ವೈಫಲ್ಯವೆನ್ನಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ, ಚಿತ್ರದ ಸಂಪೂರ್ಣ ತಂಡಕ್ಕೆ ತಮ್ಮ ಬೇಷರತ್ತಾದ ಬೆಂಬಲವನ್ನೂ ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮುನ್ನ ಖ್ಯಾತ ನಿರ್ದೇಶಕ ಎ.ಆರ್. ಮುರುಗದಾಸ್ ಕೂಡ ಸೋರಿಕೆಯನ್ನು ಖಂಡಿಸಿ, “ಚಿತ್ರ ಸೋರಿಕೆ ಎಂದರೆ ಕೇವಲ ಸಿನಿಮಾ ಅಲ್ಲ; ಅದು ಹಲವರ ಕನಸು,…
ಯೂತ್ ಕಾಂಗ್ರೆಸ್ ನಾಯಕ ಫೈರೋಜ್ ಪಠಾಣ್ ಹತ್ಯೆ
ಧಾರವಾಡ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಮುಗಿದಿದ್ದು,ರಾಜಕೀಯ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಇದ್ದಾರೆ. ರಾಜ್ಯದ ಜನರು ಕೂಡಾ ಕುತೂಹಲದಿಂದ ಫಲಿತಾಂಶವನ್ನು ಎದುರು ನೋಡುತ್ತಿದ್ದಾರೆ. ಆದರೆ, ಅಷ್ಟರಲ್ಲೇ, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಯ ಸುದ್ದಿ ರಾಜ್ಯದ ಜನರನ್ನು ಬೆಚ್ಚಿ ಬೆಳಿಸಿದೆ. ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಶುಕ್ರವಾರ ರಾತ್ರಿ ನಗರದ ಹಾಶ್ಮಿ ನಗರದಲ್ಲಿರುವ ಮನೆಗೆ ನುಗ್ಗಿದ ಆರು ಜನರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಸಂಚು ರೂಪಿಸಿದ್ದ ಆರೋಪದಲ್ಲಿ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಎಂಬವರನ್ನು…
ದೇಶದಲ್ಲಿ ಪ್ರತಿದಿನ 51.5 ಲಕ್ಷ ಎಲ್ಪಿಜಿ ಸಿಲಿಂಡರ್ ವಿತರಣೆ ಆಗುತ್ತಿದೆ
ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ದೇಶದಲ್ಲಿ ಎಲ್ಪಿಜಿ ಪೂರೈಕೆ ಸಾಮಾನ್ಯವಾಗಿಯೇ ಮುಂದುವರಿದಿದ್ದು, ಏಪ್ರಿಲ್ 8ರಂದು 51.5 ಲಕ್ಷಕ್ಕೂ ಹೆಚ್ಚು ದೇಶೀಯ ಎಲ್ಪಿಜಿ ಸಿಲಿಂಡರ್ಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ. ಆನ್ಲೈನ್ ಮೂಲಕ ಎಲ್ಪಿಜಿ ಬುಕ್ಕಿಂಗ್ ಪ್ರಮಾಣವು ಶೇಕಡಾ 98ಕ್ಕೆ ಏರಿಕೆಯಾಗಿದೆ. ವಿತರಕರ ಮಟ್ಟದಲ್ಲಿ ಯಾವುದೇ ಕೊರತೆ (ಡ್ರೈ-ಔಟ್) ವರದಿಯಾಗಿಲ್ಲ ಎಂದು ತಿಳಿಸಲಾಗಿದೆ. ವಿತರಣಾ ಪಾರದರ್ಶಕತೆ ಹೆಚ್ಚಿಸಲು ಡೆಲಿವರಿ ಕಾನ್ಫರ್ಮೇಶನ್ ಕೋಡ್ ಆಧಾರಿತ ವಿತರಣೆಗಳು ಶೇಕಡಾ 92ಕ್ಕೆ ಏರಿಕೆಯಾಗಿದೆ. ವಲಸೆ ಕಾರ್ಮಿಕರು ಹೆಚ್ಚಾಗಿ ಬಳಸುವ 5 ಕೆಜಿ ಎಲ್ಪಿಜಿ ಸಿಲಿಂಡರ್ಗಳ ಬೇಡಿಕೆ ಕೂಡ ಹೆಚ್ಚಾಗಿದೆ. ದೇಶಾದ್ಯಂತ 1.06 ಲಕ್ಷಕ್ಕೂ ಹೆಚ್ಚು ಸಿಲಿಂಡರ್ಗಳು ದಿನನಿತ್ಯ ಮಾರಾಟವಾಗುತ್ತಿದ್ದು, ಫೆಬ್ರವರಿಯಲ್ಲಿ ಇದು ಸರಾಸರಿ 77 ಸಾವಿರವಾಗಿತ್ತು. ಮಾರ್ಚ್ 23ರಿಂದ ಇಂದಿನವರೆಗೆ ಸುಮಾರು 10 ಲಕ್ಷ ಸಣ್ಣ ಸಿಲಿಂಡರ್ಗಳು ಮಾರಾಟವಾಗಿವೆ. ಪರಿಶೀಲನೆ ಕ್ರಮಗಳನ್ನು ಕಠಿಣಗೊಳಿಸಿರುವ ಸಾರ್ವಜನಿಕ ವಲಯದ ತೈಲ…
‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ
ಮುಂಬೈ: ಬಾಲಿವುಡ್ ನಟ ಅನಿಲ್ ಕಪೂರ್ ಇತ್ತೀಚಿನ ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸಿನಿ ಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದಾರೆ. ಅವರ ಈ ಪೋಸ್ಟ್ ಹಿಟ್ ಆಕ್ಷನ್ ಥ್ರಿಲ್ಲರ್ ಸರಣಿ 24 ಮರುಪ್ರವೇಶದ ಸುಳಿವು ನೀಡಿದೆಯೇ ಎಂಬ ಪ್ರಶ್ನೆ ಎದ್ದಿದೆ. ತಮ್ಮ X ಖಾತೆಯಲ್ಲಿ ಅವರು JioHotstar ಅನ್ನು ಟ್ಯಾಗ್ ಮಾಡಿ, “ನಿಮಗೆ 24 ಗಂಟೆಗಳಿವೆ” ಎಂದು ಎಚ್ಚರಿಕೆ ನೀಡಿದರೆ, “ಇಲ್ಲದಿದ್ದರೆ ನಾನು ವಿಷಯಗಳನ್ನು ನನ್ನ ಕೈಗೆ ತೆಗೆದುಕೊಳ್ಳುತ್ತೇನೆ” ಎಂಬ ಸಂದೇಶವನ್ನು ಕೂಡ ಹಂಚಿಕೊಂಡಿದ್ದಾರೆ. ಈ ಪೋಸ್ಟ್ಗೆ ಅಭಿಮಾನಿಗಳಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. “24 ಮತ್ತೆ ಬರುತ್ತಿದೆಯೇ?” “ಅದೊಂದು ಅದ್ಭುತ ಸರಣಿ” ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಕೆಲವರು ಇದನ್ನು ಹೊಸ ಸೀಸನ್ಗೆ ಸಂಬಂಧಿಸಿದ ಮಾರ್ಕೆಟಿಂಗ್ ಸ್ಟಂಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಅದೇ ಹೆಸರಿನ ಅಮೇರಿಕನ್ ಸರಣಿಯನ್ನು ಆಧರಿಸಿದ ‘24’ ಮೊದಲ ಸೀಸನ್ 2013ರಲ್ಲಿ, ಎರಡನೇ ಸೀಸನ್ 2016ರಲ್ಲಿ…
‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ
ಬೆಂಗಳೂರು: ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ, ಬಿಸಿಯೂಟ ಕಾರ್ಮಿಕರು ಹಾಗೂ ಬಡ ಜನತೆಯ ಮಕ್ಕಳ ಭವಿಷ್ಯವನ್ನು ರಕ್ಷಿಸಿ’ ಎಂದು ಕೈಗೊಂಡಿರುವ ರಾಜ್ಯ ಮಟ್ಟದ ಪ್ರತಿಭಟನೆಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ (AIUTUC) ನೇತೃತ್ವದಲ್ಲಿ 10.4.2026 ರಂದು ರಾಜ್ಯ ಮಟ್ಟದ ಪ್ರತಿಭಟನೆ ಹಮ್ಮಿಕೊಂಡಿದೆ. ರಾಜ್ಯದ ಲಕ್ಷಾಂತರ ಬಿಸಿಯೂಟ ಕಾರ್ಮಿಕರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುತ್ತಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರತಿ ಮಗುವಿಗೆ ಹತ್ತಿರದಲ್ಲೇ ಶಿಕ್ಷಣ ಸಿಗಬೇಕೆಂಬ ನಿಯಮವಿದ್ದರೂ, ಶಾಲೆಗಳ ವಿಲೀನದಿಂದ ಬಡ ರೈತ ಕಾರ್ಮಿಕರ ಮಕ್ಕಳ ಶಿಕ್ಷಣದ ಹಕ್ಕು ಮೊಟಕುಗೊಳ್ಳುತ್ತದೆ. ಕಳೆದ 25 ವರ್ಷಗಳಿಂದ ಅಲ್ಪ ಗೌರವಧನಕ್ಕೆ ಹಗಲಿರುಳು ಶ್ರಮಿಸುತ್ತಿರುವ ಸಾವಿರಾರು ಬಿಸಿಯೂಟ ಕಾರ್ಮಿಕರು ಶಾಲೆಗಳ…
