Blog

ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು, ₹34 ಕೋಟಿ ಮೌಲ್ಯದ 17 ಕೆಜಿ 282 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮೇ 11, 2026ರಂದು ಎನ್‌ಡಿಪಿಎಸ್ (NDPS) ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ಈ ಹಿಂದೆ ಮೂವರು ವಿದೇಶಿಯರು ಸೇರಿದಂತೆ ಎಂಟು ಆರೋಪಿಗಳನ್ನು ಬಂಧಿಸಲಾಗಿತ್ತು. ಆ ವೇಳೆ ₹35 ಕೋಟಿ ಮೌಲ್ಯದ 17 ಕೆಜಿ 400 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮುಂದುವರಿಸಲಾಗಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸಿದ ಪೊಲೀಸರು, ಬಾತ್ಮಿದಾರರ ಮಾಹಿತಿ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಜುಲೈ 8ರಂದು ಚಿಕ್ಕಬಾಣಾವರ ಕೆರೆಯ ಸಮೀಪ ಮೂವರು ಆರೋಪಿಗಳನ್ನು…

‘ಜೀ ಹುಜೂರು’ ಸಂಸ್ಕೃತಿ ನನ್ನಿಂದ ನಿರೀಕ್ಷಿಸುವುದು ಮೂರ್ಖತನ’; ಬಿಜೆಪಿ ವಿರುದ್ಧ ಹರಿಪ್ರಸಾದ್ ಟ್ವೀಟಾಸ್ತ್ರ

ಬೆಂಗಳೂರು: “ಜೀ ಹುಜೂರು ಎನ್ನುವ ಬಿಜೆಪಿಯ ಸಂಸ್ಕೃತಿಯನ್ನು ನನ್ನಿಂದ ನಿರೀಕ್ಷೆ ಮಾಡುವುದು ಮೂರ್ಖತನ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರ ಟೀಕೆಗಳಿಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಹಲವು ಆರೋಪಗಳನ್ನು ಮಾಡಿದರು. “Basic Etiquettes ಬಗ್ಗೆ ಮಾತನಾಡುವ ಮೊದಲು ತಮ್ಮ ಪಕ್ಷದ ನಾಯಕರಿಗೆ ಸಾರ್ವಜನಿಕ ಭಾಷೆಯ ಪಾಠ ಹೇಳಲಿ. ಬಿಜೆಪಿಯ ನಾಯಕರ ಭಾಷೆಗೆ ಅವರದ್ದೇ ರೀತಿಯಲ್ಲಿ ಉತ್ತರಿಸುತ್ತೇನೆ. ‘ಜೀ ಹುಜೂರು’ ಸಂಸ್ಕೃತಿ ನನ್ನದಲ್ಲ” ಎಂದು ಹರಿಪ್ರಸಾದ್ ಹೇಳಿದ್ದಾರೆ. ಪ್ರಹ್ಲಾದ್ ಜೋಶಿ ಅವರ ಸಹೋದರನ ವಿರುದ್ಧದ ಆರೋಪಗಳನ್ನು ಉಲ್ಲೇಖಿಸಿದ ಅವರು, “ಅದಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವ ನೈತಿಕತೆ ಮೊದಲು ಇರಲಿ” ಎಂದು ಟೀಕಿಸಿದ್ದಾರೆ. ಆರ್‌ಎಸ್‌ಎಸ್ ಕುರಿತು ಮಾತನಾಡಿದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.…

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ; ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಸೈಕಲ್ ಜಾಥಾ

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ಜಾಗೃತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಭಾನುವಾರ ಬೆಳಗ್ಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಮುಂಭಾಗದಿಂದ ಕೆ ಆರ್ ವೃತ್ತದ ಮಾರ್ಗವಾಗಿ ಆನಂದ್ ರಾವ್ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆ ವರಗೆ ಸಾಗಿತು. ಈ ಸೈಕಲ್ ಜಾಥಾ ಜಾಗೃತಿ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆಪಿವೈಸಿಸಿ ಎಚ್.ಎಸ್.ಮಂಜುನಾಥ್ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ UPSC ನೇರ ನೇಮಕಾತಿ; ಜುಲೈ 31ರವರೆಗೆ ಅರ್ಜಿ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಜಾಹೀರಾತು ಸಂಖ್ಯೆ 08/2026 ಅಡಿಯಲ್ಲಿ ಖಾಲಿ ಹುದ್ದೆಗಳ ವಿವರ, ಅರ್ಹತಾ ಮಾನದಂಡ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಅರ್ಜಿ ಸಲ್ಲಿಕೆ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು UPSC ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಜುಲೈ 11, 2026ರಿಂದ ಆರಂಭವಾಗಿದ್ದು, ಅಭ್ಯರ್ಥಿಗಳು ಜುಲೈ 31, 2026ರೊಳಗೆ ಆನ್‌ಲೈನ್ ನೇಮಕಾತಿ ಅರ್ಜಿ (ORA) ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ UPSC ಅಭ್ಯರ್ಥಿಗಳಿಗೆ ಸೂಚಿಸಿದೆ. ಗಡುವಿನೊಳಗೆ ಅರ್ಜಿ ಸಲ್ಲಿಸಿ, ದೋಷಗಳು ಅಥವಾ ಅರ್ಜಿ ತಿರಸ್ಕಾರವನ್ನು ತಪ್ಪಿಸಿಕೊಳ್ಳುವಂತೆ ಆಯೋಗ ಮನವಿ ಮಾಡಿದೆ

ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ ಲೋಕಾಯುಕ್ತ; ‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದ ಬಿಜೆಪಿ

ಬೆಂಗಳೂರು: ಮಂತ್ರಿಗಿರಿಯ ಕನಸು ಕಾಣುತ್ತಿದ್ದ ಕಾಂಗ್ರೆಸ್ ನಾಯಕ ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಲೋಕಾಯುಕ್ತವೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಬಿಜೆಪಿ, ಜಮೀರ್ ಅಹ್ಮದ್ ಅವರ 25 ಕೋಟಿ ರೂ. ಅಕ್ರಮ ಆಸ್ತಿ ಗಳಿಕೆಯ ಪಾಪದ ಕೊಡ ಈಗ ತುಂಬಿದೆ ಎಂದು ಹೇಳಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ X ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ‘IMA ಹಗರಣದಲ್ಲಿ ಸಾವಿರಾರು ಮುಗ್ಧ ಜನರಿಗೆ ವಂಚಿಸಿದ ಹಣದಲ್ಲಿ ಅಕ್ರಮ ಆಸ್ತಿ ಮಾಡಿರುವ ಚಾಮರಾಜಪೇಟೆ ಶಾಸಕರ ವಿರುದ್ಧ ಇದೀಗ ಲೋಕಾಯುಕ್ತವೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ ಎಂದು ಮಾಹಿತಿ ಹಂಚಿಕೊಂಡಿದೆ. ‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಕಪ್ಪು ಹಣ ತಿಂದವರು ಜೈಲು ಸೇರಲೇಬೇಕು. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್’ ಎಂದು ಬಿಜೆಪಿ ಟೀಕಿಸಿದೆ. ಮಂತ್ರಿಗಿರಿಯ ಕನಸು ಕಾಣುತ್ತಿದ್ದ @INCKarnataka ದ ಶಾಸಕ…

ಹವಾಮಾನ ವೈಪರೀತ್ಯ ತಡೆಗೆ ಲಾವಂಚ ಬೆಳೆ ಪರಿಣಾಮಕಾರಿ: ಅಶೋಕ್ ದಳವಾಯಿ

ಬೆಂಗಳೂರು: ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಲಾವಂಚ (ವೆಟಿವರ್) ಬೆಳೆ ಪರಿಣಾಮಕಾರಿ ಅಸ್ತ್ರವಾಗಿದ್ದು, ಇದರ ಕೃಷಿಯಿಂದ ಮಣ್ಣಿನ ಸಾವಯವ ಅಂಶ ಹೆಚ್ಚುವುದರ ಜೊತೆಗೆ ರೈತರಿಗೆ ಆರ್ಥಿಕ ಲಾಭವೂ ದೊರೆಯಲಿದೆ ಎಂದು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಅಶೋಕ್ ದಳವಾಯಿ ಹೇಳಿದ್ದಾರೆ. ನಗರದ ಕ್ವಿನ್ಸ್ ರಸ್ತೆಯ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಭಾರತೀಯ ಲಾವಂಚ ಫೌಂಡೇಷನ್, ಜಲಾನಯ ಇಲಾಖೆ ಹಾಗೂ ಸೀಮ್ಯಾಪ್ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ಪ್ರಾದೇಶಿಕ ಲಾವಂಚ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ಅನುಪಯುಕ್ತ ಭೂಮಿ ಸೇರಿದಂತೆ ಹೆಚ್ಚಿನ ಪ್ರದೇಶಗಳಲ್ಲಿ ಲಾವಂಚ ಬೆಳೆ ಬೆಳೆಸುವ ಅಗತ್ಯವಿದೆ ಎಂದು ಅವರು ತಿಳಿಸಿದರು. ಲಾವಂಚದ ಬೇರುಗಳು 2ರಿಂದ 4 ಮೀಟರ್ ಆಳಕ್ಕೆ ಬೆಳೆಯುವ ಮೂಲಕ ನೀರನ್ನು ನೆಲದಾಳಕ್ಕೆ ಇಳಿಸಿ, ಮಣ್ಣಿನ ತೇವಾಂಶ ಕಾಪಾಡುವುದಲ್ಲದೆ, ಮಣ್ಣಿನ ಸವಕಳಿಯನ್ನೂ ತಡೆಯುತ್ತವೆ ಎಂದರು. ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ್…

ಭಾರತೀಯ ನೌಕಾಪಡೆಯಲ್ಲಿ ಸ್ಟೆಲ್ತ್ ಫ್ರಿಗೇಟ್ ಐಎನ್‌ಎಸ್ ಮಹೇಂದ್ರಗಿರಿ ಕಮಾಲ್

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ಪೂರ್ವ ನೌಕಾಪಡೆಗೆ ಸ್ಥಳೀಯವಾಗಿ ನಿರ್ಮಿಸಲಾದ ಸುಧಾರಿತ ಸ್ಟೆಲ್ತ್ ಫ್ರಿಗೇಟ್ ಐಎನ್‌ಎಸ್ ಮಹೇಂದ್ರಗಿರಿಯನ್ನು ಶುಕ್ರವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧಿಕೃತವಾಗಿ ನಿಯೋಜಿಸಿದರು. ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿ, ಮಜಗಾನ್ ಡಾಕ್ ಶಿಪ್‌ಬಿಲ್ಡರ್ಸ್ ಲಿಮಿಟೆಡ್ (MDL) ನಿರ್ಮಿಸಿರುವ ಐಎನ್‌ಎಸ್ ಮಹೇಂದ್ರಗಿರಿ, ಪ್ರಾಜೆಕ್ಟ್-17ಎ ಅಡಿಯಲ್ಲಿ ನಿರ್ಮಿಸಲಾದ ಆರನೇ ಸ್ಟೆಲ್ತ್ ಫ್ರಿಗೇಟ್ ಆಗಿದೆ. ಯುದ್ಧನೌಕೆಯಲ್ಲಿ ಶೇ.75ಕ್ಕೂ ಅಧಿಕ ಸ್ಥಳೀಯ ತಂತ್ರಜ್ಞಾನ ಮತ್ತು ಉಪಕರಣಗಳನ್ನು ಬಳಸಲಾಗಿದೆ. ಸುಮಾರು 6,670 ಟನ್ ಸಾಮರ್ಥ್ಯ ಹೊಂದಿರುವ ಈ ಯುದ್ಧನೌಕೆ 28 ನಾಟ್‌ಗಳ ಗರಿಷ್ಠ ವೇಗದಲ್ಲಿ ಸಂಚರಿಸಬಲ್ಲದು. ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳು, ಮೇಲ್ಮೈ-ಆಕಾಶ ಕ್ಷಿಪಣಿ ವ್ಯವಸ್ಥೆ, ಜಲಾಂತರ್ಗಾಮಿ ವಿರೋಧಿ ಶಸ್ತ್ರಾಸ್ತ್ರಗಳು, ಟಾರ್ಪಿಡೊ ಲಾಂಚರ್‌ಗಳು, ಎಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಗಳು ಹಾಗೂ ಬಹುಪಾತ್ರ ಹೆಲಿಕಾಪ್ಟರ್‌ಗಳೊಂದಿಗೆ ಇದು ಸಜ್ಜುಗೊಂಡಿದೆ. ⚓ The Indian Navy is set to commission INS Mahendragiri…

ವಿನಾಯಿತಿ ಪಡೆದ ಪಿಎಫ್ ಟ್ರಸ್ಟ್‌ಗಳಿಗೆ EPFO ‘AMNESTY’ ಯೋಜನೆ; ಆರು ತಿಂಗಳ ಅವಕಾಶ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಕ್ಷಮಾದಾನ ಯೋಜನೆ–2026 ಅನ್ನು ಜಾರಿಗೆ ತಂದಿದ್ದು, ವಿನಾಯಿತಿ ಪಡೆದ ಭವಿಷ್ಯ ನಿಧಿ (PF) ಟ್ರಸ್ಟ್‌ಗಳನ್ನು ನಿರ್ವಹಿಸುವ ಸಂಸ್ಥೆಗಳು ತಮ್ಮ ಸ್ಥಿತಿಯನ್ನು ಕ್ರಮಬದ್ಧಗೊಳಿಸಿಕೊಳ್ಳಲು ಒಂದು ಬಾರಿಯ ಅವಕಾಶ ನೀಡಿದೆ. ಯೋಜನೆ ಅಧಿಸೂಚನೆಗೊಂಡ ದಿನಾಂಕದಿಂದ ಆರು ತಿಂಗಳವರೆಗೆ ಜಾರಿಯಲ್ಲಿರಲಿದೆ. ಹಣಕಾಸು ಕಾಯ್ದೆ–2026ರ ತಿದ್ದುಪಡಿ ಹಿನ್ನೆಲೆಯಲ್ಲಿ, ಇಪಿಎಫ್ ಕಾಯ್ದೆಯ ಸೆಕ್ಷನ್ 17ರ ಅಡಿಯಲ್ಲಿ ವಿನಾಯಿತಿ ಪಡೆದ ಪಿಎಫ್ ಟ್ರಸ್ಟ್‌ಗಳಿಗೆ ಮಾತ್ರ ಆದಾಯ ತೆರಿಗೆ ಕಾಯ್ದೆಯಡಿ ಮಾನ್ಯತೆ ದೊರೆಯಲಿದೆ. ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಅಧಿಕೃತ ವಿನಾಯಿತಿ ಅಧಿಸೂಚನೆ ಇಲ್ಲದಿದ್ದರೂ, ಆದಾಯ ತೆರಿಗೆ ಕಾಯ್ದೆಯಡಿ ಮಾನ್ಯತೆ ಪಡೆದ ಪಿಎಫ್ ಟ್ರಸ್ಟ್‌ಗಳನ್ನು ನಡೆಸುತ್ತಿರುವ ಸಂಸ್ಥೆಗಳು ಈ ಯೋಜನೆಯ ಲಾಭ ಪಡೆಯಬಹುದು. ಯೋಜನೆಯಡಿ ಟ್ರಸ್ಟ್‌ಗಳ ಹಿಂದಿನ ಅವಧಿಯ ಕ್ರಮಬದ್ಧಗೊಳಿಸುವಿಕೆ, ಕೆಲವು ಅರ್ಹತಾ ಷರತ್ತುಗಳಿಗೆ ವಿನಾಯಿತಿ ಹಾಗೂ ನಿಗದಿತ ಷರತ್ತುಗಳನ್ನು ಪಾಲಿಸಿದಲ್ಲಿ ಪಿಎಫ್ ಬಾಕಿ, ಬಡ್ಡಿ ಮತ್ತು ದಂಡಕ್ಕೆ…

ಖ್ಯಾತ ಗಾಯಕಿ ಎಸ್. ಜಾನಕಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆ ಭಾರತೀಯ ಸಂಗೀತ ಮತ್ತು ಸಂಸ್ಕೃತಿ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂತಾಪ ಸಂದೇಶ ಹಂಚಿಕೊಂಡ ಪ್ರಧಾನಿ, ಎಸ್. ಜಾನಕಿ ಅವರ ಧ್ವನಿಯು ಹಲವು ಭಾರತೀಯ ಭಾಷೆಗಳ ಮೂಲಕ ತಲೆಮಾರುಗಳ ಮನಸ್ಸುಗಳನ್ನು ಗೆದ್ದಿದ್ದು, ಪ್ರತಿಯೊಂದು ಭಾವನೆಯನ್ನು ಅಪರೂಪದ ಮಧುರತೆ ಮತ್ತು ಬಹುಮುಖತೆಯಿಂದ ಜೀವಂತಗೊಳಿಸಿತ್ತು ಎಂದು ಸ್ಮರಿಸಿದ್ದಾರೆ. “ವಿಶಿಷ್ಟ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅಮ್ಮ ಅವರ ನಿಧನ ಸಂಗೀತ ಮತ್ತು ಸಂಸ್ಕೃತಿ ಲೋಕಕ್ಕೆ ಅಪಾರ ನಷ್ಟ. ವಿವಿಧ ಭಾಷೆಗಳಲ್ಲಿ ಅವರು ಹಾಡಿದ ಗೀತೆಗಳು ತಲೆಮಾರುಗಳವರೆಗೆ ಜನಪ್ರಿಯವಾಗಿವೆ. ಅವರ ಸುಮಧುರ ಗಾಯನ ಮುಂದಿನ ಪೀಳಿಗೆಯವರನ್ನೂ ಸದಾ ಆಕರ್ಷಿಸುತ್ತಿರುತ್ತದೆ” ಎಂದು ಪ್ರಧಾನಿ ತಿಳಿಸಿದ್ದಾರೆ. ಜಾನಕಿ ಅವರ ಕುಟುಂಬದ ಸದಸ್ಯರು, ಅಸಂಖ್ಯಾತ ಅಭಿಮಾನಿಗಳು…

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

ಕ್ಯಾರಕಾಸ್: ಜೂನ್ 24ರಂದು ವೆನೆಜುವೆಲಾದಲ್ಲಿ ಸಂಭವಿಸಿದ ಭಕರ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 4,333ಕ್ಕೆ ಏರಿಕೆಯಾಗಿದೆ . 16,740 ಮಂದಿ ಗಾಯಗೊಂಡಿದ್ದು, 6,462 ಮಂದಿಯನ್ನು ರಕ್ಷಿಸಲಾಗಿದೆ. ಸಂತ್ರಸ್ತರಿಗಾಗಿ 94 ತಾತ್ಕಾಲಿಕ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 18,000ಕ್ಕೂ ಹೆಚ್ಚು ಮಂದಿಗೆ ಆಶ್ರಯ ಕಲ್ಪಿಸಲಾಗಿದೆ. ದುರಂತದ ಪರಿಹಾರ ಕಾರ್ಯದಲ್ಲಿ ಸುಮಾರು 30,000 ಸ್ವಯಂಸೇವಕರು ಭಾಗಿಯಾಗಿದ್ದು, ಮನೆ ನಿರ್ಮಾಣ ಮತ್ತು ದುರಸ್ತಿ ಕಾರ್ಯದಲ್ಲೂ ಅವರನ್ನು ಬಳಸಿಕೊಳ್ಳಲು ಸರ್ಕಾರ ಯೋಜಿಸಿದೆ. ಭೂಕಂಪದಿಂದ ಮನೆ ಕಳೆದುಕೊಂಡ ಕುಟುಂಬಗಳಿಗಾಗಿ ಏಕೀಕೃತ ವಸತಿ ನೋಂದಣಿ ಆರಂಭಿಸಲಾಗಿದ್ದು, ಇದನ್ನು ಜನಗಣತಿ ಹಾಗೂ ಆರ್ಥಿಕ ನೆರವಿನ ಡೇಟಾಬೇಸ್ ಆಗಿ ಬಳಸಲಾಗುತ್ತದೆ ಎಂದು ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ.