Blog

KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED), ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಬಂಧಿಸಿ ತನ್ನ ವಶಕ್ಕೆ ಪಡೆದಿದೆ. ಇಬ್ಬರೂ ಈಗಾಗಲೇ ಸಿಐಡಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದರು. ಜೈಲಿನಲ್ಲಿ ವಿಚಾರಣೆ ನಡೆಸಿದ ಬಳಿಕ, ಆರ್ಥಿಕ ವಹಿವಾಟುಗಳ ಕುರಿತು ಹೆಚ್ಚಿನ ತನಿಖೆಗಾಗಿ ಶುಕ್ರವಾರ ರಾತ್ರಿ ED ಇಬ್ಬರನ್ನೂ ಔಪಚಾರಿಕವಾಗಿ ಬಂಧಿಸಿ ಕಸ್ಟಡಿಗೆ ಪಡೆದಿದೆ ಎಂದು ವರದಿಯಾಗಿದೆ. KPSCಯ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನಡೆದ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ OMR ಉತ್ತರ ಪತ್ರಿಕೆಗಳ ಅಕ್ರಮ ತಿದ್ದುಪಡಿ ಸೇರಿದಂತೆ ಹಲವು ಆರೋಪಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ತನಿಖೆಯಲ್ಲಿ ಅಭ್ಯರ್ಥಿಗಳಿಂದ ₹12 ಕೋಟಿಗೂ ಅಧಿಕ ಹಣ ಸಂಗ್ರಹವಾಗಿರುವ ಶಂಕೆ…

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಸಿಡಿಸಿಸಿ) 2025–26ನೇ ಸಾಲಿನಲ್ಲಿ ₹6.87 ಕೋಟಿ ನಿವ್ವಳ ಲಾಭ ಗಳಿಸಿದ್ದು, ಶೇ.98.5ರಷ್ಟು ಸಾಲ ವಸೂಲಾತಿ ಸಾಧಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ನಡೆದ ಬ್ಯಾಂಕಿನ ಆರ್ಥಿಕ ಪ್ರಗತಿ ಹಾಗೂ ಸಾಧನೆಗಳ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ 21 ಡಿಸಿಸಿ ಬ್ಯಾಂಕ್‌ಗಳ ಪೈಕಿ ಚಿಕ್ಕಮಗಳೂರು ಬ್ಯಾಂಕ್ 7ನೇ ಸ್ಥಾನದಲ್ಲಿದೆ. ನಬಾರ್ಡ್‌ನ ಲೆಕ್ಕಪರಿಶೋಧನೆ ಹಾಗೂ ಮೌಲ್ಯಮಾಪನದಲ್ಲಿ ‘ಎ’ ಗ್ರೇಡ್ ಪಡೆದಿದೆ ಎಂದರು. 2025–26ರ ಅಂತ್ಯಕ್ಕೆ ಬ್ಯಾಂಕ್ ₹65.99 ಕೋಟಿ ಷೇರು ಬಂಡವಾಳ ಹೊಂದಿದ್ದು, 2.24 ಲಕ್ಷಕ್ಕೂ ಹೆಚ್ಚು ಠೇವಣಿದಾರರಿಂದ ₹1,568.53 ಕೋಟಿ ಠೇವಣಿ ಸಂಗ್ರಹಿಸಿದೆ. ವಾರ್ಷಿಕ ವಹಿವಾಟು ಸುಮಾರು ₹3,000 ಕೋಟಿ ಇದೆ ಎಂದು ತಿಳಿಸಿದರು. ಕಳೆದ ಸಾಲಿನಲ್ಲಿ 54,992 ರೈತರಿಗೆ ₹843.84 ಕೋಟಿ ಶೂನ್ಯ ಬಡ್ಡಿದರದ ಬೆಳೆ…

ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಭಾರತೀಯ ವಾಯುಪಡೆಗೆ (IAF) ಎರಡು LCA ತೇಜಸ್ FOC ಅವಳಿ ಆಸನದ ತರಬೇತುದಾರ ವಿಮಾನಗಳು ಹಾಗೂ ಮೂರು HTT-40 ಮೂಲ ತರಬೇತುದಾರ ವಿಮಾನಗಳನ್ನು ಹಸ್ತಾಂತರಿಸಿದೆ. ಇದೇ ವೇಳೆ ನಾಲ್ಕು ಧ್ರುವ್ ನೆಕ್ಸ್ಟ್ ಜನರೇಷನ್ (NG) ಹೆಲಿಕಾಪ್ಟರ್‌ಗಳನ್ನು ಪವನ್ ಹ್ಯಾನ್ಸ್ ಲಿಮಿಟೆಡ್‌ಗೆ ವಿತರಿಸಲಾಯಿತು. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಅವರ ಸಮ್ಮುಖದಲ್ಲಿ ಈ ಹಸ್ತಾಂತರ ನಡೆಯಿತು. ಭಾರತದ ಸ್ವದೇಶಿ ಏರೋಸ್ಪೇಸ್ ಸಾಮರ್ಥ್ಯ ಹಾಗೂ ತಾಂತ್ರಿಕ ಸ್ವಾವಲಂಬನೆ ಬಲಪಡಿಸುವ ನಿಟ್ಟಿನಲ್ಲಿ ಈ ವಿತರಣೆ ಮಹತ್ವದ ಹೆಜ್ಜೆ ಎಂದು ರಾಜನಾಥ್ ಸಿಂಗ್ ಬಣ್ಣಿಸಿದರು. ವಿಮಾನ ವಿನ್ಯಾಸ, ಏವಿಯಾನಿಕ್ಸ್, ಪ್ರೊಪಲ್ಷನ್, ಕಾಂಪೋಸಿಟ್ಸ್, ಫ್ಲೈಟ್ ಕಂಟ್ರೋಲ್ ವ್ಯವಸ್ಥೆ, ಉತ್ಪಾದನೆ ಮತ್ತು ಪ್ರಮಾಣೀಕರಣ ಸೇರಿದಂತೆ ಏರೋಸ್ಪೇಸ್‌ನ ಸಂಪೂರ್ಣ ಮೌಲ್ಯ ಸರಪಳಿಯಲ್ಲಿ ಸಾಮರ್ಥ್ಯ ವೃದ್ಧಿಸುವ…

ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

ನವದೆಹಲಿ: ದೆಹಲಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್, ಜಾರ್ಖಂಡ್ ಮತ್ತು ಕರ್ನಾಟಕ ಹೈಕೋರ್ಟ್‌ಗಳಿಗೆ ಒಟ್ಟು 14 ನ್ಯಾಯಾಂಗ ಅಧಿಕಾರಿಗಳನ್ನು ನ್ಯಾಯಾಧೀಶರು ಹಾಗೂ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಸಂವಿಧಾನ ನೀಡಿರುವ ಅಧಿಕಾರವನ್ನು ಚಲಾಯಿಸಿ, ಭಾರತದ ಮುಖ್ಯ ನ್ಯಾಯಮೂರ್ತಿಯವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕಾತಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿವೇದಿತಾ ಅನಿಲ್ ಶರ್ಮಾ ಮತ್ತು ನಿಶಾ ಸಹಾಯ್ ಸಕ್ಸೇನಾ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ. ಸಂಜಯ್ ಶರ್ಮಾ, ಭರತ್ ಪರಾಶರ್, ಡಾ. ಅದಿತಿ ಚೌಧರಿ, ದಿನೇಶ್ ಭಟ್ ಮತ್ತು ಅರುಣ್ ಭಾರದ್ವಾಜ್ ಅವರನ್ನು ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ. ಯಶ್ ಪಾಲ್ ಬೌರ್ನಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ. ಜಾರ್ಖಂಡ್ ಹೈಕೋರ್ಟ್‌ಗೆ…

ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ಕಲಬೆರಕೆ ತುಪ್ಪ ಪೂರೈಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕಂಪನಿ ಪ್ರಮೋಟರ್‌ ಕೈಲಾಶ್‌ ಚಂದ್‌ ಮಂಗಲಾ ಅವರನ್ನು ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಸೆಕ್ಷನ್‌ 19ರ ಅಡಿಯಲ್ಲಿ ಮಂಗಲಾ ಅವರನ್ನು ಬಂಧಿಸಲಾಗಿದೆ. ಬಳಿಕ ವಿಶಾಖಪಟ್ಟಣದ ಪಿಎಂಎಲ್‌ಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತಿರುಪತಿ ಪೂರ್ವ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಆಧರಿಸಿ ಇಡಿ ತನಿಖೆ ಕೈಗೊಂಡಿತ್ತು. ಟಿಟಿಡಿಗೆ ಕಲಬೆರಕೆ ತುಪ್ಪ ಪೂರೈಸಲು ಕ್ರಿಮಿನಲ್‌ ಸಂಚು, ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ಆರೋಪಗಳು ಎಫ್‌ಐಆರ್‌ನಲ್ಲಿ ದಾಖಲಾಗಿದ್ದವು. ₹230 ಕೋಟಿ ಮೌಲ್ಯದ ಕಲಬೆರಕೆ ತುಪ್ಪ ಪೂರೈಕೆ? ಇಡಿ ತನಿಖೆಯ ಪ್ರಕಾರ, 2019ರಿಂದ 2024ರ ಅವಧಿಯಲ್ಲಿ ಸುಮಾರು ₹230…

ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

ನವದೆಹಲಿ: ಭಾರತದ ತಲಾ ಇಂಗಾಲ ಹೊರಸೂಸುವಿಕೆ ಜಾಗತಿಕ ಸರಾಸರಿಗಿಂತ ಗಣನೀಯವಾಗಿ ಕಡಿಮೆ ಇದ್ದು, ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯನ್ನು ಸಮತೋಲನದಿಂದ ಮುನ್ನಡೆಸುವುದು ದೇಶದ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆಯೋಜಿಸಿರುವ ‘ದಿ ಫ್ಯೂಚರ್ ಆಫ್ ಎನ್ವಿರಾನ್‌ಮೆಂಟ್ ಅಂಡ್ ಕ್ಲೈಮೇಟ್ ಡೈನಾಮಿಕ್ಸ್’ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮೋದಿ, ಭಾರತವು ಶತಮಾನಗಳಿಂದ ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವ ಪರಂಪರೆಯನ್ನು ಹೊಂದಿದೆ ಎಂದು ಹೇಳಿದರು. “ಈ ಮೌಲ್ಯಗಳನ್ನೇ ಆಧಾರವಾಗಿಸಿಕೊಂಡು ಇಂದಿನ ಹವಾಮಾನ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆ ಪರಸ್ಪರ ವಿರೋಧಿಗಳಲ್ಲ,” ಎಂದು ಅವರು ಹೇಳಿದರು. ಸೌರಶಕ್ತಿಗೆ ಹೆಚ್ಚಿನ ಒತ್ತು ಭಾರತದ ಹವಾಮಾನ ಕ್ರಮಗಳಲ್ಲಿ ಸೌರಶಕ್ತಿಗೆ ಪ್ರಮುಖ ಸ್ಥಾನವಿದೆ ಎಂದು ಪ್ರಧಾನಿ ಹೇಳಿದರು. ಕಳೆದ 12 ವರ್ಷಗಳಲ್ಲಿ ದೇಶದ ಸೌರಶಕ್ತಿ ಸಾಮರ್ಥ್ಯ ಸುಮಾರು…

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಟ, ಪದ್ಮಭೂಷಣ ಅನಂತ್ ನಾಗ್ ಚಿತ್ರರಂಗದಿಂದ ದೂರ ಉಳಿಯುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. 78 ವರ್ಷದ ನಟ, ತಮ್ಮ ನಿವೃತ್ತಿಯ ನಿರ್ಧಾರಕ್ಕೂ ಆರೋಗ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಸಿನಿಮಾಗಳಲ್ಲಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರ ಆರೋಗ್ಯದ ಬಗ್ಗೆ ಹಲವು ಊಹಾಪೋಹಗಳು ಹರಿದಾಡಿದ್ದವು. ಆದರೆ ತಾವು ಸಂಪೂರ್ಣ ಆರೋಗ್ಯವಾಗಿದ್ದು, ಚಿತ್ರರಂಗದಿಂದ ದೂರ ಉಳಿಯಲು ಬೇರೆ ಕಾರಣವಿದೆ ಎಂದು ಅನಂತ್ ನಾಗ್ ತಿಳಿಸಿದ್ದಾರೆ. ‘ನಾನು ಆರೋಗ್ಯವಾಗಿದ್ದೇನೆ’ ಚಿತ್ರರಂಗದಿಂದ ದೂರ ಉಳಿದಿರುವ ಬಗ್ಗೆ ಮಾತನಾಡಿರುವ ಅನಂತ್ ನಾಗ್, ‘ನನ್ನ ನಿರ್ಧಾರಕ್ಕೂ ನನ್ನ ಆರೋಗ್ಯಕ್ಕೂ ಯಾವುದೇ ಸಂಬಂಧವಿಲ್ಲ. ನಾನು ಆರೋಗ್ಯವಾಗಿದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ. ಇಂದಿನ ಸಿನಿಮಾಗಳ ಸ್ವರೂಪದ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳು ಕಥೆ ಮತ್ತು ಅದರ ಆಳಕ್ಕಿಂತ ಬಾಕ್ಸ್ ಆಫೀಸ್…

ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್‌ ಅವರ ದೇಹದ ತೂಕದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಟ್ರೋಲ್‌ ವಿರುದ್ಧ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಧ್ವನಿ ಎತ್ತಿದ್ದಾರೆ. ತಾಯಿಯಾದ ಬಳಿಕ ಕತ್ರಿನಾ ಅವರ ದೇಹದಲ್ಲಿ ಸಹಜ ಬದಲಾವಣೆಗಳು ಕಂಡುಬಂದಿವೆ. ಇತ್ತೀಚೆಗೆ ಪತಿ ವಿಕ್ಕಿ ಕೌಶಲ್‌ ಜೊತೆ ಅಂಬಾನಿ ನಿವಾಸದಲ್ಲಿ ನಡೆದ ಗಣೇಶೋತ್ಸವದಲ್ಲಿ ಅವರು ಕಾಣಿಸಿಕೊಂಡಿದ್ದರು. ಈ ವೇಳೆ ತೆಗೆದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಅವರ ದೇಹದ ಬದಲಾವಣೆಯನ್ನು ಮುಂದಿಟ್ಟುಕೊಂಡು ಕೆಲವರು ಬಾಡಿ ಶೇಮಿಂಗ್‌ ಮಾಡಿದ್ದರು.ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ರಮ್ಯಾ, ಮಹಿಳೆಯ ದೇಹದ ಆಕಾರವನ್ನು ಆಧರಿಸಿ ಅವಮಾನಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ‘ಬಾಡಿ ಶೇಮಿಂಗ್‌ ತಪ್ಪು’ ತಮ್ಮ ಎಕ್ಸ್‌ ಖಾತೆಯಲ್ಲಿ ರಮ್ಯಾ, ಮಹಿಳೆಯನ್ನು ದೇಹದ ಕಾರಣಕ್ಕೆ ಅವಮಾನಿಸಬಾರದು ಎನ್ನಲು ಆಕೆಯ ಬ್ಯಾಂಕ್ ಬ್ಯಾಲೆನ್ಸ್‌ ನೋಡುವ ಅಗತ್ಯವಿಲ್ಲ ಅಥವಾ ಅದಕ್ಕೊಂದು ನಿರ್ದಿಷ್ಟ ಕಾರಣ ಬೇಕಿಲ್ಲ ಎಂದು ಹೇಳಿದ್ದಾರೆ. ಮಹಿಳೆಯ…

ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

ವಾಷಿಂಗ್ಟನ್: ಉಕ್ರೇನ್ ವಿರುದ್ಧದ ಯುದ್ಧಕ್ಕೆ ರಷ್ಯಾ ಬಳಸುತ್ತಿರುವ ಹಣಕಾಸಿನ ಮೂಲಗಳಿಗೆ ಹೊಡೆತ ನೀಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ರಷ್ಯಾ ವಿರುದ್ಧ ವ್ಯಾಪಕ ಆರ್ಥಿಕ ನಿರ್ಬಂಧಗಳನ್ನು ಜಾರಿಗೊಳಿಸಲು ಅಧಿಕಾರ ನೀಡುವ ಮಸೂದೆಗೆ ಟ್ರಂಪ್ ಶುಕ್ರವಾರ ಸಹಿ ಹಾಕಿದ್ದಾರೆ. ಅಮೆರಿಕ ಕಾಂಗ್ರೆಸ್‌ನಲ್ಲಿ ಮಸೂದೆಗೆ ಅನುಮೋದನೆ ದೊರೆತ ಬೆನ್ನಲ್ಲೇ ಟ್ರಂಪ್ ಸಹಿ ಮಾಡಿದ್ದಾರೆ. ರಷ್ಯಾದ ಇಂಧನ ಮತ್ತು ರಕ್ಷಣಾ ವಲಯಗಳ ಜತೆಗೆ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹಾಗೂ ಇತರ ಹಿರಿಯ ಅಧಿಕಾರಿಗಳನ್ನೂ ನಿರ್ಬಂಧಗಳ ವ್ಯಾಪ್ತಿಗೆ ತರಲು ಮಸೂದೆ ಅವಕಾಶ ನೀಡುತ್ತದೆ. ‘ಶ್ಯಾಡೋ ಫ್ಲೀಟ್’ಗೂ ಬಿಸಿ ಪಾಶ್ಚಿಮಾತ್ಯ ರಾಷ್ಟ್ರಗಳ ನಿರ್ಬಂಧಗಳನ್ನು ತಪ್ಪಿಸಲು ರಷ್ಯಾ ಬಳಸುತ್ತಿದೆ ಎನ್ನಲಾಗಿರುವ ‘ಶ್ಯಾಡೋ ಫ್ಲೀಟ್’ ತೈಲ ಟ್ಯಾಂಕರ್‌ಗಳ ಮೇಲೂ ಕ್ರಮ ಕೈಗೊಳ್ಳಲು ಮಸೂದೆ ಅವಕಾಶ ನೀಡಿದೆ. ರಷ್ಯಾದ ತೈಲ ಮತ್ತು ಅನಿಲವನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸುವ ದೇಶಗಳ ಮೇಲೆ ಶೇ.100ರವರೆಗೆ ಸುಂಕ…

ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

ಬೆಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ವಿಚಾರಧಾರೆ ಹಾಗೂ ಕೊಡುಗೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಅಗತ್ಯವಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವತಿಯಿಂದ ಗುರುವಾರ ಆಯೋಜಿಸಿದ್ದ ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ದಲಿತರು, ಕೆಳಜಾತಿ ಹಾಗೂ ಮೀಸಲಾತಿಗೆ ಸೀಮಿತಗೊಳಿಸಿ ನೋಡುವ ಮನೋಭಾವವಿದೆ. ಅವರ ಬಹುಮುಖ ಚಿಂತನೆ, ಶಿಕ್ಷಣ ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳ ಕುರಿತು ಹೆಚ್ಚಿನ ಅರಿವು ಮೂಡಬೇಕು ಎಂದರು. ವಿದ್ಯಾರ್ಥಿಗಳು ಅಂಬೇಡ್ಕರ್ ಕುರಿತು ಓದಬೇಕು ಅಂಬೇಡ್ಕರ್ ಅವರು ಹೇಗೆ ಶಿಕ್ಷಣ ಪಡೆದರು, ಉನ್ನತ ಶಿಕ್ಷಣವನ್ನು ಹೇಗೆ ಮುಂದುವರಿಸಿದರು ಹಾಗೂ ವಿವಿಧ ಹುದ್ದೆಗಳಲ್ಲಿ ನಿರ್ವಹಿಸಿದ ಜವಾಬ್ದಾರಿಗಳ ಅನುಭವಗಳು ಎಲ್ಲರಿಗೂ ಪ್ರೇರಣಾದಾಯಕವಾಗಿವೆ. ಭಾರತೀಯರಾದ ನಾವು ಅವರ ಬದುಕು ಮತ್ತು ಚಿಂತನೆಗಳನ್ನು…