ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು ಸೂಕ್ತವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು. ಬೆಂಗಳೂರನ್ನು ಈಗಾಗಲೇ ಒಡೆದುಹಾಕಿದ್ದಾರೆ ಎಂದವರು ಹೇಳಿದರು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗಲಿದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು. ಜಾತಿ ಗಣತಿ ವರದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿನ ಬೆಲೆ ಇಲ್ಲ. ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದರು
Blog
ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರ; ಕರಾವಳಿ, ಮಲೆನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮುಂಗಾರು ಮಳೆಯ ಅಬ್ಬರ. ಮೂರು ದಿನಗಳಲ್ಲಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿರುಗಾಳಿಯೊಡನೆ ಮಳೆ ಸುರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜನತೆಗೆ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಅಲ್ಲದೆ, ಪ್ರವಾಹಕ್ಕೆ ಸಾದರವಾದ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆ ನಿರೀಕ್ಷೆಯಿದೆ. ಆದರೆ ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆಯಿರುವುದರಿಂದ ಅಲ್ಲಿ ಸಹ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಹವಾಮಾನ ವೈಪರಿತ್ಯದಿಂದಾಗಿ ಜನಜೀವನಕ್ಕೆ ಅಡ್ಡಿಯುಂಟಾಗುವ ಸಾಧ್ಯತೆ ಇದ್ದು, ರೈತರು ಹಾಗೂ ಪ್ರವಾಸಿಗರಿಗೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಹೃದಯಾಘಾತ: ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು
ಫರಿದಾಬಾದ್: ವ್ಯಾಯಾಮದ ವೇಳೆ ಹೃದಯಾಘಾತವಾಗಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೃತ ವ್ಯಕ್ತಿಯನ್ನು ಫರಿದಾಬಾದ್ನ ಸೆಕ್ಟರ್-3 ರ ರಾಜಾ ನಹರ್ ಸಿಂಗ್ ಕಾಲೋನಿಯ ನಿವಾಸಿ ಪಂಕಜ್ ಎಂದು ಗುರುತಿಸಲಾಗಿದೆ. ಅವರು ಕಳೆದ ಐದು ತಿಂಗಳಿಂದ ತಮ್ಮ ಸ್ನೇಹಿತ ರೋಹಿತ್ ಜೊತೆಗೆ ಸೆಕ್ಟರ್-9 ರ ಶ್ರೋಟಾ ವೆಲ್ನೆಸ್ ಜಿಮ್ಗೆ ನಿಯಮಿತವಾಗಿ ಹೋಗುತ್ತಿದ್ದವರು. ಮಂಗಳವಾರ ಬೆಳಿಗ್ಗೆ ಸುಮಾರು 10:30ಕ್ಕೆ ಪಂಕಜ್ ಹಾಗೂ ರೋಹಿತ್ ಜಿಮ್ಗೆ ಹಾಜರಾಗಿದ್ದು, ವ್ಯಾಯಾಮ ಆರಂಭಕ್ಕೂ ಮುನ್ನ ಪಂಕಜ್ ಕಪ್ಪು ಕಾಫಿ ಸೇವಿಸಿದ್ದರು ಎಂದು ರೋಹಿತ್ ತಿಳಿಸಿದ್ದಾರೆ. ಕೇವಲ ಎರಡು ನಿಮಿಷಗಳ ವ್ಯಾಯಾಮದ ನಂತರ ಅವರು ಕುಸಿದುಬಿದ್ದರು.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಡಿಕೆಶಿ ಸ್ಪಷ್ಟನೆ
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆಶಿ, ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ…
ವಿಚ್ಛೇದಿತ ಪತ್ನಿಗೆ 4 ಲಕ್ಷ ರೂ. ಜೀವನಾಂಶ: ಮೊಹಮ್ಮದ್ ಶಮಿಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ
ನವದೆಹಲಿ: ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರು ತಮ್ಮ ವಿಚ್ಛೇದಿತ ಪತ್ನಿ ಹಸಿನ್ ಜಹಾನ್ ಅವರಿಗೆ ತಿಂಗಳಿಗೆ 1.5 ಲಕ್ಷ ರೂ. ಮಧ್ಯಂತರ ಜೀವನಾಂಶ ಮತ್ತು ತಮ್ಮ ಅಪ್ರಾಪ್ತ ಮಗಳ ಆರೈಕೆ ಮತ್ತು ವೆಚ್ಚಕ್ಕಾಗಿ 2.5 ಲಕ್ಷ ರೂ. ಪಾವತಿಸುವಂತೆ ಮಂಗಳವಾರ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಮೊಹಮ್ಮದ್ ಶಮಿ ಅವರು ಹಸಿನ್ ಜಹಾನ್ ಅವರಿಗೆ ತಿಂಗಳಿಗೆ 50 ಸಾವಿರ ರೂ. ಮತ್ತು ತಮ್ಮ ಮಗಳಿಗೆ 80 ಸಾವಿರ ರೂ. ಮಧ್ಯಂತರ ಆರ್ಥಿಕ ಪರಿಹಾರವಾಗಿ ನೀಡಬೇಕೆಂದು ಆದೇಶಿಸಿದ್ದ ಅಲಿಪೋರ್ ಸೆಷನ್ಸ್ ನ್ಯಾಯಾಧೀಶರ ತೀರ್ಪನ್ನು ಪ್ರಶ್ನಿಸಿ ಹಸಿನ್ ಜಹಾನ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಜಯ್ ಕುಮಾರ್ ಮುಖರ್ಜಿ ಅವರ ಪೀಠ ವಿಚಾರಣೆ ನಡೆಸುತ್ತಿದೆ. ಹಸಿನ್ ಜಹಾನ್ ಸಲ್ಲಿಸಿದ ಮೇಲ್ಮನವಿಯಲ್ಲಿ, ಅಲಿಪೋರ್ನ ಸೆಷನ್ಸ್ ನ್ಯಾಯಾಧೀಶರು ‘ಅಸಮರ್ಪಕ ಮತ್ತು ಸಾಕಷ್ಟಿಲ್ಲದ’ ಮಧ್ಯಂತರ ಪರಿಹಾರವನ್ನು ನೀಡಿದ್ದಾರೆ ಎಂದು ವಾದಿಸಲಾಗಿದೆ. ಆದರೆ ಅವರ ಮಾಸಿಕ ಆದಾಯವು…
ಅನುಪಮ್ ಖೇರ್ ಅವರ ‘ತನ್ವಿ ದಿ ಗ್ರೇಟ್’ ಚಿತ್ರಕ್ಕೆ ಕಂಗನಾ ಬೆಂಬಲ ಈ ರೀತಿ
ಮುಂಬೈ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಅವರು ಅನುಪಮ್ ಖೇರ್ ಅವರ ಮುಂಬರುವ ನಿರ್ದೇಶನದ “ತನ್ವಿ ದಿ ಗ್ರೇಟ್” ಚಿತ್ರದ ತಮ್ಮ ತಮ್ಮ ಕಾತುರವನ್ನು ಪ್ರಕಟಿಸಿದ್ದಾರೆ. ಮಂಗಳವಾರ, ‘ಕ್ವೀನ್’ ನಟಿ ತಮ್ಮ ಇನ್ಸ್ಟಾಗ್ರಾಮ್ ಕಥೆಗಳಲ್ಲಿ ಚಿತ್ರದ ಟ್ರೇಲರ್ ಅನ್ನು ಹೊಗಳಿದ ಸಿಹಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ತಮ್ಮ ಹೃತ್ಪೂರ್ವಕ ಸಂದೇಶದಲ್ಲಿ, ಕಂಗನಾ ಕೂಡ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ, ಚಿತ್ರಕ್ಕಾಗಿ ತಾವು ಕಾತರದಿಂದ ಕಾಯುತ್ತಿರುವುದಾಗಿ ಹೇಳಿದ್ದಾರೆ. ಚಿತ್ರದ ಟ್ರೇಲರ್ ಅನ್ನು ಹಂಚಿಕೊಂಡ ಅವರು, “ಅಭಿನಂದನೆಗಳು ಅನುಪಮಖೇರ್ ಜೀ ಮತ್ತು ತನ್ವಿ ದಿ ಗ್ರೇಟ್ ತಂಡದ ಸಂಪೂರ್ಣ ಸದಸ್ಯರು, ಟ್ರೇಲರ್ ಅನ್ನು ನಿಜವಾಗಿಯೂ ಆನಂದಿಸಿದ್ದಾರೆ, ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ” ಎಂದು ಬರೆದಿದ್ದಾರೆ. ಗಮನಿಸಬೇಕಾದ ಅಂಶವೆಂದರೆ, ಕಂಗನಾ ರನೌತ್ ಅವರ ನಿರ್ದೇಶನದ ‘ಎಮರ್ಜೆನ್ಸಿ’ ಚಿತ್ರದಲ್ಲಿ ಕ್ರಾಂತಿಕಾರಿ ಜಯಪ್ರಕಾಶ್ ನಾರಾಯಣ್ ಪಾತ್ರವನ್ನು ಅನುಪಮ್ ಖೇರ್ ನಿರ್ವಹಿಸಿದ್ದಾರೆ. ಚಿತ್ರದ ಪ್ರಚಾರದ ಸಮಯದಲ್ಲಿ,…
ಸಾರ್ವಜನಿಕ ಸಮಾರಂಭಗಳಿಗೆ ಹೊಸ ಮಾರ್ಗಸೂಚಿ ಜಾರಿ
ಬೆಂಗಳೂರು: RCB ತಂಡದ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ದುರಂತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಭವಿಷ್ಯದಲ್ಲಿಯೇ ಅಂತಹ ಘಟನೆಗಳು ಮರುಕಳಿಸದಂತೆ ಮಂಗಳವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಅವರು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಭಾನುವಾರಗಳು, ಮೆರವಣಿಗೆಗಳು, ಪ್ರತಿಭಟನೆಗಳು, ಕ್ರೀಡಾ ಕೂಟಗಳು ಮುಂತಾದವುಗಳಲ್ಲಿ ಸಾರ್ವಜನಿಕರ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್ಒಪಿ) ರೂಪಿಸಲಾಗಿದೆ ಎಂದು ತಿಳಿಸಿದರು. ಸಮಾರಂಭಕ್ಕೂ ಮುನ್ನ ಸ್ಥಳ ಪರಿಶೀಲನೆ, ಆಯೋಜಕರ ಜತೆ ಯೋಜನೆ ರೂಪಿಸುವುದು ಕಡ್ಡಾಯವಾಗಿದ್ದು, ಸ್ಥಳದ ಸಾಮರ್ಥ್ಯ, ತುರ್ತು ನಿರ್ಗಮನ ಮಾರ್ಗ, ತಂತ್ರಜ್ಞಾನ ಬಳಕೆ ಸಾಧ್ಯತೆಗಳ ವಿಶ್ಲೇಷಣೆ ಅಗತ್ಯವಾಗಿದೆ. ಮುಖ್ಯ ಅಂಶಗಳು ಹೀಗಿವೆ: ತರಬೇತಿ ಪಡೆದ ಸಿಬ್ಬಂದಿ ಪ್ರವೇಶ ದ್ವಾರದಲ್ಲಿ ನಿಯೋಜನೆ QR ಕೋಡ್, ಬಯೋಮೆಟ್ರಿಕ್ ತಂತ್ರಜ್ಞಾನ ಬಳಕೆ ಪುರುಷ, ಮಹಿಳೆ, ವೃದ್ಧ,…
ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ
ಬೆಂಗಳೂರು: ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಭೀಭತ್ಸ ಕೃತ್ಯ ನಡೆದು ತಣ್ಣಗಾಗಿತ್ತು. ಆಗ ಕೃತ್ಯ ಎಸಗಿದಾತ ಮಾನಸಿಕ ಅಸ್ವಸ್ಥ ಎಂದಿದ್ದರು. ಅದರ ನಂತರ ಭಟ್ಕಳದಲ್ಲಿ ಪ್ರಕರಣ ಆಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು, ಹೊಸನಗರ, ಬೆಳಗಾವಿಯಲ್ಲಿ ಇಂಥ ಘಟನೆಗಳಾಗಿವೆ. ಅಂದರೆ ಹಸುವಿನ ಕೆಚ್ಚಲು ಕತ್ತರಿಸುವ ಇಷ್ಟೊಂದು ಮಾನಸಿಕ ಅಸ್ವಸ್ಥರು ಯಾಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹುಟ್ಟಿಕೊಂಡರು ಎಂದು ಕೇಳಿದರು. ಹುಣ್ಣಿಮೆ ಬಂದಾಗ ಕೆಲವರಿಗೆ ಹುಚ್ಚು ಕೆದರುತ್ತಂತೆ. ಕಾಂಗ್ರೆಸ್ ಬಂದಾಗ ಈ ಹುಚ್ಚು ಹೆಚ್ಚಾಗುತ್ತದೆಯೇ? ಎಂದ ಅವರು, ಇದು ಪ್ರತ್ಯೇಕ ಘಟನೆ ಅಲ್ಲ; ಗೋವನ್ನು…
‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ
ಬೆಂಗಳೂರು: “ಬುಲೆಟ್ ಟ್ರೈನ್ ನೀಡುತ್ತೇವೆ ಎನ್ನುತ್ತಾ ರೈಲುಗಳನ್ನೇ ಮಾಯ ಮಾಡಿದ್ದಾರೆ. ಜನರ ನಿರೀಕ್ಷೆಗೆ ಮೂಗುತೂಗು ಹಾಕಿದ್ದಾರೆ,” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಕೇಂದ್ರದ ಬೆಲೆ ಏರಿಕೆ ನೀತಿಗಳು ದೇಶದ ಜನಸಾಮಾನ್ಯರನ್ನು ಜರ್ಜರಿತಗೊಳಿಸುತ್ತಿವೆ ಎಂದರು. “ಗ್ಯಾಸ್ ಸಿಲಿಂಡರ್, ದಿನಬಳಕೆಯ ವಸ್ತುಗಳಿಗೆ ಝಡ್ ಪ್ಲಸ್ ಸೆಕ್ಯೂರಿಟಿ ಬೇಕಾಗುವ ಪರಿಸ್ಥಿತಿ ಬಂದಿದೆ. ಮೋದಿ ನೇತೃತ್ವದ ಬಿಜೆಪಿ ಸರಕಾರ ಜನರ ಜೇಬಿಗೆ ಕೈ ಹಾಕುತ್ತಿರುವ ‘ಪಿಕ್ ಪಾಕೆಟ್ ಸರ್ಕಾರ’,” ಎಂದು ವ್ಯಂಗ್ಯವಾಣಿ ಹಾಕಿದರು. ಜುಲೈ 1ರಿಂದ ರೈಲ್ವೆ ದರ ಏರಿಕೆ ಮೂಲಕ ₹700 ಕೋಟಿ ಹೊರೆಯನ್ನು ಜನರ ಮೇಲೆ ಹಾಕಲಾಗಿದೆ. ಇದರ ಹಿಂದೆ “ರೈಲ್ವೆ ಹಳಿಗಳ ದರೋಡೆ” ನಡೆಯುತ್ತಿದೆ ಎಂದು ಅವರು ಕಿಡಿಕಾರಿದರು. ಅಕ್ಟೋಬರ್ 2024ರವರೆಗೆ ಟೋಲ್ ಹಾಗೂ ಪ್ಯಾಸೆಂಜರ್ ದರ ಏರಿಕೆ ನಿರಂತರವಾಗಿ…
ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ
ಬೆಂಗಳೂರು: ಯುವ ಸಮುದಾಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಸೂಕ್ತ ತನಿಖಾ ವರದಿ ನಡೆಸಿ, ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಯುವ ಸಮುದಾಯದಲ್ಲಿ ಅದರಲ್ಲೂ ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಈ ಬಗ್ಗೆ ಸೂಕ್ತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಒಂದು ತಿಂಗಳಿಂದ ಸುಮಾರು ಜನ ಹೃದಯಾಘಾತದಿಂದ ಮೃತಪಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಪ್ರಕರಣಗಳೂ ಸೇರಿದಂತೆ ಈ ಹಿಂದಿನ ಘಟನೆಗಳ ಬಗ್ಗೆಯೂ ಸೂಕ್ತ ತನಿಖೆ ನಡೆಸಿ, ಅಧ್ಯಯನ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ. ಹಾಸನದಲ್ಲಿ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ವರದಿಗಳು ಬಂದ ಕೂಡಲೇ ಹಾಸನ ವೈದ್ಯಕೀಯ ಸಂಸ್ಥೆ…