Blog

ಭಾರತೀಯ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ವಿಧಿವಶ ಎಂದು ಸುದ್ಧಿ

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ (89) ಅವರು ವಿಧಿವಶರಾಗಿದ್ದಾರೆ ಎಂಬ ಸುದ್ದಿ ಬಗ್ಗೆ ಪುತ್ರಿ ಬೇಸರ ವ್ಯಕ್ತಪಡಿಸಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಇಹಲೋಕ ತ್ಯಜಿಸಿದರು ಎಂದು ವರದಿಯಾಗಿದೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದ್ದರೂ, ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿಲ್ಲ.  ಅರ್ಧ ಶತಮಾನಕ್ಕಿಂತ ಹೆಚ್ಚು ಕಾಲದ ತಮ್ಮ ಸಿನಿ ಜೀವನದಲ್ಲಿ ಧರ್ಮೇಂದ್ರ ಅವರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕ್ರಾಂತಿಕಾರಿ ನಾಯಕನಿಂದ ಪ್ರೇಮಪಾತ್ರದವರೆಗೆ, ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿದ ಧರ್ಮೇಂದ್ರ ಭಾರತೀಯ ಚಿತ್ರರಂಗಕ್ಕೆ ಅಳಿಸಲಾರದ ಛಾಪು ಬರೆದಿದ್ದಾರೆ. ಚಿತ್ರರಂಗದಲ್ಲಿ ಮಾತ್ರವಲ್ಲ, ರಾಜಕೀಯ ಕ್ಷೇತ್ರದಲ್ಲಿಯೂ ಅವರು ಗುರುತಾಗಿದ್ದರು. 2004ರಿಂದ 2009ರವರೆಗೆ ಅವರು ಭಾರತೀಯ ಜನತಾ ಪಕ್ಷದ ಸಂಸದರಾಗಿದ್ದರು.

2 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯ ನಗರಗಳಲ್ಲಿ ಸಹಕಾರಿ ಬ್ಯಾಂಕು ಸ್ಥಾಪನೆ; ಅಮಿತ್ ಶಾ ಘೋಷಣೆ

ನವದೆಹಲಿ: ದೇಶದ ಆರ್ಥಿಕ ಸೇರ್ಪಡೆ ಮತ್ತು ಸಹಕಾರ ಚಳವಳಿಗೆ ಮತ್ತೊಂದು ಬಲ ತುಂಬುವ ಉದ್ದೇಶದಿಂದ, ಎರಡು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಎಲ್ಲಾ ನಗರಗಳಲ್ಲಿ ನಗರ ಸಹಕಾರಿ ಬ್ಯಾಂಕುಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸೋಮವಾರ ಘೋಷಿಸಿದ್ದಾರೆ. ನಗರ ಸಹಕಾರಿ ಸಾಲ ವಲಯದ ಅಂತರರಾಷ್ಟ್ರೀಯ ಸಮ್ಮೇಳನ ‘ಸಹಕಾರಿ ಕುಂಭ 2025’ (Coop Kumbh 2025) ಉದ್ಘಾಟಿಸಿ ಮಾತನಾಡಿದ ಅವರು, “ಈ ದೇಶದ ಯುವಕರು ಮತ್ತು ಕೆಳವರ್ಗದ ಜನರ ಸಬಲೀಕರಣಕ್ಕಾಗಿ ನಗರ ಸಹಕಾರಿ ಬ್ಯಾಂಕುಗಳು ಪ್ರಮುಖ ಪಾತ್ರವಹಿಸಬೇಕು” ಎಂದು ತಿಳಿಸಿದ್ದಾರೆ. “ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಯ ಜೊತೆಗೆ ಸಹಕಾರದ ಬಲವರ್ಧನೆ ನಮ್ಮ ಗುರಿ,” ಎಂದು ಶಾ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ. ಸಣ್ಣ ವ್ಯಾಪಾರಿಗಳು, ಮಧ್ಯಮ ವರ್ಗದವರು, ಸ್ಥಳೀಯ ಉದ್ಯಮಿಗಳು ಮತ್ತು ಸ್ವಯಂ ಉದ್ಯೋಗದತ್ತ ಮುಂದಾಗಿರುವ ಯುವಕರಿಗೆ ನೆರವು ನೀಡುವಂತೆ ನಗರ…

ಕೆಂಪು ಕೋಟೆ ಸ್ಫೋಟ: ಸಂತ್ರಸ್ತ ಕುಟುಂಬಗಳಿಗೆ ನಾಯಕರ ಸಂತಾಪ

ನವದೆಹಲಿ: ದೆಹಲಿಯ ಕೆಂಪು ಕೋಟೆಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ರಾಮದಾಸ್ ಅಠಾವಳೆ, ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. “ಭದ್ರತಾ ಸಂಸ್ಥೆಗಳು ಸಂಪೂರ್ಣ ತನಿಖೆ ನಡೆಸುತ್ತಿವೆ” ಎಂದು ಅವರು ತಿಳಿಸಿದ್ದಾರೆ. “ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದ ಸುದ್ದಿಗಳು ಕೆಲವು ದೃಶ್ಯಗಳೊಂದಿಗೆ ನಮ್ಮ ಮುಂದೆ ಬರುತ್ತಿವೆ. ದುರದೃಷ್ಟವಶಾತ್, ಈ ಘಟನೆಯಲ್ಲಿ ಕೆಲವು ಜೀವ ಮತ್ತು ಆಸ್ತಿ ನಷ್ಟದ ವರದಿಗಳೂ ಇವೆ. ಅದರಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಯಾವುದೇ ರೀತಿಯ ವದಂತಿಗಳಿಗೆ ಗಮನ ಕೊಡಬೇಡಿ ಎಂದು ನಾನು ಸಮಾಜಕ್ಕೆ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ” ಎಂದವರು ಹೇಳಿದ್ದಾರೆ. “ಭದ್ರತಾ ಸಂಸ್ಥೆಗಳು ಸಂಪೂರ್ಣ ತನಿಖೆ ನಡೆಸುತ್ತಿವೆ ಮತ್ತು ಯಾವುದೇ ದೃಢಪಡಿಸಿದ ಮತ್ತು ಪರಿಶೀಲಿಸಿದ ಮಾಹಿತಿ ಬಂದ ತಕ್ಷಣ, ಅದನ್ನು ಮಾತ್ರ ಅವಲಂಬಿಸಿ. ವದಂತಿಗಳನ್ನು…

ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ; ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ಭೀಕರ ಸ್ಫೋಟ ಸಂಭವಿಸಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್‌ ಬಳಿಯಲ್ಲಿ ನಿಲ್ಲಿಸಲಾಗಿದ್ದ ಕಾರು ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. #WATCH | Delhi: Fire tenders, ambulances, and senior police officials at the spot after a call was received regarding an explosion in a car near Gate No. 1 of the Red Fort Metro Station, after which three to four vehicles also caught fire and sustained damage Multiple casualties… pic.twitter.com/GaWKizw7MN — ANI (@ANI) November 10, 2025 ಸಂಜೆ ಸುಮಾರು 6.55ರ ಹೊತ್ತಿಗೆ ಕಾರು ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಪ್ರದೇಶ…

RSS ಕಾರ್ಯಕ್ರಮಗಳಿಗೆ ಅಂಕುಶ, ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಅಂಕುಶ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಪ್ರಯತ್ನ ನಡೆಸಿರುವ ವಿಚಾರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಆದರೆ, ಮತ್ತೊಂದೆಡೆ ಏರ್ಪೋರ್ಟ್ ಆವರಣದಲ್ಲಿ ಸಾಮೂಹಿಕ ನಮಾಜ್ ನಡೆಸಲು ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ನಮಾಜ್ ಬಗ್ಗೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಸಹಿತ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳಿಗೆ ರಾಜ್ಯ ಸರ್ಕಾರ ಹೊಣೆ ಎಂದು ಅವರು ದೂರಿದ್ದಾರೆ. How is this even allowed inside the T2 Terminal of Bengaluru International Airport?Hon’ble Chief Minister @siddaramaiah and Minister @PriyankKharge do you approve of this? Did these individuals obtain prior permission to offer Namaz…

ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ಆರೋಪ: ಸಿಎಂ, ಗೃಹ ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೆಸಾರ್ಟ್‍ಗೆ ಹೋಗಬೇಕಾದ ಅವಶ್ಯಕತೆ ಇಲ್ಲ; ಜೈಲಿಗೆ ಹೋದರೆ ಸಾಕು. ನಿಮಗೆ ಗಾಂಜಾ, ಡ್ರಿಂಕ್ಸ್ (ದಾರೂ) ಸಿಗುತ್ತದೆ. ಬ್ಲೂಫಿಲಂ ನೋಡಬೇಕಾದರೆ ಅದೂ ಸಿಗುತ್ತದೆ. ಮೊಬೈಲ್‍ನಲ್ಲಿ ಮಾತನಾಡಲೂ ವ್ಯವಸ್ಥೆ ಇದೆ. ಇವರಿಗೆ ನಾಚಿಕೆ ಆಗಬೇಕಲ್ಲವೇ ಎಂದು ಆಕ್ಷೇಪಿಸಿದರು. ಭಯೋತ್ಪಾದಕನ ಕೈಗೆ ಮೊಬೈಲ್ ಸಿಗುವುದಾದರೆ ದೇಶದ್ರೋಹದ ಚಟುವಟಿಕೆಗೆ ರಾಜಾಶ್ರಯ ನೀಡಿದಂತೆ ಅಲ್ಲವೇ ಎಂದು ಕೇಳಿದರು. ಉಮೇಶ್ ರೆಡ್ಡಿ ಎಂಬ ಅತ್ಯಾಚಾರಿ ಜೈಲಿನಲ್ಲಿ ಮೋಜು ಮಸ್ತಿ ಮಾಡಬಹುದಾದರೆ, ಜೈಲಿನಲ್ಲಿ ಕ್ರಿಮಿನಲ್‍ಗಳಿಗೆ ರಾಜಾಶ್ರಯ ಇದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಮಾದಕ ವಸ್ತು ಉತ್ಪಾದನಾ ಕಾರ್ಖಾನೆ ಆರಂಭವಾಗುತ್ತದೆ. ಕರ್ನಾಟಕದವರಿಗೆ ಮಾಹಿತಿಯೇ…

ಕೆರೆಗಳಿಗೆ ನೀರು ಹರಿಸಲು 800 ಕೋಟಿ ರೂಪಾಯಿಗೂ ಹೆಚ್ಚು ಹಣ ವೆಚ್ಚ

ವಿಜಯನಗರ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಭೂ ಒಡೆತನವನ್ನು ಆರನೇ ಗ್ಯಾರಂಟಿಯಾಗಿ, ಏಳನೇ ಗ್ಯಾರಂಟಿಯಾಗಿ ರೈತರಿಗೆ ನೀರನ್ನು ನೀಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಗಂಗಾ ಸ್ನಾನ ತುಂಗಾ ಪಾನ ಎನ್ನುವ ಮಾತಿದೆ. ಅಂದರೆ ತುಂಗಾನದಿ ನೀರು ಕುಡಿಯುವುದಕ್ಕೆ ಅಷ್ಟು ಪವಿತ್ರವಾದುದು. ಅಂತಹ ನೀರನ್ನು ಜನರ ಉಪಯೋಗಕ್ಕಾಗಿ ಕೆರೆಗಳಿಗೆ ಹರಿಸುತ್ತಿದ್ದೇವೆ ಎಂದರು. ಕೆರೆಗಳಿಗೆ ನೀರು ಹರಿಸಲು 800 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಈಗಾಗಲೇ ವೆಚ್ಚ ಮಾಡಲಾಗಿದೆ. ಎಲ್ಲಾ ಕೆರೆಗಳನ್ನು ತುಂಬಿಸುವ ಸಲುವಾಗಿ ವಾರ್ಷಿಕ ವಿದ್ಯುತ್ ವೆಚ್ಚವೇ 80 ಲಕ್ಷ ರೂಪಾಯಿ ತಲುಪುತ್ತದೆ. ಸರ್ಕಾರವು ಒಂದೆರಡು…

ನಗರ ಸಾರಿಗೆಯಲ್ಲಿ ನವೀನತೆ ತೋರಿದ ಕೆಎಸ್‌ಆರ್‌ಟಿಸಿ‌ಗೆ ಕೇಂದ್ರದ ಪುರಸ್ಕಾರ; ‘ಧ್ವನಿ ಸ್ಪಂದನ’ ಯೋಜನೆಗೆ ರಾಷ್ಟ್ರ ಪ್ರಶಸ್ತಿ

ಗುರುಗ್ರಾಮ್ (ಹರಿಯಾಣ): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ನವೀನ ಉಪಕ್ರಮಗಳಿಗಾಗಿ ಮತ್ತೊಮ್ಮೆ ರಾಷ್ಟ್ರ ಮಟ್ಟದ ಮಾನ್ಯತೆ ಗಳಿಸಿದೆ. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ವತಿಯಿಂದ ನೀಡಲಾಗುವ Award of Excellence in Urban Transport–2025 ಪ್ರಶಸ್ತಿಯನ್ನು ಕೆಎಸ್‌ಆರ್‌ಟಿಸಿ ಪಡೆದುಕೊಂಡಿದೆ. ಹಿಂದಿನ ವರ್ಷ ಅತ್ಯುತ್ತಮ ನಗರ ಸಾರಿಗೆ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ರಾಜ್ಯ ಸಂಸ್ಥೆಗಳ ಪೈಕಿ, ಮೈಸೂರಿನ ‘ಧ್ವನಿ ಸ್ಪಂದನ’ ಯೋಜನೆ ಈ ಗೌರವಕ್ಕೆ ಪಾತ್ರವಾಗಿದೆ. ಮೈಸೂರಿನ ನಗರ ಸಾರಿಗೆಯ 200ಕ್ಕೂ ಹೆಚ್ಚು ಬಸ್ಸುಗಳಲ್ಲಿ ‘ಧ್ವನಿ ಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್’ ಎಂಬ ದೇಶದ ಮೊದಲ ಯೋಜನೆಯನ್ನು ಕೆಎಸ್‌ಆರ್‌ಟಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸುವ ಈ ಯೋಜನೆ, ಅವರ ಆತ್ಮವಿಶ್ವಾಸ ಮತ್ತು ಸಂಚಾರ ಸ್ವಾತಂತ್ರ್ಯದಲ್ಲಿ ಹೊಸ ಅಧ್ಯಾಯ ಬರೆದಿದೆ. ಈ ಪ್ರಶಸ್ತಿಯನ್ನು…

‘ಮತ ಚೋರಿ’ ಬಗ್ಗೆ ಶೀಘ್ರದಲ್ಲೇ ಸಾಕ್ಷ್ಯಗಳನ್ನು ಬಿಡುಗಡೆ; ರಾಹುಲ್ ಗಾಂಧಿ ಘೋಷಣೆ

ಭೋಪಾಲ್: “ಮತ ಚೋರಿ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ – ಇದು ಭಾರತ ಮಾತೆಯ ಮೇಲಿನ ದಾಳಿ,” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮಧ್ಯಪ್ರದೇಶದ ಪಚ್ಮರ್ಹಿಯಲ್ಲಿ ನಡೆದ ‘ಸಂಘಥಾನ್ ಶ್ರೀಜನ್ ಅಭಿಯಾನ’ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು, ವ್ಯಾಪಕವಾದ ಮತ ಕಳ್ಳತನ ಪ್ರಕರಣಗಳನ್ನು ಮುಂದಿಟ್ಟರು. ಇದು ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಆತ್ಮದ ಮೇಲಿನ ಅವಮಾನವಾಗಿದೆ ಎಂದು ಅವರು ಕಿಡಿಕಾರಿದರು. “ಕೆಲವು ದಿನಗಳ ಹಿಂದೆ ಹರಿಯಾಣದ ಮಾದರಿಯನ್ನು ನಾನು ತೋರಿಸಿದ್ದೆ – ಅಲ್ಲಿ 25 ಲಕ್ಷ ಮತಗಳನ್ನು ಕದ್ದಿದ್ದಾರೆ, ಅಂದರೆ ಪ್ರತಿ ಎಂಟು ಮತಗಳಲ್ಲಿ ಒಂದನ್ನು. ಇದೇ ಅವರ ವ್ಯವಸ್ಥೆ,” ಎಂದು ರಾಹುಲ್ ಗಾಂಧಿ ಹೇಳಿದರು. “ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿಯೂ ಇದೇ ರೀತಿಯ ಅಕ್ರಮಗಳು ನಡೆದಿವೆ. ಮುಖ್ಯ ವಿಷಯವೇ ‘ಮತ ಚೋರಿ’. ನಮ್ಮ ಬಳಿ ಸಾಕ್ಷ್ಯಗಳಿವೆ. ಅವನ್ನು ಒಂದೊಂದಾಗಿ ಬಹಿರಂಗಪಡಿಸುತ್ತೇವೆ,” ಎಂದು…

RSS ನೋಂದಣಿಯಾಗಿಲ್ಲ, ಟ್ಯಾಕ್ಸ್ ಕಟ್ಟುತ್ತಿಲ್ಲ ಯಾಕೆ ಎಂದು ಸರಸಂಘಚಾಲಕ್ ಸ್ಪಷ್ಟನೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು, ಸಂಘದ ಕಾನೂನು ದೃಢೀಕರಣ ಹಾಗೂ ನೋಂದಣಿ ಕುರಿತ ಪ್ರಶ್ನೆಗೆ ಸ್ಪಷ್ಟನೆ ನೀಡುತ್ತಾ — “ನೋಂದಣಿ ಇಲ್ಲದೆ ಅನೇಕ ವಿಷಯಗಳು ಅಸ್ತಿತ್ವದಲ್ಲಿವೆ. ಹಿಂದೂ ಧರ್ಮವೂ ಸಹ ನೋಂದಾಯಿಸಲ್ಪಟ್ಟಿಲ್ಲ” ಎಂದು ಹೇಳಿದರು. ಭಾನುವಾರ ಬೆಂಗಳೂರಿನಲ್ಲಿ ನಡೆದ ‘100 ವರ್ಷಗಳ ಸಂಘ ಪ್ರಯಾಣ: ಹೊಸ ದಿಗಂತಗಳು’ ಕಾರ್ಯಕ್ರಮದ ಎರಡನೇ ದಿನದ ಪ್ರಶ್ನೋತ್ತರ ಸತ್ರದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.“ಈ ಪ್ರಶ್ನೆಗೆ ಹಲವಾರು ಬಾರಿ ಉತ್ತರಿಸಲಾಗಿದೆ. ಕೇಳುವವರು ಪುನಃ ಪುನಃ ಅದನ್ನೇ ಕೇಳುತ್ತಾರೆ. ನಾವು ಪ್ರತೀ ಬಾರಿ ಉತ್ತರಿಸುತ್ತಲೇ ಇದ್ದೇವೆ. ಇದು ಹೊಸ ಪ್ರಶ್ನೆಯೇ ಅಲ್ಲ” ಎಂದು ಭಾಗವತ್ ಹೇಳಿದರು, “ಆರ್‌ಎಸ್‌ಎಸ್ 1925ರಲ್ಲಿ ಪ್ರಾರಂಭವಾಯಿತು. ನಮ್ಮ ಸರಸಂಘಚಾಲಕರೇ ಹೋರಾಡುತ್ತಿದ್ದ ಆ ಸರ್ಕಾರದೊಡನೆ ನಾವು ನೋಂದಾಯಿಸಿಕೊಂಡಿರುತ್ತೇವೇ? ಸ್ವಾತಂತ್ರ್ಯಾನಂತರ ಕಾನೂನುಗಳು ನೋಂದಣಿಯನ್ನು ಕಡ್ಡಾಯಗೊಳಿಸಲಿಲ್ಲ. ನೋಂದಣಿಯಾಗದ ಸಂಸ್ಥೆಗೂ ಕಾನೂನು ಮಾನ್ಯತೆ ಇದೆ. ನಮ್ಮನ್ನೂ ಅಂತಹ…