ಬೆಂಗಳೂರು: ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇದು ಅತ್ಯಗತ್ಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪ್ರತಿಪಾದಿಸಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಆಹಾರ ಸುರಕ್ಷತಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಇಲಾಖೆಯ ಕಾರ್ಯದರ್ಶಿ ಪುಣ್ಯ ಸಲೀಲಾ ಶ್ರೀವಾಸ್ತವ ಅವರ ಸಮ್ಮುಖದಲ್ಲಿ ಮಾತನಾಡಿದ ಸಚಿವ ಡಾ.ಪಾಟೀಲ್, ಅನೈರ್ಮಲ್ಯ ಮತ್ತು ಕಲಬೆರಕೆ ಆಹಾರದಿಂದ ಉಂಟಾಗುವ ಗಂಭೀರ ಆರೋಗ್ಯ ಅಪಾಯಗಳನ್ನು ತಡೆಗಟ್ಟಬೇಕಾಗಿದೆ ಎಂದರು. ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟವಾಗುವ ಕಡಿಮೆ ಗುಣಮಟ್ಟದ ಆಹಾರದಿಂದ ಮಕ್ಕಳು ಮತ್ತು ವೃದ್ಧರ…
Blog
ಕಾಲ್ತುಳಿತ, ಮರಣಹೋಮ: ರಾಜ್ಯ ಸರ್ಕಾರದ ಅಮಾನತಿಗೆ CRF ಸಲಹೆ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ರಾಜ್ಯ ಸರ್ಕಾರದ ಅಸ್ತಿತ್ವಕ್ಕೂ ಸಂಚಕಾರ ತಂದಿದೆ. ಜೊತೆಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ತಂಡಕ್ಕೂ ಸಂಕಷ್ಟ ತಂದೊಡ್ಡಿದೆ. 11 ಜನರ ಮರಣ ಹೋಮಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದ್ದು, ಇಲಾಖೆಗಳ ಆಕ್ಷೇಪದ ಹೊರತಾಗಿಯೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಠಕ್ಕೆ ಬಿದ್ದು RCB ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನ್ಯಾಯಾಂಗ ತನಿಖೆ ಮುಗಿಯುವವರೆಗೂ ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಕೆಯಾಗಿದೆ. ಮಾನವ ಹಕ್ಕುಗಳ ಹೋರಾಟ ಸಂಸ್ಥೆಯಾಗಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ವತಿಯಿಂದ ರಾಜ್ಯಪಾಲರಿಗೆ ಸಲ್ಲಿಕೆಯಾಗಿರುವ ದೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 04.06.2025ರಂದು ಸಂಭವಿಸಿರುವ ಕಾಲ್ತುಳಿತ ದುರ್ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೊಣೆಗಾಗರಷ್ಟೇ ಅಲ್ಲ, ಅವರೇ ನೇರ ಕಾರಣಕರ್ತರು ಎಂದು ಆರೋಪಿಸಲಾಗಿದೆ.…
ಮೊಮ್ಮಗನಿಗೆ ಕ್ರಿಕೆಟಿಗರ ಜೊತೆ ಫೋಟೋಗ್ರಾಫ್ ಆಟೋಗ್ರಾಫ್ ಭರದಲ್ಲಿ ಬೆಂಗಳೂರನ್ನು ಸ್ಮಶಾನವಾಗಿಸಿದರೇ ಸಿಎಂ?
ಬೆಂಗಳೂರು: ಮೊಮ್ಮಗನಿಗೆ ಕ್ರಿಕೆಟಿಗರ ಜೊತೆ ಫೋಟೋಗ್ರಾಫ್ ಆಟೋಗ್ರಾಫ್ ಭರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರನ್ನು ಸ್ಮಶಾನವಾಗಿಸಿದರೆ? ಇಂಥದ್ದೊಂದು ಆರೋಪವನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾಡಿದ್ದಾರೆ. ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಗೂಬೆ ಕೂರಿಸಿ ಹರಕೆಯ ಕುರಿ ಮಾಡಲು ಹೊರಟಿರುವ ಕೊಲೆಗಡುಕ ಕಾಂಗ್ರೆಸ್ ಸರ್ಕಾರ 11 ಅಮಾಯಕ ಜನರ ಸಾವಿಗೆ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಸ್ವಾಮಿ ಸಿಎಂ ಸಿದ್ದರಾಮಯ್ಯ ತಮ್ಮ ಮೊಮ್ಮಗನಿಗೆ ಕ್ರಿಕೆಟ್ ಆಟಗಾರರ ಜೊತೆ ಫೋಟೋಗ್ರಾಫ್ ಆಟೋಗ್ರಾಫ್ ತೆಗೆಸಿಕೂಡುವ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನ ಕೊಂದು ಬಿಟ್ಟಿದ್ದಾರೆ, ಅವರಿಗೆ ಆತ್ಮಸಾಕ್ಷಿ ಇದೆಯಾ ಎಂದು ಸಾಮಾಜಿಕ ಜಾಲತಾಣ ‘X’ನಲ್ಲಿ ಅಶೋಕ್ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ನಿಮ್ಮ ಮೊಮ್ಮಗನಿಗೆ ವೇದಿಕೆಯ ಮೇಲೆ ಕುರ್ಚಿ, ಜನಸಾಮಾನ್ಯರಿಗೆ ಬೀದಿಯಲ್ಲಿ ಕಾಲ್ತುಳಿತ. ಆಹಾ, ಇನ್ನು ಮುಂದೆಂದೂ ಸಮಾಜವಾದ, ಸಾಮಾಜಿಕ ನ್ಯಾಯ ಎಂದು ಭಾಷಣ…
ಚಿನ್ನಸ್ವಾಮಿ ಕಾಲ್ತುಳಿತ: ಜೈಲಲ್ಲಿರುವ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಐಡಿ ಚಿಂತನೆ
ಬೆಂಗಳೂರು: ಜೂನ್ 4 ರಂದು 11 ಜೀವಗಳನ್ನು ಬಲಿ ಪಡೆದ ಚಿನ್ನಸ್ವಾಮಿ ಕಾಲ್ತುಳಿತ ದುರಂತದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಯ (ಸಿಐಡಿ) ವಿಶೇಷ ವಿಭಾಗವು ಶನಿವಾರದಿಂದ ಪ್ರಾರಂಭಿಸಲಿದೆ. ಅದೇ ಸಮಯದಲ್ಲಿ, ಬೆಂಗಳೂರು ನಗರ ಜಿಲ್ಲೆಯ ಉಪ ಆಯುಕ್ತರಿಂದ ಮ್ಯಾಜಿಸ್ಟೀರಿಯಲ್ ವಿಚಾರಣೆಯೂ ಪ್ರಗತಿಯಲ್ಲಿದೆ. ಸಿಐಡಿ ತನಿಖೆಗೆ ಎಸ್ಪಿ ಶುಭನ್ವಿತಾ ನೇತೃತ್ವ ವಹಿಸಲಿದ್ದಾರೆ ಮತ್ತು ಡಿವೈ ಎಸ್ಪಿಗಳಾದ ಗೌತಮ್ ಮತ್ತು ಪುರುಷೋತ್ತಮ್ ಅವರನ್ನು ತನಿಖಾಧಿಕಾರಿಗಳಾಗಿ ಹೆಸರಿಸಲಾಗಿದೆ ಎಂದು ಮೂಲಗಳು ದೃಢಪಡಿಸಿವೆ. ಇದೇ ವೇಳೆ, ಜೈಲಿಗೆ ಕಳುಹಿಸಲಾದ ನಾಲ್ವರು ಬಂಧಿತ ಆರೋಪಿಗಳನ್ನುವಿಚಾರಣೆಗಾಗಿ ಜೂನ್ 9, ಸೋಮವಾರ ಸಿಐಡಿ ಕಸ್ಟಡಿಗೆ ಕೋರುವ ಸಾಧ್ಯತೆಯಿದೆ. ಈ ಸಂಬಂಧ ಇಲಾಖೆ ಈಗಾಗಲೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ ಎನ್ನಲಾಗಿದೆ. ಆರಂಭದಲ್ಲಿ ಎಫ್ಐಆರ್ ದಾಖಲಿಸಿರುವ ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣದ ಕಡತಗಳನ್ನು ಸಿಐಡಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, 15 ದಿನಗಳಲ್ಲಿ ವರದಿ ಸಲ್ಲಿಸಲು…
ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?
ಕನ್ನಡಿಗರು ವಿರೋಧಿಸಿದರೂ ತಮ್ಮ ‘ಥಗ್ ಲೈಫ್’ ಚಿತ್ರ ಯಶಸ್ಸು ಸಾಧುತ್ತದೆ ಎಂಬ ಹುಮ್ಮಸ್ಸಿನಲ್ಲಿದ್ದ ತಮುಲು ನಟ ಕಮಲ್ ಹಾಸನ್ಗೆ ತೀವ್ರ ಮುಖಭಂಗವಾಗಿದೆ. ಕನ್ನಡದ ಬಗ್ಗೆ ಅಕ್ಸೆಪಾರ್ಹ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ಕಮಲ್ ಹಾಸನ್ ಅವರಿಗೆ ತಮಿಳು ಸಿನಿಮಾ ಅಭಿಮಾನಿಗಳೂ ಬೆಂಬಲವಾಗಿ ನಿಂತಿಲ್ಲ. ಅವರ ನೊಸ ಸಿನಿಮಾ ‘ಥಗ್ ಲೈಫ್’ ಕಲೆಕ್ಷನ್ ದಿನೇ ದಿನೇ ಕಡಿಮೆಯಾಗುತ್ತಿದ್ದು, ಚಿತ್ರ ತಂಡವನ್ನು ಕಂಗಾಲಾಗಿಸಿದೆ. ‘ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎಂದು ಮಾತನಾಡುವ ಮೂಲಕ ನಟ ಕಮಲ್ ಹಾಸನ್ ಕನ್ನಡಿಗರ ವಿರೋಧ ಕಟ್ಟಿಕೊಂಡರು. ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಯಾಗದಿದ್ದರೂ ತಮಿಳುನಾಡಿನಲ್ಲಿ ಯಶಸ್ಸು ಕಾಣಬಹುದು ಅಂದುಕೊಂಡಿದ್ದ ಕಮಲ್ ಹಾಸನ್ ಅವರಿಗೆ ತಮಿಳಿಗರೇ ಆಘಾತ ನೀಡಿದ್ದಾರೆ. ‘ಥಗ್ ಲೈಫ್’ ಸಿನಿಮಾ ಬಿಡುಗಡೆಯಾದ ದಿನ 15.5 ಕೋಟಿ ರೂಪಾಯಿ ಗಳಿಸಿದ್ದರೆ, ಎರಡನೇ ದಿನ ಕೇವಲ 7.5 ಕೋಟಿ ರೂಪಾಯಿ ಗಳಿಸಿದೆ. ತಮಿಳು ಚಿತ್ರರಂಗಕ್ಕೆ ಕರ್ನಾಟಕವೂ ದೊಡ್ಡ ಮಾರುಕಟ್ಟೆ.…
ಕಾಲ್ತುಳಿತ ಪ್ರಕರಣ; ಮತ್ತೊಂದು ಕೇಸ್ ದಾಖಲು
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಕೇಸ್ ದಾಖಲಾಗಿದೆ. ಆರ್ಸಿಬಿ, ಡಿಎನ್ಎ ಎಂಟರ್ಟೈನ್ಮೆಂಟ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾಲ್ತುಳಿತದಲ್ಲಿ ಗಾಯಗೊಂಡ ರೋಹನ್ ಗೋಮ್ಸ್ ಅವರು ಜೂನ್ 5 ರಂದು ನೀಡಿರುವ ದೂರಿನ ಆಧಾರದಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕಾಲ್ತುಳಿತ ಪ್ರಕರಣ: ಸರ್ಕಾರವೇ ಅಪರಾಧಿ ಎಂದು ಪ್ರತಿಪಕ್ಷ ಪುನರುಚ್ಚಾರ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಕಾನೂನನ್ನು ಕಗ್ಗತ್ತಲಿನಲ್ಲಿಟ್ಟಿದ್ದಾರೆ. ಗ್ರೇಟ್ ಸಮಾಜವಾದಿ, ಮಜಾವಾದಿ ಸಿದ್ದರಾಮಯ್ಯನವರಿಂದ ಹೀಗಾಗಿದೆ. ಆರ್ಸಿಬಿ ತಂಡ ಐಪಿಎಲ್ ಗೆದ್ದಿದ್ದರೆ, ಕೆಪಿಸಿಸಿ ತಂಡ ಫೋಟೋಗೆ ಫೋಸ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬ್ಯಾಟ್ಸ್ಮನ್ ಹಾಗೂ ಡಿ.ಕೆ.ಶಿವಕುಮಾರ್ ಅವರೇ ಬೌಲರ್ ಆಗಿದ್ದಾರೆ. ಸಿದ್ದರಾಮಯ್ಯನವರನ್ನು ಬೋಲ್ಡ್ ಮಾಡಬೇಕೆಂದು ಡಿ.ಕೆ.ಶಿವಕುಮಾರ್ ಪ್ರಯತ್ನ ಮಾಡುತ್ತಿದ್ದರೆ, ಐದು ವರ್ಷ ಸೆಂಚುರಿ ಹೊಡೆಯಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ರಾಜ್ಯದ ಜನರು ಹಿಟ್ ವಿಕೆಟ್ ಆಗಿದ್ದಾರೆ. 11 ಪ್ರತಿಭಾವಂತ ಯುವಜನರು ಬಲಿಯಾಗಿದ್ದಾರೆ ಎಂದು ದೂರಿದರು. ವೇದಿಕೆಯಲ್ಲಿ ಕಾಂಗ್ರೆಸ್ ನಾಯಕರ…
‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ
ಬೆಂಗಳೂರು: RCB ವಿಜಯೋತ್ಸವದ ಹೆಸರಿನಲ್ಲಿ ಸಂದರ್ಭದ ಲಾಭ ಪಡೆಯುವ ಕೆಟ್ಟ ಸ್ವಾರ್ಥದ ಫಲವಾಗಿ 11 ಅಮಾಯಕ ಜೀವಗಳ ಬಲಿಯಾಗಿದೆ. ಸಾವಿರಾರು ಜನರು ಸಂಕಟ ಅನುಭವಿಸಿದ್ದಾರೆ. ಇಂದು ಉಚ್ಚ ನ್ಯಾಯಾಲಯ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಪರಿಗಣಿಸಿ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಈ ಸಂದರ್ಭದಲ್ಲಿ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕಾದ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರುʼ ಎಂಬಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಸರ್ಕಾರದ ನಿರ್ಲಜ್ಜ ಹಾಗೂ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ದುರಾಲೋಚನೆಯ ಕ್ರಮವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಕರ್ನಾಟಕದ ಜನತೆ ಮಮ್ಮಲ ಮರುಗುತ್ತಿದ್ದಾರೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ಮನೆ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮಾನವೀಯತೆ ಇರುವವರ ಕರುಳು ಹಿಂಡುತ್ತಿದೆ ಎಂದಿರುವ ವಿಜಯೇಂದ್ರ, ಕರ್ನಾಟಕ ರಾಜ್ಯದ ಇತಿಹಾಸದಲ್ಲಿ…
ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದ BSY
ಬೆಂಗಳೂರು: ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ ವ್ಯವಸ್ಥೆಯ ಜವಾಬ್ದಾರಿ ಹೊತ್ತು, ಆರ್.ಸಿ.ಬಿ ವಿಜಯೋತ್ಸವದ ಆಚರಣೆಗೆ ಮುಂದಾಗಿ, ಇಂತಹ ಬಹುದೊಡ್ಡ ದುರಂತಕ್ಕೆ ಕಾರಣವಾಗಿರುವಾಗ, ತಮ್ಮ ನೈತಿಕ ಜವಾಬ್ದಾರಿಯನ್ನು ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಆಯುಕ್ತರೂ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ಅಮಾನತು ಮಾಡಿರುವುದು ನಾಚಿಕೆಗೇಡಿನ ಕ್ರಮವಾಗಿದೆ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಸಮಾರಂಭಕ್ಕೂ ಮುನ್ನವೇ ಕಾಲ್ತುಳಿತದಿಂದ ಸಾವು-ನೋವಾಗಿರುವ ಸುದ್ದಿ ತಲುಪಿದರೂ ಭಂಡತನದಿಂದ ಸನ್ಮಾನ ಕಾರ್ಯಕ್ರಮವನ್ನು ಮುಗಿಸಿ, ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಕಾರ್ಯಕ್ರಮ ಮುಂದುವರೆಸಿ, ಕಾಂಗ್ರೆಸ್ ಸರ್ಕಾರ ಕರುನಾಡಿನಲ್ಲಿ ಕರಾಳ ಇತಿಹಾಸ ಸೃಷ್ಟಿಸಿದೆ ಎಂದು ಸಾಮಾಜಿಕ ಜಾಲತಾಣ ‘X’ನಲ್ಲಿ ಅವರು ಬರೆದುಕೊಂಡಿದ್ದಾರೆ. ಜನರ ಆಕ್ರೋಶವನ್ನು ತಣಿಸಲು ಹಾಗೂ ಉಚ್ಚ ನ್ಯಾಯಾಲಯದ ನ್ಯಾಯದಂಡದಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳನ್ನು…
ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್
ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. 1996 ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಕ್ಷಿಪ್ರ ಕಾರ್ಯಾಚರಣೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಟ್ರಬಲ್ ಶೂಟರ್ ಎಂದೇ ಗುರುತಾಗಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ಆದಾಗ ಮೊದಲ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದ ಸೀಮಂತ್ ಕುಮಾರ್ ಸಿಂಗ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿ, ಎಸಿಬಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸಕ್ತ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಎಡಿಜಿಪಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಅವರನ್ನು ಇದೀಗ ಬೆಂಗಳೂರಿನ ನೂತನ ಕಮಿಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.