ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ ಬಗ್ಗೆ ಸಿಬಿಐ ತನಿಖೆ ನಡೆಯಲಿ, ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಬಿಜೆಪಿ

ಬೆಂಗಳೂರು: ಇತ್ತೀಚಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ ಅವರು ಭಾಗಿಯಾಗಿರುವುದಕ್ಕೆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ಕೇಂದ್ರ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅಶೋಕ, ಘಟನೆಯ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಸೂಕ್ಷ್ಮತೆ ಇದ್ದರೆ, ಅವರು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಹೇಳಿದರು. “ಕಾಲ್ತುಳಿತ ಘಟನೆಯ ಸಂಪೂರ್ಣ ಜವಾಬ್ದಾರಿಯನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತೆಗೆದುಕೊಳ್ಳಬೇಕು. ಅದರೊಂದಿಗೆ, ಅವರು ರಾಜೀನಾಮೆ ನೀಡಬೇಕು ಮತ್ತು ಈ ವಿಷಯದಲ್ಲಿ ಸಿಬಿಐ ತನಿಖೆ ನಡೆಸಬೇಕು” ಎಂದು ಅವರು ಆಗ್ರಹಿಸಿದರು. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ನಿಯಮಗಳನ್ನು ರೂಪಿಸಬೇಕು ಮತ್ತು ಸದನ ಸಮಿತಿಯನ್ನು ನೇಮಿಸಬೇಕು. ದುಃಖಿತ ಪೋಷಕರಿಗೆ…

ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಂಡಿರುವ ಕೆ.ಎನ್. ರಾಜಣ್ಣ, ತಮ್ಮ ವಜಾ ಹಿಂದೆ “ಅತಿದೊಡ್ಡ ಷಡ್ಯಂತ್ರ” ಅಡಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. “ನನ್ನ ವಜಾ ಹಿಂದೆ ಪಿತೂರಿ ಇದೆ. ಯಾರು, ಏನು ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಶೀಘ್ರವೇ ಬಯಲು ಮಾಡುತ್ತೇನೆ,” ಎಂದು ರಾಜಣ್ಣ ಎಚ್ಚರಿಕೆ ನೀಡಿದರು. “ಇದು ಹೈಕಮಾಂಡ್ ನಿರ್ಧಾರ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ,” ಎಂದೂ ಅವರು ಸ್ಪಷ್ಟಪಡಿಸಿದರು.

ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

ಬೆಂಗಳೂರು: ಪಕ್ಷದ ನಾಯಕರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಆದರೆ, ಕಾಂಗ್ರೆಸ್ ಒಳಗಿನಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣ ಭಿನ್ನ ಚಿತ್ರಣವನ್ನೇ ನೀಡುತ್ತಿದೆ. ಇತ್ತೀಚಿನ ದಿನಗಳಲ್ಲಿ ನಾಯಕತ್ವ ಬದಲಾವಣೆಯ ಕುರಿತು, ಜೊತೆಗೆ ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ನೀಡಿದ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ಹೇಳಿಕೆಗಳನ್ನು ರಾಜಣ್ಣ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ, ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದು, ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ..

ಬೆಂಗಳೂರು: ರಾಜ್ಯ ರಾಜಕಾರಣ ಇಂದು ಅಚ್ಚರಿಯ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸುತ್ತಾ ಬಂದಿರುವ ಸಚಿವ ಕೆ.ಎನ್.ರಾಜಣ್ಣ ಅವರು ರಾಜೀನಾಮೆ ನೀಡಿ ಸಿದ್ದರಾಮಯ್ಯನವರ ಸಂಪುಟದಿಂದ ಹೊರ ನಡೆದಿದ್ದಾರೆ. ರಾಹುಲ್ ಗಾಂಧಿ ನೀಡಿದ್ದ ಮತಗಳ್ಳತನ ಆರೋಪ ಬಗ್ಗೆ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದ ರಾಜಣ್ಣ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ. ಸಹಕಾರ ಸಚಿವ ಕೆಎನ್ ರಾಜಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದ್ದು, ಈ ಬಗ್ಗೆ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಈ ಸಂದರ್ಭದಲ್ಲಿ ಸದನದಲ್ಲಿ ಗದ್ದಲ ಉಂಟಾಯಿತು. ಆ ವೇಳೆ ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ ಈ ಬಗ್ಗೆ ಮುಖ್ಯಮಂತ್ರಿಯವರು ಹೇಳಿಕೆ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಸಿಎಂ ಆಪ್ತ ಮೂಲಗಳ ಹೇಳಿಕೆ: ಕೆ.ಎನ್.ರಾಜಣ್ಣ ಅವರು ಪಕ್ಷದ ನಾಯಕರ ಸೂಚನೆ ಮೇರೆಗೆ ಸಚಿವ…

ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡಿ,ಕಲಾಗ್ರಾಮವಾಗಿ ಅಭಿವೃದ್ಧಿಪಡಿಸಿ; ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡುವುದಲ್ಲದೇ, ಅದನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾಗ್ರಾಮವಾಗಿ ಅಭಿವೃದ್ಧಿಪಡಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಶೋಭಾ ಕರಂದ್ಲಾಜೆ ಸಿಎಂ ಸಿದ್ದರಾಮಯ್ಯ ಅವ್ರಿಗೆ ಪಾತ್ರ ಬರೆದಿದ್ದಾರೆ. ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರುನಾಡಿನ ಮನೆಮನಗಳೂ ಮಾತನಾಡುತ್ತವೆ.‌ ಎಲ್ಲರ‌ ಮನೆಮಾತಾದ ಅಂತಹ ಅದ್ಭುತ ನಟಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದ, ಅವರ ಸಮಾಧಿಸ್ಥಳವನ್ನು ಉಳಿಸಿಕೊಳ್ಳಲಾಗದ ಸ್ಥಿತಿಗೆ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ ಎಂದವರು ಪಾತ್ರದಲ್ಲಿ ಹೇಳಿದ್ದಾರೆ. ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಅಭಿಮಾನ್ ಸ್ಟುಡಿಯೋ ಭಾಗವನ್ನು ರಾತ್ರೋರಾತ್ರಿ ಕೆಡವಿ, ಅಸಂಖ್ಯಾತ ಅಭಿಮಾನಿಗಳಿಗೂ ಹಾಗೂ ಅವರ ಅಪೂರ್ವ ಸಾಧನೆಗಳಿಗೂ ಅನ್ಯಾಯ ಮಾಡಿರುವುದು ಅತ್ಯಂತ ನೋವುಂಟುಮಾಡಿದೆ ಎಂದಿದ್ದಾರೆ. ಆ ನಿಟ್ಟಿನಲ್ಲಿ, ಡಾ. ವಿಷ್ಣುವರ್ಧನ್ ಅವರ…

ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

ಬೆಂಗಳೂರು: ದಕ್ಷಿಣ ಬೆಂಗಳೂರಿನ ಆರ್.ವಿ. ರಸ್ತೆಯಿಂದ ಪಶ್ಚಿಮದ ಬೊಮ್ಮಸಂದ್ರವರೆಗಿನ ಬಹುನಿರೀಕ್ಷಿತ ‘ಹಳದಿ ಮಾರ್ಗ’ ಮೆಟ್ರೋ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು. ಒಟ್ಟು 19.15 ಕಿ.ಮೀ ಉದ್ದ, 16 ನಿಲ್ದಾಣಗಳನ್ನು ಒಳಗೊಂಡಿರುವ ಈ ಮಾರ್ಗವನ್ನು ₹7,160 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ರತಿ ದಿನ ಸుమಾರು 8 ಲಕ್ಷ ಪ್ರಯಾಣಿಕರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದರು. ನಿಲ್ದಾಣಗಳ ಪಟ್ಟಿ: ಆರ್.ವಿ ರಸ್ತೆ (ಹಸಿರು ಮಾರ್ಗ ಸಂಪರ್ಕ), ರಾಗಿಗುಡ್ಡ, ಜಯದೇವ ಆಸ್ಪತ್ರೆ (ಭವಿಷ್ಯದಲ್ಲಿ ನೇರಳೆ ಮಾರ್ಗ ಸಂಪರ್ಕ), ಬಿಟಿಎಂ ಲೇಔಟ್, ಕೇಂದ್ರ ರೇಷ್ಮೆ ಮಂಡಳಿ, ಎಚ್‌ಎಸ್‌ಆರ್ ಲೇಔಟ್, ಆಕ್ಸ್‌ಫರ್ಡ್ ಕಾಲೇಜು, ಹೊಂಗಸಂದ್ರ, ಕೂಡ್ಲು ಗೇಟ್, ಸಿಂಗಸಂದ್ರ, ಹೊಸ ರೋಡ್, ಎಲೆಕ್ಟ್ರಾನಿಕ್ ಸಿಟಿ–1, ಕೋನಪ್ಪನ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ, ಬೊಮ್ಮಸಂದ್ರ. ಸಂಚಾರ ದಟ್ಟಣೆ ಕಡಿತದ ನಿರೀಕ್ಷೆ: ಹೊಸ ಮಾರ್ಗವು ಸಿಲ್ಕ್ ಬೋರ್ಡ್,…

ಮೂರು ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಅವರು ನೇರವಾಗಿ ಚಾಲನೆ ನೀಡಿದರೆ, ಅಮೃತಸರ–ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ಅಜ್ನಿ (ನಾಗ್ಪುರ)–ಪುಣೆ ನಡುವೆ ಸಂಚರಿಸಲಿರುವ ಇನ್ನೆರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು. VIDEO | PM Narendra Modi (@narendramodi) flags off Vande Bharat Express train from Bengaluru to Belagavi from KSR Railway Station in Bengaluru. (Source: Third Party) pic.twitter.com/nG7issWdDV — Press Trust of India (@PTI_News) August 10, 2025

‘ಆಪರೇಷನ್ ಸಿಂಧೂರ್’: ಅಪರೂಪದ ಒಳನೋಟ ಹಂಚಿಕೊಂಡ ಸೇನಾ ಮುಖ್ಯಸ್ಥ

ಚೆನ್ನೈ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ‘ಆಪರೇಷನ್ ಸಿಂಧೂರ್’ ಹೇಗೆ ರೂಪುಗೊಂಡಿತು ಎಂಬುದರ ಕುರಿತು ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ಅಪರೂಪದ ಒಳನೋಟ ಹಂಚಿಕೊಂಡಿದ್ದಾರೆ. ಮಿಲಿಟರಿ ನಿಖರತೆ ಮತ್ತು ರಾಜಕೀಯ ಸ್ಪಷ್ಟತೆ ಸಂಗಮಗೊಂಡ ಉನ್ನತ ಮಟ್ಟದ ಕಾರ್ಯಾಚರಣೆ ಎಂದು ಅವರು ಬಣ್ಣಿಸಿದರು. ಐಐಟಿ ಮದ್ರಾಸ್‌ನಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 22ರಂದು ಪಾಕಿಸ್ತಾನ ಮೂಲದ ಭಯೋತ್ಪಾದಕರು ನಡೆಸಿದ ದಾಳಿ ಇಡೀ ದೇಶವನ್ನು ಬೆಚ್ಚಿಬೀಳಿಸಿತೆಂದರು. “ಮರುದಿನವೇ ನಾವು ಚರ್ಚೆಗೆ ಕುಳಿತೆವು. ರಕ್ಷಣಾ ಸಚಿವರು ‘ಸಾಕು ಸಾಕು’ ಎಂದರು. ಮೂವರು ಸೇನಾ ಮುಖ್ಯಸ್ಥರೂ ನಿರ್ಣಾಯಕ ಕ್ರಮಕ್ಕೆ ಒಪ್ಪಿಕೊಂಡು ನಮಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದರು. ಇಷ್ಟು ಸ್ಪಷ್ಟ ರಾಜಕೀಯ ನಿರ್ದೇಶನವನ್ನು ಮೊತ್ತಮೊದಲು ನೋಡಿದೆವು,” ಎಂದರು. ಏಪ್ರಿಲ್ 25ರಂದು ಉತ್ತರ ಕಮಾಂಡ್ ಕೇಂದ್ರದಲ್ಲಿ ಕಾರ್ಯಯೋಜನೆ ರೂಪಿಸಿ ತಕ್ಷಣವೇ ಕಾರ್ಯಗತಗೊಳಿಸಲಾಯಿತು. ಒಂಬತ್ತು ಗುರಿಗಳಲ್ಲಿ ಏಳು ನಾಶವಾಗಿದ್ದು,…

ಮತಗಳ್ಳತನ ಆರೋಪ ಬಗ್ಗೆ ರಾಹುಲ್ ‘ಹಿಟ್ ಅಂಡ್ ರನ್’; ಜೋಶಿ

ಬೆಂಗಳೂರು: ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ ಬಳಿಕ ಆಯೋಗದ ಕಚೇರಿಗೆ ಭೇಟಿ ನೀಡದೆ, ಯಾವುದೇ ದಾಖಲೆಗಳನ್ನು ಸಲ್ಲಿಸದೇ “ಹಿಟ್ ಅಂಡ್ ರನ್” ಪದ್ದತಿ ಪಾಲಿಸಿರುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಟೀಕಿಸಿದ ಅವರು, “ಸಾರ್ವಜನಿಕವಾಗಿ ದೊಡ್ಡ ದೊಡ್ಡ ಸುಳ್ಳು ಹೇಳಿಕೆಗಳನ್ನು ನೀಡುವ ರಾಹುಲ್, ಸಾಕ್ಷಿ ಕೇಳಿದರೆ ಮಾಯವಾಗುತ್ತಾರೆ. ಗುರುವಾರ ಮತಗಳ್ಳತನದ ಆರೋಪ ಮಾಡಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರೂ, ಆಯೋಗದ ಕಚೇರಿಗೆ ತೆರಳಿಲ್ಲ. ಫ್ರೀಡಂ ಪಾರ್ಕ್‌ನಿಂದ ಆಯೋಗದ ಕಚೇರಿಗೆ 5 ನಿಮಿಷ ನಡೆದು ಹೋಗಬಹುದು. ಬದಲಾಗಿ, ಬೇರೆವರನ್ನು ಕಳುಹಿಸಿದ್ದಾರೆ” ಎಂದು ವ್ಯಂಗ್ಯವಾಡಿದರು. “ಆರೋಪ ಮಾಡಿ ಇನ್ನೊಬ್ಬರಿಂದ ಉತ್ತರ ಕೊಡಿಸುವುದು, ಸುಳ್ಳಿಗೆ ಆಧಾರವಿಲ್ಲವೆಂಬುದರ ಪುರಾವೆ. ರಾಜ್ಯ ಚುನಾವಣಾ ಆಯೋಗ ಅಫಿಡವಿಟ್ ಕೇಳಿದೆ, ಇದುವರೆಗೂ ಫೈಲ್ ಮಾಡಿಲ್ಲ” ಎಂದು ಹೇಳಿದರು. ರಾಹುಲ್…

ಪ್ರಜಾಪ್ರಭುತ್ವ ಅಲುಗಾಡಿಸುವ ಯತ್ನ: ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಆರೋಪ

ಬೆಂಗಳೂರು: “ಮತಗಳ್ಳತನ ತಡೆಯುವುದು ಕೇವಲ ಚುನಾವಣೆ ಸ್ವಚ್ಛತೆಗೆ ಸಂಬಂಧಿಸಿದ ವಿಷಯವಲ್ಲ, ಪ್ರಜಾಪ್ರಭುತ್ವದ ಅಸ್ತಿತ್ವಕ್ಕೂ ಸಂಬಂಧಿಸಿದೆ. ಬಿಜೆಪಿ ಚುನಾವಣಾ ಆಯೋಗ, ಇಡಿ, ಸಿಬಿಐ, ಐಟಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದೆ,” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಟೀಕಿಸಿದರು. ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ‘ಕ್ವಿಟ್ ಇಂಡಿಯಾ’ ದಿನಾಚರಣೆಯಲ್ಲಿ ಮಾತನಾಡಿದ ಅವರು, “1942ರ ಚಳುವಳಿಯಂತೆ, ಇಂದಿನ ದಿನಗಳಲ್ಲಿ ಕೇಂದ್ರದ ಜನವಿರೋಧಿ ನೀತಿಯ ವಿರುದ್ಧ ತಾರ್ಕಿಕ ಅಂತ್ಯ ಕಾಣುವ ಹೋರಾಟ ಅಗತ್ಯ. ರಾಹುಲ್ ಗಾಂಧಿ ಅವರ ಮೇಲೆ 51 ಪ್ರಕರಣ ದಾಖಲಿಸಿ, ಮಾತನಾಡುವ ಹಕ್ಕೇ ಕಸಿದುಕೊಳ್ಳುತ್ತಿರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ,” ಎಂದರು. ಮತದಾನದಲ್ಲಿ ಅಕ್ರಮಗಳ ಬಗ್ಗೆ ಅವರು ಗಂಭೀರ ಆಕ್ಷೇಪ ವ್ಯಕ್ತಪಡಿಸಿದರು. “25 ಕ್ಷೇತ್ರಗಳಲ್ಲಿ ಚುನಾವಣೆ ಪಾರದರ್ಶಕವಾಗಿದ್ದರೆ ನರೇಂದ್ರ ಮೋದಿ ಪ್ರಧಾನಿಯಾಗಿರುತ್ತಿರಲಿಲ್ಲ. ಅಕ್ರಮ ತಡೆಯಲು 5 ಸಮಿತಿಗಳನ್ನು ರಚಿಸಿದ್ದೇವೆ. ಯಾರೇ ‘ಮತಗಳ್ಳತನ ದೊಡ್ಡ ಸಮಸ್ಯೆಯಲ್ಲ’ ಎಂದು ಭಾವಿಸಿದರೆ,…