ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ?

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೀಡಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮದೇ ಶೈಲಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಲೋಕಾಯುಕ್ತ ಮುಖ್ಯಮಂತ್ರಿಗಳಿಗೆ ನೀಡಿರುವ ಕ್ಲೀನ್ ಚಿಟ್ ನಿರೀಕ್ಷಿತವೇ ಆಗಿತ್ತು. ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ? ಎಂದವರು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ‘X’ನಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿರುವ ವಿಜಯೇಂದ್ರ, ‘ನಾವು ಮೊದಲಿನಿಂದಲೂ ಸಿಬಿಐ ತನಿಖೆಗಾಗಿ ಒತ್ತಾಯಿಸುತ್ತಿದ್ದೆವು, ಸಿಬಿಐ ತನಿಖೆಯಿಂದ ಮಾತ್ರ ಸಾವಿರಾರು ನಿವೇಶನಗಳು ಲೂಟಿಯಾಗಿರುವ ಮುಡಾ ಹಗರಣದಲ್ಲಿ ನ್ಯಾಯ ಸಿಗಲು ಸಾಧ್ಯ’ ಎಂದಿದ್ದಾರೆ. ಸಿದ್ದರಾಮಯ್ಯನವರ 14 ನಿವೇಶನಗಳು, ಲೂಟಿಯಾಗಿರುವ ಸಾವಿರಾರು ನಿವೇಶನಗಳನ್ನು ಹಾಗೂ ಲೂಟಿ ಮಾಡಿದ ಭ್ರಷ್ಟ ಅಧಿಕಾರಿಗಳು ಹಾಗೂ ಪ್ರಭಾವಿಗಳನ್ನು ರಕ್ಷಿಸುತ್ತಿದೆ. ರಾಜ್ಯ ಕಂಡು ಕೇಳರಿಯದ ಬಹುದೊಡ್ಡ ಭ್ರಷ್ಟ ಹಗರಣದ ಪಾರದರ್ಶಕ ತನಿಖೆ ನಡೆಯಬೇಕೆಂದರೆ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರ್ಕಾರದಿಂದ ಅಂತರ ಕಾಯ್ದುಕೊಂಡ…

ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿ; ಮೂವರು ಯುವಕರ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಸಮೀಪ ರೀಲ್ಸ್ ಮಾಡುತ್ತಿದ್ದ ಮೂವರು ಯುವಕರು ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಈ ಘಟನೆ ನಡೆದಿದೆ. ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಲಲನ್ (24 ವರ್ಷ), ಬಿಕೇಶ್ (20 ವರ್ಷ) ಮತ್ತು ರಾಹುಲ್ (18 ವರ್ಷ) ಎಂಬವರು ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ರೀಲ್ಸ್ ಮಾಡುತ್ತಿದ್ದರು ಎನ್ನಲಾಗಿದೆ. ಅದಾಗಲೇ ಆಗಮಿಸಿದ ರೈಲು ಈ ಯುವಕರಿಗೆ ಅಪ್ಪಳಿಸಿದೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಯಶವಂತಪುರ ರೈಲ್ವೆ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇಲಾಖೆಗಳ ವಿದ್ಯುತ್ ಬಿಲ್ ಪಾವತಿಗೂ ಸರ್ಕಾರದ ಬಳಿ ಹಣ ಇಲ್ಲ? ಬಿಜೆಪಿ ವ್ಯಂಗ್ಯ

ಬೆಂಗಳೂರು: ವಿದ್ಯುತ್ ಕ್ಷೇತ್ರದಲ್ಲಿ ರಾಜ್ಯದ ಹೀನಾಯ ಸ್ಥಿತಿ ಬಗ್ಗೆ ಪ್ರತಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಪರಿಸ್ಥಿತಿಯತ್ತ ಬೊಟ್ಟು ಮಾಡಿದ ವಿಜಯೇಂದ್ರ, ರಾಜ್ಯದ ವಿವಿಧ ಇಲಾಖೆಗಳ ಕಚೇರಿಗಳಿಂದ ₹6 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿ ಬಾಕಿ ಇದ್ದು, ಅದರ ವಸೂಲಿಗೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ಸ್ವತಃ ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ ಎಂದು ಗಮನಸೆಳೆದರು. ರಾಜ್ಯದ ಯಾವ ಇಲಾಖೆಗಳಲ್ಲೂ ವಿದ್ಯುತ್ ಬಿಲ್ ಪಾವತಿಸುವಷ್ಟೂ ಹಣ ಇಲ್ಲದೆ ಇರುವ ದಾರುಣ ಪರಿಸ್ಥಿತಿಗೆ ತಲುಪಿರುವುದಕ್ಕೆ ಯಾರು ಹೊಣೆಗಾರರು ಎನ್ನುವುದನ್ನು ಮುಖ್ಯಮಂತ್ರಿಗಳೇ ತಿಳಿಸಬೇಕಿದೆ ಎಂದು ವಿಜಯೇಂದ್ರ ಹೇಳಿದರು. ರಾಜ್ಯದ ವಿವಿಧ ಇಲಾಖೆಗಳ ಕಚೇರಿಗಳಿಂದ ₹6 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿ ಬಾಕಿ ಇದ್ದು, ಅದರ ವಸೂಲಿಗೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆ…

ಅನ್ನಭಾಗ್ಯ: ಇನ್ನುಮುಂದೆ ಹಣಕ್ಕೆ ಬದಲು ಅಕ್ಕಿ

ಬೆಂಗಳೂರು: ರಾಜ್ಯಸರ್ಕಾರ ಇನ್ನುಮುಂದೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂಪಾಯಿ ಹಣ ನೀಡಲಾಗುತ್ತಿತ್ತು. ಇನ್ನು ಮುಂದೆ 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಈ ತಿಂಗಳಿಂದಲೇ ಅಕ್ಕಿಯನ್ನು ನೀಡಲಾಗುತ್ತದೆ ಎಂದವರು ತಿಳಿಸಿದರು. ಕೇಂದ್ರ ಸರ್ಕಾರವು 5 ಕೆಜಿ ಅಕ್ಕಿನೀಡಲು ಒಪ್ಪಿದೆ ಎಂದ ಅವರು, ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ. ರಾಜ್ಯದ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ವಿವರಿಸಲಾಗಿದ್ದು, ನಮ್ಮ ಮನವಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ ಎಂದು ಸಚಿವ ಮುನಿಯಪ್ಪ ಹೇಳಿದರು.

ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

ಬೆಂಗಳೂರು: ‘ಬಿ ಖಾತಾ’ ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ ಎಂದವರು ತಿಳಿಸಿದ್ದಾರೆ. " ಬಿ ಖಾತಾ" ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ. pic.twitter.com/HlsyqED95L — Siddaramaiah (@siddaramaiah) February 18, 2025

ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು ಸಂತಸಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿರುವ ನಟ ಡಾಲಿ ಧನಂಜಯ ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು ಎಂದಿದ್ದಾರೆ. ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು ಎಂದಿದ್ದಾರೆ. ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ ಎಂದವರು ವಿನಂತಿಸಿಕೊಂಡಿದ್ದಾರೆ. ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು ,…

ಜೂನ್ ಅಥವಾ ಜುಲೈನಲ್ಲಿ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಸಾಧ್ಯತೆ; ಹೈಕೋರ್ಟಿಗೆ ಸರ್ಕಾರದ ಮಾಹಿತಿ

ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟಿಗೆ ಮಾಹಿತಿ ನೀಡಿದೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ‌ ಅರ್ಜಿ ಸೋಮವಾರ ಹೈಕೋರ್ಟಿನಲ್ಲಿ ವಿಚಾರಣೆಗೆ ಬಂದಿದೆ. ಮೂರು ವರ್ಷಗಳಾದರೂ ಸಹ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ಹೈಕೋರ್ಟ್​ ಗಮನಸೆಳೆದರು. ಸರ್ಕಾರವು ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ನಿಲುವನ್ನು ತಿಳಿಸಿದರು. ಈ ವೇಳೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಬಳಿಕ ಎಲೆಕ್ಷನ್ ನಡೆಸುವುದಾಗಿ ಮಾಹಿತಿ ನೀಡಿದರು. ಈ ಕುರಿತು ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಅರ್ಜಿಯನ್ನು…

ಮಾರ್ಚ್​ 7ರಂದು ಬಜೆಟ್ ಮಂಡನೆ: ಸಿಎಂ ಮಾಹಿತಿ

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ ಮುಂದಿನ ತಿಂಗಳ 7ರಂದು ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಅವರು ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘದ ಮುಖಂಡರುಗಳೊಂದಿಗೆ ಆಯವ್ಯಯ ಸಂಬಂಧ ಪೂರ್ವಭಾವಿ ಸಭೆ ನಡೆಸಿದರು. ರೈತರ ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿ ಅಗತ್ಯ ಮಾಹಿತಿ ಸಂಗ್ರಹಿಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಂಬರುವ ಬಜೆಟ್ ಮಂಡನೆ ಬಗ್ಗೆ ಮಾಹಿತಿ ನೀಡಿದರು. ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಮಾರ್ಚ್​ 7ರಂದು ಬಜೆಟ್ ಮಂಡಿಸುವುದಾಗಿ ತಿಳಿಸಿದರು.

ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಮೈಸೂರು: ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್​​ನಲ್ಲಿ ನಡೆದಿದೆ. ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಹಾಗೂ ಕುಶಾಲ್ ​(15) ಮೃತ ದುರ್ದೈವಿಗಳು. ತನ್ನ ಕುಟುಂಬ ಸದಸ್ಯರಿಗೆ ವಿಷ ವುಣಿಸಿ ನಂತರ ಚೇತನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಚೇತನ್ ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಹಣಕಾಸಿನ ಸಮಸ್ಯೆ ಬಗ್ಗೆ ಅದರಲ್ಲಿ ಬರೆಯಲಾಗಿದೆ ಎನ್ನಲಾಗಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಮೈಸೂರು ನಗರ ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.