ನೆಲಮಂಗಲ ಬಳಿ ಬಸ್ಸು ಕಾರು ಡಿಕ್ಕಿ: ಐವರು ಸಾವು

ಬೆಂಗಳೂರು: ನೆಲಮಂಗಲ ಸಮೀಪ ಜಿಂದಾಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ಎದುರು ದಿಕ್ಕಿನಲ್ಲಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಆತನು ಸಹ ಮೃತಪಟ್ಟಿದ್ದಾನೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ವೀಡಿಯೊ ಸಾಕ್ಷಿ, ಇದ್ದರೂ ಬಿ ರಿಪೋರ್ಟ್; ಪೊಲೀಸರನಡೆಯಿಂದಾಗಿ ಆರೋಪಿ ಪಾದ್ರಿಗಳು ನಿರಾಳ

ಬೆಂಗಳೂರು: ರಾಜ್ಯದ ಕೆಲವು ಕ್ರಿಶ್ಚಿಯನ್ ಚರ್ಚ್’ಗಳಲ್ಲಿ ಸಾಮಾಜಿಕ ಬಹಿಷ್ಕಾರದ ಘಟನೆಗಳು ನಡೆಯುತ್ತಿದ್ದು, ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಪ್ರತಿಧ್ವನಿಸಿದೆ. ಅಂತಹಾ ಪ್ರಕರಣಗಳನ್ನು ಪೊಲೀಸರು ಮುಚ್ಚಿಹಾಕುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಪೈಕಿ ಬೆಂಗಳೂರಿನ ಬಾಗಲೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಕೆಯಾಗಿರುವ ಮನವಿಯೊಂದು ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಜೊತೆಗೆ, ಚರ್ಚುಗಳ ನಿರ್ವಹಣೆ ಸಂಬಂಧ ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹವೂ ಕೇಳಿಬಂದಿದೆ. ಬೆಂಗಳೂರಿನ ಚಿಕ್ಕಗುಬ್ಬಿಯ ಸಂತೋಷ್ ಕುಮಾರ್ ಎಂಬವರು ಹೆಣ್ಣೂರು ರಸ್ತೆ ಬಳಿಯ ಬೆಳ್ಳಹಳ್ಳಿಯಲ್ಲಿಯಲ್ಲಿರುವ ಕ್ರಿಶ್ಚಿಯನ್ ಫಲೋಶಿಪ್ ಚರ್ಚ್ (CFC) ನಲ್ಲಿನ ಕೃತ್ಯದ ತನಿಖೆಯಲ್ಲಾಗಿರುವ ಪೊಲೀಸರ ಲೋಪದ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಡಿಜಿಪಿ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ‘2002ರಿಂದ ಚರ್ಚಿನ ಸದಸ್ಯರಾಗಿರುವ ತಾನು ಚರ್ಚಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ…

ತಾರತಮ್ಯ ನಿವಾರಿಸಲು ಹೆಚ್ಚು ಅನುದಾನ ನೀಡಿದ ಎದೆಗಾರಿಕೆ ತೋರಿಸಿ; ಸಿಎಂಗೆ ಅಶೋಕ್ ಸವಾಲ್

ಬೆಂಗಳೂರು : ಈ ಬಾರಿಯ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.‌ ಅಶೋಕ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚು ಅವಧಿ ಅಧಿಕಾರದಲ್ಲಿದಿದ್ದುಕಾಂಗ್ರೆಸ್‌ ಪಕ್ಷ. ಅತಿ ಹೆಚ್ಚು ಬಜೆಟ್‌ ಮಂಡಿಸಿರುವುದು ಸಿದ್ದರಾಮಯ್ಯ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು ಎಂದು ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಅನ್ಯ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಅನುದಾನವನ್ನು ಕ್ರೊಢೀಕರಿಸಿ ಇಂತಿಷ್ಟು ಮೊತ್ತ ಹಣವನ್ನು ನೀಡಿರುವುದಾಗಿ ಹಾರಿಕೆ ಭರವಸೆ ನೀಡಬಾರದು. ಕೆಕೆಆರ್‌ಡಿಬಿ ಸಹಿತ ಇತರೆ ಅಭಿವೃದ್ಧಿ ಮಂಡಳಿ ಅಥವಾ ನಿಗಮಗಳಿಗೆ ನೀಡುವ ಅನುದಾನವನ್ನು ಈ ಲೆಕ್ಕಾಚಾರಕ್ಕೆ ಸೇರಿಸಬಾರದು.…

ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧಿತ ಶಾಸಕ ಬೈರತಿ ಬಸವರಾಜ್’ಗೆ ಜಯದೇವದಲ್ಲಿ ಚಿಕಿತ್ಸೆ

ಬೆಂಗಳೂರು: ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಬಂಧಿಸಲಾಗಿದೆ.ಬಂಧನದ ಬಳಿಕ ಶಾಸಕರ ಆರೋಗ್ಯದಲ್ಲಿ ಏರುಪೇರಾಗಿರುವುದಾಗಿ ತಿಳಿದುಬಂದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಂಬಂಧಿ ತೊಂದರೆ ಇರುವುದಾಗಿ ಅವರು ತಿಳಿಸಿದ್ದರಿಂದ, ಸಮಗ್ರ ಪರೀಕ್ಷೆಗಾಗಿ ಅವರನ್ನು ಶ್ರೀ ಜಯದೇವ ಹೃದಯ ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿದೆ. ಅದಕ್ಕೂ ಮೊದಲು ಬಸವರಾಜ್ ಅವರನ್ನು ಬೌರಿಂಗ್ ಆಸ್ಪತ್ರೆ ಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಹೃದಯ ಸಂಬಂಧಿತ ಸಮಸ್ಯೆಗಳ ಸಾಧ್ಯತೆ ಇರುವುದಾಗಿ ಸೂಚಿಸಿ, ವಿಶೇಷ ಹೃದ್ರೋಗ ಆಸ್ಪತ್ರೆಗೆ ಹೆಚ್ಚಿನ ಪರೀಕ್ಷೆ ನಡೆಸಲು ಶಿಫಾರಸು ಮಾಡಿದ್ದರು. ಬೆಂಗಳೂರು ನ್ಯಾಯಾಲಯವು ಸಿಐಡಿ ಅಧಿಕಾರಿಗಳಿಗೆ, ಬಂಧಿತ ಶಾಸಕರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ನಿರ್ದೇಶಿಸಿದೆ. ಸಿಐಡಿ ವಶದಲ್ಲೇ ವೈದ್ಯಕೀಯ ಪರೀಕ್ಷೆಗಳು ಅಧಿಕೃತ ಮೇಲ್ವಿಚಾರಣೆಯಲ್ಲಿ ನಡೆಯಲಿವೆ ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯಕೀಯ ವರದಿ ಆಧರಿಸಿ ಅವರನ್ನು ನ್ಯಾಯಾಂಗ ಬಂಧನಕ್ಕೆ…

ಸಿಎಂ ಅವರ ನಕಲಿ ವರ್ಗಾವಣೆ ಶಿಫಾರಸು ಪತ್ರ ವೈರಲ್ ಆರೋಪ; ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಅಧಿಕಾರಿಯ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂಬಂತಿರುವ ಶಿಫಾರಸು ಪತ್ರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪದ ನಡುವೆಯೇ ಅಧಿಕಾರಿ ವರ್ಗಾವಣೆ ಶಿಫಾರಸು ವಿಚಾರವನ್ನು ಮುಂದಿಟ್ಟು ಬಿಜೆಪಿ ನಾಯಕರು ರಾಜ್ಯ ಸರ್ಕಾರಕ್ಕೆ ಮುಜುಗರದ ಸನ್ನಿವೇಶವನ್ನು ತಂದಿಟ್ಟಿದ್ದಾರೆ. ಇದರಿಂದ ಕೆರಳಿರುವ ವಿಧಾನಪರಿಷತ್ತಿನ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಅವರು ಬಿಜೆಪಿ ಶಾಸಕರಾದ ಸುನಿಲ್ ಕುಮಾರ್ ಹಾಗೂ ರವಿಕುಮಾರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಅವರ ನಕಲಿ ವರ್ಗಾವಣೆ ಪತ್ರವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿ ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಗೂ ಇತರರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಕೋರಿ ರಮೇಶ್ ಬಾಬು ಅವರು…

ಭ್ರಷ್ಟರಿಗೆ ಜೀವಾವಧಿ ಮರಣದಂಡನೆ ಶಿಕ್ಷೆಯ ಕಾಯ್ದೆ ಜಾರಿಗೆ ತರಲು ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ

ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’, ವಿವಿಧ ರಾಜ್ಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ. ಫೆಬ್ರವರಿ 9 ರಂದು ಪ್ರಧಾನಿ, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಕಾನೂನು ಸಚಿವರಿಗೆ ಸುಮಾರು 700 ಪುಟಗಳ ದಾಖಲೆಗಲ್ಲನ್ನೊಳಗೊಂಡ ವರದಿಯನ್ನು ಸಲ್ಲಿಸಿ, ದೇಶದಲ್ಲಿನ ವ್ಯವಸ್ಥಿತ ಭ್ರಷ್ಟಾಚಾರದ ವಿರುದ್ಧ ‘ಶೂನ್ಯ ಸಹಿಷ್ಣುತೆ’ಯನ್ನು ಜಾರಿಗೊಳಿಸಲು ಜೀವಾವಧಿ ಶಿಕ್ಷೆ ಮತ್ತು ಬಂಡವಾಳ ಶಿಕ್ಷೆ ಸೇರಿದಂತೆ ಕಠಿಣ ಕಾಯ್ದೆ ಜಾರಿಗೊಳಿಸಬೇಕೆಂದು ಮನವಿ ಮಾಡಿದೆ. ವೈಟ್ ಕಾಲರ್ ಪ್ರಭಾವಿಗಳ ಅಕ್ರಮಗಳನ್ನು ಬಯಲು ಮಾಡುವಲ್ಲಿ ಯಶಸ್ವಿಯಾಗಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’, ಹಲವಾರು ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ದಾವೆ ಮೂಲಕ ಹೋರಾಟದಲ್ಲಿ ನಿರತವಾಗಿದೆ. ಸಾರ್ವಜನಿಕ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಸಮಗ್ರತೆಯನ್ನು…

‘496 ಔಷಧಿಗಳ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಇದರಲ್ಲಿ 99 ಔಷಧಿಗಳಿಗೆ NOA ನೀಡಲಾಗಿದೆ’: ಗುಂಡೂರಾವ್

ಬೆಂಗಳೂರು: ಜನತೆಯ ಎದುರು ಸುಳ್ಳಿನ ಸರಮಾಲೆಗಳೆನ್ನೇ ಹಣೆದು, ಬಿಬಿಎಂಪಿ ಆಸ್ತಿಗಳನ್ನೇ ಅಡವಿಟ್ಟು ಆಡಳಿತ ನಡೆಸಿದ್ದು ನಿಮ್ಮ ಜಾಯಮಾನ. 2008- 2013ರ ನಿಮ್ಮ ಅವಧಿಯಲ್ಲಿ ಅದೆಷ್ಟು ಆಸ್ತಿಗಳನ್ನು ಅಡವಿಟ್ಟಿದ್ರಿ ಎನ್ನೋದನ್ನು ಒಮ್ಮೆ ಜ್ಞಾಪಿಸಿಕೊಳ್ಳಿ. ಆ ಆಸ್ತಿಗಳನ್ನು ಸಾಲಮುಕ್ತಗೊಳಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಸ್ಪತ್ರೆಗಳ ಅವ್ಯವಸ್ಥೆ ಕುರಿತ ಬಿಜೆಪಿ ಟೀಕೆಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ದಿನೇಶ್ ಗುಂಡೂರಾವ್, ಯುಪಿಎ ಸರ್ಕಾರ ಇದ್ದಾಗ 2014ರಲ್ಲಿ ಭಾರತದ ಸರ್ಕಾರದ ಸಾಲ ₹55 ಲಕ್ಷ ಕೋಟಿ ಇತ್ತು. ನಿಮ್ಮ ಆಡಳಿತದ ಹತ್ತು ವರ್ಷದ ಅದು ಬರೋಬ್ಬರಿ ₹200 ಲಕ್ಷ ಕೋಟಿಗೂ ಅಧಿಕವಾಗಿದೆ. ನಿಮ್ಮದೇ ಕೇಂದ್ರ ಸರ್ಕಾರ ಮಾಡಿರುವ ಈ ಬೆಟ್ಟದಷ್ಟು ಸಾಲ ಎಲ್ಲೆಲ್ಲಿ ವಿನಿಯೋಗವಾಗಿದೆ ಎನ್ನುವ ಲೆಕ್ಕ ಕೊಡ್ತೀರಾ? ಎಂದು ಪ್ರಶ್ನಿಸಿದ್ದಾರೆ. ಜನರಿಗೆ ನಾವು ನೀಡಿದ ಭರವಸೆಯಂತೆ ನಮ್ಮ ಸರ್ಕಾರ ನುಡಿದಂತೆ ನಡೆದುಕೊಂಡು ಬಂದಿದೆ. ಪಂಚ…

ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಸಮೀಪ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್‌ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಕ್‌ಗೆ ಎಕ್ಸ್‌ಯುವಿ ಕಾರು ಮೊದಲು ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ನಿವಾಸಿಗಳೆಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು; ಮಾರ್ಚ್ 5ರಂದು ಬೃಹತ್ ಹೋರಾಟ

ಮಂಡ್ಯ: ರಾಜ್ಯ ಸರ್ಕಾರದಿಂದ ಬಾಕಿ ಬಿಲ್ ಬಿಡುಗಡೆ ಆಗದಿರುವುದನ್ನು ವಿರೋಧಿಸಿ ಗುತ್ತಿಗೆದಾರರು ಮಾರ್ಚ್ 5ರಂದು ಬೃಹತ್ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಈ ಸಂಬಂಧ ಮಂಡ್ಯದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್. ಮಂಜುನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಕಿ ಹಣ ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುವ ತೀರ್ಮಾನ ಕೈಗೊಳ್ಳಲಾಯಿತು. ಸಭೆ ಬಳಿಕ ಮಾತನಾಡಿದ ಮಂಜುನಾಥ್, “ರಾಜ್ಯ ಮಟ್ಟದಲ್ಲಿ ಗುತ್ತಿಗೆದಾರರ ಸುಮಾರು ₹37,000 ಕೋಟಿ ಬಾಕಿ ಉಳಿದಿದೆ. ಮಂಡ್ಯ ಜಿಲ್ಲೆಯಲ್ಲಿ ಮಾತ್ರವೇ ₹950 ಕೋಟಿ ಹಣ ಬಾಕಿಯಾಗಿದೆ. ಸಾಲ ಮಾಡಿ ಕೆಲಸ ನಿರ್ವಹಿಸಿದ್ದೇವೆ. ಆದರೆ ಹಣ ಬಿಡುಗಡೆ ಆಗದ ಕಾರಣ ಬಡ್ಡಿ ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ” ಎಂದು ಹೇಳಿದರು. ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರಕಿಲ್ಲ ಎಂದು ಆರೋಪಿಸಿದ ಅವರು,…

ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರದಿಂದ ಕಠಿಣ ಕ್ರಮ

ಬೆಂಗಳೂರು: ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡು, ನೂರಾರು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದಾರೆ ತಿಳಿಸಿರುವ ಅವರು, ರಾಜ್ಯದಲ್ಲಿ ಯಾವುದೇ ರೀತಿಯ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ ನಡೆಯುವಂತಿಲ್ಲ ಎಂದಿದ್ದಾರೆ. ಎಲ್ಲ ರೀತಿಯ ಫ್ಯಾಕ್ಟರಿಗಳಿಗೆ ಆಯಾ ವ್ಯಾಪ್ತಿಯ ಸ್ಥಳೀಯ ಪೊಲೀಸರು ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಫ್ಯಾಕ್ಟರಿಯಲ್ಲಿನ ಕಾರ್ಯಚಟುವಟಿಕೆ ಹಾಗೂ ಅಲ್ಲಿ ಬಳಸಲಾಗುವ ಕೆಮಿಕಲ್‌ಗಳು, ಯಂತ್ರಗಳ ಕುರಿತು ಹಿರಿಯ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು ಗೃಹ ಸಚಿವರು ತಿಳಿಸಿದ್ದಾರೆ. ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡು, ನೂರಾರು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದಾರೆ.. ರಾಜ್ಯದಲ್ಲಿ ಯಾವುದೇ ರೀತಿಯ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ…