ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವದ ಮತ್ತಷ್ಟು ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ. ಕರ್ನಾಟಕದಾದ್ಯಂತ ಮೇ 17ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಮಂಡ್ಯ, ಮೈಸೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Category: ಬೆಂಗಳೂರು
‘ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು’: ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಗೇಲಿ
ಬೆಂಗಳೂರು: ಬೆಂಗಳೂರನ್ನು ‘ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು’ ಮಾಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಗೇಲಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ತಮ್ಮದೇ ಶೈಲಿಯಲ್ಲಿ ಅಶೋಕ್ ಪ್ರತಿಕ್ರಿಯಿಸಿದರು. ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ. ಇದರಿಂದಾಗಿ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ತೆರಿಗೆ ವಿಧಿಸಲಾಗಿದೆ. ಯಾರದ್ದೋ ಜಮೀನಿಗೆ ಬೆಲೆ ಹೆಚ್ಚುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗಿದೆ. ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಐಟಿ ಬಿಟಿ ಕೇಂದ್ರಗಳು ಒಂದು ಕಡೆ ಇರುವಾಗ, ಮತ್ತೊಂದು ಕಡೆಗೆ ಆದಾಯವೇ ಬರುವುದಿಲ್ಲ. ಮೂರು ಪಾಲಿಕೆಗಳು ನಿರ್ಮಾಣವಾದರೆ ಅಲ್ಲಿ ಕನ್ನಡಿಗರೇ ಮೇಯರ್ ಆಗುತ್ತಾರೆ ಎಂಬ ಖಚಿತತೆ ಇಲ್ಲ ಎಂದರು. ಮುಖ್ಯಮಂತ್ರಿಗಳು ಪಾಲಿಕೆಯಿಂದ ಆಯ್ಕೆಯಾಗುವುದಿಲ್ಲ ಎಂದಾದ ಮೇಲೆ ಗ್ರೇಟರ್ ಬೆಂಗಳೂರು…
ಆಪರೇಷನ್ ಸಿಂಧೂರ್: ಸೇನೆ ಬೆಂಬಲಿಸಿ ಕಾಂಗ್ರೆಸ್ ಪಕ್ಷದಿಂದ ಮೇ 20-30 ದೇಶಾದ್ಯಂತ ‘ಜೈ ಹಿಂದ್ ಸಭೆ’
ನವದೆಹಲಿ: ಸಶಸ್ತ್ರ ಪಡೆಗಳ ಅತ್ಯುನ್ನತ ಶೌರ್ಯ ಮತ್ತು ಯಶಸ್ಸಿಗೆ ನಮನ ಸಲ್ಲಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತದಾದ್ಯಂತ ‘ಜೈ ಹಿಂದ್ ಸಭೆ’ಗಳನ್ನು ನಡೆಸಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಎಐಸಿಸಿ ನಾಯಕ ಕೆ.ಸಿ.ವೇಣುಗೋಪಾಲ್, ಭದ್ರತಾ ವೈಫಲ್ಯಗಳು, ರಾಷ್ಟ್ರೀಯ ಭದ್ರತೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿ ಮತ್ತು ನಮ್ಮ ರಾಷ್ಟ್ರೀಯ ಭದ್ರತಾ ವಿಷಯಗಳಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ಅದರ ಮೌನದ ಬಗ್ಗೆಯೂ ನಾವು ಗಂಭೀರ ಪ್ರಶ್ನೆಗಳನ್ನು ಎತ್ತಬೇಕು ಎಂದಿದ್ದಾರೆ. ಮೇ 20-30 ರವರೆಗೆ, ದೆಹಲಿ, ಬಾರ್ಮರ್, ಶಿಮ್ಲಾ, ಹಲ್ದ್ವಾನಿ, ಪಾಟ್ನಾ, ಜಬಲ್ಪುರ್, ಪುಣೆ, ಗೋವಾ, ಬೆಂಗಳೂರು, ಕೊಚ್ಚಿ, ಗುವಾಹಟಿ, ಕೋಲ್ಕತ್ತಾ, ಹೈದರಾಬಾದ್, ಭುವನೇಶ್ವರ ಮತ್ತು ಪಠಾಣ್ಕೋಟ್ಗಳಲ್ಲಿ ಜೈ ಹಿಂದ್ ಸಭೆಗಳು ನಡೆಯಲಿದ್ದು, ಇದರಲ್ಲಿ ಸೇನಾ ನಿವೃತ್ತರು, ಪಕ್ಷದ ನಾಯಕರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.
ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಗಳಷ್ಟು ಹೆಚ್ಚಳ!
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ ₹2,000 ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹10,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹2,000 ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹12,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹12,500 ಆಗಲಿದೆ. ಅಂತೆಯೇ, ಸರ್ಕಾರಿ…
‘ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್ ಸರಿಯಾದ ನಿಲುವು ಪ್ರಕಟಿಸಲಿ’
ಬೆಂಗಳೂರು: ಕಾಂಗ್ರೆಸ್ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ ಭಿಕ್ಷೆ ಬೇಡಿದ್ದನ್ನು ನೋಡಿದ್ದೇವೆ. ಮುಂಬೈಯಲ್ಲಿನ ಉಗ್ರ ದಾಳಿಯಲ್ಲಿ 175 ಜನರು ಸತ್ತಿದ್ದರು. ಆಗ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಪ್ರತಿಕ್ರಿಯೆ ನೀಡಲೇ ಇಲ್ಲ. ಆದರೆ ಈಗ ಪ್ರಧಾನಿ ಮೋದಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಸಿಂಧೂ ನದಿ ಒಪ್ಪಂದಕ್ಕೆ ನಾವು ಸಹಿ ಹಾಕಿಲ್ಲ. ಅದನ್ನು ಪ್ರಧಾನಿ ಮೋದಿ ರದ್ದು ಮಾಡಿದ್ದಾರೆ. ಭಯೋತ್ಪಾದಕ ದಾಳಿಗಳಾದಾಗಲೇ ಕಾಂಗ್ರೆಸ್ ಅದನ್ನು ಮಾಡಬೇಕಿತ್ತು. ಇದನ್ನು ಸಚಿವ ಸಂತೋಷ್ ಲಾಡ್ ಅರಿಯಬೇಕು ಎಂದರು. ಇಡೀ ಜಮ್ಮು ಕಾಶ್ಮೀರ ಪ್ರಧಾನಿ ಮೋದಿಯವರ ಪರವಾಗಿ ನಿಂತಿದೆ. ಅಲ್ಲಿನ ಮುಖ್ಯಮಂತ್ರಿ ಕೂಡ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.…
ರಾಜ್ಯದ ವಿವಿಧೆಡೆ ಭಾರೀ ಮಳೆ; ಸಿಡಿಲು ಬಡಿದು ಹಲವಾರು ಬಲಿ
ಬೆಂಗಳೂರು: ರಾಜ್ಯದ ವಿವಿಧೆಡೆ ಮಂಗಳವಾರ ಭಾರೀ ಮಳೆಯಾಗಿದೆ. ಬೆಂಗಳೂರು, ಧಾರವಾಡ, ಬೆಳಗಾವಿ, ಗದಗ್, ಬೀದರ್ ಸಹಿತ ಹಲವೆಡೆ ಭಾರೀ ಮಳೆಯಾಗಿದ್ದು, ಸರಣಿ ಘಟನೆಗಳಲ್ಲಿ 8 ಮಂದಿ ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಿಡಿಲಿಗೆ ಬಲಿಯಾಗಿದ್ದರೆ, ವಿಜಯಪುರ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯಲ್ಲೂ ವರುಣ ಅಬ್ಬರಿಸಿದ್ದು, ಗೋಕಾಕ್ನಲ್ಲಿ ವ್ಯಕ್ತಿಯೊಬ್ಬರು ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಗದಗ ಸಮೀಪ ಬೆನಕೊಪ್ಪ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಬೈಕ್ ಸವಾರ ಕೊಚ್ಚಿಕೊಂಡು ಹೋಗಿದ್ದಾನೆ. ಗದಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಹಾರವಾಡ ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲೂ ಮಳೆ ಅವಾಂತರ ಸೃಷ್ಟಿಸಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ…
ಹೈಕೋರ್ಟ್ ಮೆಟ್ಟಿಲೇರಿದ ಗಾಯಕ ಸೋನು ನಿಗಮ್
ಬೆಂಗಳೂರು: ಕನ್ನಡ ಭಾಷೆ ಬಗ್ಗೆ ಅವಹೇಳನ ಮಡಿದ ಆರೋಪ ಎದುರಿಸುತ್ತಿರುವ ಗಾಯಕ ಸೋನು ನಿಗಮ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಏಪ್ರಿಲ್ 25 ರಂದು ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ನೇರ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹೇಳಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ನಡೆಯಿತು’ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಸಲ್ಲಿಸಿರುವ ದೂರಿನ ಆಧಾರದಲ್ಲಿ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬೆಳವಣಿಗೆ ಹಿನ್ನೆಲೆ ಕಾನೂನು ಸುಳಿಯಲ್ಲಿ ಸಿಲುಕಿರುವ ಸೋನು ನಿಗಮ್, ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಪರಿಶೀಲಿಸಿರುವ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ…
ಮೇ 13 ರಿಂದ ದೇಶಾದ್ಯಂತ 10 ದಿನ ದೇಶಾದ್ಯಂತ ಬಿಜೆಪಿಯಿಂದ ‘ತಿರಂಗ ಯಾತ್ರೆ’
ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಮೇ 13 ರಿಂದ ಮೇ 23 ರವರೆಗೆ ದೇಶಾದ್ಯಂತ 10 ದಿನಗಳ ‘ತಿರಂಗ ಯಾತ್ರೆ’ ಕೈಗೊಳ್ಳಲಿದೆ. ಈ ರಾಷ್ಟ್ರವ್ಯಾಪಿ ಅಭಿಯಾನವು ನಾಗರಿಕರೊಂದಿಗೆ ಸಂಪರ್ಕ ಸಾಧಿಸುವ ಮತ್ತು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಜನರನ್ನು ಬಲಿ ತೆಗೆದುಕೊಂಡ ಹತ್ಯಾಕಾಂಡಕ್ಕೆ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾದ ‘ಆಪರೇಷನ್ ಸಿಂಧೂರ್’ನ ಸಾಧನೆಗಳನ್ನು ಎತ್ತಿ ತೋರಿಸುವ ಗುರಿಯನ್ನು ಹೊಂದಿದೆ. ‘ಆಪರೇಷನ್ ಸಿಂಧೂರ್’ನ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ನಾಗರಿಕರನ್ನು ತಲುಪುವುದು ಮತ್ತು ಅವರಿಗೆ ತಿಳಿಸುವುದು ಈ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ. ಬಿಜೆಪಿಯ ಹಿರಿಯ ನಾಯಕರು ಮತ್ತು ಸಚಿವರು ವಿವಿಧ ಪ್ರದೇಶಗಳಲ್ಲಿ ಯಾತ್ರೆಗಳನ್ನು ಮುನ್ನಡೆಸಲಿದ್ದಾರೆ. ಸಂಬಿತ್ ಪಾತ್ರ, ವಿನೋದ್ ತಾವ್ಡೆ, ತರುಣ್ ಚುಗ್ ಮತ್ತು ಇತರರು ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಈ ಅಭಿಯಾನವನ್ನು ಸಂಯೋಜಿಸಲಿದ್ದಾರೆ. ಸೋಮವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿ ನಡೆದ…
ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಅತಿ ಶೀಘ್ರವಾಗಿ ಜಿಟಿಸಿಸಿ ಸ್ಥಾಪನೆ
ಬೆಂಗಳೂರು: ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಗಳಲ್ಲಿ ಒಂದಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ವಿದೇಶದಲ್ಲೂ ತನ್ನ ವ್ಯಾಪ್ತಿ ಮತ್ತು ಕೀರ್ತಿಯನ್ನು ವಿಸ್ತರಿಸುತ್ತಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು (ಜಿಟಿಟಿಸಿ) ಆಫ್ರಿಕಾದ ನಮೀಬಿಯಾದಲ್ಲಿ ಸ್ಥಾಪಿಸುವ ಕುರಿತು ಉನ್ನತ ಮಟ್ಟದ ಮಾತುಕತೆ ನಡೆದಿದೆ. ವೃತ್ತಿಪರ ತರಬೇತಿಯಲ್ಲಿ ಭಾರತ-ಆಫ್ರಿಕಾ ಸಹಕಾರವನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ಆಫ್ರಿಕಾ ಇಂಡಿಯಾ ಎಕನಾಮಿಕ್ ಫೌಂಡೇಶನ್ (ಎಐಇಎಫ್) ನಮ್ಮ ಕರ್ನಾಟಕದ ಜಿಟಿಟಿಸಿಯನ್ನು ಪ್ರಮುಖ ಜ್ಞಾನ ಮತ್ತು ತಂತ್ರಜ್ಞಾನ ಪಾಲುದಾರ ಸಂಸ್ಥೆಯಾಗಿ ಮಾಡಿಕೊಳ್ಳಲು ಮುಂದೆ ಬಂದಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿದೆ. ಈ ಪ್ರಸ್ತಾವನೆ ಅತ್ಯಂತ ಸ್ವಾಗತಾರ್ಹವಾಗಿದೆ. ಈ ಚರ್ಚೆಗಳನ್ನು ಸಕ್ರಿಯವಾಗಿ ಮುಂದುವರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಉಪಕ್ರಮವು…
ಸಾರಿಗೆ ಸಂಸ್ಥೆ ಬಸ್ಸುಗಳು ಅಪಘಾತಕ್ಕೀಡಾದರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ
ಬೆಂಗಳೂರು: ರಾಜಧಾನಿ ಜನರ ಜನಪ್ರೀಯ ಸಂಚಾರ ಸಾರಥಿ ‘ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2286 ನಿರ್ವಾಹಕರಿಗೆ ನೇಮಕಾತಿ ಆದೇಶವನ್ನು ನೀಡಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿಅವರು ನೂತನವಾಗಿ ನೇಮಕಾತಿಗೊಂಡವರಿಗೆ ಆದೇಶ ಪಾತ್ರವನ್ನು ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ಬಸ್ ಅಪಘಾತಗಳ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ಅಪಘಾತಗಳಿಗೆ ಕಾರಣರಾದಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದ ಸಚಿವರು, ಅಂಥವರಿಗೆ ಯಾವುದೇ ಪರಿಹಾರವನ್ನು ನೀಡಲಾಗುವುದಿಲ್ಲ ಎಂದರು. 2018 ರಿಂದ ಇಲ್ಲಿಯವರೆಗೂ ಬಿ.ಎಂ.ಟಿ.ಸಿಯಲ್ಲಿ ಯಾವುದೇ ನೇಮಕಾತಿ ಆಗಿರಲಿಲ್ಲ ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂದು ಭಾವಿಸಿದ್ದೇನೆ ಎಂದ ಅವರು, ಈಗಾಗಲೇ ನಮ್ಮ ಸರ್ಕಾರ ಬಂದ ಕೂಡಲೇ ನಾಲ್ಕು ಸಾರಿಗೆ ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ. ಕಳೆದ ಎರಡು ವರ್ಷದಲ್ಲಿ…