‘ಭಾರತದ ಸಾಮರ್ಥ್ಯ ಏನೆಂದು ಜಗತ್ತು ನೋಡಿದೆ’ ಎಂದ ಬಿ.ಎಲ್. ಸಂತೋಷ್

ನವದೆಹಲಿ: ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ಮಾಡಿದ ನಂತರ ಭಾರತದ ಸಾಮರ್ಥ್ಯ ಏನೆಂದು ಜಗತ್ತು ನೋಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಸಂತೋಷ್, “ಕೆಲವೇ ನಿಮಿಷಗಳಲ್ಲಿ ಬಾಂಬ್ ದಾಳಿ ನಡೆದ 11 ವಾಯುನೆಲೆಗಳು ಪಾಕ್ ಅನ್ನು ಡಿಜಿಎಂಒ, ಭಾರತಕ್ಕೆ ಕರೆ ಮಾಡಲು ಕರೆ ತಂದವು. ಇದು 96 ಗಂಟೆಗಳ ಕಾಲ ಬಹುತೇಕ ಪ್ರತಿಯೊಂದು ದಾಳಿಯನ್ನು ತಡೆದಿದೆ. ಭಾರತ ಏನು ಸಮರ್ಥವಾಗಿದೆ ಎಂಬುದನ್ನು ಜಗತ್ತು ನೋಡಿದೆ” ಎಂದು ವಿಶ್ಲೇಷಿಸಿದ್ದಾರೆ. ಅವರು ಹೆಸರಿಸಿದ 11 ವಾಯುನೆಲೆಗಳು: ನೂರ್ ಖಾನ್/ಚಕ್ಲಾಲಾ (ರಾವಲ್ಪಿಂಡಿ), ರಫೀಕಿ (ಶೋರ್ಕೋಟ್), ಮುರಿದ್ (ಪಂಜಾಬ್), ಸುಕ್ಕೂರ್ (ಸಿಂಧ್), ಸಿಯಾಲ್ಕೋಟ್ (ಪೂರ್ವ ಪಂಜಾಬ್), ಪಸ್ರೂರ್ (ಪಂಜಾಬ್), ಚುನಿಯನ್ (ರಾಡಾರ್/ಬೆಂಬಲ ಸ್ಥಾಪನೆ), ಸರ್ಗೋಧಾ (ಮುಷಾಫ್ ನೆಲೆ), ಸ್ಕಾರ್ಡು (ಗಿಲ್ಗಿಟ್-ಬಾಲ್ಟಿಸ್ತಾನ್), ಭೋಲಾರಿ (ಕರಾಚಿ ಬಳಿ) ಮತ್ತು ಜಕೋಬಾಬಾದ್…

ರಾಜ್ಯ ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕ: ಬಿಜೆಪಿ ಆರೋಪ

ಬೆಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್‌ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಅವರು ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು…

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್‌ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಅವರು ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು…

ʼಆಪರೇಷನ್ ಸಿಂದೂರ್ʼ ಹಿನ್ನೆಲೆ ದೇಶದ ಜನತೆಗೆ ಆರೆಸ್ಸೆಸ್ ವಿಶೇಷ ಕರೆ

ನವದೆಹಲಿ: ಪಹಲ್‌ಗಾಮ್‌ನಲ್ಲಿ ನಿಃಶಸ್ತ್ರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರ ಮೇಲೆ ಮತ್ತು ಅವರ ಬೆಂಬಲಿಗರ ವ್ಯವಸ್ಥೆಯ ಮೇಲೆ ನಿರ್ಣಾಯಕವಾದ ʼಆಪರೇಷನ್ ಸಿಂದೂರ್ʼ ಮೂಲಕ ಪ್ರತ್ಯುತ್ತರ ನೀಡುತ್ತಿರುವ ಭಾರತ ಸರ್ಕಾರದ ನಾಯಕತ್ವ ಮತ್ತು ಸೇನಾಪಡೆಗಳಗಳನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಭಿನಂಧಿಸಿದೆ. ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸರಸಂಘಚಾಲಕ ಡಾ.ಮೋಹನ ಭಾಗವತ್ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಹಿಂದೂ ಯಾತ್ರಿಗಳ ಕ್ರೂರ ಕಗ್ಗೊಲೆಯಿಂದ ಆಘಾತಕ್ಕೊಳಗಾದ ಕುಟುಂಬಗಳಿಗೆ ಮತ್ತು ಇಡೀ ದೇಶಕ್ಕೆ ನ್ಯಾಯ ಒದಗಿಸುವ ಈ ಕಾರ್ಯಾಚರಣೆಯು ಇಡೀ ದೇಶದ ಸ್ವಾಭಿಮಾನ ಮತ್ತು ಧೈರ್ಯವನ್ನು ಹೆಚ್ಚಿಸಿದೆ ಎಂದಿದ್ದಾರೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು, ಅವರ ಸೌಲಭ್ಯಗಳು ಮತ್ತು ಪೂರಕ ವ್ಯವಸ್ಥೆಯ ಮೇಲೆ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯು ಭಾರತ ದೇಶದ ಭದ್ರತೆಗೆ ಅಗತ್ಯ ಮತ್ತು ಅನಿವಾರ್ಯ ಕ್ರಮವಾಗಿದೆ ಎಂದು ನಾವು ಭಾವಿಸುತ್ತೇವೆ. ರಾಷ್ಟ್ರೀಯ ಸಂಕಷ್ಟದ ಈ…

ಮೇ 11 ರಂದು ಮಂಗಳೂರಿಗೆ ಜೆ.ಪಿ.ನಡ್ಡಾ; ಸುಹಾಸ್ ಶೆಟ್ಟಿ ನಿವಾಸಕ್ಕೂ ಭೇಟಿ

ಮಂಗಳೂರು: ಇತ್ತೀಚಿಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ಜೆ.ಪಿ.ನಡ್ಡಾ ಅವರು ಮೇ 11 ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಸುಹಾಸ್ ಶೆಟ್ಟಿ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಮೇ11 ಮತ್ತು 12 ರಂದು ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುವ ಜೆ. ಪಿ. ನಡ್ಡಾ ಅವರು ಮೇ 11 ರಂದು ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೂ ಭೇಟಿ ನೀಡಲಿದ್ದಾರೆ ಎಂದು ನಾಯಕರು ತಿಳಿಸಿದ್ದಾರೆ.

‘ಆಪರೇಷನ್ ಸಿಂಧೂರ್’: ಸೈನಿಕರಿಗೆ ದೊಡ್ಡ ಸಲಾಮ್ ಎಂದ ಸಿದ್ದರಾಮಯ್ಯ

ಬೆಂಗಳೂರು: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನ್ಯವು ನಡೆಸಿದ ಯಶಸ್ವಿ ದಾಳಿಯ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದರು. ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ ಎಂದ ಅವರು,…

‘ಆಪರೇಷನ್ ಸಿಂಧೂರ್ ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ’: ಕಿಚ್ಚ ಸುದೀಪ್

ಬೆಂಗಳೂರು: ಆಪರೇಷನ್ ಸಿಂಧೂರ್: ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ ಎಂದು ನಟ ಕಿಚ್ಚ ಸುದೀಪ್ ಬಣ್ಣಿಸಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ‘ಒಬ್ಬ ಭಾರತೀಯನಾಗಿ, ಈ ಪವಿತ್ರ ಮಣ್ಣಿನ ಮಗನಾಗಿ, ಪಹಲ್ಗಾಮ್‌ನಲ್ಲಿ ನೋವಿನ ನಡುಕವನ್ನು ಅನುಭವಿಸಿದೆ. ಇಂದು, ನಾನು ನ್ಯಾಯದ ಗುಡುಗನ್ನು ಅನುಭವಿಸುತ್ತೇನೆ’ ಎಂದು ಹೇಳಿದ್ದಾರೆ. ‘ಭಾರತದ ಸಿಂಧೂರವು ಕಲೆ ಹಾಕಲ್ಪಟ್ಟಿತು. ನಮ್ಮ ಧೈರ್ಯಶಾಲಿ ಹೃದಯಗಳು ಬೆಂಕಿ ಮತ್ತು ನಿಖರತೆಯಿಂದ ಅದರ ಗೌರವವನ್ನು ಪುನಃಸ್ಥಾಪಿಸಿದವು’ ಎಂದು ಸುದೀಪ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ‘ನಮ್ಮ ಸಶಸ್ತ್ರ ಪಡೆಗಳಿಗೆ, ನನ್ನ ಅಂತ್ಯವಿಲ್ಲದ ವಂದನೆ. ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ನಾಯಕತ್ವವು ನಿರ್ಭೀತವಾಗಿ ನಿಂತಿದ್ದಕ್ಕಾಗಿ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ತೀಕ್ಷ್ಣವಾದ, ಗೌರವಯುತ ಮಾಹಿತಿ ನೀಡಿದ್ದಾರೆ ಎಂದಿರುವ…

‘ಆಪರೇಷನ್ ಸಿಂಧೂರ’: ಸೇನಾ ಧೈರ್ಯಕ್ಕೆ ಕಾಂಗ್ರೆಸ್ ಶ್ಲಾಘನೆ

ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ‘ಆಪರೇಷನ್ ಸಿಂಧೂರ’ವನ್ನು ಸ್ವಾಗತಿಸಿರುವ ಕಾಂಗ್ರೆಸ್, ಸೇನೆಯ ದೃಢನಿಶ್ಚಯ ಮತ್ತು ಧೈರ್ಯವನ್ನು ಶ್ಲಾಘಿಸಿದೆ. ‘ಆಪರೇಷನ್ ಸಿಂಧೂರ’ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಪಾಕಿಸ್ತಾನ ಮತ್ತು ಪಿಒಕೆಯಿಂದ ಹೊರಹೊಮ್ಮುವ ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಭಾರತವು ದೃಢವಾದ ರಾಷ್ಟ್ರೀಯ ನೀತಿಯನ್ನು ಹೊಂದಿದೆ ಎಂದಿದ್ದಾರೆ. ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಮುಚ್ಚಿಹಾಕಿರುವ ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ. ಅವರ ದೃಢನಿಶ್ಚಯ ಮತ್ತು ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ ಎಂದು…

BMTCಯಲ್ಲಿ ಸಾರಿಗೆ ಆಶಾಕಿರಣ ; 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ.. ಮೃತ ನೌಕರರ ಅವಲಂಬಿತರಿಗೆ ಪರಿಹಾರದ‌ ಚೆಕ್..

ಬೆಂಗಳೂರು: ಬಿಎಂಟಿಸಿ‌ಯಲ್ಲಿ ಸಾರಿಗೆ ಆಶಾಕಿರಣ ಯೋಜನೆಯಡಿ 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಮೃತ ನೌಕರರ ಅವಲಂಬಿತರಿಗೆ ಪರಿಹಾರದ‌ ಚೆಕ್ ವಿತರಣೆ ಮಾಡಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂದು ಬಿಎಂಟಿಸಿ ತಿಳಿಸಿದೆ. BMTCಯು ಸಿ-ಕ್ಯಾಂಪ್ ಸಹಯೋಗದಲ್ಲಿ ನೌಕರರ ಆರೋಗ್ಯದ ಹಿತದೃಷ್ಟಿಯಿಂದ 50 ಘಟಕಗಳಲ್ಲಿ ಹಾಗೂ 4 ಕಾರ್ಯಾಗಾರಗಳಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಏರ್ಪಡಿಸಿದ್ದು, ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಪಾಸಣೆಗೆ ಒಳಪಡುವ ನೌಕರರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಬಿತರಿಗೆ 50 ಲಕ್ಷ ರೂ ಹಾಗೂ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದಾಗಿ ಅಕಾಲಿಕ ಮರಣ ಹೊಂದಿದ ನೌಕರರ ಅವಲಂಬಿತರಿಗೆ 10 ಲಕ್ಷ ರೂ ನೀಡಲಾಗುತ್ತಿದೆ ಎಂದರು. 2024ರ ಫೆಬ್ರವರಿ–2025ರ ಏಪ್ರಿಲ್ ವರೆಗೆ 107…

ಗಣಿ ಕೇಸಿನಲ್ಲಿ 7 ವರ್ಷ ಶಿಕ್ಷೆಗೊಳಗಾಗಿರುವ ಜನಾರ್ಧನ ರೆಡ್ಡಿ ಶಾಸಕ ಸ್ಥಾನಕ್ಕೂ ಸಂಚಕಾರ

ಬೆಂಗಳೂರು: ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಮತ್ತೆ ಜೈಲು ಸೇರಿದ್ದಾರೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಪರಾಧಿಯಾಗು ಶಿಕ್ಷೆಗೆ ಗುರಿಯಾಗಿರುವ ಶಾಸಕ ಜನಾರ್ಧನ ರೆಡ್ಡಿ ಅವರ ಶಾಸಕ ಸ್ಥಾನಕ್ಕೂ ಕಂಟಕ ಎದುರಾಗಿದೆ. 884 ಕೋಟಿ ರೂಪಾಯಿ ಅಕ್ರಮಆರೋಪದಲ್ಲಿ ಸಿಬಿಐ ಕೋರ್ಟ್‌, ಮಾಜಿ ಸಚಿವರೂ ಆದ ಜನಾರ್ಧನ ರೆಡ್ಡಿಯನ್ನುದೋಷಿ ಎಂದು ಮಂಗಳವಾರ ತೀರ್ಪು ನೀಡಿದೆ. 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದ್ದು ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜನಾರ್ದನ ರೆಡ್ಡಿ ಅವರು ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾರೆ. ಈ ಬಗ್ಗೆ ರೆಡ್ಡಿ ಪರ ವಕೀಲರು, ವಯಸ್ಸು ಮತ್ತು ಸೇವೆಯನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ಮನವಿ ಮಾಡಿದ್ದಾರೆ. ಸಿಬಿಐ ಈ ಮನವಿಯನ್ನು ತಿರಸ್ಕರಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಈ ನಡುವೆ, ಸಿಬಿಐ ಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಜನಾರ್ದನ ರೆಡ್ಡಿ ಅವರ ಶಾಸಕ…