ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆ; ನವ ವಿವಾಹಿತೆ ದಾರುಣ ಸಾವು

ಬೆಂಗಳೂರು: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆಯಾಗಿ ಸ್ನಾನಕ್ಕೆ ತೆರಳಿದ್ದ ನವ ವಿವಾಹಿತೆ ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಹಾಸನ ಮೂಲದ 24 ವರ್ಷದ ಭೂಮಿಕಾ ಎಂಬವರು ಗ್ಯಾಸ್ ಗೀಜರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಅನಿಲ ಸೋರಿಕೆಯಿಂದ ಉಂಟಾದ ವಿಷಕಾರಿ ವಾತಾವರಣ ದಿಂದ ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ಬೇರಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಪತಿ ಕೃಷ್ಣಮೂರ್ತಿ ಪೀಣ್ಯಾದ ಪ್ರತಿಷ್ಠಿತ ಕಂಪನಿಯಲ್ಲಿ ಸೆಕೆಂಡ್ ಶಿಫ್ಟ್ ಕೆಲಸ ಮುಗಿಸಿ ಮನೆಗೆ ವಾಪಾಸಾದ ವೇಳೆ ಬಾಗಿಲು ತೆರೆದಿಲ್ಲ. ಸ್ನಾನದ ಕೋಣೆಯ ಕಿಟಕಿಯಿಂದ ಇಣುಕಿ ನೋಡಿದಾಗ ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಬಾಗಿಲು ಮುರಿದು ನೋಡಿದಾಗ ಆಕೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ‌ ನೆಲಮಂಗಲ ಸುತ್ತಮುತ್ತ ಕಳೆದೆರಡು ವರ್ಷಗಳಲ್ಲಿ 10 ರಿಂದ 12 ಮಂದಿ ಇದೇ ರೀತಿ ಜೀವತೆತ್ತಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸುದ್ದಿ ತಿಳಿದು…

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು; 2024ರಲ್ಲಿ 31,934, ಈ ವರ್ಷ 6,561

ಬೆಂಗಳೂರು: ಡೆಂಗ್ಯೂ ಪ್ರಕರಣಗಳು 2024ನೇ ಸಾಲಿನಲ್ಲಿ 31,934 ಕಂಡು ಬಂದಿದ್ದರೆ 2025ರ ಪ್ರಸಕ್ತ ಸಾಲಿನಲ್ಲಿ ಈ ಪ್ರಮಾಣ 6,561 ಕ್ಕೆ ಇಳಿದಿದ್ದು, ಶೇಕಡವಾರು 81% ಕಡಿಮೆಯಾಗಿದೆ. ಅಲ್ಲದೆ, ಸಾವು ಸಂಭವಿಸಿಲ್ಲ. ಇದು ನಿಜಕ್ಕೂ ಪರಿಣಾಮಕಾರಿ ಫಲಿತಾಂಶವಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದೇ ಮಾದರಿಯಲ್ಲಿ, ಕಂಡುಬರುತ್ತಿದ್ದ ಚಿಕನ್ ಗುನ್ಯಾ ಜ್ವರದ ಪ್ರಮಾಣವೂ ಶೇ.59ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ 2024ರ ಸಾಲಿನಲ್ಲಿ 2,348 ಪ್ರಕರಣಗಳು ಕಂಡುಬಂದಿದ್ದರೆ 2025ರ ನವೆಂಬರ್ ಕೊನೆವಾರದ ತನಕ 974 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ. 2024ರಲ್ಲಾದ ಡೆಂಗ್ಯೂ ಪ್ರಕರಣಗಳ ಹೆಚ್ಚಳವನ್ನು ಗಂಭಿರವಾಗಿ ಪರಿಗಣಿಸಿ ಸಾಂಕ್ರಾಮಿಕ ರೋಗಗಳ ಪಟ್ಟಿಗೆ ಡೆಂಗ್ಯೂವನ್ನು ಸೇರಿಸಲಾಯಿತು. ನಿಯಂತ್ರಣಕ್ಕಾಗಿ ನಿರಂತರವಾಗಿ ಅರಿವು ಕಾರ್ಯಕ್ರಮ, ಸ್ವಚ್ಚತೆ, ಉಚಿತ ಔಷಧ ಚಿಕಿತ್ಸೆಗಳ ಜತೆಗೆ ಅದರ ನಿಯಮಾವಳಿ ಪ್ರಕಾರ ಲಾರ್ವಾ ನಿಯಂತ್ರಣ ಕ್ರಮಗಳನ್ನು ಅನುಸರಿಸದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ₹2000 ತನಕ ದಂಡ…

ಹಿರಿಯ ಹಾಸ್ಯ ನಟ ಎಂ.ಎಸ್.ಉಮೇಶ್ ವಿಧಿವಶ

ಬೆಂಗಳೂರು: ಹಿರಿಯ ಚಲನಚಿತ್ರ ನಟ ಎಂ.ಎಸ್.ಉಮೇಶ್ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ಸಮಯದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರಿನಲ್ಲಿ 1945ರ ಏಪ್ರಿಲ್ 22ರಂದು ಜನಿಸಿದ್ದ ಉಮೇಶ್ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿದ್ದರು. ಬಹುತೇಕ ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಉಮೇಶ್ ವಿಧಿವಶರಾಗಿದ್ದು, ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಬೆಳಗಾವಿ ಅಧಿವೇಶನ: ಈ ಬಾರಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಯಾಗಲಿ

ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಬಿಜೆಪಿ ಮತ್ತು ಜೆಡಿಎಸ್‌ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಎರಡೂ ಪಕ್ಷಗಳು ಕಿವಿ ಹಿಂಡುವ ಕೆಲಸ ಮಾಡಿವೆ. ಈಗ ಬೆಳಗಾವಿ ಅಧಿವೇಶನದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕೆಂದು ಚರ್ಚಿಸಲಾಗಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದರು. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ…

ಡಿಕೆಶಿ-ಸಿದ್ದರಾಮಯ್ಯ ಜಟಾಪಟಿ ವಿಚಾರ: ಕಾಂಗ್ರೆಸ್ ಹೈಕಮಾಂಡ್ ದುರ್ಬಲ ಎಂದ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗಿರಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಗ್ಗೆ ಅಶೋಕ್ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದರು. ‘ಸಿಎಂ ಯಾರೆಂದು ಗೊತ್ತಾಗದೆ ಇಬ್ಬರೂ ನಾಯಕರ ನಡುವೆ ಕಾದಾಟ ಜೋರಾಗಿದೆ. ಸಿದ್ದರಾಮಯ್ಯ ಎಂದರೆ ಮಾತು ತಪ್ಪಿದವರು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರಿಂದಾಗಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಸರ್ಕಾರದಲ್ಲಿ ಎಲ್ಲರೂ ಕೆಲಸ ಮಾಡುವುದನ್ನು ಬಿಟ್ಟು ಸಿಎಂ ಯಾರೆಂದು ಚರ್ಚಿಸುತ್ತಿದ್ದಾರೆ’ ಎಂದು ವಿಶ್ಲೇಷಿಸಿದರು. ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗುವುದಿಲ್ಲ. ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಡಿ.ಕೆ.ಶಿವಕುಮಾರ್‌ ನೇರವಾಗಿ ಹೇಳಿದ್ದು, ಈ ಬಗ್ಗೆ ದುರ್ಬಲ ಹೈಕಮಾಂಡ್‌ ಪ್ರತಿಕ್ರಿಯೆ ನೀಡುತ್ತಿಲ್ಲ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ವಿದೇಶಕ್ಕೆ ಪಲಾಯನ ಮಾಡಿದ್ದಾರೆ ಎಂದರು.

ಬ್ರೇಕ್ ಫಾಸ್ಟ್ ಹೆಸರಲ್ಲಿ ಒಗ್ಗಟ್ಟು ಪ್ರದರ್ಶನ; ಒಟ್ಟಾಗಿ ಆಡಳಿತ ನಡೆಸುತ್ತೇವೆ ಎಂದ ಸಿದ್ದು-ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಶಮನ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಬೆಳಿಗ್ಗೆ ಒಟ್ಟಾಗಿ ಉಪಹಾರ ಸೇವಿಸಿ ಗಮನಸೆಳೆದರು. ಉಪಹಾರ ಮೂಲಕ ಪಕ್ಷದಲ್ಲಿ ಒಗ್ಗಟ್ಟಿದೆ ಎಂದು ತೋರಿಸಲು ಹೈಕಮಾಡ್ ನಾಯಕರು ಹೇಳಿಕೊಟ್ಟ ಸೂತ್ರವನ್ನು ಸಿಎಂ ಡಿಸಿಎಂ ಪಾಲಿಸಿದ್ದಾರೆ. ಆದರೆ ಈ ಬೆಳವಣಿಗೆ ನಾಟಕೀಯ ರೀತಿಯಲ್ಲೇ ಇತ್ತೆ ವಿನಃ ಒಗ್ಗಟ್ಟು ಪ್ರದರ್ಶನದಂತೆ ಇರಲಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಉಪಹಾರ ಬಳಿಕ ನಿರೀಕ್ಷೆಯಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಒಂದಷ್ಟು ಮಾಹಿತಿ ಹಂಚಿಕೊಂಡರು. ನಮ್ಮೊಳಗೆ ಭಿನ್ನಾಭಿಪ್ರಾಯವೇ ಇಲ್ಲ, ಒಗ್ಗಾಟಾಗಿವೆ ಇದ್ದೇವೆ. ಸದ್ಯದ ಗೊಂದಲಗಳಿಗೆ ಪ್ರತಿಪಕ್ಷ ಹಾಗೂ ಮಾಧ್ಯಮಗಳು ಕಾರಣ ಎಂದರು. #WATCH | Karnataka Chief Minister Siddaramaiah and Deputy CM DK Shivakumar hold a joint…

ಪ್ರವಾಹದಿಂದ ಬೆಳೆ ಹಾನಿ; ಕೇಂದ್ರದ ತಂಡದಿಂದ ಶೀಘ್ರವೇ ಪರಿಶೀಲನೆ

ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು ಅದಕ್ಕೆ ಗುರುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಂಗಾರು ಮಳೆಯಿಂದಾಗಿ ಬೆಳೆ ಹಾನಿಗೆ ಒಳಗಾದ ರಾಜ್ಯದ ರೈತರ ಖಾತೆಗಳಿಗೆ ‘ಇನ್ ಪುಟ್ ಸಬ್ಸಿಡಿ’ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸಲಾಗುತ್ತಿದೆ ಎಂದರು. ‘ನಾವು ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್‌ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರಿಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ…

ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ’ಸಂವಿಧಾನ ಫಲಕ’ ಅನಾವರಣ

ಮಂಗಳೂರು: ದೇಶಾದ್ಯಂತ ಬುಧವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳು ದೇಶಭಕ್ತಿಯ ಪ್ರತೀಕ ಎಂಬಂತೆ ನೆರವೇರಿದವು. ಅದರಲ್ಲೂ ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ದಿನವನ್ನು ವಿಭಿನ್ನವಾಗಿ ಆಚರಿಸಲಾಯಿತು. ದೇಶದ ಸಾಮಾಜಿಕ ವ್ಯವಸ್ಥೆಗೆ ಆಧಾರವಾಗಿರುವ, ಸುರಕ್ಷಾ ಮಂತ್ರವೆನಿಸಿರುವ ‘ಸಂವಿಧಾನ’ ಕುರಿತಂತೆ ಒಂದು ದಿಂದಾದ ಶ್ರದ್ದೆ-ಭಕ್ತಿಯಲ್ಲ, ಪ್ರತೀ ದಿನವೂ ಸಂವಿಧಾನದ ಆಶಯಗಳನ್ನು ನೆನೆಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿರುವ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ (ಇಂದಿರಾ ಜನ್ಮ ಶತಾಬ್ದಿ ಭವನ) ಭವನದಲ್ಲಿ ‘ಸಂವಿಧಾನ ಫಲಕ’ವನ್ನು ಅನಾವರಣ ಮಾಡಲಾಗಿದೆ. ಖ್ಯಾತ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿರುವ ಮನೋರಾಜ್ ರಾಜೀವ್ ಅವರ ಪರಿಕಲ್ಪನೆಯಲ್ಲಿ ಈ ಸಂವಿಧಾನ ಫಲಕವನ್ನು ಸ್ಥಾಪಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಂವಿಧಾನದ ಪೀಠಿಕೆ ಹಾಗೂ ಮಧ್ಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇರುವ ಈ ಫಲಕ ಎಲ್ಲರ ಗಮನಕೇಂದ್ರೀಕರಿಸುತ್ತಿದೆ. ಸಂವಿಧಾನ ದಿನಾಚರಣೆಯ ಭಾಗವಾಗಿ ‘ಸಂವಿಧಾನ ಓದು’ ಕಾರ್ಯಕ್ರಮದ ಜೊತೆಯಲ್ಲೇ…

ಮೆಕ್ಕಜೋಳ ಖರೀದಿ ಕೇಂದ್ರ ಆರಂಭಕ್ಕೆ ಹೈಕಮಾಂಡ್ ಅನುಮತಿ ಬೇಕೆ?

ರೈತರನ್ನು ಮರೆತ ಸರ್ಕಾರ: ಮೆಕ್ಕಜೋಳ ಖರೀದಿ ಕೇಂದ್ರ ಆರಂಭಕ್ಕೆ ಹೈಕಮಾಂಡ್ ಅನುಮತಿ ಬೇಕೆ ಎಂದ ಬಿಜೆಪಿ *ಬೆಂಗಳೂರು, ನವೆಂಬರ್ 26* ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ ರೈತರ ನೋವಿಗೆ ಸ್ಪಂದಿಸದ ಈ ರೀತಿಯ ಸಂವೇದನಾರಹಿತ ಸರ್ಕಾರವನ್ನು ನಾನು ಈವರೆಗೆ ಕಂಡಿರಲಿಲ್ಲ. ಕೊಟ್ಟ ಮಾತಿನಂತೆ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕಿದ್ದ ಸರ್ಕಾರ ಇಂದು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ. ರೈತರ ಬದುಕು ನಾಶವಾದರೂ ಪರವಾಗಿಲ್ಲ, ನಮ್ಮ ಕುರ್ಚಿ ಭದ್ರವಾಗಿರಲಿ ಎನ್ನುವಂತಿದೆ ಇಬ್ಬರೂ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಗುರ್ಲಾಪುರದಲ್ಲಿ ಪ್ರತಿಭಟನಾ ನಿರತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘೋರ ದುರಂತ…

ಬೆಂಗಳೂರು ದರೋಡೆ ಪ್ರಕರಣ; ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು ₹7.11 ಕೋಟಿ ನಗದು ವ್ಯಾನ್ ದರೋಡೆ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ಇತ್ತೀಚಿನ ಬಂಧನಗಳಿಂದ ₹1.45 ಕೋಟಿ ಹಣ ಮರುಪಡೆಯಲಾಗಿದ್ದು, ಒಟ್ಟಾರೆಯಾಗಿ ಮರುಪಡೆದ ಹಣದ ಮೊತ್ತ ₹7.1 ಕೋಟಿಗೆ ತಲುಪಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಆರೋಪಿಗಳನ್ನು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹಲವು ತಂಡಗಳ ಸಮನ್ವಯದಿಂದ ಪತ್ತೆ ಮಾಡಿ ಬಂಧಿಸಲಾಗಿದೆ. ಆರು ಮಂದಿಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.