ಬೆಂಗಳೂರು: “ಮೆಟ್ರೋ ಯೋಜನೆಯ ಇತಿಹಾಸವೇ ಗೊತ್ತಿಲ್ಲದೆ ಬಿಜೆಪಿ ನಾಯಕರು ಪ್ರಚಾರಕ್ಕಾಗಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಈ ಯೋಜನೆಯಲ್ಲಿ ರಾಜ್ಯ ಸರ್ಕಾರ ಸಣ್ಣ ಪಾಲುದಾರನಲ್ಲ, ದೊಡ್ಡ ಪಾಲುದಾರ,” ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಭಾನುವಾರ ನಡೆಯಲಿರುವ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಕುರಿತು ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “2006ರಲ್ಲಿ ಧರಂ ಸಿಂಗ್ ಮುಖ್ಯಮಂತ್ರಿ, ಮನಮೋಹನ್ ಸಿಂಗ್ ಪ್ರಧಾನಮಂತ್ರಿ ಆಗಿದ್ದಾಗ ಮೆಟ್ರೋ ಶಂಕುಸ್ಥಾಪನೆ ನಡೆದಿದೆ. ಮೆಟ್ರೋ ಸಂಸ್ಥೆ ಜನರದ್ದು, ಯಾವುದೇ ಪಕ್ಷದ ಸ್ವತ್ತಲ್ಲ. ಆದರೆ ಬಿಜೆಪಿಯವರಿಗೆ ಕೆಲಸಕ್ಕಿಂತ ಪ್ರಚಾರವೇ ಮುಖ್ಯ,” ಎಂದರು. ಯೋಜನೆಯ ವೆಚ್ಚ ಹಂಚಿಕೆ ವಿವರಿಸುತ್ತಾ, ಫೇಸ್ 1ರಲ್ಲಿ ರಾಜ್ಯದ ಪಾಲು 30% (ಜಮೀನು ಸೇರಿ), ಕೇಂದ್ರದ ಪಾಲು 25%, ಉಳಿದದ್ದು ಸಾಲ. ಫೇಸ್ 2ರಲ್ಲಿ ರಾಜ್ಯ 30% ಜೊತೆಗೆ ಮಿತಿಮೀರಿದ ವೆಚ್ಚ ಬಹುತೇಕ ರಾಜ್ಯದಿಂದ; ಕೇಂದ್ರ ಕೇವಲ…
Category: ಬೆಂಗಳೂರು
ಬಿಬಿಎಂಪಿ ಅವಾಂತರ; ಸಾರ್ವಜನಿಕರ ಸಂಕಷ್ಟ ಬಗ್ಗೆ ಮಮ್ಮಲ ಮರುಗಿದ ಸಚಿವ
ಬೆಂಗಳೂರು: ಬಿಬಿಎಂಪಿ ಕಾಮಗಾರಿ ವಿಳಂಬದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿವೆ. ಅದರಲ್ಲೂ ಚರಂಡಿ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸದೆ ಇದ್ದುದರಿಂದಾಗಿ ಉದ್ಯಾನನಗರಿಯ ಹಲವೆಡೆ ಸಾರ್ವಜನಿಕರು ಆತಂಕದಲ್ಲಿ ಸಿಲುಕುವಂತಾಗಿದೆ. ಬೆಂಗಳೂರಿನಾದ್ಯಂತ ಈ ರೀತಿಯ ಸನ್ನಿವೇಶ ಕಂಡುಬರುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕ್ಷಿಪ್ರ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈ ಅನನ್ಯ ಸನ್ನಿವೇಶಕ್ಕೆ N.S.Palya ಸಾಕ್ಷಿಯಾಯಿತು. ರಾಜಧಾನಿ ಬೆಂಗಳೂರಿನಲ್ಲಿ ಚರಂಡಿ ದುರಸ್ತಿ ಹಾಗೂ ಪಾದಚಾರಿ ಮಾರ್ಗಗಳ ಕಾಮಗಾರಿ ನಡೆಯುತ್ತಿದೆಯಾದರೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಈ ರೀತಿಯ ಅವಾಂತರಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಸಿಕ್ಕಿದ್ದೇ ತಡ, ತಮ್ಮ ಆಪ್ತರನ್ನು ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಬಗೆಹರಿಸುತ್ತಿರುವ ಸಚಿವರ ನಡೆ ಗಮನಸೆಳೆದಿದೆ. ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 181ರ ಎನ್.ಎಸ್.ಪಾಳ್ಯ 7ನೇ ಮುಖ್ಯರಸ್ತೆ ಬಳಿ ಚರಂಡಿ ದುರಸ್ತಿ ಕಾಮಗಾರಿ ಕೈಗೊಂಡಿರುವ…
ದೆಹಲಿಯಲ್ಲಿನ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ
ಬೆಂಗಳೂರು, ಆ. 9: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ ಸಂಬಂಧ ದಂಪತಿಗೆ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನ ನೀಡಿದ್ದಾರೆ. ಸಂಜೀವಿನಿ ಯೋಜನೆಯಡಿಯಲ್ಲಿ ನಡೆಯುವ ಸರಸ್ ಮೇಳಗಳಲ್ಲಿ ಭಾಗವಹಿಸಿದ್ದ ಈ ದಂಪತಿ ತಮ್ಮ ಚಿತ್ತಾರ ಕಲೆಯನ್ನು ಪರಿಚಯ ಮಾಡಿಸಿರುವುದಕ್ಕೆ ಈ ಅವಕಾಶ ದೊರಕಿದೆ ಎಂದು ರಾಷ್ಟ್ರೀಯ ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕರಾದ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ. ಸರಸ್ವತಿ ಅವರ ಪತಿ ಹಸೆ ಚಿತ್ತಾರ ಕಲಾವಿರ ಈಶ್ವರ ನಾಯ್ಕ ಹಸುವಂತೆ ಅವರಿಗೆ ಪ್ರಸಕ್ತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಲಭಿಸಿತ್ತು. ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಸ್ವಸಹಾಯ…
ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಭವ್ಯ ಕ್ರೀಡಾ ಸಂಕೀರ್ಣ ನಿರ್ಮಾಣ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜಧಾನಿಯಲ್ಲಿ ಮತ್ತೊಂದು ಭವ್ಯ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಮುಂದಾಗಿದೆ. ಬೊಮ್ಮಸಂದ್ರದ ಸೂರ್ಯನಗರ ಸಮೀಪ 100 ಎಕರೆ ಪ್ರದೇಶದಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸೌಲಭ್ಯಗಳು ಲಭ್ಯವಾಗಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಕರ್ನಾಟಕ ವಸತಿ ಮಂಡಳಿಯ (KHB) ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಒಳಾಂಗಣ ಮತ್ತು ಹೊರಾಂಗಣ ತಲಾ ಎಂಟು ಕ್ರೀಡೆಗಳ ಮೈದಾನ, ಅತ್ಯಾಧುನಿಕ ಜಿಮ್, ತರಬೇತಿ ಕೇಂದ್ರ, ಈಜುಕೊಳ, ಅತಿಥಿ ಗೃಹ, ಹಾಸ್ಟೆಲ್ಗಳು, ತ್ರೀ-ಸ್ಟಾರ್ ಹಾಗೂ ಫೈವ್-ಸ್ಟಾರ್ ಹೋಟೆಲ್ಗಳು, ಮತ್ತು ಅಂತರರಾಷ್ಟ್ರೀಯ ಕಾರ್ಯಕ್ರಮಗಳಿಗೆ ಸಮಾವೇಶ ಸಭಾಂಗಣ—all in one ಸಂಕೀರ್ಣ ರೂಪ ಪಡೆಯಲಿದೆ. ನಿರ್ಮಾಣಗೊಳ್ಳುವ ಕ್ರಿಕೆಟ್ ಕ್ರೀಡಾಂಗಣ, ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡದಾಗಲಿದೆ. ನರೇಂದ್ರ ಮೋದಿ ಸ್ಟೇಡಿಯಂ 1,32,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ. ಒಟ್ಟು ₹1,650…
ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಸಮರ್ಥನೆ: ಕೇಂದ್ರಕ್ಕೆ ರಾಜ್ಯದ ಮನವಿ
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. “ಜನೌಷಧಿ ಕೇಂದ್ರಗಳಿಗೆ ಸರಬರಾಜು ಆಗುವ ದರದಲ್ಲಿಯೇ ಔಷಧಿಗಳನ್ನು ರಾಜ್ಯ ಆರೋಗ್ಯ ಇಲಾಖೆಗೆ ಪೂರೈಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಇದು ಉಚಿತ ಔಷಧ ವಿತರಣೆಗೆ ನೆರವಾಗುತ್ತದೆ” ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ. ಜನೌಷಧಿ ಯೋಜನೆಯಡಿ ಕಡಿಮೆ ದರದ ಔಷಧಿ ಲಭ್ಯವಿದೆ ಎಂಬುದನ್ನು ಅಂಗೀಕರಿಸಿರುವ ಸರ್ಕಾರ, ಸಾರ್ವಜನಿಕರಿಗೆ ಗುಣಮಟ್ಟದ ಔಷಧಿಗಳನ್ನು ಉಚಿತವಾಗಿ ನೀಡಲು ಬದ್ಧವಿದೆ ಎಂದು ವಿವರಿಸಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,417 ಜನೌಷಧಿ ಕೇಂದ್ರಗಳಲ್ಲಿ ಕೇವಲ 184 ಮಾತ್ರ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಇದ್ದು, ಉಳಿದವು ಹೊರಗಿರುವುದಾಗಿ ಸಚಿವರು ಹೇಳಿದ್ದಾರೆ. “ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ನಿಯಮಿತವಾಗಿ ಪೂರೈಸಲಾಗುತ್ತಿದೆ. ತುರ್ತು ಅವಶ್ಯಕತೆಗಳಿಗೆ ಸ್ಥಳೀಯ ಖರೀದಿಗೂ…
ಮೆಟ್ರೋ ಬಗ್ಗೆ ‘ಅರ್ಧ ಸತ್ಯ’ ಹರಡುವುದನ್ನು ನಿಲ್ಲಿಸಿ; BJP ನಾಯಕರಿಗೆ ರಾಮಲಿಂಗಾ ರೆಡ್ಡಿ ತರಾಟೆ
ಬೆಂಗಳೂರು: BJPಯ ವಿಧಾನಸಭಾ ಮತ್ತು ಲೋಕಸಭಾ ಸದಸ್ಯರುಗಳಿಗೆ ,ಪ್ರಮುಖ ಮುಖಂಡರುಗಳಿಗೆ ಎಲ್ಲಾ ಸತ್ಯಗಳು ತಿಳಿದಿದ್ದರೂ ಸಹ ಅದನ್ನು ಲೆಕ್ಕಿಸದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಮ್ಮಮೆಟ್ರೋ ಶ್ರೇಯಸ್ಸು ಕೊಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ. 2006 ರಲ್ಲಿ ಶ್ರೀ ಮನಮೋಹನ್ ಸಿಂಗ್ ರವರು ಮಾನ್ಯ ಪ್ರಧಾನ ಮಂತ್ರಿಗಳಾಗಿದ್ದಾಗ, ರಾಜ್ಯದಲ್ಲಿ ಶ್ರೀ ಧರ್ಮಸಿಂಗ್ ಮಾನ್ಯ ಮುಖ್ಯಮಂತ್ರಿಗಳಾಗಿದ್ದಾಗ , ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದಾಗ ಎಂ.ಜಿ ರಸ್ತೆಯಲ್ಲಿ ನಮ್ಮ ಮೆಟ್ರೋಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು ಎಂದು ಗಮನಸೆಳೆದಿರುವ ರಾಮಲಿಂಗಾ ರೆಡ್ಡಿ, ‘ನಮ್ಮ ಮೆಟ್ರೋ’ ಜನರದ್ದು – ಯಾವ ಪಕ್ಷದ ಸ್ವತ್ತು ಅಲ್ಲ! ಎಂಬುದು ನಮ್ಮ ಭಾವನೆಯಾಗಿತ್ತು. ಆದರೆ ಬಿ.ಜೆ.ಪಿ ಅವರಿಗೆ ಜನಾಸಕ್ತಿಗಿಂತ, ಪ್ರಚಾರಸಕ್ತಿ ಹೆಚ್ಚು ಎಂಬುದು ಗೊತ್ತಾಗುತ್ತಿದೆ ಎಂದು ವ್ಯಾಖ್ಯಾನಿಸಿದ್ದಾರೆ. ಕರ್ನಾಟಕ ಸರ್ಕಾರ ಸರಳ ಪಾಲುದಾರ ಅಲ್ಲ — ಅನೇಕ ಸಂದರ್ಭಗಳಲ್ಲಿ ಅದು ಹೆಚ್ಚಿನ ಹಣವನ್ನು…
ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ
ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದೆ. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ “ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ”ವನ್ನು ಆರಂಭಿಸಲಾಗಿದೆ. ಆಗಸ್ಟ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಯುವ ಈ ಅಭಿಯಾನದ ಮುಖ್ಯ ಉದ್ದೇಶ ಎಂದರೆ ಹೆಚ್ಚುತ್ತಿರುವ ಮಾದಕ ದ್ರವ್ಯ ದುರುಪಯೋಗ ಮತ್ತು ಅದರ ದುಷ್ಪರಿಣಾಮಗಳನ್ನು ಪರಿಹರಿಸುವತ್ತ ಗಮನಹರಿಸುದಾಗಿದೆ. ಕೌಶಲ್ಯಾಭಿವೃದ್ಧಿ ಇಲಾಖೆಯಯಡಿಯ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಶ್ರೀವಿದ್ಯಾ ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ವ್ಯಾಪಕವಾದ ಸಾರ್ವಜನಿಕ ತೊಡಗಿಸಿಕೊಳ್ಳುವಿಕೆ ಮತ್ತು ಶಿಕ್ಷಣವನ್ನು ನೀಡಲು ರಾಜ್ಯದ ಪ್ರತಿ ಗ್ರಾಮ ಪಂಚಾಯತ್ನಿಂದ ಎಲ್ಲಾ ಆಡಳಿತ ಹಂತಗಳಲ್ಲಿ ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. “ಮಾದಕ ದ್ರವ್ಯ ಮುಕ್ತ ಕರ್ನಾಟಕ…
ರಮ್ಯಾ ಬಗ್ಗೆ ಅಷ್ಲೀಲಾ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಅಷ್ಲೀಲಾ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಈ ಬಗ್ಗೆ ನಟಿ ರಮ್ಯಾ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಮ್ಯಾಗೆ ಅಶ್ಲೀಲವಾಗಿ ಕಮೆಂಟ್ ಮಾಡಿ, ಅಸಭ್ಯ ಸಂದೇಶಗಳನ್ನು ಕಳಿಸಲಾಗಿದೆ. ಅಂಥವರಿಗೆ ಕಾನೂನಿನ ಮೂಲಕ ಪಾಠ ಕಲಿಸಲು ಕೋರಿ ರಮ್ಯಾ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಈ ಮೂಲಕ ಅವರು, ಹೆಣ್ಣುಮಕ್ಕಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲವಾಗಿ ನಿಂದಿಸುವವರ ವಿರುದ್ಧ ಅವರು ಸಮರಾ ಸಾರಿದ್ದಾರೆ. ‘ಸೆಲೆಬ್ರಿಟಿಯಾದ ನಮಗೆ ಟ್ರೋಲ್ ಇದ್ದೇ ಇರುತ್ತದೆ. ಆದರೆ ಈ ಮಟ್ಟಕ್ಕೆ ನನಗೆ ಯಾವಾಗಲೂ ಅನುಭವ ಆಗಿರಲಿಲ್ಲ’ ಎಂದಿರುವ ನಟಿ ರಮ್ಯಾ, ರೇಣುಕಾಸ್ವಾಮಿ…
ಭ್ರಷ್ಟಾಚಾರ ವಿರುದ್ಧ ಸಮಾರಾ; ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಸಂಸ್ಥೆ, ಮಂಗಳವಾರ ಬೆಳಿಗ್ಗೆ ರಾಜ್ಯದ ವಿವಿಧೆಡೆ ಏಕಕಾಲಿಕ ದಾಳಿ ನಡೆಸಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಮತ್ತು ಚಿತ್ರದುರ್ಗ ಸೇರಿದಂತೆ ಐದು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮತ್ತು ಆಸ್ತಿಗಳ ಮೇಲೆ ತನಿಖಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಎಂ. ಆಂಜನೇಯಮೂರ್ತಿ ಅವರ ನಿವಾಸ ಹಾಗೂ ಸಂಬಂಧಿಕರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕದ ಮನೆ, ಜಕ್ಕೂರು ಕಾಂಪ್ಲೆಕ್ಸ್, ತುಮಕೂರು, ಮಧುಗಿರಿ ಹಾಗೂ ಗೌರಿಬಿದನೂರಿನ ಕಚೇರಿಗಳಲ್ಲೂ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಟಿಹೆಚ್ಒ ಡಾ. ವೆಂಕಟೇಶ್ ಅವರ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ನಿವಾಸ ಮತ್ತು ಕ್ಲಿನಿಕ್ಗಳಲ್ಲಿ ದಾಳಿ ನಡೆದಿದೆ. ಹಾಸನ ಜಿಲ್ಲೆ ತೋಟಗಾರಿಕೆ ಇಲಾಖೆಯ ಸಹಾಯಕ…
ದಯಾನಂದ್ ಸಹಿತ ಐವರು ಪೊಲೀಸ್ ಅಧಿಕಾರಿಗಳ ಅಮಾನತು ರದ್ದು
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಅಮನಾತಾಗಿದ್ದ ಐವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಇದೀಗ ಅದೇ ಸರ್ಕಾರ ಈ ಪೊಲೀಸ್ ಅಧಿಕಾರಿಗಳ ಅಮಾನತನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದ ಸರ್ಕಾರ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಈ.ಎಸ್.ಐ. ಬಾಲಕೃಷ್ಣ ಹಾಗೂ ಇನ್ಸ್ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್ಸಿಬಿ, ಡಿಎನ್ಎ ಹಾಗೂ ಕೆಎಸ್ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಅದರ ಬೆನ್ನಲ್ಲೇ. ಸೋಮವಾರ ಐಪಿಎಸ್ ಅಧಿಕಾರಿಗಳಾದ ಬಿ.ದಯಾನಂದ್ ಸಹಿತ ಪೊಲೀಸ್…