RSS ನಿರ್ಬಂಧದ ಪ್ರಯತ್ನ ವಿಫಲ; ಸರ್ಕಾರದ ಮೇಲ್ಮನವಿ ವಜಾ

ಧಾರವಾಡ: ರಾಷ್ಟ್ರೀಯ ಸ್ವಯಂಸೇವಕ (ಆರ್​​ಎಸ್​ಎಸ್) ಚಟುವಟಿಕೆಗಳಿಗೆ ನಿರ್ಬಂಧ ಹೇರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾಗಿರುವ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಸರ್ಕಾರದ ವಾದ ಬಗ್ಗೆ ತೃಪ್ತವಾಗದ ನ್ಯಾಯಪೀಠ, ಪ್ರಕರಣವನ್ನು ಏಕಸದಸ್ಯ ಪೀಠದಲ್ಲೇ ಇತ್ಯರ್ಥ ಮಾಡಿಕೊಳ್ಳುವಂತೆ ಎಂದು ವಿಭಾಗೀಯ ಪೀಠ ತಿಳಿಸಿದೆ.

RSS ಶತಾಬ್ದಿ ಸಂಭ್ರಮ; ನ.8, 9ರಂದು ಬೆಂಗಳೂರಿನಲ್ಲಿ ಮೋಹನ್ ಭಾಗವತ್ ಅವರಿಂದ ವಿಶೇಷ ಉಪನ್ಯಾಸಮಾಲೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ ನೂರು ವರ್ಷವನ್ನು ಪೂರ್ಣಗೊಳಿಸಿ ರಾಷ್ಟ್ರದ ಸರ್ವಾಂಗೀಣ ಉನ್ನತಿಯ ಧ್ಯೇಯದೊಂದಿಗೆ ಮುನ್ನಡೆದಿದೆ. ಶತಾಬ್ದಿ ವರ್ಷದಲ್ಲಿ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ಮನೆಮನೆ ಸಂಪರ್ಕ, ಹಿಂದು ಸಮ್ಮೇಳನ, ಸಾಮಾಜಿಕ ಸದ್ಭಾವನಾ ಸಮಾವೇಶ, ಪ್ರಮುಖ ನಾಗರಿಕರ ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಆಯೋಜಿಸಲಾಗಿದೆ. ಸಮಾಜದ ಗಣ್ಯಮಾನ್ಯರು, ನೀತಿ ನಿರೂಪಕರು ಹಾಗೂ ಸಮಾಜಸೇವಕರೊಂದಿಗಿನ ಸಂವಾದವನ್ನು ಸಂಘವು ನೂರನೇ ವರ್ಷದಲ್ಲೂ ಮುಂದುವರಿಸಿದ್ದು, ಬೆಂಗಳೂರಿನಲ್ಲಿ ಇದೇ ನವೆಂಬರ್ 8 ಹಾಗೂ 9 ರಂದು ಸರಸಂಘಚಾಲಕರಾದ ಡಾ|| ಮೋಹನ್ ಭಾಗವತ್ ಅವರು ವಿಶೇಷ ಉಪನ್ಯಾಸಮಾಲೆಯಲ್ಲಿ ಮಾತನಾಡಲಿದ್ದಾರೆ. ಶತಾಬ್ದಿ ವರ್ಷದಲ್ಲಿ ದೇಶದ 4 ಕಡೆಗಳಲ್ಲಿ (ನವದೆಹಲಿ, ಬೆಂಗಳೂರು, ಮುಂಬಯಿ ಮತ್ತು ಕೊಲ್ಕತ್ತಾ) ಡಾ|| ಮೋಹನ್ ಭಾಗವತ್ ಅವರು ಈ ಉಪನ್ಯಾಸಮಾಲೆಗಳನ್ನು ನಡೆಸಿಕೊಡಲಿದ್ದಾರೆ. ನವದೆಹಲಿಯಲ್ಲಿ ಕಳೆದ ಆಗಸ್ಟ್ 26, 27, 28 ರಂದು ನವದೆಹಲಿಯಲ್ಲಿ…

ಮೇಕೆದಾಟು, ಕೃಷ್ಣಾ, ಮಹದಾಯಿ ವಿವಾದ; ವಕೀಲರೊಂದಿಗೆ ಡಿಕೆಶಿ ಚರ್ಚೆ

ನವದೆಹಲಿ; ಮೇಕೆದಾಟು ಸೇರಿದಂತೆ ಸುಪ್ರೀಂಕೋರ್ಟ್ ಅಲ್ಲಿ ಬಾಕಿಯಿರುವ ಕರ್ನಾಟಕದ ಜಲ ವಿವಾದಗಳ ಕುರಿತು ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಮೋಹನ್ ವಿ ಕಾತರಾಕಿ, ನಿಶಾಂತ್ ಪಾಟೀಲ್, ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ನನ್ನ ತಾಂತ್ರಿಕ ಸಲಹೆಗಾರರಾದ ಜೈಪ್ರಕಾಶ್ ಜೊತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯ ಕರ್ನಾಟಕ ಭವನದಲ್ಲಿ ಚರ್ಚೆ ನಡೆಸಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ಈಗಾಗಲೇ ರೈತರಿಗೆ ಭೂ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ. ಹೊಸ ಕಾಯ್ದೆ ಪ್ರಕಾರ ಇದಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸಬೇಕಿದೆ. ಬೇರೆ ರಾಜ್ಯಗಳಲ್ಲಿ ಈ ಪ್ರಾಧಿಕಾರ ರಚನೆ ಆಗಿವೆ. ಬಿಹಾರದಲ್ಲಿ ಪ್ರಾಧಿಕಾರದ ಮೂಲಕ ಸಾವಿರಾರು ಪ್ರಕರಣ ಬಗೆಹರಿಸಲಾಗಿದೆ. ಕಾನೂನು ಉಪಯೋಗಿಸಿಕೊಳ್ಳಬೇಕು. ಮಹದಾಯಿ ಯೋಜನೆ ಸಂಬಂಧ ಕೆಲವು ದಾಖಲೆ ಸಿದ್ಧಪಡಿಸಲು ಅವರು ಸೂಚಿಸಿದರು. ಮೇಕೆದಾಟು ಯೋಜನೆ ಸಂಬಂಧ ಕೇಂದ್ರ ಸಚಿವರ ಪತ್ರ ನಮ್ಮ…

ನಂದಿನಿ ತುಪ್ಪ ದುಬಾರಿ; ‘ಹಗಲು ದರೋಡೆ’ ಎಂದ ಜೆಡಿಎಸ್

ಬೆಂಗಳೂರು: ನಂದಿನಿ ತುಪ್ಪ ದುಬಾರಿಯಾಗಲಿದೆ. ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಲು ಸರ್ಕಾರ ಸಹಮತ ವ್ಯಕ್ತಪಡಿಸಿದೆ. ಕೆಎಂಎಫ್ ನಿರ್ಧಾರ ಬಗ್ಗೆ ಸಾರ್ವಜನಿಕವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಪ್ರತಿಪಕ್ಷ ಜೆಡಿಎಸ್ ಕೂಡಾ ಆಕ್ರೋಶ ಹೊರಹಾಕಿದೆ. "ಸಾಲ ಮಾಡಿಯಾದರೂ ತುಪ್ಪ ತಿನ್ನು" ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು @INCKarnatakaಸರ್ಕಾರ ತುಪ್ಪ ತಿನ್ನುತ್ತಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆಮಾಡಿದ್ದರೂ, ಕಾಂಗ್ರೆಸ್‌ ಸರ್ಕಾರ ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಿ ಹಗಲು ದರೋಡೆ ಮಾಡುತ್ತಿದೆ. ಗ್ಯಾರಂಟಿಗಾಗಿ ಬೊಕ್ಕಸ ಖಾಲಿಮಾಡಿರುವ… pic.twitter.com/2Di1Koit0X — Janata Dal Secular (@JanataDal_S) November 5, 2025 ‘ಸಾಲ ಮಾಡಿಯಾದರೂ ತುಪ್ಪ ತಿನ್ನು’ ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು ಕಾಂಗ್ರೆಸ್ ಸರ್ಕಾರ ತುಪ್ಪ ತಿನ್ನುತ್ತಿದೆ’ ಎಂದು ಜೆಡಿಎಸ್ ಪ್ರತಿಕ್ರಿಯಿಸಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ…

ದ್ವಿತೀಯ ಪಿಯುಸಿ ಪರೀಕ್ಷೆ–1, 2ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025–26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–1 ಮತ್ತು ಪರೀಕ್ಷೆ–2ರ ಅಂತಿಮ ವೇಳಾಪಟ್ಟಿಯನ್ನು ಪ್ರೀ-ಯೂನಿವರ್ಸಿಟಿ ಶಿಕ್ಷಣ ಇಲಾಖೆ ಬುಧವಾರ ಪ್ರಕಟಿಸಿದೆ. ಅದರಂತೆ ಪರೀಕ್ಷೆ–1 ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ, ಹಾಗೂ ಪರೀಕ್ಷೆ–2 ಏಪ್ರಿಲ್ 25ರಿಂದ ಮೇ 9ರವರೆಗೆ ನಡೆಯಲಿದೆ. ಪರೀಕ್ಷೆ–1 ವೇಳಾಪಟ್ಟಿ ಫೆ. 28: ಕನ್ನಡ, ಅರೇಬಿಕ್ ಮಾ. 2: ಭೂಗೋಳಶಾಸ್ತ್ರ, ಅಂಕಿಅಂಶಗಳು, ಮನೋವಿಜ್ಞಾನ ಮಾ. 3: ಇಂಗ್ಲಿಷ್ ಮಾ. 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾ. 5: ಇತಿಹಾಸ, ಗೃಹ ವಿಜ್ಞಾನ ಮಾ. 6: ಭೌತಶಾಸ್ತ್ರ ಮಾ. 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂವಿಜ್ಞಾನ ಮಾ. 9: ರಸಾಯನಶಾಸ್ತ್ರ, ಶಿಕ್ಷಣ, ಮೂಲ ಗಣಿತ ಮಾ.10: ಅರ್ಥಶಾಸ್ತ್ರ ಮಾ.11: ತರ್ಕಶಾಸ್ತ್ರ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ ಮಾ.12: ಹಿಂದಿ ಮಾ.13: ರಾಜ್ಯಶಾಸ್ತ್ರ ಮಾ.14: ಲೆಕ್ಕಪತ್ರ ನಿರ್ವಹಣೆ ಮಾ.16: ಸಮಾಜಶಾಸ್ತ್ರ,…

ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖ ಮತ್ತೊಮ್ಮೆ ಬಹಿರಂಗ: ರಾಹುಲ್ ಗಾಂಧಿ

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಹಿಂದೆ ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು. ಇದೀಗ ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ @RahulGandhi ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು, ಇಂದು ಹರಿಯಾಣ…

ವಾಲ್‌ಮಾರ್ಟ್‌ ವೃದ್ಧಿ ಒಪ್ಪಂದಕ್ಕೆ ಡಾ. ಶರಣಪ್ರಕಾಶ್‌ ಪಾಟೀಲ್‌ ಸಹಿ

ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ ಸ್ವಸಾಹಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು ಅಂತಾರಾಷ್ಟ್ರೀಯ ಖ್ಯಾತಿಯ “ವಾಲ್‌ಮಾರ್ಟ್‌” ಜೊತೆ ಒಪ್ಪಂದ ಮಾಡಿಕೊಂಡಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಂಗಳವಾರ “ವಾಲ್‌ಮಾರ್ಟ್‌ ವೃದ್ಧಿ” ಒಪ್ಪಂದಕ್ಕೆ ಸಹಿ ಹಾಕಿದರು. ಎನ್‌ಎಲ್‌ಎಂ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಐ2ಐ ಫೌಂಡೇಶನ್‌ನ ಟ್ರಸ್ಟಿ ಪಾರುಲ್ ಸೋನಿ ಸಹಿ ಹಾಕಿದರು. ಈ ಒಪ್ಪಂದದ ಅವಧಿ ಮೂರು ವರ್ಷಗಳಾಗಿರುತ್ತದೆ. ವಾಲ್ಮಾರ್ಟ್ ವೃದ್ಧಿಯ ಅನುಷ್ಠಾನ ಪಾಲುದಾರರಾದ “ಐಡಿಯಾಸ್ ಟು ಇಂಪ್ಯಾಕ್ಟ್”…

ಸಂಪುಟ ಪುನಾರಚನೆ ವೇಳೆ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಕೋಲಾರ: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡಿ, “ಸಂಪುಟ ಪುನಾರಚನೆ ವೇಳೆ ನೋಡೋಣ,” ಎಂದು ಹೇಳಿದರು. ಜಿಲ್ಲೆಯಲ್ಲಿ ನಾಲ್ಕು ಮಂದಿ ಶಾಸಕರು ಇದ್ದು, ಸಚಿವ ಸ್ಥಾನದ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂದು ಸಿಎಂ ತಿಳಿಸಿದರು. ಇದೇ ವೇಳೆ ಮಾತನಾಡಿದ ಅವರು, ಯತ್ತಿನಹೊಳೆ ಯೋಜನೆ ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ; ಸರಕಾರದ ವಿರುದ್ಧ ಪ್ರತಿಪಕ್ಷ ಅಭಿಯಾನ

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಗಾರ್ಬೇಜ್‌ ಸಿಟಿಯಾಗಿ ಬದಲಾಗಿದೆ. ಎಲ್ಲ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಕಸದ ರಾಶಿ ಕಂಡುಬರುತ್ತಿದೆ. ನಗರಕ್ಕೆ ದ್ರೋಹ ಬಗೆದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಹಾಗೂ ಒಂದು ವಾರ ಕಾಲ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 6 ರಿಂದ 15 ರವರೆಗೆ ಸಹಿ ಸಂಗ್ರಹ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು. ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು…

ಕಾಯ್ದೆಯನ್ನೇ ತಿಳಿಯದ ಅಧಿಕಾರಿಗಳು?; ಖರ್ಗೆಯ ಇಲಾಖೆಯಲ್ಲಿ ಹೀಗೊಂದು ಅವಾಂತರ

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳು ಸಾರ್ವಜನಿಕರನ್ನು ಯಾವ ರೀತಿ ಹೀನಾಯವಾಗಿ ಕಾಣುತ್ತಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳ ವಿರುದ್ಧ ಹೋರಾಟ ನಡೆಸಿ ಭ್ರಷ್ಟಾಚಾರ ಮುಕ್ತ ಅಧಿಕಾರ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ಹಾಗೂ ಹಿಂದಿನ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳನ್ನು ಬಯಲು ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಸಚಿವ ಪ್ರಿಯಾಂಕ್ ಖರ್ಗೆಯವರು ಇದೀಗ ತಮ್ಮ ಇಲಾಖೆಯ ಅಧಿಕಾರಿಯ ಕರ್ತವ್ಯಲೋಪ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದೇ ಕುತೂಹಲದ ವಿಷಯ. ಈ ಸರ್ಕಾರದ ಅವಧಿಯಲ್ಲೂ ಅಧಿಕಾರಿಗಳ ದೌಲತ್ತು, ಕರ್ತವ್ಯಲೋಪಗಳು ಸಾರ್ವಜನಿಕರಿಗೆ ಸವಾಲಾಗಿದೆ ಎಂಬುದಕ್ಕೆ ದಾವಣಗೆರೆಯಲ್ಲಿ ನಡೆದಿರುವ ಈ ಪ್ರಕರಣ ಸಾಕ್ಷಿಯಾಗಿದೆ. ಬೆಂಗಳೂರಿನ ಆಲ್ವಿನ್ ಎಂ ಎಂಬವರು ಸಲ್ಲಿಸಿದ್ದ ಮಾಹಿತಿ ಹಕ್ಕು ಮೇಲ್ಮನವಿಯೊಂದರ ವಿಚಾರಣೆ ವೇಳೆ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವೃತ್ತದ ಅಧೀಕ್ಷಕ ಅಭಿಯಂತರ…