ಎಚ್ಚರ..! ರಾಜ್ಯದಲ್ಲಿ ಮಾರಾಟವಾಗುತ್ತಿದೆ ಅವಧಿ ಮೀರಿದ ಮಕ್ಕಳ ತಿಂಡಿ

ಬೆಂಗಳೂರು: ರಾಜ್ಯದ ಹಲವೆಡೆ ಮಾರಾಟವಾಗುವ ಆಹಾರೋತ್ಪನ್ನಗಳು ಎಷ್ಟು ಸುರಕ್ಷೆ ಎಂಬ ಪ್ರಶ್ನೆ ಉದ್ಭವವಾಗಿದೆ. ಬೆಂಗಳೂರು-ಮಂಗಳೂರು ಸಹಿತ ರಾಜ್ಯದ ಹಲವೆಡೆ ನಿಷೇಧಿತ ಚೈನೀಸ್ ಸಾಲ್ಟ್ ಬಳಕೆ ಮಾಡಿರುವ ಆಹಾರ ಮಾರಾಟ ದಂಧೆ ಎಗ್ಗಿಲ್ಲದೆ ಸಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಬಹುತೇಕ ಹೊಟೇಲು ವ್ಯವಹಾರದ ಹೆಸರಲ್ಲಿ ನಡೆಯುತ್ತಿರುವ ಈ ಅಕ್ರಮದ ಬಗ್ಗೆ ಆಹಾರ ಇಲಾಖೆಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆ ಎಂಬ ಆಕ್ರೋಶ ಪ್ರಜ್ಞಾವಂತ ನಾಗರೀಕರದ್ದು. ಇದೇ ವೇಳೆ, ಮಕ್ಕಳ ತಿಂಡಿಗಳ ಮಾರಾಟದಲ್ಲೂ ಅಕ್ರಮಗಳು ನಡೆಯುತ್ತಿವೆ. ಇದಕ್ಕೆ ಉದಾಹರಣೆ ಎಂಬಂತಿದೆ ನೆಲಮಂಗಲ ಸಮೀಪದ ಪ್ರಕರಣ. ನಿಗೂಢ ಮಾಫಿಯಾವು ಅವಧಿ ಮೀರಿದ ಮಕ್ಕಳ ತಿಂಡಿ ಪ್ಯಾಕೇಟ್​ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಾದನಾಯಕನಹಳ್ಳಿ ಠಾಣಾ ಇನ್‌ಸ್ಪೆಕ್ಟರ್ ಮುರಳೀಧರ್ ನೇತೃತ್ವದ ಪೊಲೀಸರು ಬೇಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗೋಪಾಲಪುರ ವೇರ್​ಹೌಸ್​ನಲ್ಲಿ ಈ ದಂಧೆಯನ್ನು ಪತ್ತೆ ಮಾಡಿರುವ…

ಇ-ಮೇಲ್ ಬಾಂಬ್ ತಲ್ಲಣ.. ಕಿಡಿಗೇಡಿಗಳ ಮೂಲೋಚ್ಚಾಟನೆಗೆ ಕಮೀಷನರ್ ದಯಾನಂದ್ ರಣತಂತ್ರ..

ಬೆಂಗಳೂರು: ಇಡೀ ರಾಜ್ಯವನ್ನು ತಲ್ಲಣಗೊಳಿಸಿದ್ದ ಬಾಂಬ್ ಬೆದರಿಕೆಯ ಇ-ಮೇಲ್ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ಬೆಂಗಳೂರು ಮತ್ತು ಸುತ್ತಮುತ್ತಲ ಹಲವು ಶಾಲೆಗಳಿಗೆ ಶುಕ್ರವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಪೊಲೀಸರು ಬರೋಬ್ಬರಿ 48 ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆಯಂತೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್​ಗಳು ದಾಖಲಾಗಿವೆ. ಈ ಎಫ್​ಐಆರ್​ಗಳನ್ನು ಕ್ರೂಡೀಕರಿಸಿ ತನಿಖೆ ನಡೆಸುವ ಸಾಧ್ಯತೆಗಳಿವೆ ಎಂದು ಆಯುಕ್ತರ ಕಚೇರಿ ಮೂಲಗಳು ತಿಳಿಸಿವೆ. ಶುಕ್ರವಾರ ಬೆಳಿಗ್ಗೆ 15 ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ರವಾನೆಯಾಗಿತ್ತೆಂದು ಹೇಳಲಾಗುತ್ತಿತ್ತು. ನಂತರ ಪರಿಶೀಲನೆ ಸಂದರ್ಭದಲ್ಲಿ ಸುಮಾರು 48 ಶಾಲೆಗಳಿಗೆ ಈ ರೀತಿಯ ಬೆದರಿಕೆಯ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ. ಈ ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಆಯುಕ್ತ ಬಿ.ದಯಾನಂದ್, ಈ ಬಗ್ಗೆ ಆಳವಾದ ತನಿಖೆಗೆ ಸೂಚನೆ ನೀಡಿದ್ದಾರೆ. ಇ-ಮೇಲ್…

ದೊಡ್ಡಬಳ್ಳಾಪುರ: ಆಟೋ ಚಾಲಕರು ಮಾಲೀಕರ ವತಿಯಿಂದ ವಿಶಿಷ್ಠ ಕನ್ನಡ ರಾಜ್ಯೋತ್ಸವ ಆಚರಣೆ

ಬೆಂಗಳೂರು (ಗ್ರಾ): ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ದ್ವಜಾರೋಹಣ ಹಾಗೂ ಸರತಿ ಸಾಲಿನಲ್ಲಿ ಅಲಂಕರಿಸಿದ್ದ ಆಟೋಗಳಿಗೆ ಪೂಜೆ ಮತ್ತು ಗಾಯನ ಮಾಡಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಆಟೋ ಚಾಲಕ ರಾಮಣ್ಣ ಸುಮಾರು 20 ವರ್ಷಗಳಿಂದ ಊರಿನ ಗ್ರಾಮಸ್ಥರು ಹಾಗೂ ಆಟೋ ಚಾಲಕರು ಹಾಗೂ ಮಾಲೀಕರ ಎಲ್ಲರ ಸಹಕಾರದಿಂದ ಸತತವಾಗಿ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನು ವಿಜೃಂಭಣೆಯಿಂದ ಆಚರಿಸಲು ಕನ್ನಡ ತಾಯಿ ಭುವನೇಶ್ವರಿ ಹೆಚ್ಚಿನ ಶಕ್ತಿ ನೀಡಲಿ ಎಂದರು. ಈ ವೇಳೆ ಕೋನಘಟ್ಟ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ, ಆರಾಧ್ಯ, ಆಟೋ ಚಾಲಕರು ಮತ್ತು ಮಾಲೀಕರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ವೇಗವನ್ನು ಕಡಿಮೆ ಮಾಡಲು ಸಮೂಹ ಮಾಧ್ಯಮ ಅಭಿಯಾನ

ಬೆಂಗಳೂರು: ರಾಜ್ಯ ಸಾರಿಗೆ ಕ್ಷೇತ್ರದಲ್ಲಿ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆಯಲಾಗಿದೆ.‌ಸಾರಿಗೆ  ಸಚಿವ ರಾಮಲಿಂಗಾರೆಡ್ಡಿಯವರು ಶುಕ್ರವಾರ ಉದ್ದೇಶಿತ ಸಾಕ್ಷ್ಯಾಧಾರಿತ ಸಮೂಹ ಮಾಧ್ಯಮ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ, ಇದು ವೇಗದ ಚಾಲನೆಯಿಂದ ಉಂಟಾಗುವ ಅಪಾಯಗಳ ಬಗ್ಗೆ ಜನರನ್ನು ಎಚ್ಚರಿಸುವ ಗುರಿಯನ್ನು ಹೊಂದಿದೆ ಎಂದೇ ಬಣ್ಣಿಸಲಾಗುತ್ತಿದೆ. ಪ್ರತೀ ವರ್ಷ ನವೆಂಬರ್ ಮೂರನೇ ಭಾನುವಾರದಂದು ರಸ್ತೆ ಸಂಚಾರ ಸಂತ್ರಸ್ತರಿಗಾಗಿ (WDoR) ವಿಶ್ವ ಸ್ಮಾರಕ ದಿನವನ್ನು ಆಚರಿಸಲಾಗುತ್ತದೆ. “ವೇಗದ ದುಬಾರಿ ಬೆಲೆ: ಪುರುಷೋತ್ತಮ, ಗೀತಮ್ಮ ಮತ್ತು ಕುಟುಂಬದ ಕಥೆ” ಎಂಬ ಶೀರ್ಷಿಕೆಯ ಪ್ರಶಂಸಾ-ಶೈಲಿಯ ಅಭಿಯಾನದ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (KSRSA) ವೇಗದ ವಾಹನ ಚಾಲನೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಯೋಚಿಸಲು ಮತ್ತು ಚಾಲನೆ ಮಾಡುವಾಗ ವೇಗದ ಮಿತಿಗಳನ್ನು ಅನುಸರಿಸಲು ಜನರನ್ನು ಪ್ರೇರೇಪಿಸುತ್ತದೆ. ಅಕ್ಟೋಬರ್ 31, 2023 ರಂದು ಬಿಡುಗಡೆಯಾದ 2022ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ (MoRTH) ರಸ್ತೆ…

ದೊಡ್ಡಬಳ್ಳಾಪುರ ನಗರಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆಯಾಗಿದ್ದು, ಆದಿಲಕ್ಷ್ಮೀ ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಅಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು ವಿ ಎಸ್ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ರವಿಕುಮಾರ್ ಅವರನ್ನು ಜೆಡಿಎಸ್ ಮುಖಂಡರಾದ ಹೆಚ್. ಅಪ್ಪಯ್ಯಣ್ಣ, ಎ.ನರಸಿಂಹಯ್ಯ, ಹರೀಶ್ ಗೌಡ, ಕುಂಟನಹಳ್ಳಿ ಮಂಜುನಾಥ್, ಸದಸ್ಯರಾದ ಮಲ್ಲೇಶ್, ಆನಂದ್ ಮತ್ತಿತರರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ವಿ ಎಸ್ ರವಿಕುಮಾರ್ ಮಾತನಾಡಿ ನಗರ ಭಾಗದ ಅಭಿವೃದ್ಧಿಗಾಗಿ ಶ್ರಮಿಸುವ ಅವಕಾಶ ಕಲ್ಪಿಸಲಾಗಿದೆ ನಗರದ ಅಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರದೊಂದಿಗೆ ಶ್ರಮಿಸಲಾಗುವುದು ಎಂದರು. ಸಹಕಾರ ಕೊಟ್ಟಿರುವ ಪಕ್ಷದ ಮುಖಂಡರು ಹಾಗು ನಗರಸಭೆ ಸರ್ವ ಸದಸ್ಯರಿಗೂ ಅವರು ಕೃತಜ್ಞತೆ ಸಲ್ಲಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ ತೀರದಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

EXIT POLL: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಪಕ್ಷ ಸರಳ ಬಹುಮತ ಸಾಧ್ಯತೆ

ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೀಗ ಸೋಲು-ಗೆಲುವುಗಳ ಲೆಕ್ಕಾಚಾರ ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಮಿನಿ ಮಹಾಸಮರದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಹಿರಂಗವಾಗಿರುವ ಎಕ್ಸಿಟ್ ಪೋಲ್ ಸಮೀಕ್ಷೆಯು ತೀವ್ರ ಕುತೂಹಲ ಸೃಷ್ಟಿಸಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಪಕ್ಷ ಸರಳ ಬಹುಮತ ಪಡೆಯುವ ಸಾಧ್ಯತೆಯಿದೆ ಎಂದು ಬಹುತೇಕ ಮಾಧ್ಯಮಗಳ ಸಮೀಕ್ಷೆ ಹೇಳಿವೆ. 90 ಸದಸ್ಯಬಲದ ಛತ್ತೀಸ್‌ಗಢ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗಲಿದೆ ಎಂದು ಸಮೀಕ್ಷೆಗಳು ಸುಳಿವು ನೀಡಿದೆ.. ಎಬಿಪಿ ನ್ಯೂಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 36-48 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್‌ 41-53 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ದೈನಿಕ್‌ ಭಾಸ್ಕರ್‌ ಸಮೀಕ್ಷೆ ಪ್ರಕಾರ ಬಿಜೆಪಿ 35-45 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್‌ 46-55 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಇಂಡಿಯಾ ಟುಡೇ ಸಮೀಕ್ಷೆ ಪ್ರಕಾರ ಬಿಜೆಪಿ 36-46 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್‌ 40-50 ಸ್ಥಾನಗಳನ್ನು…

ಗುತ್ತಿಗೆದಾರ ಅಂಬಿಕಾಪತಿ ಸಾವಿನ ಪ್ರತಿಧ್ವನಿ; ಆ ಪ್ರಭಾವಿ ಸಚಿವರ ಬಗ್ಗೆ ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸಾವು ಬಗ್ಗೆ ಉನ್ನತಮಟ್ಟದ ತನಿಖೆಯ ಅಗತ್ಯವಿದೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು ಎಂದಿರುವ ಯತ್ನಾಳ್, ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ ಎಂದು ಬೊಟ್ಟು ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ. ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು. 2 — Basanagouda R Patil (Yatnal) (ಮೋದಿಯವರ ಕುಟುಂಬ) (@BasanagoudaBJP) November…

NEP ಜಟಾಪಟಿ: ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ಇಲ್ಲಿನ ರಾಜ್ಯ ಸರಕಾರದ ರಾಜಕೀಯಪ್ರೇರಿತ ನಿರ್ಧಾರದಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಕ್ರಮ ಮತ್ತು ಶಿಕ್ಷಣ ನೀತಿ ಪ್ರತ್ಯೇಕ. ಇದರ ಪರಿಜ್ಞಾನ ಇಲ್ಲಿನ ಸಿಎಂ, ಶಿಕ್ಷಣ ಸಚಿವರಿಗೆ ಇದೆಯೇ ಗೊತ್ತಿಲ್ಲ. ಕಲಿಯುವಿಕೆ ಮತ್ತು ಕಲಿಸುವುದು ಇದು ರಾಷ್ಟ್ರೀಯ ಶಿಕ್ಷಣ ನೀತಿ ಎಂದು ವಿವರಿಸಿದರು. ಹಳೆಯ ನೀತಿಯಲ್ಲಿ ಇದ್ದ ನ್ಯೂನತೆಗಳನ್ನು ಹೋಗಲಾಡಿಸಿ 34 ವರ್ಷಗಳ ಬಳಿಕ ಹೊಸ ನೀತಿ ತರಲಾಗಿದೆ. ಸಮಾನತೆ, ಗುಣಮಟ್ಟದ ಶಿಕ್ಷಣ ಕೊಡಬೇಕಿದೆ. ಇದಕ್ಕಾಗಿ 3ನೇ ರಾಷ್ಟ್ರೀಯ ಶಿಕ್ಷಣ ನೀತಿ ತರಲಾಗಿದೆ. ತಯಾರಿ, ಅಧ್ಯಯನ, ಚರ್ಚೆ ಇಲ್ಲದೆ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೊನೆಗೊಳಿಸುತ್ತೇವೆ ಎನ್ನುವ, 2024ರಿಂದ ರಾಜ್ಯ ಶಿಕ್ಷಣ…