ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಆನೇಕಲ್ ಬಳಿಯ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಕನ್ನಡ ಭಾಷಾ ಕೇಂದ್ರ, ಭಾಷೆ ಮತ್ತು ಸಾಹಿತ್ಯ ವಿಭಾಗ, ಕನ್ನಡ ಸಂಘ ಹಾಗೂ ವಿದ್ಯಾರ್ಥಿ ಬೆಂಬಲ ಸೇವಾ ವಿಭಾಗಗಳ ಸಂಯುಕ್ತಾಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು. ರಾಜ್ಯೋತ್ಸವ ಸಂಭ್ರಮದ ಅಂಗವಾಗಿ ಅಕ್ಟೋಬರ್ 27ರಿಂದ ನವೆಂಬರ್ 1ರವರೆಗೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿವರ್ಗದವರಿಗಾಗಿ ಸಾಂಸ್ಕೃತಿಕ ವೇಷಭೂಷಣ, ಆಶುಭಾಷಣ, ಭಾಷಣ, ಪ್ರಬಂಧ, ಕವನ ರಚನೆ, ನೃತ್ಯ, ಗಾಯನ, ರಂಗೋಲಿ, ರಸಪ್ರಶ್ನೆ ಹಾಗೂ ಕನ್ನಡೇತರರಿಗಾಗಿ ಕನ್ನಡ ಸಂಭಾಷಣಾ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳು ಹಮ್ಮಿಕೊಳ್ಳಲಾಯಿತು. ನವೆಂಬರ್ 3ರಂದು ಬೆಳಿಗ್ಗೆ 9 ಗಂಟೆಗೆ ವಿಶ್ವವಿದ್ಯಾಲಯದ ಆಲ್ ಫ್ರೆಸ್ಕೋ ಸಭಾಂಗಣದಲ್ಲಿ ವಿಶೇಷ ಸಮಾರಂಭ ಗಮನಸೆಳೆಯಿತು. ವಿಶ್ವವಿದ್ಯಾಲಯದ ಸಂಸ್ಥಾಪಕ ಸದಸ್ಯೆ ಶೈಲಾ ಜಿ. ಚೆಬ್ಬಿ ಅವರು ಕನ್ನಡಾಂಬೆಗೆ ಪುಷ್ಪನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕನ್ನಡ ನಾಡಗೀತೆ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಅಲ್ಲದೇ…
Category: ಬೆಂಗಳೂರು
ಕಾರ್ತಿಕ ಸೋಮವಾರ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಚಿವೆ ಶೋಭಾ ವಿಶೇಷ ಪೂಜೆ
ದೊಡ್ಡಬಳ್ಳಾಪುರ ಸಮೀಪದ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾರ್ತಿಕ ಸೋಮವಾರದಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶ್ರೀ ಕೃಷ್ಣದೇವರಾಯ ಮಹಾರಾಜರು ಹಂಪೆ ಅವರು ಭೇಟಿ ನೀಡಿ ಆಗಮಿಸಿದ್ದು ವಿಶೇಷ ಪೂಜೆ ಸಲ್ಲಿಸಿದರು. ಕಾರ್ತಿಕ ಸೋಮವಾರದಂದು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಭಾರೀ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇದೇ ವೇಳೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡಾ ವೇಗುಳಕ್ಕೆ ಭೇಟಿ ನೀಡಿ ಕೈಂಕರ್ಯದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶಾಸಕರು ಧೀರಜ್ ಮುನಿರಾಜು ಕೂಡಾ ಉಪಸ್ಥಿತರಿದ್ದರು. ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತರು ಪಿ ದಿನೇಶ್, ಮುಜರಾಯಿ ತಹಶೀಲ್ದಾರ್ ಜಿ.ಜೆ ಹೇಮಾವತಿ , ಪ್ರಧಾನ ಅರ್ಚಕ ಶ್ರೀನಿಧಿ ಶರ್ಮ ಸಹಿತ ದೇವಾಲಯದ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.
ಈ ದೇಶದ ಬಹುಸಂಖ್ಯಾತರು RSS ನ್ನು ಆಪ್ಪಿಕೊಂಡಿಲ್ಲ; ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕೆಲವು ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧ ಚರ್ಚೆಗೆ ಮುನ್ನುಡಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ RSS ನಾಯಕರಿಗೆ ಒದಗಿಸುವ ಭದ್ರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರೆಸ್ಸೆಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ.ಆರ್ಎಸ್ಎಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಒಂದು NGO ಮುಖ್ಯಸ್ಥರಿಗೆ ಅತಿ ಭದ್ರತೆಯ ಲಿಐಸನ್ ಪ್ರೊಟೊಕಾಲ್ ಸೆಕ್ಯೂರಿಟಿ… pic.twitter.com/aUJvaiDYjo — Priyank Kharge / ಪ್ರಿಯಾಂಕ್…
ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳು: ಎನ್ ಚಲುವರಾಯಸ್ವಾಮಿ
ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಬಡವರ ಜೀವನ ಸುಧಾರಣೆಗಾಗಿ ಜಾರಿಗೆ ತಂದಿದ್ದು ಇದು ರಾಹುಲ್ ಗಾಂಧಿಯವರ ಕನಸು ಆಗಿದೆ. ಮತ್ತು ಸಿದ್ದರಾಮಯ್ಯರವರ ಬಡವರ ಮೇಲಿನ ಕಾಳಜಿಯಿಂದ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿರುವುದು ಎಂದು ಹೇಳಿದರು. ಪಂಚ ಗ್ಯಾರಂಟಿಯಿಂದ ರಾಜ್ಯವು ಇತರೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಮಾತು ಸತ್ಯವಲ್ಲ. ಪಂಚ ಗ್ಯಾರಂಟಿ ಅನುಷ್ಠಾನವಾದ ನಂತರ ಸರ್ಕಾರ ಕೊರತೆ ಇಲ್ಲದ ರೀತಿಯಲ್ಲಿ…
ತಂತ್ರಜ್ಞಾನ ಮೂಲಕ ಅಕ್ರಮ ತಡೆಯಬೇಕು; ಪರೀಕ್ಷೆ ವೇಳೆ ಮೂಗುತಿ, ಕಿವಿಯೋಲೆ ಬಿಚ್ಚಿಸಿದ KEA ವಿರುದ್ಧ ಯತ್ನಾಳ್ ಆಕ್ರೋಶ
ಬೆಂಗಳೂರು: ಪರೀಕ್ಷೆಯಲ್ಲಿ ನಕಲು ತಡೆಯೋ ಭರದಲ್ಲಿ ಹೆಣ್ಣು ಮಕ್ಕಳ ಕಿವಿಯೋಲೆ, ಮೂಗುತಿಯನ್ನು ಬಿಚ್ಚಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ್ರಮ ಅತಾರ್ಕಿಕ, ಅಮಾನವೀಯ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಧಿಕಾರಿಗಳ ಕ್ರಮವು ಹಿಂದೂ ವಿರೋಧಿ ನಿಲುವಾಗಿದೆ ಎಂದು ಆರೋಪಿಸಿದ್ದಾರೆ. ಮೂಗುತಿ ಹಾಗೂ ಕಿವಿಯೋಲೆ ಬಿಚ್ಚಿಸಿವುದರಿಂದ ನಕಲು ತಡೆಯಬಹುದು ಎಂದು ಪರೀಕ್ಷಾ ಪ್ರಾಧಿಕಾರ ತಿಳಿದಿದ್ದರೆ, ಅದು ಮೂರ್ಖತನದ ಪರಮಾವಾಧಿಯಷ್ಟೇ ಎಂದವರು ಹೇಳಿದ್ದಾರೆ. ತಂತ್ರಜ್ಞಾನ, ಸಿ.ಸಿ. ಕ್ಯಾಮೆರಾ ಗಳನ್ನೂ ಉಪಯೋಗಿಸಿ ಪರೀಕ್ಷೆಯಲ್ಲಿ ನಕಲು, ಅಕ್ರಮ ಆಗದಂತೆ ನೋಡಿಕೊಳ್ಳಬೇಕೇ ಹೊರತು ಈ ರೀತಿಯಾದ ಅವೈಜ್ಞಾನಿಕ ಕ್ರಮಗಳಿಂದ ಸಾಧ್ಯವಿಲ್ಲ. ಅಷ್ಟಕ್ಕೂ, ಕಿವಿಯೋಲೆ ಹಾಗೂ ಮೂಗುತಿಯಲ್ಲಿ ಏನನ್ನು ಅಡಗಿಸಿಕೊಳ್ಳಬಹುದು ಎಂಬುದನ್ನು ಪ್ರಾಧಿಕಾರ ಸ್ಪಷ್ಟೀಕರಿಸಬೇಕು ಎಂದಿದ್ದಾರೆ. ಈ ರೀತಿಯಾದ ಅವೈಜ್ಞಾನಿಕ, ಅತಾರ್ಕಿಕ ನಿರ್ಧಾರಗಳನ್ನು ಪರೀಕ್ಷಾ ಪ್ರಾಧಿಕಾರ ಕೈಗೊಂಡರೆ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಯತ್ನಾಳ್ ನೀಡಿದ್ದಾರೆ. ಪರೀಕ್ಷೆಯಲ್ಲಿ ನಕಲು ತಡೆಯೋ ಭರದಲ್ಲಿ ಹೆಣ್ಣು ಮಕ್ಕಳ ಕಿವಿಯೋಲೆ,…
MES ಪುಂಡಾಟವನ್ನು ಮಟ್ಟಹಾಕಬೇಕು; ಜೆಡಿಎಸ್ ಆಗ್ರಹ
ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆಯೇ ದುಷ್ಕರ್ಮಿಗಳು ಐದು ಮಂದಿಗೆ ಚಾಕು ಇರಿದು ಅಟ್ಟಹಾಸ ಮೆರೆದಿರುವ ಘಟನೆಯನ್ನು ಪ್ರತಿಪಕ್ಷ ಜೆಡಿಎಸ್ ಖಂಡಿಸಿದೆ. ಭುವನೇಶ್ವರಿ ಮೂರ್ತಿ ಮೆರವಣಿಯಲ್ಲಿ ಯುವಕರು ನೃತ್ಯ ಮಾಡುತ್ತಿದ್ದ ವೇಳೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಮನಸ್ಸೋ ಇಚ್ಛೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಈ ದುರ್ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ ಎಂದು ಜೆಡಿಎಸ್ ಆರೋಪಿಸಿದೆ. ಕನ್ನಡ ರಾಜ್ಯೋತ್ಸವದ ಶುಭದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನಾಚರಣೆ ಮೆರವಣಿಗೆಗೆ ಕಾಂಗ್ರೆಸ್ ಸರ್ಕಾರ ಅವಕಾಶ ನೀಡಿದ್ದು, ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಕಾರ್ಯಕರ್ತರು ಕರಾಳ ದಿನ ಆಚರಿಸಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ನಾಡದ್ರೋಹಿಗಳ ಜೊತೆ ಸೆಲ್ಫಿ ತೆಗೆದುಕೊಂಡಿದ್ದು ದುಷ್ಕತ್ಯಕ್ಕೆ ಪ್ರೇರಣೆ ನೀಡಿದಂತಿದೆ ಎಂದು ಜೆಡಿಎಸ್ ತನ್ನ ‘X’ ಖಾತೆಯಲ್ಲಿ ಬರೆದುಕೊಂಡಿದೆ. ಬೆಳಗಾವಿಯಲ್ಲಿ ಸಂಭವಿಸಿರುವ ಈ ದುರ್ಘಟನೆಗಳಿಗೆ ರಾಜ್ಯ…
ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಡಿದ ಬಿಜೆಪಿ ನಾಯಕರ ವಿರುದ್ಧ ಹಕ್ಕುಚ್ಯುತಿ ದೂರು
ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಐವನ್ ಡಿಸೋಜಾ, ಯು.ಟಿ.ಖಾದರ್ ಅವರು ಶಾಸನ ಸಭೆಯ ಅತ್ಯನ್ನತ ಹುದ್ದೆಯಾಗಿರುವ ವಿಧಾನಸಭಾಧ್ಯಕ್ಷರಾಗಿದ್ದಾರೆ. ಆ ಸ್ಥಾನದಲ್ಲಿರುವವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಸಂದರ್ಭದಲ್ಲಿ ಶಾಸನಾತ್ಮಕ ಪ್ರಕ್ರಿಯೆಗಳನ್ನು ಅನುಸಬೇಕಾಗುತ್ತದೆ. ಅದನ್ನು ಹೊರತಾಗಿ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಹಾಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಹಾಲಿ ಸ್ಪೀಕರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿದರು. ಇದು ಸದನವನ್ನು ನಿಂದಿಸಿದ ಹಾಗೂ ಹಕ್ಕುಚ್ಯುತಿಯ ನಡೆಯಾಗಿರುವುದರಿಂದ ಅವರ ವಿರುದ್ದ ಹಕ್ಕುಚ್ಯುತಿ ದೂರನ್ನು ನೀಡಲಾಗುವುದು ಎಂದು ಐವನ್ ಡಿಸೋಜಾ ತಿಳಿಸಿದರು. ಯು.ಟಿ.ಖಾದರ್ ರವರು ವಿಧಾನಸಭಾ…
‘RamalingaReddyForCM’ ಅಭಿಯಾನ ಈ ಬಗ್ಗೆ ಸಾರಿಗೆ ಸಚಿವರ ಸ್ಪಷ್ಟನೆ
ಬೆಂಗಳೂರು: ಪ್ರ’ಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ’ ಎಂದು ಸಾರಿಗೆ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ‘RamalingaReddyForCM’ ಎಂದು ಪೋಸ್ಟ್’ಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟನೆ ನೀಡಿರುವ ರಾಮಲಿಂಗಾ ರೆಡ್ಡಿ, ‘ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ’ ಎಂದು ತಿಳಿಸಿದ್ದಾರೆ. ‘ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು’ ಎಂದವರು ಮನವಿ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಲು ಎಲ್ಲಾ ರೀತಿಯಿಂದಲೂ ತಾವು ಅರ್ಹರಿದ್ದೀರಿ, ನಿಮ್ಮ ಸ್ಥಾನಮಾನದ ವಿಚಾರವಾಗಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ತಪ್ಪೇನಿಲ್ಲ. — Umesh Gowda (@Umeshgowda6975) November 2, 2025 ‘ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ…
ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ
ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ನೆನಪಿಸಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಹೇಳಿದರು. . ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್…
ಸೋನಿಯಾ, ರಾಹುಲ್ ಒತ್ತಡಕ್ಕೆ ಮಣಿದು RSS ನಿಷೇಧಕ್ಕೆ ಖರ್ಗೆ ಆಗ್ರಹ; AICC ಅಧ್ಯಕ್ಷ ಖರ್ಗೆಗೆ ಶೋಭಾ ತರಾಟೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಿಷೇಧಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, “ಈ ಹೇಳಿಕೆ ಖರ್ಗೆ ಅವರದೇ ಅಲ್ಲ, ಅದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಒತ್ತಡದ ಫಲ” ಎಂದು ಟೀಕಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಖರ್ಗೆ ಅವರನ್ನು ಗೌರವಿಸುತ್ತೇನೆ. ಅವರು ರಾಷ್ಟ್ರ ಮಟ್ಟದ ಹಿರಿಯ ರಾಜಕಾರಣಿ. ಆದರೆ ಅವರ ಪಕ್ಷದಲ್ಲಿ ಒಂದು ಕುಟುಂಬದ ಪ್ರಭಾವದಿಂದ ಅವರು ಸ್ವತಂತ್ರವಾಗಿ ಯೋಚಿಸಲು ಸಾಧ್ಯವಾಗುತ್ತಿಲ್ಲ. ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಅವರು ಆರ್ಎಸ್ಎಸ್ ವಿರುದ್ಧ ಒಂದೇ ಸಲವೂ ಮಾತನಾಡಿಲ್ಲ” ಎಂದು ಹೇಳಿದರು. “ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಯವರಿಂದಲೂ ಆರ್ಎಸ್ಎಸ್ ನಿಷೇಧಿಸಲು ಸಾಧ್ಯವಾಗಲಿಲ್ಲ. ಹಾಗಿದ್ದಾಗ ನಿಮ್ಮಿಂದ ಅದು ಸಾಧ್ಯವೇ? ಏನು ಪ್ರಶ್ನಿಸಿದ ಶೋಭಾ, ಈ…
