ನವದೆಹಲಿ: ಕರುನಾಡು ಮಾತ್ರವಲ್ಲ ಎಲ್ಲೆಡೆ ಕನ್ನಡಿಗರು ರಾಜ್ಯೋತ್ಸವ ಸಡಗರದಲ್ಲಿ ಇದ್ದಾರೆ. ಎಲ್ಲೆಲ್ಲೂ ಕನ್ನಡಮ್ಮನ ಉತ್ಸವ ಸಾಗಿದೆ. ಗಣ್ಯಾತಿಗಣ್ಯರು ಶುಭಾಶಯ ಕೋರುತ್ತಿದ್ದಾರೆ. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಲ್ಲೇ ಕನ್ನಡಿಗರಿಗೆ ಶುಭ ಹಾರಿಸಿ ಗಮನಸೆಳೆದಿದ್ದಾರೆ. ‘ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿದ್ದಾರೆ. ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ,…
Category: ಬೆಂಗಳೂರು
ರಾಮನಗರ ಬಳಿ ರೆವ್ ಪಾರ್ಟಿ; ಪೋಲೀಸ್ ದಾಳಿ, 115 ಮಂದಿ ವಶಕ್ಕೆ
ರಾಮನಗರ: ವಾರಾಂತ್ಯದಲ್ಲಿ ಆಯೋಜಿತವಾಗಿದ್ದ ರೆವ್ ಪಾರ್ಟಿ ಮೇಲೆ ಪೊಲೀಸರು ಕ್ಷಿಪ್ರ ದಾಳಿ ಮಾಡಿ ಹಲವರನ್ನು ಬಂಧಿಸಿದ್ದಾರೆ. ರಾಮನಗರ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿದಾರು. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ರೆಸಾರ್ಟ್ನಲ್ಲಿ ರಾತ್ರಿ ರೇವ್ ಪಾರ್ಟಿ ನಡೆಯುತ್ತಿತ್ತು ಎನ್ನಲಾಗಿದೆ. ಪೊಲೀಸರು 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅವರಲ್ಲಿ 35 ಯುವತಿಯರು ಸೇರಿದ್ದಾರೆ. ಎನ್ನಲಾಗಿದೆ.
ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ; ಸಿಎಂ ಭರವಸೆ
ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗದ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ಸಿಪಿ /ಟಿಎಸ್ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ. ಪ್ರತಿಯೊಬ್ಬರಿಗೂ ನ್ಯಾಯ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸುತ್ತೇವೆ ಎಂದು ಆಶ್ವಾಸನೆ ನೀಡಿದರು. ಒಳಮೀಸಲಾತಿ ಕಲ್ಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಈಗ ಉಂಟಾಗಿರುವ…
ರಾಜ್ಯದ ವಿವಿಗಳಿಗೆ ಬಸವಣ್ಣ, ಕನಕದಾಸ, ಒಡೆಯರ್, ಅರಸು ನಾಮಕರಣಕ್ಕೆ ಸಿಎಂ ಸೂಚನೆ
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಿಗೆ ವಿಶ್ವಗುರು ಬಸವಣ್ಣ, ಕನಕದಾಸ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಡಿ.ದೇವರಾಜ ಅರಸು ಹೆಸರುಗಳನ್ನು ನಾಮಕರಣ ಮಾಡುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಆದಿಕವಿ ಮಹರ್ಷಿ ವಾಲ್ಮೀಕಿ, ಅಕ್ಕಮಹಾದೇವಿ, ರಾಣಿ ಚನ್ನಮ್ಮ, ಕೃಷ್ಣದೇವರಾಯ, ಕುವೆಂಪು, ವಿಶ್ವೇಶ್ವರಯ್ಯ, ಗಂಗೂಬಾಯಿ ಹಾನಗಲ್, ರಾಜೀವ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರುಗಳ ಗಳ ಹೆಸರುಗಳನ್ನು ಈಗಾಗಲೇ ನಾಮಕರಣ ಮಾಡಲಾಗಿದೆ. ಸಾಮಾಜಿಕ ನ್ಯಾಯದ ಹರಿಕಾರರೆಂದು ಹೆಸರಾಗಿರುವ ವಿಶ್ವಗುರು-ಸಾಂಸ್ಕೃತಿಕ ನಾಯಕ ಬಸವಣ್ಣನವರು, ಶೂದ್ರ ಸಿದ್ಧಾಂತದ ಹರಿಕಾರರಾದ ಕನಕದಾಸರು, ಹಿಂದುಳಿದ ಸಮುದಾಯಗಳಿಗೆ ಚೈತನ್ಯ ನೀಡಿದ ರಾಜ್ಯದ ಅಭಿವೃದ್ಧಿಗೆ ಚಲನಶೀಲತೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸು ಅವರ ಹೆಸರುಗಳನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡುವ ಅಗತ್ಯವಿದೆ ಎಂದವರು ಪ್ರತಿಪಾದಿಸಿದ್ದಾರೆ. ಈ ಕುರಿತು ಪರಿಶೀಲಿಸಿ, ಸೂಕ್ತ ಪ್ರಸ್ತಾವನೆಯನ್ನು ಮುಂದಿನ ಸಚಿವ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್; ಮಾರ್ಚ್ 19ರಂದು ತೆರೆಗೆ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು 2026ರ ಮಾರ್ಚ್ 19ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ ಎಂಬ ವದಂತಿಗಳಿಗೆ ತೆರೆ ಬೀಳಿಸಿದ್ದು, ಪ್ರಸಿದ್ಧ ಚಲನಚಿತ್ರ ವಿಶ್ಲೇಷಕ ತರಣ್ ಆದರ್ಶ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ನಿರ್ಮಾಪಕರೊಂದಿಗೆ ಮಾತನಾಡಿದ ನಂತರ “ಚಿತ್ರವು ನಿಗದಿತ ವೇಳಾಪಟ್ಟಿಯಂತೆ ಸಾಗುತ್ತಿದೆ” ಎಂದು ದೃಢಪಡಿಸಿದ್ದಾರೆ. ತರಣ್ ಆದರ್ಶ್ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದು, “ವದಂತಿಗಳನ್ನು ನಿಲ್ಲಿಸಿ! ಯಶ್ ಅವರ ಮುಂದಿನ ಚಿತ್ರ ‘ಟಾಕ್ಸಿಕ್’ ವಿಳಂಬವಾಗಿಲ್ಲ ಅಥವಾ ಮುಂದೂಡಲ್ಪಟ್ಟಿಲ್ಲ. ಬಿಡುಗಡೆ ದಿನಾಂಕ — ಮಾರ್ಚ್ 19, 2026 — ಸ್ಥಿರವಾಗಿದೆ. ಯುಗಾದಿ, ಗುಡಿ ಪಾಡ್ವಾ ಮತ್ತು ಈದ್ ಹಬ್ಬದ ವಾರಾಂತ್ಯಕ್ಕೆ ಇದು ಪರಿಪೂರ್ಣ ಸಮಯ. ಮುಂಬೈನಲ್ಲಿ ಯಶ್ ‘ರಾಮಾಯಣ’ ಚಿತ್ರೀಕರಣ ಮಾಡುತ್ತಿದ್ದ…
ಲಾಲ್ಬಾಗ್ ಉಳಿಸಲು ನವೆಂಬರ್ 2 ರಂದು ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್ಬಾಗ್ನಲ್ಲಿ ನವೆಂಬರ್ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್ಬಾಗ್ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು. ಲಾಲ್ಬಾಗ್ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯಡಿ ಇದೇ ನವೆಂಬರ್ 2 ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್ಬಾಗ್ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು. ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಎಲ್ಲ ಶಾಸಕರು ಸಭೆ ಸೇರಿ ಚರ್ಚೆ ಮಾಡುತ್ತೇವೆ. ಈ…
ಈ ಬಾರಿ 70 ಮಂದಿಗೆ ರಾಜ್ಯೋತ್ಸವ ಪುರಸ್ಕಾರ; ಗಣ್ಯರ ಪಟ್ಟಿ ಹೀಗಿದೆ
ಬೆಂಗಳೂರು: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಗೈದ 70 ಮಂದಿ ಗಣ್ಯರು ಈ ಬಾರಿಗೆ ಗೌರವಕ್ಕೆ ಭಾಜನರಾಗಿದ್ದಾರೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ಸಾಹಿತ್ಯ, ಸಂಗೀತ, ಜಾನಪದ, ವೈದ್ಯಕೀಯ, ಶಿಕ್ಷಣ, ಕ್ರೀಡೆ, ಮಾಧ್ಯಮ, ಸಮಾಜಸೇವೆ ಸೇರಿದಂತೆ ವಿವಿಧ ರಂಗಗಳಲ್ಲಿ ಈ ಎಲ್ಲರೂ ಸಲ್ಲಿಸಿದ ಅನನ್ಯ ಸೇವೆಯು ಇತರರಿಗೆ ಸ್ಪೂರ್ತಿಯಾಗಲಿ ಎಂದು ಶುಭ ಹಾರೈಸಿದ್ದಾರೆ. 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ನಾಡಿನ ಎಲ್ಲಾ ಗಣ್ಯ ಮಹನೀಯರಿಗೆ ಅಭಿನಂದನೆಗಳು. ಸಾಹಿತ್ಯ, ಸಂಗೀತ, ಜಾನಪದ, ವೈದ್ಯಕೀಯ, ಶಿಕ್ಷಣ, ಕ್ರೀಡೆ, ಮಾಧ್ಯಮ, ಸಮಾಜಸೇವೆ ಸೇರಿದಂತೆ ವಿವಿಧ ರಂಗಗಳಲ್ಲಿ ಈ ಎಲ್ಲರೂ ಸಲ್ಲಿಸಿದ ಅನನ್ಯ ಸೇವೆಯು ಇತರರಿಗೆ ಸ್ಪೂರ್ತಿಯಾಗಲಿ ಎಂದು ಹಾರೈಸುತ್ತೇನೆ. pic.twitter.com/yoM3YHF6rj — Siddaramaiah (@siddaramaiah) October 30, 2025
‘ಕಸ ಸುರಿಯುವ ಹಬ್ಬ’ ಬಗ್ಗೆ ಜನಾಕ್ರೋಶ; ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿರುದ್ಧ ಹಿಡಿಶಾಪ
ಬೆಂಗಳೂರು: ಒಂದಿಲ್ಲೊಂದು ವಿಚಾರಗಳಿಂದ ವಿವಾದದ ಕೇಂದ್ರಬಿಂದುವಾಗುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ಬೆಂಗಳೂರಿನ ಕಸ ಅವಾಂತರದಿಂದಾಗಿ ನಾಗರಿಕರ ಗುರಿಯಾಗಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಎಚ್ಚರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ಕೈಗೊಂಡಿರುವ “ಕಸ ಸುರಿಯುವ ಹಬ್ಬ” ನಾಗರಿಕರ ಸಹನೆಯನ್ನು ಕೆಡಿಸುವಂತಿದೆ. ಈ ಕುರಿತಂತೆ ಸಾರ್ವಜನಿಕ ವಲಯದದಲ್ಲಿ ಆಕ್ರೋಶ ಸ್ಫೋಟಗೊಂಡಿದೆ. Good work at BSWML Basavanagudi Constituency Bengaluru West city corporation (Zone:-2) 155 Hanumantha Nagar As per BSWML CEO sir direction “ಕಸ ಸುರಿಯುವ ಹಬ್ಬ conducted in the presence of ward Marshalls JHIs pks supervisor pks auto supervisor & local residents are involved pic.twitter.com/hP3TAvAs7i — Save BASAVANAGUDI Heritage (@SaveBasavangudi) October 30, 2025 ರಾಜಧಾನಿ ಬೆಂಗಳೂರಿನಲ್ಲಿ ಕೆಲವರು ಎಲ್ಲೆಂದರಲ್ಲಿ…
RSS ಪಥಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಓ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ಕೆಎಸ್ಎಟಿ ತಡೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಅಸ್ತಿತ್ವದಲ್ಲಿಲ್ಲದ ಕಾನೂನು ಅಸ್ತ್ರ ಪ್ರಯೋಗಿಸಲು ಪ್ರಯತ್ನಿಸುತ್ತಿರುವ ಸರ್ಕಾರಕ್ಕೆ ಮತ್ತೆ ಮತ್ತೆ ಮುಜುಗರದ ಸನ್ನಿವೇಶ ಎದುರಾಗುತ್ತಿದೆ. ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್ಎಟಿ (ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ) ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಪ್ರತಿಕ್ರಿಯಿಸಿದ್ದು, ‘ರಾಯಚೂರಿನ ಲಿಂಗಸೂಗೂರಿನಲ್ಲಿ ನಡೆದ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪಿಡಿಒ ಪ್ರವೀಣ್ಕುಮಾರ್ ಅವರನ್ನು ಅಮಾನತುಗೊಳಿಸಿರುವುದನ್ನು ನನ್ನ ಕಾನೂನು ಕಚೇರಿಯು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಮುಂದೆ ಪ್ರಶ್ನಿಸಿತ್ತು. ರಾಜಕೀಯ ಒತ್ತಡದಿಂದ ಯಾಂತ್ರಿಕವಾಗಿ ಜಾರಿಯಾಗಿದ್ದ ಅಮಾನತು ಆದೇಶಕ್ಕೆ ಕೆಎಸ್ಎಟಿ ತಡೆ ನೀಡಿದೆ’ ಎಂದು…
‘ಯಾವುದೇ ಜಾತಿಗಳಿಗೂ ರೋಸ್ಟರ್’ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು’: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಚರ್ಚೆ ನಡೆದಿದೆ. ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದವರು ತಿಳಿಸಿದರು. ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ…
