ಬೆಂಗಳೂರು: VB G-RAM-G ಯೋಜನೆ ಕುರಿತು ಕಾಂಗ್ರೆಸ್ ಪಕ್ಷವು ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಈ ಕುರಿತು ದಾಖಲೆಗಳೊಂದಿಗೆ ಬಹಿರಂಗ ಸಾರ್ವಜನಿಕ ಚರ್ಚೆಗೆ ಬರಲು ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಅವರು ಶನಿವಾರ ಸವಾಲು ಹಾಕಿದ್ದಾರೆ. MGNREGA ರದ್ದುಪಡಿಸಿ ಕೇಂದ್ರ ಸರ್ಕಾರ VB G-RAM-G ಜಾರಿಗೆ ತಂದಿದೆ ಎಂಬ ಆರೋಪವನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಡಿದ್ದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಪ್ರತಿಕ್ರಿಯೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸಚಿವರ ಆಹ್ವಾನಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಗತ್ಯವಿದ್ದರೆ ಚರ್ಚೆಯ ಜೊತೆಗೆ ದೊಡ್ಡ ಆಂದೋಲನಕ್ಕೂ ಸಿದ್ಧ ಎಂದು ಹೇಳಿದ್ದರು. ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ…
Category: ಬೆಂಗಳೂರು
ಮಲೆಯಾಳಿ ಭಾಷಾ ಮಸೂದೆಗೆ ಕರ್ನಾಟಕದ ಬಲವಾದ ಆಕ್ಷೇಪ
ಬೆಂಗಳೂರು: ಕೇರಳ ವಿಧಾನಸಭೆಯಲ್ಲಿ ಮಂಡನೆಯಾಗಿರುವ ಮಲೆಯಾಳಿ ಭಾಷಾ ಮಸೂದೆಯಿಂದ ಗಡಿಭಾಗದ ಜಿಲ್ಲೆಗಳಲ್ಲಿ, ವಿಶೇಷವಾಗಿ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲಾಗುವ ದುಷ್ಪರಿಣಾಮಗಳ ಕುರಿತು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು, ಮಸೂದೆಯ ಪುನರ್ ಪರಿಶೀಲನೆಗೆ ಒತ್ತಾಯಿಸಿದ್ದಾರೆ. ಪರಸ್ಪರ ಗೌರವ, ಒಕ್ಕೂಟ ವ್ಯವಸ್ಥೆಯೊಳಗಿನ ಸಹಕಾರ ಮತ್ತು ಸಾಂವಿಧಾನಿಕ ಜವಾಬ್ದಾರಿಯ ಭಾವನೆಯಿಂದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಮೌಲ್ಯಗಳು ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಸಂಬಂಧವನ್ನು ದೀರ್ಘಕಾಲದಿಂದ ಮಾರ್ಗದರ್ಶನ ಮಾಡುತ್ತಿದೆ. ಈ ಎರಡು ರಾಜ್ಯಗಳು ಕೇವಲ ಭೌಗೋಳಿಕವಾಗಿ ಮಾತ್ರವಲ್ಲ, ಆಳವಾದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಮಾನವೀಯ ಬಂಧಗಳಿಂದ ಬೆಸೆದುಕೊಂಡಿವೆ ಎಂದು ಸಿದ್ದರಾಮಯ್ಯ ಗಮನಸೆಳೆದಿದ್ದಾರೆ. ಈ ಸಂದರ್ಭದಲ್ಲಿ, ಪ್ರಸ್ತಾಪಿತ ಮಲಯಾಳಂ ಭಾಷಾ ಮಸೂದೆಯ ಬಗ್ಗೆ ನನಗಿರುವ ಗಂಭೀರ ಕಳವಳವನ್ನು ತಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಈ ಮಸೂದೆಯು ಕನ್ನಡ ಮಾಧ್ಯಮದ ಶಾಲೆಗಳಲ್ಲೂ, ವಿಶೇಷವಾಗಿ ಕಾಸರಗೋಡಿನಂತಹ…
ಹಾವೇರಿಯಲ್ಲಿ ಕ್ಯಾನ್ಸರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಘೋಷಣೆ
ಬೆಂಗಳೂರು: ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಗುರುತಿಸಲ್ಪಟ್ಟಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 71 ವೈದ್ಯಕೀಯ ಕಾಲೇಜುಗಳಿದ್ದು, ಅವುಗಳಲ್ಲಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಾಗಿವೆ ಎಂದು ಅವರು ಮಾಹಿತಿ ನೀಡಿದರು. ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ಗಳು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಯೋಜನೆ ಇದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯದ ಜನತೆಗೆ ಉನ್ನತ ಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿ ಒದಗಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಆರೋಗ್ಯ ಸೇವೆಗಳ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ…
‘ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕುರಿತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ನನಗೆ ಕುಮಾರಸ್ವಾಮಿಗಿಂತ ರಾಜಕೀಯದಲ್ಲಿ ಹೆಚ್ಚು ಅನುಭವವಿದೆ. ನಾನು ಮುಖ್ಯಮಂತ್ರಿಯಾಗಿರದಿರಬಹುದು, ಆದರೆ ಅವರಿಗಿಂತ ಉತ್ತಮ ಆಡಳಿತ ಅನುಭವ ನನಗಿದೆ” ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ನಾನು ಬಹಳ ಕಾಲದಿಂದ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಆಡಳಿತ ಎಂದರೇನು, ಹೇಗೆ ಕಾರ್ಯನಿರ್ವಹಿಸಬೇಕು, ಯಾರನ್ನು ಕರೆಯಬೇಕು, ಯಾರನ್ನು ಕರೆಯಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಕುಮಾರಸ್ವಾಮಿ ಅವರಿಂದ ನಾನು ಏನನ್ನೂ ಕಲಿಯಬೇಕೆಂದು ಬಯಸುವುದಿಲ್ಲ” ಎಂದು ಹೇಳಿದರು. ಪಕ್ಷದ ಜವಾಬ್ದಾರಿಗಳ ಕುರಿತು ಮಾತನಾಡಿದ ಅವರು, “ನಾನು ಕಾಂಗ್ರೆಸ್ಸಿಗನಾಗಿ ಪಕ್ಷಕ್ಕಾಗಿ ಕೆಲಸ ಮಾಡಬೇಕಿದೆ. ಈ ಹಿಂದೆ ಅಸ್ಸಾಂಗೆ ಹೋಗಿದ್ದೆ. ಎಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮತ್ತೆ ಅಸ್ಸಾಂಗೆ ಹೋಗುವಂತೆ ಸೂಚಿಸಲಾಗಿದೆ. ಆದ್ದರಿಂದ ಪಕ್ಷದ ಸೂಚನೆಯಂತೆ ಅಲ್ಲಿಗೆ ತೆರಳುತ್ತೇನೆ” ಎಂದು ಸ್ಪಷ್ಟಪಡಿಸಿದರು. #WATCH | Bengaluru:…
ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ; ಸಿದ್ದರಾಮಯ್ಯ ಆರೋಪ
ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ…
ಪಂಚಾಯಿತಿ ನೌಕರರಿಗೆ ಭವಿಷ್ಯ ನಿಧಿ ಸೌಲಭ್ಯ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸೌಲಭ್ಯವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಸಂಖ್ಯೆ ಗ್ರಾಅಪ 30 ಗ್ರಾಪಂಸಿ 2008, ದಿನಾಂಕ 31-10-2008ರ ಪ್ರಕಾರ, ರಾಜ್ಯದಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು 01-11-2008ರಿಂದ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ. ಆದರೆ ಈ ಆದೇಶದ ಅನುಷ್ಠಾನವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಾನವಾಗಿ ನಡೆದಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಉಡುಪಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾತ್ರ ಈ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಲಾಗಿದ್ದು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾಗಶಃ ಅನುಷ್ಠಾನಗೊಂಡಿರುವುದು ಕಂಡುಬಂದಿದೆ. ಇನ್ನು ರಾಜ್ಯದ ಉಳಿದ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಲ್ಲಿ ಈ ಸೌಲಭ್ಯವನ್ನು ಇನ್ನೂ ಜಾರಿಗೊಳಿಸಲಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ…
CSI ಪ್ರಕರಣದಲ್ಲಿ KGF ಪೊಲೀಸರು ಎಡವಿದರೇ? ಮುಖ್ಯ ಕಾರ್ಯದರ್ಶಿಗೆ ದೂರು
ಬೆಂಗಳೂರು: ದಕ್ಷಿಣ ಭಾರತದ ಪ್ರಭಾವಿ ಕ್ರೈಸ್ತ ಸಮುದಾಯವಾಗಿರುವ CSI-KCD ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. CSI ಬಿಷಪ್ ವಿರುದ್ದದ KGF ಬಿಷಪ್ ಕಾಟನ್ ಸ್ಕೂಲ್ ಗೋಲ್ಮಾಲ್ ಪ್ರಕರಣ ಬಗ್ಗೆ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂದು ಸಮುದಾಯದ ಪ್ರಮುಖರು ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಮುಖ್ಯಕಾರ್ಯದರ್ಶಿಗೆ ದೂರೊಂದು ಸಲ್ಲಿಕೆಯಾಗಿದೆ. ಪೊಲೀಸರ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ಅನುಕೂಲವಾಗುತ್ತಿದೆ ಎಂದಿರುವ ಒಂದು ಗುಂಪು ಇದೀಗ ಸಿಐಡಿ ತನಿಖೆಗೆ ಒತ್ತಾಯಿಸಿದೆ. CSI ಸದಸ್ಯ ಜೋಸೆಫ್ ಶಾಂತರಾಜ್ ಎಂಬವರು ಈ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆಗೆ ಬುಧವಾರ (07.01.2026) ದೂರು ಸಲ್ಲಿಸಿದ್ದು, ಒಟ್ಟಾರೆ ಬೆಳವಣಿಗೆಗಳಿಗೆ ರೋಚಕತೆ ಸಿಕ್ಕಿದೆ. KGFನಲ್ಲಿ ಬಿಷಪ್ ಕಾಟನ್ ಶಾಲೆ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಪ್ರಾಧಿಕಾರ (KUDA) ದಲ್ಲಿ ಕಾನೂನು ಬಾಹಿರವಾಗಿ ಖಾತಾ ಮತ್ತು ಇತರ ಅನುಮತಿ ಪಡೆಯಲು ಸರ್ಕಾರಿ ಕಂದಾಯ ಭೂಮಿ ನಕಲಿ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದು ಆರೋಪಿಸಿ ಸಂತ…
ಸರ್ಕಾರಿ ಶಾಲೆಗಳಲ್ಲಿನ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ: ಸರ್ಕಾರದ ಆದೇಶ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ನೇರ ನೇಮಕಾತಿ ಮತ್ತು ಮುಂಬಡ್ತಿ ಸಂಬಂಧಿಸಿದ ಬ್ಯಾಕ್ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ 1978ರಿಂದ 2003ರವರೆಗೆ ರಾಜ್ಯದ ನಾಲ್ಕು ವಿಭಾಗೀಯ ಕಚೇರಿಗಳ ಸಹ ನಿರ್ದೇಶಕರಿಗೆ ಹಾಗೂ 2003ರಿಂದ ಬಳಿಕ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಿಗೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ನೇರ ನೇಮಕಾತಿ ಹಾಗೂ ಮುಂಬಡ್ತಿ ವಿವರಗಳನ್ನು ಆಯೋಗಕ್ಕೆ ಸಲ್ಲಿಸುವಂತೆ ಸರ್ಕಾರ ಈ ಹಿಂದೆ ಸೂಚನೆ ನೀಡಿತ್ತು. ಆದರೆ ಶಿರಸಿ, ಉಡುಪಿ, ರಾಮನಗರ ಮತ್ತು ಬೀದರ್ ಶೈಕ್ಷಣಿಕ ಜಿಲ್ಲೆಗಳು ಮಾತ್ರ ಇದುವರೆಗೆ ಮಾಹಿತಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಉಳಿದ ಶೈಕ್ಷಣಿಕ ಜಿಲ್ಲೆಗಳು ಹಾಗೂ ನಾಲ್ಕು ವಿಭಾಗೀಯ ಕಚೇರಿಗಳಿಂದ ಇನ್ನೂ ಯಾವುದೇ ಮಾಹಿತಿ ಸಲ್ಲಿಕೆಯಾಗಿಲ್ಲ. ಈ ಕುರಿತಾಗಿ ಸುಮಾರು 10 ತಿಂಗಳು ಕಳೆದರೂ ಸ್ಪಂದನೆ…
ದೇವರಾಜ ಅರಸುಗಿಂತಲೂ ಹೆಚ್ಚಿನ ಅವಧಿಗೆ ಸಿಎಂ; ಅವಕಾಶ ನೀಡಿದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ
ಬೆಂಗಳೂರು: ಡಿ.ದೇವರಾಜ ಅರಸು ಅವರಿಗಿಂತಲೂ ಹೆಚ್ಚಿನ ಅವಧಿಗೆ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ರಾಜ್ಯದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. ‘ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ’ ಎಂದಿದ್ದಾರೆ. ‘ನನ್ನ ರಾಜಕೀಯ ಜೀವನಕ್ಕೆ ಹಲವು ಹಿರಿಯರ ಚಿಂತನೆ ಮತ್ತು ಸಾಧನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ದೇವರಾಜ ಅರಸು ಪ್ರಮುಖರು. ನಮ್ಮಿಬ್ಬರ ನಡುವಿನ ಸೈದ್ಧಾಂತಿಕ ಸಹಮತ ಮತ್ತು ನಾನು ಕೂಡಾ ಅವರಂತೆ ಮೈಸೂರಿನ ಮಣ್ಣಿನ ಮಗ…
ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್ ಸೂಚನೆ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಭರವಸೆ ಮೂಡಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಸಂಸದ ಡಾ.ಕೆ.ಸುಧಾಕರ್ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ,…
