ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಎಲ್ಲ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿರುವ ಬಿಜೆಪಿ, ಕೇಂದ್ರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಶನಿವಾರ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್. ಅಶೋಕ, ರಾಜ್ಯದಲ್ಲಿ ಸುಮಾರು 15–20 ಲಕ್ಷ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂಬ ಅಂದಾಜುಗಳಿದ್ದು, ಅವರನ್ನು ಗಡೀಪಾರು ಮಾಡುವ ಬದಲು ಕಾಂಗ್ರೆಸ್ ಸರ್ಕಾರವು “ಮತಬ್ಯಾಂಕ್ ಆಗಿ ವ್ಯವಸ್ಥಿತವಾಗಿ ಪೋಷಿಸುತ್ತಿದೆ” ಎಂದು ಆರೋಪಿಸಿದರು. ಅಕ್ರಮ ವಲಸಿಗರು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆ ಉಂಟುಮಾಡುತ್ತಿದ್ದಾರೆ; ಅವರ ವಿರುದ್ಧ ಕ್ರಮ ಕೈಗೊಳ್ಳುವಾಗಲೆಲ್ಲ ಕಾಂಗ್ರೆಸ್ ಮೃದು ಧೋರಣೆ ತಾಳುತ್ತಿದೆ ಎಂದರು. ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗರನ್ನು ಹೊರಗಿಡಲು ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ವ್ಯಾಯಾಮವನ್ನು ಉಲ್ಲೇಖಿಸಿದ ಅಶೋಕ, ಈ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ‘ಮತ ಕಳ್ಳತನ’ ಎಂಬ ನೆಪದಲ್ಲಿ…
Category: ಬೆಂಗಳೂರು
ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ
ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು. ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ”…
ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿ ಶೀಘ್ರ ಪೂರ್ಣ; ಡಿಕೆಶಿ ಭರವಸೆ
ಬೆಳಗಾವಿ: ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿಗಳನ್ನು ತಾಂತ್ರಿಕ ಸಾಧ್ಯತೆಗೆ ಅನುಗುಣವಾಗಿ ಮತ್ತು ಯೋಜನೆಗೆ ಅವಶ್ಯವಿರುವ ಅರಣ್ಯ ಭೂಮಿ ಪ್ರಸ್ತಾವನೆಗಳಿಗೆ ತೀರುವಳಿ ಪಡೆದು, ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಡಿ.ಕೆ.ಶಿವಕುಮಾರ್ ಉತ್ತರಿಸಿದರು. ವಾರಾಹಿ ಯೋಜನೆಯಡಿ ಮೂಲ ಯೋಜನೆಯ ಅಚ್ಚುಕಟ್ಟು ವಿಸ್ತ್ರೀರ್ಣದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಯೋಜನೆಯನ್ನು ಮಾರ್ಪಡಿಸಲಾಗಿದ್ದು, ₹569.53 ಕೋಟಿ ಅಂದಾಜು ಮೊತ್ತದ ಯೋಜನಾ ವರದಿಗೆ 20.03.2006ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು. ಈ ಯೋಜನೆಯು ಪಶ್ಚಿಮ ಘಟ್ಟದ ಕೆಳಭಾಗ ಮತ್ತು ಕರಾವಳಿ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರಪ್ರಥಮ ಬೃಹತ್ ನೀರಾವರಿ ಯೋಜನೆಯಾಗಿದ್ದು, ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಹಲವಾರು ತಾಂತ್ರಿಕ ಅಡಚಣೆಗಳು ಎದುರಾಗಿರುತ್ತವೆ. ಪ್ರಸ್ತಾಪಿತ ಯೋಜನೆಯ ಯೋಜಿತ ರೂಪುರೇಷೆಗೆ ಅನುಗುಣವಾಗಿ ಮತ್ತು ನಿಗದಿತ ನೀರಾವರಿ ಸಾಮರ್ಥ್ಯ ಕಲ್ಪಿಸುವಿಕೆಗೆ ಪೂರಕವಾಗಿ ಕಾಲಕಾಲಕ್ಕೆ,…
ಪಲ್ಸ್ ಪೋಲಿಯೊ ಕಾರ್ಯಕ್ರಮ; 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ
ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಪೋಲಿಯೊ ಹನಿ ವಿತರಣೆಗೆ 33,258 ಬೂತ್ಗಳನ್ನು ಗುರುತಿಸಲಾಗಿದೆ. 1,030 ಸಂಚಾರಿ ತಂಡಗಳು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. 2,096 ಟ್ರಾನ್ಸಿಟ್ ತಂಡಗಳನ್ನೂ ರಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ 1.13 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ. 7,322 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆ ಪಡೆದುಕೊಳ್ಳಬೇಕು. ಈ ಮೂಲಕ ಪೋಲಿಯೊ ವಿರುದ್ಧದ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಪೋಲಿಯೊ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ವದಂತಿಗಳಿಗೆ…
ಮುಡಾ ಪ್ರಕರಣ:; ಡಿಸೆಂಬರ್ 23 ತೀರ್ಪು ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ ಎಂದು ಕರ್ನಾಟಕ ಲೋಕಾಯುಕ್ತರು ಗುರುವಾರ ಶಾಸಕರು–ಸಂಸದರ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ತನಿಖೆ ಪೂರ್ಣಗೊಳಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. ಲೋಕಾಯುಕ್ತರ ಪರ ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್ಪಿಪಿ) ನ್ಯಾಯಾಲಯಕ್ಕೆ ಸ್ಥಿತಿಗತಿ ವರದಿ ಸಲ್ಲಿಸಿ, ಕೆಲ ಮಂಜೂರಾತಿ ಆದೇಶಗಳನ್ನು ಇನ್ನೂ ಪಡೆಯಬೇಕಿದ್ದು, ತನಿಖೆ ಮುಕ್ತಾಯದ ಹಂತದಲ್ಲಿದೆ ಎಂದು ತಿಳಿಸಿದರು. ಡಿಸೆಂಬರ್ 18ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿದ್ದನ್ನು ಸ್ಮರಿಸಿತು. ವಿಳಂಬವನ್ನು ಗಮನಿಸಿದ ನ್ಯಾಯಾಲಯ, ಮುಡಾ ಪ್ರಕರಣದ ವಿವಿಧ ಅಂಶಗಳನ್ನು ಪರಿಗಣಿಸಿ ತನಿಖೆ ಪೂರ್ಣಗೊಳಿಸುವಂತೆ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು ಎಂದು ದಾಖಲಿಸಿದೆ. ತನಿಖೆ ಪೂರ್ಣಗೊಳ್ಳದೆ, ಹೆಚ್ಚಿನ ತನಿಖೆಗೆ ಅನುಮತಿ ಕೋರಿ ತನಿಖಾಧಿಕಾರಿ ಮನವಿ ಸಲ್ಲಿಸಿದ್ದರಿಂದ, ಆರೋಪಿ ಸಂಖ್ಯೆ 1…
ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡಲು ತಾಂತ್ರಿಕ ತೊಂದರೆ
ಬೆಳಗಾವಿ: ರಾಜ್ಯದಲ್ಲಿ ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಉತ್ತರ ನೀಡಿದರು. ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗಪತ್ರ ಹಾಗೂ ದಾನಪತ್ರಗಳ ನೋಂದಣಿ ಸ್ಥಗಿತವಾಗಿರುವುದಿಲ್ಲ. ಆರ್ಟಿಸಿ, ಮೋಜಿಣಿ ನಕ್ಷೆ, ಇ ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್ಎಮ್ಎಸ್ ಖಾತಾ ಹೊಂದಿರುವ ಸ್ವತ್ತುಗಳ ವಿಭಾಗಪತ್ರ ಹಾಗೂ ದಾನಪತ್ರಗಳು ಎಂದಿನಂತೆ ನೋಂದಣಿ ಆಗುತ್ತಿವೆ ಎಂದು ತಿಳಿಸಿದರು. ಕಾವೇರಿ 2.0 ತಂತ್ರಾಂಶದಲ್ಲಿ 2024-25ನೇ ಸಾಲಿನಲ್ಲಿ 1,15,068 ವಿಭಾಗ ಪತ್ರಗಳು ಮತ್ತು 1,39,134 ದಾನಪತ್ರಗಳು ಅದೇ ರೀತಿ 2025-26ನೇ ಸಾಲಿನಲ್ಲಿ 79,515 ವಿಭಾಗ ಪತ್ರಗಳು ಹಾಗೂ 92,618 ದಾನಪತ್ರಗಳು…
‘ಗೃಹಲಕ್ಷ್ಮಿ’ ಕಂತು ವಿಳಂಬ: ಸಚಿವೆ ಹೆಬ್ಬಾಳ್ಕರ್–ಬಿಜೆಪಿ ನಡುವೆ ವಾಕ್ಸಮರ
ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಕಂತುಗಳ ವಿತರಣೆಯಲ್ಲಿ ಲೋಪವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನದಲ್ಲಿ ಒಪ್ಪಿಕೊಂಡರು. ಈ ವಿಷಯದಲ್ಲಿ ವಿರೋಧ ಪಕ್ಷಗಳು ತಮ್ಮನ್ನು ಗುರಿಯಾಗಿಸಿಕೊಂಡಿವೆ ಎಂದು ಆರೋಪಿಸಿದ ಅವರು, ತಾವು ಮಹಿಳೆಯಾಗಿರುವುದರಿಂದ ಪ್ರತ್ಯೇಕವಾಗಿ ಟೀಕಿಸಲಾಗುತ್ತಿದೆ ಎಂದು ಹೇಳಿದರು. ಈ ಹೇಳಿಕೆಗೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಫಲಾನುಭವಿಗಳಿಗೆ ತಲಾ 2,000 ರೂ.ಗಳ ಎರಡು ಕಂತುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸದನಕ್ಕೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಆರೋಪಿಸಿದ ಬಿಜೆಪಿ, ಸಚಿವೆ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ, ಸದನದ ಸದಸ್ಯರ ಭಾವನೆಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸಿದರು. ಆದರೆ ಇದು ಸದಸ್ಯರ ಭಾವನೆಗಳ ವಿಷಯವಲ್ಲ, ಫಲಾನುಭವಿಗಳಿಗೆ ಕ್ಷಮೆಯಾಚಿಸದಿರುವುದೇ ಪ್ರಶ್ನೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು. ನಂತರ ಸಚಿವೆ ಕ್ಷಮೆಯಾಚಿಸಿದರೂ,…
‘ನೀರಿದ್ದರೆ ನಾಳೆ’ ಯೋಜನೆಯ ಕರಪತ್ರ ಬಿಡುಗಡೆ
ಬೆಳಗಾವಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್ನಲ್ಲಿ ಬುಧವಾರ ರಾಜ್ಯದ ಕೆರೆ ಬಳಕೆದಾರರ ಸಂಘಗಳ ಪದಾಧಿಕಾರಿಗಳ ಕಾರ್ಯಾಗಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಯಾಗಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಕೆರೆ ಬಳಕೆದಾರರ ಸಂಘಗಳ ಕಾರ್ಯಾಗಾರದ ಕೈಪಿಡಿ ಹಾಗೂ ‘ನೀರಿದ್ದರೆ ನಾಳೆ’ ಯೋಜನೆಯ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ರಾಜ್ಯದಲ್ಲಿ ಸುಮಾರು 44 ಸಾವಿರ ಕೆರೆಗಳಿದ್ದು, ಅವುಗಳಲ್ಲಿ 20 ಸಾವಿರಕ್ಕೂ ಹೆಚ್ಚು ಕೆರೆಗಳು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೆರೆಗಳ ಸರ್ವೇ, ಒತ್ತುವರಿ ತೆರವು ಹಾಗೂ ಪುನಶ್ಚೇತನಕ್ಕೆ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ತಿಳಿಸಲಾಯಿತು. ಸಾಂಪ್ರದಾಯಿಕ ನೀರಿನ ಮೂಲಗಳಾದ ಕೆರೆಗಳ ಸಂರಕ್ಷಣೆ ಸರ್ಕಾರದ ಆದ್ಯತೆಯಾಗಬೇಕು. ಈ ಹಿನ್ನೆಲೆ ಕಾರ್ಯಾಗಾರದಲ್ಲಿ ಕೆರೆಗಳ ಜತನ, ಸದ್ಬಳಕೆ ಹಾಗೂ…
ಶಿಕ್ಷಣದ ಮೂಲಕ ಬದಲಾವಣೆ ತರಲು ನಮ್ಮ ಸರ್ಕಾರ ಬದ್ಧ; ಮಧು ಬಂಗಾರಪ್ಪ
ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಅಥವಾ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯ್ತಿ ಮಾಡಿ ಉಚಿತವಾಗಿ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಜೊತೆಗೆ ಉತ್ತಮ ಅಂಕಗಳನ್ನು ವೃದ್ಧಿಸಿಕೊಂಡು, ಪೂರ್ಣಾಂಕಗಳನ್ನು ಪಡೆದಿದ್ದಾರೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಮೂರು ಬಾರಿ ಪರೀಕ್ಷೆ’ ಎಂಬ ವಿನೂತನ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಮುಂದಿನ ಗುರಿಯೆಡೆಗೆ ಸಾಗುವಲ್ಲಿ ಯಶಸ್ವಿಯಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ ಎಂದಿರುವ ಸಚಿವ ಮಧು ಬಂಗಾರಪ್ಪ, ಶಿಕ್ಷಣದ ಮೂಲಕ ಬದಲಾವಣೆ ತರಲು ನಮ್ಮ ಸರ್ಕಾರ ಬದ್ಧ ಎಂದಿದ್ದಾರೆ.
ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್
ನವದೆಹಲಿ: ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು , ಮತ ಕಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದರು. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು ಎಂದು ತಿಳಿಸಿದರು. ಜಿ.ಸಿ.ಚಂದ್ರಶೇಖರ್ ಅವರು ಬಿಎಲ್ ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ. ದೆಹಲಿಯಲ್ಲಿನ ಪ್ರತಿಭಟನೆಯಲ್ಲಿ ಜನರಲ್ಲಿ ಇದ್ದ ಉತ್ಸಾಹ 2028 ಹಾಗೂ 2029ರ ಚುನಾವಣೆಗೆ ನಾಂದಿಯಾಡಿದೆ.…
