‘ನಿಮ್ಮಷ್ಟು ಪೂರ್ವಾಗ್ರಹಪೀಡಿತ ವ್ಯಕ್ತಿಯನ್ನು ನಾನು ನೋಡಿಲ್ಲ’ ರೆಹಮಾನ್ ಬಗ್ಗೆ ಕಂಗನಾ

ಮುಂಬೈ: ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರ ‘ಕೋಮುವಾದಿ’ ಹೇಳಿಕೆ ವಿವಾದದ ನಡುವೆ, ನಟಿ ಹಾಗೂ ನಿರ್ದೇಶಕಿ ಕಂಗನಾ ರನೌತ್ ತಮ್ಮ ನಿರ್ದೇಶನದ ಎಮರ್ಜೆನ್ಸಿ ಚಿತ್ರದ ಸಂದರ್ಭದಲ್ಲಿನ ‘ಅಹಿತಕರ ಅನುಭವ’ವನ್ನು ನೆನಪಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಪೋಸ್ಟ್ ಮಾಡಿರುವ ಕಂಗನಾ, ಚಿತ್ರಕ್ಕಾಗಿ ರೆಹಮಾನ್ ಅವರನ್ನು ಭೇಟಿಯಾಗಿ ಕಥಾನಕವನ್ನು ವಿವರಿಸಲು ತಾವು ಉತ್ಸುಕರಾಗಿದ್ದೆವು. ಆದರೆ, ಅವರು ಪ್ರಚಾರ ಚಿತ್ರದ ಭಾಗವಾಗಲು ಇಚ್ಛಿಸಿಲ್ಲ ಎಂದು ಹೇಳಿಕೊಂಡು ಭೇಟಿಗೂ ನಿರಾಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ರಾಜಕೀಯ ನಿಲುವಿನ ಕಾರಣಕ್ಕೆ ಚಿತ್ರರಂಗದಲ್ಲಿ ಪೂರ್ವಾಗ್ರಹ ಮತ್ತು ಪಕ್ಷಪಾತವನ್ನು ಎದುರಿಸಬೇಕಾಗುತ್ತಿದೆ ಎಂದು ಕಂಗನಾ ದೂರಿದ್ದಾರೆ. “ನಾನು ಕೇಸರಿ ಪಕ್ಷವನ್ನು ಬೆಂಬಲಿಸುವುದರಿಂದ ನನಗೆ ಚಿತ್ರರಂಗದಲ್ಲಿ ಪಕ್ಷಪಾತ ಎದುರಾಗುತ್ತಿದೆ. ಆದರೆ ನಿಮ್ಮಷ್ಟು ಪೂರ್ವಾಗ್ರಹಪೀಡಿತ ಮತ್ತು ದ್ವೇಷಪೂರಿತ ವ್ಯಕ್ತಿಯನ್ನು ನಾನು ನೋಡಿಲ್ಲ. ಎಮರ್ಜೆನ್ಸಿ ಬಗ್ಗೆ ನಿಮಗೆ ಹೇಳಲು ಬಯಸಿದ್ದೆ, ಆದರೆ ನೀವು ಭೇಟಿಗೂ ನಿರಾಕರಿಸಿದ್ದೀರಿ” ಎಂದು ಕಂಗನಾ…

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರಾದ 2026-28ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ.ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ. ಮುಖ್ಯ ಚುನಾವಣೆ ಅಧಿಕಾರಿಗಳು ಸಂಜೀವ್ ಸಹಾಯಕ ಚುನಾವಣೆ ಅಧಿಕಾರಿ ಶ್ರೀನಿವಾಸ್ ರವರು ಪ್ರಮಾಣಪತ್ರ ನೀಡಿದರು. ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ. ನಂದಿಯಾಳ್ ಎಸ್ ಜೆ. ಬಾಮ ಗಿರೀಶ್. ಆರ್ ಎಸ್ ಗೌಡ್ರು. ರಮೇಶ್ ಯಾದವ್ ರವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಂ.ಜಿ.ರಾಮಮೂರ್ತಿರವರು ಮಾತನಾಡಿ ಕನ್ನಡ ಚಲನಚಿತ್ರ ಮೇರುನಟ ಡಾ||ರಾಜ್ ಕುಮಾರ್ ರವರು ನಿರ್ಮಾಪಕರನ್ನ ಅನ್ನದಾತರು ಎಂದು ಕರೆಯುತ್ತಿದ್ದಾರೆ. ನಿರ್ಮಾಪಕ ಉಳಿದರೆ ಕನ್ನಡ ಚಿತ್ರರಂಗ ಉಳಿಯುತ್ತದೆ. ನಿರ್ಮಾಪಕ ಹಾಕಿದ ಹಣ ವಾಪಸ್ಸು ಬರಬೇಕು. ಕೆಲವು ನಿರ್ಮಾಪಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇದ್ದಾರೆ ಅವರನ್ನ ಗುರುತಿಸಿ ನಿರ್ಮಾಪಕರ ಸಂಘದಿಂದ ಆರ್ಥಿಕವಾಗಿ ಸಹಾಯ ಮಾಡಬೇಕು ಎಂಬ ಉದ್ದೇಶವಿದೆ ಎಂದರು. ಕನ್ನಡ ಚಲನಚಿತ್ರ ಅನ್ಯ ಭಾಷೆಗಳ ನಡುವೆ ಪೈಪೋಟಿ ಇದೆ, ಕನ್ನಡ ಚಿತ್ರಗಳಿಗೆ ಜನರು ಚಿತ್ರಮಂದಿರಕ್ಕೆ ಬಂದು ನೋಡಿ, ನಿರ್ಮಾಪಕ, ನಿರ್ದೇಶಕ ಮತ್ತು…

‘ಭೂತ್ ಬಾಂಗ್ಲಾ’; ಹಾಸ್ಯ ಮತ್ತು ಭಯದ ಸಮತೋಲನದ ಮನರಂಜನೆ

ಮುಂಬೈ: ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಹಾರರ್–ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಮೇ 15, 2026ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಪ್ರಕಟಿಸಿದ್ದಾರೆ. ಈ ಚಿತ್ರದ ವಿಶೇಷತೆ ಎಂದರೆ, 14 ವರ್ಷಗಳ ನಂತರ ನಿರ್ದೇಶಕ ಪ್ರಿಯದರ್ಶನ್ ಮತ್ತು ನಟ ಅಕ್ಷಯ್ ಕುಮಾರ್ ಮತ್ತೆ ಒಂದಾಗಿರುವುದು. ಹಾರರ್–ಹಾಸ್ಯ ಪ್ರಕಾರದಲ್ಲಿ ತಮ್ಮದೇ ಶೈಲಿಯಿಂದ ಗುರುತಿಸಿಕೊಂಡಿರುವ ಈ ಜೋಡಿ, ಮತ್ತೊಮ್ಮೆ ಹಾಸ್ಯ ಮತ್ತು ಭಯದ ಸಮತೋಲನದ ಮನರಂಜನೆ ನೀಡಲು ಸಜ್ಜಾಗಿದೆ. ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ನಿರ್ಮಾಪಕರು, “ಬಂಗಲೆ ಸೆ ಏಕ್ ಖಬರ್ ಆಯಿ ಹೈ! 2026 ಮೇ 15ರಂದು ಚಿತ್ರಮಂದಿರಗಳ ಬಾಗಿಲು ತೆರೆಯಲಿದೆ” ಎಂದು ಬರೆದು ಬಿಡುಗಡೆ ದಿನಾಂಕ ಘೋಷಿಸಿದರು. ಚಿತ್ರದಲ್ಲಿ ಟಬು, ಪರೇಶ್ ರಾವಲ್, ರಾಜ್‌ಪಾಲ್ ಯಾದವ್, ಜಿಶು ಸೇನ್‌ಗುಪ್ತಾ, ಅಸ್ರಾನಿ ಹಾಗೂ ವಾಮಿಕಾ ಗಬ್ಬಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ…

ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

ಹಾಸನ: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರ ಸುದ್ದಿಯಲ್ಲಿರುವ ನಡುವೆಯೇ, ಅವರ ತಾಯಿ ಪುಷ್ಪಾ ವಿರುದ್ಧ ಭೂ ವಿವಾದಕ್ಕೆ ಸಂಬಂಧಿಸಿದ ಬೆಳವಣಿಗೆ ಸುದ್ದಿಯ ಕೇಂದ್ರಬಿಂದುವಾಗಿದೆ. ಹಾಸನದ ವಿದ್ಯಾನಗರದಲ್ಲಿ ಭಾನುವಾರ ಬೆಳಗಿನ ಜಾವ ಜೆಸಿಬಿ ಬಳಸಿ ಕಾಂಪೌಂಡ್ ತೆರವುಗೊಳಿಸಲಾಗಿದೆ. ವಿದ್ಯಾನಗರದಲ್ಲಿರುವ ಲಕ್ಷ್ಮಮ್ಮ ಎಂಬುವರಿಗೆ ಸೇರಿದ್ದ ಜಾಗಕ್ಕೆ ಯಶ್ ಅವರ ತಾಯಿ ಪುಷ್ಪಾ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲಕ್ಷ್ಮಮ್ಮ ಅವರ ಸಂಬಂಧಿ ದೇವರಾಜ್ ಈ ವಿಚಾರವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣದಲ್ಲಿ ನ್ಯಾಯಾಲಯವು ದೇವರಾಜ್ ಪರವಾಗಿ ಆದೇಶ ನೀಡಿದೆ ಎನ್ನಲಾಗಿದೆ. ಭಾನುವಾರ ಬೆಳಗ್ಗೆ ಜೆಸಿಬಿ ಮೂಲಕ ಕಾಂಪೌಂಡ್ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಟ Yash ತಾಯಿ ವಿರುದ್ಧ ಭೂಒತ್ತುವರಿ ಆರೋಪ.. ಯಶ್ ತಾಯಿ ವಿರುದ್ಧ ಜಿಪಿಎ ಹೋಲ್ಡರ್ ದೇವರಾಜು ಕಿಡಿ | #TV9D #TV9Kannada #Yashmother #Yash #Yashmotherpushpa…

‘ಶ್ರೀಮತಿ ದೇಶಪಾಂಡೆ’ ಯಾಗಿ ‘ಧಕ್ ಧಕ್’ ಹುಡುಗಿ ಮಾಧುರಿ ದೀಕ್ಷಿತ್

ಮುಂಬೈ: ಬಾಲಿವುಡ್‌ನ ‘ಧಕ್ ಧಕ್’ ಹುಡುಗಿ ಮಾಧುರಿ ದೀಕ್ಷಿತ್ ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಚಿತ್ರಗಳು ಮತ್ತು ಸರಣಿಗಳಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಬಹುಕಾಲದ ಬಳಿಕ ಅವರು ಬಹು ನಿರೀಕ್ಷಿತ ಥ್ರಿಲ್ಲರ್ ಚಿತ್ರ ‘ಶ್ರೀಮತಿ ದೇಶಪಾಂಡೆ’ ಮೂಲಕ ತೆರೆಗೆ ಮರಳುತ್ತಿದ್ದಾರೆ. ಐಎಎನ್‌ಎಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಮಾಧುರಿ, ತಾನು ಯಾವುದೇ ಯೋಜನೆಯನ್ನು ಆಯ್ಕೆ ಮಾಡುವಲ್ಲಿ ಬಹಳ ಆಯ್ಕೆಶೀಲವಾಗಿದ್ದೇನೆ ಎಂದು ಹೇಳಿದ್ದಾರೆ. “ನನಗೆ ನಿಜವಾಗಿಯೂ ಉತ್ಸಾಹ ಹುಟ್ಟಿಸುವ ಪಾತ್ರಗಳನ್ನು ಮಾತ್ರ ಮಾಡಲು ಇಚ್ಛಿಸುತ್ತೇನೆ. ಪ್ರತಿದಿನ ಬೆಳಿಗ್ಗೆ ಎದ್ದು ‘ಈ ಚಿತ್ರ ಅಥವಾ ಸರಣಿಯಲ್ಲಿ ಕೆಲಸ ಮಾಡಲು ಹೋಗುತ್ತಿದ್ದೇನೆ’ ಎಂದು ಖುಷಿಪಡುವಂತಹ ಪಾತ್ರಗಳೇ ನನಗೆ ಬೇಕು,” ಎಂದು ಅವರು ಹೇಳಿದರು. Watch: In an exclusive interview, renowned Bollywood actress Madhuri Dixit reflects on her nearly 40 year journey in the film industry.…

ತೆಲುಗಿನಲ್ಲಿ ಸಮಂತಾ ಜೊತೆ ಕೆಲಸ ಮಾಡುವ ಕಾಂತಾರ ನಟನ ಕನಸು ನನಸು!

ಮುಂಬೈ: ಕನ್ನಡದ ಕಾಂತಾರ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ, ಬಳಿಕ ಆರ್.ಮಾಧವನ್ ಜೊತೆ ತಮಿಳು ವೆಬ್‌ಸೀರಿಸ್ ಲೆಗಸಿಗೆ ಸಜ್ಜಾಗಿರುವ ನಟ ಗುಲ್ಶನ್ ದೇವಯ್ಯ ಈಗ ತೆಲುಗು ಚಿತ್ರರಂಗಕ್ಕೂ ಕಾಲಿಡುತ್ತಿದ್ದಾರೆ. ಸಮಂತಾ ರುತ್‌ ಪ್ರಭು ಅಭಿನಯದ ಮಾ ಇಂತಿ ಬಂಗಾರಂ ಅವರ ಮೊದಲ ತೆಲುಗು ಚಿತ್ರ. ತ್ರಲಾಲಾ ಮೂವಿಂಗ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಪಾತ್ರವಹಿಸಿರುವುದಕ್ಕೆ ದೇವಯ್ಯ ಆನಂದ ವ್ಯಕ್ತಪಡಿಸಿದ್ದಾರೆ. “ಸಮಂತಾ ಜೊತೆ ಕೆಲಸ ಮಾಡುವ ಆಸೆ ನನಗಿನ್ನೂ ಹಲವು ವರ್ಷಗಳಿಂದಿತ್ತು. ಇದರೀಗ ಸರಿಯಾದ ಸಮಯದಲ್ಲಿ ನನಗೆ ಒದಗಿದೆ,” ಎಂದು ಅವರು ಮಾಧ್ಯಮ ಸಂದರ್ಶನದಲ್ಲಿ ಹೇಳಿದರು. ಚಿತ್ರದ ಮುಹೂರ್ತ ವಿಧಿ ಇತ್ತೀಚೆಗೆ ನೆರವೇರಿತು. ಗುಲ್ಶನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಮುಹೂರ್ತ ಹಾಗೂ ಘೋಷಣೆ ವಿಡಿಯೊ ಹಂಚಿಕೊಂಡಿದ್ದು, ತೆಲುಗು ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿದೆ. “MIBಯಲ್ಲಿನ ನನ್ನ ಪಾತ್ರಕ್ಕಾಗಿ ತೀವ್ರವಾಗಿ ತಯಾರಿ ನಡೆಸುತ್ತಿದ್ದೇನೆ. ಈಗಲೇ ಹೆಚ್ಚಿನ ವಿವರ…

ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

ಬೆಂಗಳೂರು: ಕನ್ನಡ ಚಿತ್ರದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರವು ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ಸಂವೇದನಾಶೀಲ ಅಭಿಮಾನಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಅವರ ಸಂಗಾತಿ ಪವಿತ್ರಾ ಗೌಡ ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲೇ ಬಂಧನದಲ್ಲಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲು, ನಿರ್ದೇಶಕ ಪ್ರಕಾಶ್ ವೀರ್ ಹಾಗೂ ಚಿತ್ರದ ತಂಡ ಮಂಗಳವಾರ ನಗರದೊಳಗೆ ಪತ್ರಿಕಾಗೋಷ್ಠಿ ನಡೆಸಿತು. ದರ್ಶನ್ ಜಾಮೀನಿನ ಮೇಲೆ ಹೊರಬಂದಿದ್ದ ಅವಧಿಯಲ್ಲಿ ಚಿತ್ರೀಕರಣ ಹಾಗೂ ಡಬ್ಬಿಂಗ್ ಕಾರ್ಯಗಳನ್ನು ಪೂರ್ಣಗೊಳಿಸಿದ್ದರು ಎಂದು ನಿರ್ದೇಶಕ ತಿಳಿಸಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಕಾಶ್ ವೀರ್, “ಚಿತ್ರದ ಶೀರ್ಷಿಕೆಗೆ ಕಥೆಯೇ ಆಧಾರ. ದರ್ಶನ್ ಶೇ.100 ವೃತ್ತಿಪರರು. ಜೈಲಿನಿಂದ ಹೊರಬಂದು ಚಿತ್ರೀಕರಣಕ್ಕೆ ಬಂದಾಗಲೂ ಅವರ ಅಭಿನಯದಲ್ಲಿ ಯಾವುದೇ ಅಸಮಾನ್ಯತೆ ಕಾಣಿಸಲಿಲ್ಲ” ಎಂದರು. ‘ದರ್ಶನ್ ಬಿಡುಗಡೆಯಾಗುತ್ತಾರೆ ಎಂಬ ನಿರೀಕ್ಷೆಯಲ್ಲಿ ನಾವು ಹಲವು ಬಾರಿ ಕಾರ್ಯಕ್ರಮವನ್ನು ಮುಂದೂಡಿದ್ದೇವೆ. ಆದರೆ, ದುರದೃಷ್ಟವಶಾತ್ ಅವರು ಇಂದು…

‘ಜೈಲರ್ 2’; ರಜನೀಕಾಂತ್ ಮೋಹಲ್ ನಾಲ್..

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರೀಕರಣ ಡಿಸೆಂಬರ್‌ನಲ್ಲಿ ಮಹತ್ತರ ಹಂತ ಪ್ರವೇಶಿಸಲಿದೆ. ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಚಿತ್ರ ತಂಡಕ್ಕೆ ಸೇರಲಿದ್ದಾರೆ ಎಂಬ ಸುದ್ದಿ ಉದ್ಯಮ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಮೂಲಗಳ ಪ್ರಕಾರ, ಡಿಸೆಂಬರ್ 2ರ ಸುಮ್ಮಾರಿಗೆ ಮೋಹನ್ ಲಾಲ್ ಕೆಲ ದಿನಗಳ ಕಾಲ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಅವರು ಮಲಯಾಳಂ ಚಿತ್ರಗಳ ಚಿತ್ರೀಕರಣಕ್ಕಾಗಿ ಮರಳಿದ್ದು, ಡಿಸೆಂಬರ್ 21 ರಿಂದ 24ರ ನಡುವೆ ಮತ್ತೆ ‘ಜೈಲರ್ 2’ ತಂಡಕ್ಕೆ ಸೇರುವ ಸಾಧ್ಯತೆ ಇದೆ. ದಿನಾಂಕ ಬಗ್ಗೆ ಅಧಿಕೃತ ಘೋಷಣೆ ಇನ್ನೂ ಬಂದಿಲ್ಲ. ಈ ನಡುವೆ, ಗೋವಾದಲ್ಲಿ ವಿಜಯ್ ಸೇತುಪತಿ ಅವರ ಭಾಗಗಳ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಅವರ ತಾರಾಗಣ ಸೇರ್ಪಡೆ ಬಗ್ಗೆ ಅಧಿಕೃತ ದೃಢೀಕರಣವಿಲ್ಲ. ಇದೇ ವೇಳೆ, ಈ ವರ್ಷದ ಆರಂಭದಲ್ಲಿ ರಜನಿಕಾಂತ್ ಸ್ವತಃ ‘ಜೈಲರ್ 2’ ಕೆಲಸ…

ಹಿರಿಯ ಹಾಸ್ಯ ನಟ ಎಂ.ಎಸ್.ಉಮೇಶ್ ವಿಧಿವಶ

ಬೆಂಗಳೂರು: ಹಿರಿಯ ಚಲನಚಿತ್ರ ನಟ ಎಂ.ಎಸ್.ಉಮೇಶ್ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ಸಮಯದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರಿನಲ್ಲಿ 1945ರ ಏಪ್ರಿಲ್ 22ರಂದು ಜನಿಸಿದ್ದ ಉಮೇಶ್ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿದ್ದರು. ಬಹುತೇಕ ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಉಮೇಶ್ ವಿಧಿವಶರಾಗಿದ್ದು, ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ ಚಿತ್ರೀಕರಣ ಆರಂಭ

ಸಿಂದಿಗೇರಿ: ಕುರುಗೋಡು ತಾಲೂಕಿನ ಸಿಂದಿಗೇರಿ ಗ್ರಾಮದಲ್ಲಿ ದಾತ್ರಿ ರಂಗಸಂಸ್ಥೆ ಸಿರಿಗೇರಿ ವತಿಯಿಂದ ಆಯೋಜಿಸಿದ್ದ ಕಲಾ ತಂಡದಿಂದ ಶರಣ ಹರಳಯ್ಯ ಜೀವನ ಆಧಾರಿತ ನಾಟಕ ಪ್ರದರ್ಶನ, ಸಿಂದಿಗೇರಿ ಗ್ರಾಮದ ವಿದ್ಯಾರ್ಥಿನಿಯರಿಂದ ನೃತ್ಯ ಪ್ರದರ್ಶನದೊಂದಿಗೆ ಶ್ರೀ ಶಿವಶರಣ ಮಲ್ಲಪ್ಪತಾತನವರ ಚಲನಚಿತ್ರ ಉದ್ಘಾಟನೆ ಗಮನಸೆಳೆಯಿತು. ಸಿಂದಿಗೇರಿ ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಜೀವನದಲ್ಲಿ ಅಚ್ಚಳಿಯದ ಗುರುತು ಬರೆದಿದ್ದ, ಗುಳ್ಯo ಶ್ರೀ ಶಿವಶರಣ ಗಾದಿಲಿಂಗಪ್ಪ ತಾತ ನವರ ಪರಮ ಶಿಷ್ಯರಾದ ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತನವರ ಮಹಿಮೆಯನ್ನು ಚಿತ್ರಿಸುವ ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತನವರ ಚರಿತ್ರೆ ಸಿಂದಿಗೇರಿ, ಬೈಲೂರು ಎಂಬ ಚಲನಚಿತ್ರದ ಚಿತ್ರಿಕರಣ ಉದ್ಘಾಟನಾ ಕಾರ್ಯಕ್ರಮದ ವೇಳೆ ಸಿಂದಿಗೇರಿ, ಬೈಲೂರು ಗ್ರಾಮಸ್ಥರು ಹಾಗೂ ಸರ್ವ ಭಕ್ತ ವೃಂದ ಸಹಾಯ, ಸಹಕಾರದಿಂದ ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಭಕ್ತರು, ಗಣ್ಯರು ಭಾಗವಹಿಸಿದರು. ಪೂಜಾ ವಿಧಿ, ದೀಪಪ್ರಜ್ವಲನ ಮತ್ತು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ನಂತರ ಚಿತ್ರ…